Homeಕರ್ನಾಟಕಬಿಜೆಪಿಯ ಕೊಳಕು ಮನಸ್ಥಿತಿ | ಹಲಾಲ್ ಬಜೆಟ್ ಟೀಕೆಗೆ ಸಿದ್ದರಾಮಯ್ಯ ಕಿಡಿ

ಬಿಜೆಪಿಯ ಕೊಳಕು ಮನಸ್ಥಿತಿ | ಹಲಾಲ್ ಬಜೆಟ್ ಟೀಕೆಗೆ ಸಿದ್ದರಾಮಯ್ಯ ಕಿಡಿ

- Advertisement -
- Advertisement -

2025-26ನೇ ಸಾಲಿನ ಬಜೆಟ್ ಗಾತ್ರ 4,09,549 ಕೋಟಿಯಾಗಿದ್ದು, ಮೊದಲ ಬಾರಿಗೆ ರಾಜ್ಯದ ಆಯವ್ಯಯ ಗಾತ್ರ 4 ಲಕ್ಷ ಕೋಟಿ ರೂ.ಗಳ ಗಡಿ ದಾಟಿರುವುದು ಒಂದು ಹೊಸ ಮೈಲಿಗಲ್ಲು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡನೆ ನಂತರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ತಿಳಿಸಿದ್ದಾರೆ.

2025-26 ನೇ ಸಾಲಿನ ಮುಂಗಡ ಪತ್ರವನ್ನು ಮಂಡಿಸಲಾಗಿದ್ದು, ಕರ್ನಾಟಕ ಸರ್ಕಾರ ಕಳೆದ ಸಾಲಿನಲ್ಲಿ 3,71,121 ಕೋಟಿ ಬಜೆಟ್ ಮಂಡಿಸಿತ್ತು. ಈ ಬಾರಿಯ ಬಜೆಟ್ ಗಾತ್ರ 4,09,549 ಕೋಟಿಯಾಗಿದೆ. ಮೊದಲ ಬಾರಿಗೆ ನಮ್ಮ ರಾಜ್ಯದ ಆಯವ್ಯಯ ಗಾತ್ರ 4 ಲಕ್ಷ ಕೋಟಿ ರೂ.ಗಳ ಗಡಿ ದಾಟಿರುವುದು ಒಂದು ಹೊಸ ಮೈಲಿಗಲ್ಲು. ಕಳೆದ ಬಾರಿಗಿಂತ ಈ ಬಾರಿ 38166 ಕೋಟಿ ರೂ.ಗಳು ಹೆಚ್ಚಾಗಿದೆ. ಬಜೆಟ್ ನ ಬೆಳವಣಿಗಯ ದರ 10.3 ರಷ್ಟು ಹೆಚ್ಚಳವಾಗಿದೆ ಎಂದು ಅವರು ಹೇಳಿದ್ದಾರೆ..

ಕಳೆದ ವರ್ಷ ರಾಜಸ್ವ ಸ್ವೀಕೃತಿಗಳು, 263178 ಕೋಟಿ ಇದ್ದು ಈ ಬಾರಿ 2,92,477 ಕೋಟಿ ರೂ. ಇದೆ. 2024-25ರ ಆಯವ್ಯಯಕ್ಕೆ ಹೋಲಿಸಿದರೆ 29,299 ಕೋಟಿ ಹೆಚ್ಚಾಗಿದೆ –ಬೆಳವಣಿಗೆ ದರ 11.1 % ರಷ್ಟಿದೆ. 2024-25ರ ರಲ್ಲಿ ರಾಜಸ್ವ ವೆಚ್ಚ 2,90,531 ಕೋಟಿ ಇದ್ದದ್ದು, 2025-26ರಲ್ಲಿ 3,11,739 ಕೋಟಿ , 2024-25ರ ಆಯವ್ಯಯಕ್ಕೆ ಹೋಲಿಸಿದರೆ 21,207 ಕೋಟಿ ಹೆಚ್ಚಳ-ಬೆಳವಣಿಗೆ ದರ 7.3 % ರಷ್ಟಿದೆ ಎಂದಿದ್ದಾರೆ.

2024-25ರಲ್ಲಿ ಸಾಲ 1,05,246 ಕೋಟಿ , ಈ ವರ್ಷ ಸಾಲ 1,16,000 ಕೋಟಿ , 2024-25ರ ಆಯವ್ಯಯಕ್ಕೆ ಹೋಲಿಸಿದರೆ 10,754 ಕೋಟಿ ಹೆಚ್ಚಳವಾಗಿದೆ(10.2% ರಷ್ಟು ಹೆಚ್ಚಳ). ಇದಕ್ಕೆ ವಿರೋಧಪಕ್ದದವರು ಟೀಕಿಸುತ್ತಾರೆ . ನಮಗೆ ಸಾಲ ಮಾಡುವ ಅವಕಾಶವೆಷ್ಟಿದೆ. ಆರ್ಥಿಕ ಹೊಣಗಾರಿಕೆ ಅಧಿನಿಯಮದ ಮಾನದಂಡದಂತೆ, ಸಾಲದ ಮೊತ್ತ GSDP ಯ ಶೇ.25 ರಷ್ಟಿರಬೇಕು, ರಾಜ್ಯ ಶೇ.24.91 ರಷ್ಟರ ಮಿತಿಯಲ್ಲಿದೆ. ವಿತ್ತೀಯ ಕೊರತೆಯನ್ನು GSDPಯ ಶೇ.3 ರಷ್ಟುನ್ನು ಮೀರಬಾರದೆಂದಿದ್ದು, 2.95 % ರಷ್ಟಿದೆ ಎಂದು ಹೇಳಿದ್ದಾರೆ.

ರಾಜಸ್ವ ಕೊರತೆ 19262 ಕೋಟಿ ಇದೆ . ಈ ಬಾರಿ ರಾಜಸ್ವ ಕೊರತೆಯಿಂದ ರಾಜಸ್ವ ಹೆಚ್ಚುವರಿ ಸ್ಥಿತಿಗೆ ಬರಲಿದ್ದೆವೆ. 2024-25 ರಲ್ಲಿ ರಾಜಸ್ವ ಕೊರತೆ 0.95 ಇತ್ತು, 2025-26ರಲ್ಲಿ 0.63 ಆಗಿದೆ. ರಾಜ್ಯದ GSDP ಕಳೆದ ವರ್ಷ 28,61929 ಕೋಟಿಗಳಾಗಿತ್ತು, 2025-26 ರಲ್ಲಿ 30,70,103 ಕೋಟಿಯಾಗಿದೆ, ಇದರಲ್ಲಿ ಶೇ. 25 ರಷ್ಟು ಸಾಲ ಪಡೆಯಬಹುದಾಗಿದ್ದು, ಸರ್ಕಾರ ಆರ್ಥಿಕ ಶಿಸ್ತನ್ನು ಪಾಲನೆ ಮಾಡಿದೆ .ಆಯವ್ಯಯದಲ್ಲಿ ಬಡವರು, ಮಹಿಳೆಯರು, ಕಾರ್ಮಿಕರು, ದುರ್ಬಲರಿಗೆ, ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರ ಆರ್ಥಿಕ ಬೆಳವಣಿಗೆಗೆ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಆರ್ಥಿಕ ಹೊಣಗಾರಿಕೆ ಅಧಿನಿಯಮದ ಬಗ್ಗೆ ತಿಳಿಯದೇ, ನಮ್ಮ ಆಯವ್ಯಯದ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ಆದರೆ ಕೇಂದ್ರ ಸರ್ಕಾರದ ವಿತ್ತೀಯ ಕೊರತೆ ಶೇ. 4.61 ರಷ್ಟಿದೆ. ಆದರೆ ರಾಜ್ಯದ ವಿತ್ತೀಯ ಕೊರತೆ ಶೇ.2.95 ರಷ್ಟಿದೆ. ಕೇಂದ್ರಸರ್ಕಾರದ ಬಜೆಟ್ 50 ಲಕ್ಷ ಕೋಟಿಯಲ್ಲಿ 15.66 ಲಕ್ಷ ಕೋಟಿ ಸಾಲ ಪಡೆದಿದ್ದು( ಶೇ.56 ಸಾಲ), ರಾಜ್ಯ 2.95 ರಷ್ಟು ಸಾಲ ಪಡೆದಿದ್ದೇವೆ. ಅಶೋಕ್ ರವರು ರಾಜಕೀಯಕ್ಕಾಗಿ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಟೀಕೆ ಮಾಡುತ್ತಿದ್ದಾರೆ. ಬಿಜೆಪಿಯವರಿಗೆ ದಿವಾಳಿ ಪದದ ಅರ್ಥ ಗೊತ್ತೇ? ರಾಜ್ಯಸರ್ಕಾರ ಆರ್ಥಿಕವಾಗಿ ಸದೃಢವಾಗಿದ್ದು, ಆರ್ಥಿಕ ಶಿಸ್ತನ್ನು ಪಾಲಿಸಲಾಗುತ್ತಿದೆ. ವಿತ್ತೀಯ ಹೊಣೆಗಾರಿಕೆ ಕಾಯ್ದೆಯ ಮಾನದಂಡಗಳನ್ನು ಪಾಲಿಸಲಾಗಿದೆ ಎಂದು ಹೇಳಿದ್ದಾರೆ.

ಹಿಂದಿನ ನಮ್ಮ ಭರವಸೆಗಳನ್ನು ಈಡೇರಿಸುವ ಮೂಲಕ ನುಡಿದಂತೆ ನಡೆದಿದ್ದೇವೆ. ಆಭಿವೃದ್ಧಿಗೂ ಹಣ ಖರ್ಚು ಮಾಡಿ, ಗ್ಯಾರಂಟಿಗಳಿಗೆ 52009 ಕೊಟಿ , ಎಲ್ಲ ಗ್ಯಾರಂಟಿಗಳು ಜಾರಿಯಾಗಿದೆ. ಮುಂದಿನ ವರ್ಷವೂ ಮುಂದುವರೆಸುತ್ತೆವೆ. ಈ ವರ್ಷ ಬಜೆಟ್ ನಲ್ಲಿ ಗ್ಯಾರಂಟಿಗಳಿಗೆ 51034 ಕೋಟಿ ಮೀಸಲಿರಿಸಿದ್ದೇವೆ. 2025-26ನೇ ಸಾಲಿಗೆ ಗೃಹಲಕ್ಷ್ಮಿ ಯೋಜನೆಗೆ 28608 ಕೋಟಿಗಳನ್ನು ಮೀಸಲಿರಿಸಿದೆ. ಗೃಹಜ್ಯೋತಿ ಯೋಜನೆ 10,100 ಕೋಟಿ , ಅನ್ನಭಾಗ್ಯ ಯೋಜನೆಗೆ 6426 ಕೋಟಿ , ಶಕ್ತಿ ಯೋಜನೆಗೆ 5,300 ಕೋಟಿ, ಯುವನಿಧಿ ಯೋಜನೆಗೆ 600 ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದೆ. ಈ ಬಾರಿ ಆಯವ್ಯಯದಲ್ಲಿ ಎಲ್ಲಾ ಇಲಾಖೆಗಳಿಗೆ ಹೆಚ್ಚು ಅನುದಾನ ನೀಡಲಾಗಿದೆ. ಅಭಿವೃದ್ಧಿ ಕೆಲಸಗಳಿಗೆ ಅನುದಾನದ ಕೊರತೆ ಇಲ್ಲ. ಬಿಜೆಪಿಯವರ ಹೇಳಿಕೆಗಳು ಸತ್ಯಕ್ಕೆ ದೂರವಾದುದು. ದೆಹಲಿ, ಮದ್ಯಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ಹರಿಯಾಣಗಳಲ್ಲಿ ಬಿಜೆಪಿಯವರು ನಮ್ಮ ಗ್ಯಾರಂಟಿಗಳನ್ನು ನಕಲು ಮಾಡಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

ಹಲಾಲ್ ಬಜೆಟ್ ಎಂಬ ಟೀಕೆ- ಬಿಜೆಪಿಯವರ ಕೊಳಕು ಮನಸ್ಥಿತಿ

ಗ್ಯಾರಂಟಿಗಳನ್ನು ಮದ್ಯವರ್ತಿಗಳ ಹಾವಳಿ ಇಲ್ಲದೇ ನೇರವಾಗಿ ಫಲಾನುಭವಿಗಳಿಗೆ ಡಿಬಿಟಿ ಮಾಡಲಾಗುತ್ತಿದ್ದು, ಸಾರ್ವತ್ರಿಕ ಮೂಲ ಆದಾಯ ತತ್ವದ ಆಧಾರದ ಮೇಲೆ ರೂಪಿಸಲಾಗಿದೆ. ಗ್ಯಾರಂಟಿ ಯೋಜನೆಗಳಿಂದ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಸುಮಾರು 232 ಕೋಟಿಗಳು ವೆಚ್ಚವಾಗುತ್ತಿದೆ. ಜನರಿಗೆ ಆರ್ಥಿಕ ಬಲ ತುಂಬಿದರೆ, ಅವರ ಖರೀದಿ ಶಕ್ತಿಯೂ ಹೆಚ್ಚಿ, ರಾಜ್ಯದ ಆರ್ಥಿಕತೆಯೂ ಬೆಳೆಯುತ್ತದೆ. ಅಲ್ಪಸಂಖ್ಯಾತರು, ಪ.ಜಾ, ಪ.ವರ್ಗ, ಹಿಂ.ವರ್ಗಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದೆ. ಬೌದ್ಧರು, ಜೈನ್, ಕ್ರಿಶ್ಚಿಯನ್ ಸೇರಿದಂತೆ ಅಲ್ಪಸಂಖ್ಯಾತರ ಎಲ್ಲ ಸಮುದಾಯದವರಿಗೆ 4 ಸಾವಿರ ಕೋಟಿ ಕೊಟ್ಟರೂ , ಇದನ್ನು ಹಲಾಲ್ ಬಜೆಟ್ ಎಂದು ಟೀಕಿಸುತ್ತಾರೆ. ಇದು ಬಿಜೆಪಿಯವರ ಕೊಳಕು ಮನಸ್ಥಿತಿಯನ್ನು ಬಿಂಬಿಸುತ್ತದೆ ಎಂದು ಹೇಳಿದ್ದಾರೆ.

ಎಸ್ ಸಿ ಎಸ್ ಪಿ- ಟಿಎಸ್ ಪಿ ಯೋಜನೆಗಳಿಗೆ 42000 ಕೋಟಿ ನೀಡಲಾಗುತ್ತಿದೆ. ಅಲ್ಪಸಂಖ್ಯಾತರಿಗೆ 4500 ಕೋಟಿ, ಓಬಿಸಿಗೆ 4300 ಕೋಟಿ ನೀಡಲಾಗಿದೆ. ಬಿಜೆಪಿಯ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು SCP TSP ಕಾಯ್ದೆ ಮಾಡಿ ಜಾರಿಗೊಳಿಸಿದ್ದಾರೆಯೇ ? ಎಂದು ಪ್ರಶ್ನಿಸಿದ್ದಾರೆ.

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರ ಟ್ವೀಟ್‌ಗೆ ಪ್ರತಿಕ್ರಿಯೆ ನೀಡಿ, ಕೇಂದ್ರ ಸರ್ಕಾರದವರು ಶೇ. 56 ರಷ್ಟು ಸಾಲ ಮಾಡಿದ್ದು, ಈ ಬಗ್ಗೆ ಪ್ರಧಾನಿ ಮೋದಿಯವರನ್ನು ಕೇಳಲಿ, ಯಾವ ನೈತಿಕತೆಯಿಂದ ಇಂಥ ಪ್ರಶ್ನೆ ಕೇಳುತ್ತಾರೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...