Homeಕರ್ನಾಟಕಬಿಜೆಪಿಯ ಕೊಳಕು ಮನಸ್ಥಿತಿ | ಹಲಾಲ್ ಬಜೆಟ್ ಟೀಕೆಗೆ ಸಿದ್ದರಾಮಯ್ಯ ಕಿಡಿ

ಬಿಜೆಪಿಯ ಕೊಳಕು ಮನಸ್ಥಿತಿ | ಹಲಾಲ್ ಬಜೆಟ್ ಟೀಕೆಗೆ ಸಿದ್ದರಾಮಯ್ಯ ಕಿಡಿ

- Advertisement -
- Advertisement -

2025-26ನೇ ಸಾಲಿನ ಬಜೆಟ್ ಗಾತ್ರ 4,09,549 ಕೋಟಿಯಾಗಿದ್ದು, ಮೊದಲ ಬಾರಿಗೆ ರಾಜ್ಯದ ಆಯವ್ಯಯ ಗಾತ್ರ 4 ಲಕ್ಷ ಕೋಟಿ ರೂ.ಗಳ ಗಡಿ ದಾಟಿರುವುದು ಒಂದು ಹೊಸ ಮೈಲಿಗಲ್ಲು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡನೆ ನಂತರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ತಿಳಿಸಿದ್ದಾರೆ.

2025-26 ನೇ ಸಾಲಿನ ಮುಂಗಡ ಪತ್ರವನ್ನು ಮಂಡಿಸಲಾಗಿದ್ದು, ಕರ್ನಾಟಕ ಸರ್ಕಾರ ಕಳೆದ ಸಾಲಿನಲ್ಲಿ 3,71,121 ಕೋಟಿ ಬಜೆಟ್ ಮಂಡಿಸಿತ್ತು. ಈ ಬಾರಿಯ ಬಜೆಟ್ ಗಾತ್ರ 4,09,549 ಕೋಟಿಯಾಗಿದೆ. ಮೊದಲ ಬಾರಿಗೆ ನಮ್ಮ ರಾಜ್ಯದ ಆಯವ್ಯಯ ಗಾತ್ರ 4 ಲಕ್ಷ ಕೋಟಿ ರೂ.ಗಳ ಗಡಿ ದಾಟಿರುವುದು ಒಂದು ಹೊಸ ಮೈಲಿಗಲ್ಲು. ಕಳೆದ ಬಾರಿಗಿಂತ ಈ ಬಾರಿ 38166 ಕೋಟಿ ರೂ.ಗಳು ಹೆಚ್ಚಾಗಿದೆ. ಬಜೆಟ್ ನ ಬೆಳವಣಿಗಯ ದರ 10.3 ರಷ್ಟು ಹೆಚ್ಚಳವಾಗಿದೆ ಎಂದು ಅವರು ಹೇಳಿದ್ದಾರೆ..

ಕಳೆದ ವರ್ಷ ರಾಜಸ್ವ ಸ್ವೀಕೃತಿಗಳು, 263178 ಕೋಟಿ ಇದ್ದು ಈ ಬಾರಿ 2,92,477 ಕೋಟಿ ರೂ. ಇದೆ. 2024-25ರ ಆಯವ್ಯಯಕ್ಕೆ ಹೋಲಿಸಿದರೆ 29,299 ಕೋಟಿ ಹೆಚ್ಚಾಗಿದೆ –ಬೆಳವಣಿಗೆ ದರ 11.1 % ರಷ್ಟಿದೆ. 2024-25ರ ರಲ್ಲಿ ರಾಜಸ್ವ ವೆಚ್ಚ 2,90,531 ಕೋಟಿ ಇದ್ದದ್ದು, 2025-26ರಲ್ಲಿ 3,11,739 ಕೋಟಿ , 2024-25ರ ಆಯವ್ಯಯಕ್ಕೆ ಹೋಲಿಸಿದರೆ 21,207 ಕೋಟಿ ಹೆಚ್ಚಳ-ಬೆಳವಣಿಗೆ ದರ 7.3 % ರಷ್ಟಿದೆ ಎಂದಿದ್ದಾರೆ.

2024-25ರಲ್ಲಿ ಸಾಲ 1,05,246 ಕೋಟಿ , ಈ ವರ್ಷ ಸಾಲ 1,16,000 ಕೋಟಿ , 2024-25ರ ಆಯವ್ಯಯಕ್ಕೆ ಹೋಲಿಸಿದರೆ 10,754 ಕೋಟಿ ಹೆಚ್ಚಳವಾಗಿದೆ(10.2% ರಷ್ಟು ಹೆಚ್ಚಳ). ಇದಕ್ಕೆ ವಿರೋಧಪಕ್ದದವರು ಟೀಕಿಸುತ್ತಾರೆ . ನಮಗೆ ಸಾಲ ಮಾಡುವ ಅವಕಾಶವೆಷ್ಟಿದೆ. ಆರ್ಥಿಕ ಹೊಣಗಾರಿಕೆ ಅಧಿನಿಯಮದ ಮಾನದಂಡದಂತೆ, ಸಾಲದ ಮೊತ್ತ GSDP ಯ ಶೇ.25 ರಷ್ಟಿರಬೇಕು, ರಾಜ್ಯ ಶೇ.24.91 ರಷ್ಟರ ಮಿತಿಯಲ್ಲಿದೆ. ವಿತ್ತೀಯ ಕೊರತೆಯನ್ನು GSDPಯ ಶೇ.3 ರಷ್ಟುನ್ನು ಮೀರಬಾರದೆಂದಿದ್ದು, 2.95 % ರಷ್ಟಿದೆ ಎಂದು ಹೇಳಿದ್ದಾರೆ.

ರಾಜಸ್ವ ಕೊರತೆ 19262 ಕೋಟಿ ಇದೆ . ಈ ಬಾರಿ ರಾಜಸ್ವ ಕೊರತೆಯಿಂದ ರಾಜಸ್ವ ಹೆಚ್ಚುವರಿ ಸ್ಥಿತಿಗೆ ಬರಲಿದ್ದೆವೆ. 2024-25 ರಲ್ಲಿ ರಾಜಸ್ವ ಕೊರತೆ 0.95 ಇತ್ತು, 2025-26ರಲ್ಲಿ 0.63 ಆಗಿದೆ. ರಾಜ್ಯದ GSDP ಕಳೆದ ವರ್ಷ 28,61929 ಕೋಟಿಗಳಾಗಿತ್ತು, 2025-26 ರಲ್ಲಿ 30,70,103 ಕೋಟಿಯಾಗಿದೆ, ಇದರಲ್ಲಿ ಶೇ. 25 ರಷ್ಟು ಸಾಲ ಪಡೆಯಬಹುದಾಗಿದ್ದು, ಸರ್ಕಾರ ಆರ್ಥಿಕ ಶಿಸ್ತನ್ನು ಪಾಲನೆ ಮಾಡಿದೆ .ಆಯವ್ಯಯದಲ್ಲಿ ಬಡವರು, ಮಹಿಳೆಯರು, ಕಾರ್ಮಿಕರು, ದುರ್ಬಲರಿಗೆ, ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರ ಆರ್ಥಿಕ ಬೆಳವಣಿಗೆಗೆ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಆರ್ಥಿಕ ಹೊಣಗಾರಿಕೆ ಅಧಿನಿಯಮದ ಬಗ್ಗೆ ತಿಳಿಯದೇ, ನಮ್ಮ ಆಯವ್ಯಯದ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ಆದರೆ ಕೇಂದ್ರ ಸರ್ಕಾರದ ವಿತ್ತೀಯ ಕೊರತೆ ಶೇ. 4.61 ರಷ್ಟಿದೆ. ಆದರೆ ರಾಜ್ಯದ ವಿತ್ತೀಯ ಕೊರತೆ ಶೇ.2.95 ರಷ್ಟಿದೆ. ಕೇಂದ್ರಸರ್ಕಾರದ ಬಜೆಟ್ 50 ಲಕ್ಷ ಕೋಟಿಯಲ್ಲಿ 15.66 ಲಕ್ಷ ಕೋಟಿ ಸಾಲ ಪಡೆದಿದ್ದು( ಶೇ.56 ಸಾಲ), ರಾಜ್ಯ 2.95 ರಷ್ಟು ಸಾಲ ಪಡೆದಿದ್ದೇವೆ. ಅಶೋಕ್ ರವರು ರಾಜಕೀಯಕ್ಕಾಗಿ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಟೀಕೆ ಮಾಡುತ್ತಿದ್ದಾರೆ. ಬಿಜೆಪಿಯವರಿಗೆ ದಿವಾಳಿ ಪದದ ಅರ್ಥ ಗೊತ್ತೇ? ರಾಜ್ಯಸರ್ಕಾರ ಆರ್ಥಿಕವಾಗಿ ಸದೃಢವಾಗಿದ್ದು, ಆರ್ಥಿಕ ಶಿಸ್ತನ್ನು ಪಾಲಿಸಲಾಗುತ್ತಿದೆ. ವಿತ್ತೀಯ ಹೊಣೆಗಾರಿಕೆ ಕಾಯ್ದೆಯ ಮಾನದಂಡಗಳನ್ನು ಪಾಲಿಸಲಾಗಿದೆ ಎಂದು ಹೇಳಿದ್ದಾರೆ.

ಹಿಂದಿನ ನಮ್ಮ ಭರವಸೆಗಳನ್ನು ಈಡೇರಿಸುವ ಮೂಲಕ ನುಡಿದಂತೆ ನಡೆದಿದ್ದೇವೆ. ಆಭಿವೃದ್ಧಿಗೂ ಹಣ ಖರ್ಚು ಮಾಡಿ, ಗ್ಯಾರಂಟಿಗಳಿಗೆ 52009 ಕೊಟಿ , ಎಲ್ಲ ಗ್ಯಾರಂಟಿಗಳು ಜಾರಿಯಾಗಿದೆ. ಮುಂದಿನ ವರ್ಷವೂ ಮುಂದುವರೆಸುತ್ತೆವೆ. ಈ ವರ್ಷ ಬಜೆಟ್ ನಲ್ಲಿ ಗ್ಯಾರಂಟಿಗಳಿಗೆ 51034 ಕೋಟಿ ಮೀಸಲಿರಿಸಿದ್ದೇವೆ. 2025-26ನೇ ಸಾಲಿಗೆ ಗೃಹಲಕ್ಷ್ಮಿ ಯೋಜನೆಗೆ 28608 ಕೋಟಿಗಳನ್ನು ಮೀಸಲಿರಿಸಿದೆ. ಗೃಹಜ್ಯೋತಿ ಯೋಜನೆ 10,100 ಕೋಟಿ , ಅನ್ನಭಾಗ್ಯ ಯೋಜನೆಗೆ 6426 ಕೋಟಿ , ಶಕ್ತಿ ಯೋಜನೆಗೆ 5,300 ಕೋಟಿ, ಯುವನಿಧಿ ಯೋಜನೆಗೆ 600 ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದೆ. ಈ ಬಾರಿ ಆಯವ್ಯಯದಲ್ಲಿ ಎಲ್ಲಾ ಇಲಾಖೆಗಳಿಗೆ ಹೆಚ್ಚು ಅನುದಾನ ನೀಡಲಾಗಿದೆ. ಅಭಿವೃದ್ಧಿ ಕೆಲಸಗಳಿಗೆ ಅನುದಾನದ ಕೊರತೆ ಇಲ್ಲ. ಬಿಜೆಪಿಯವರ ಹೇಳಿಕೆಗಳು ಸತ್ಯಕ್ಕೆ ದೂರವಾದುದು. ದೆಹಲಿ, ಮದ್ಯಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ಹರಿಯಾಣಗಳಲ್ಲಿ ಬಿಜೆಪಿಯವರು ನಮ್ಮ ಗ್ಯಾರಂಟಿಗಳನ್ನು ನಕಲು ಮಾಡಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

ಹಲಾಲ್ ಬಜೆಟ್ ಎಂಬ ಟೀಕೆ- ಬಿಜೆಪಿಯವರ ಕೊಳಕು ಮನಸ್ಥಿತಿ

ಗ್ಯಾರಂಟಿಗಳನ್ನು ಮದ್ಯವರ್ತಿಗಳ ಹಾವಳಿ ಇಲ್ಲದೇ ನೇರವಾಗಿ ಫಲಾನುಭವಿಗಳಿಗೆ ಡಿಬಿಟಿ ಮಾಡಲಾಗುತ್ತಿದ್ದು, ಸಾರ್ವತ್ರಿಕ ಮೂಲ ಆದಾಯ ತತ್ವದ ಆಧಾರದ ಮೇಲೆ ರೂಪಿಸಲಾಗಿದೆ. ಗ್ಯಾರಂಟಿ ಯೋಜನೆಗಳಿಂದ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಸುಮಾರು 232 ಕೋಟಿಗಳು ವೆಚ್ಚವಾಗುತ್ತಿದೆ. ಜನರಿಗೆ ಆರ್ಥಿಕ ಬಲ ತುಂಬಿದರೆ, ಅವರ ಖರೀದಿ ಶಕ್ತಿಯೂ ಹೆಚ್ಚಿ, ರಾಜ್ಯದ ಆರ್ಥಿಕತೆಯೂ ಬೆಳೆಯುತ್ತದೆ. ಅಲ್ಪಸಂಖ್ಯಾತರು, ಪ.ಜಾ, ಪ.ವರ್ಗ, ಹಿಂ.ವರ್ಗಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದೆ. ಬೌದ್ಧರು, ಜೈನ್, ಕ್ರಿಶ್ಚಿಯನ್ ಸೇರಿದಂತೆ ಅಲ್ಪಸಂಖ್ಯಾತರ ಎಲ್ಲ ಸಮುದಾಯದವರಿಗೆ 4 ಸಾವಿರ ಕೋಟಿ ಕೊಟ್ಟರೂ , ಇದನ್ನು ಹಲಾಲ್ ಬಜೆಟ್ ಎಂದು ಟೀಕಿಸುತ್ತಾರೆ. ಇದು ಬಿಜೆಪಿಯವರ ಕೊಳಕು ಮನಸ್ಥಿತಿಯನ್ನು ಬಿಂಬಿಸುತ್ತದೆ ಎಂದು ಹೇಳಿದ್ದಾರೆ.

ಎಸ್ ಸಿ ಎಸ್ ಪಿ- ಟಿಎಸ್ ಪಿ ಯೋಜನೆಗಳಿಗೆ 42000 ಕೋಟಿ ನೀಡಲಾಗುತ್ತಿದೆ. ಅಲ್ಪಸಂಖ್ಯಾತರಿಗೆ 4500 ಕೋಟಿ, ಓಬಿಸಿಗೆ 4300 ಕೋಟಿ ನೀಡಲಾಗಿದೆ. ಬಿಜೆಪಿಯ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು SCP TSP ಕಾಯ್ದೆ ಮಾಡಿ ಜಾರಿಗೊಳಿಸಿದ್ದಾರೆಯೇ ? ಎಂದು ಪ್ರಶ್ನಿಸಿದ್ದಾರೆ.

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರ ಟ್ವೀಟ್‌ಗೆ ಪ್ರತಿಕ್ರಿಯೆ ನೀಡಿ, ಕೇಂದ್ರ ಸರ್ಕಾರದವರು ಶೇ. 56 ರಷ್ಟು ಸಾಲ ಮಾಡಿದ್ದು, ಈ ಬಗ್ಗೆ ಪ್ರಧಾನಿ ಮೋದಿಯವರನ್ನು ಕೇಳಲಿ, ಯಾವ ನೈತಿಕತೆಯಿಂದ ಇಂಥ ಪ್ರಶ್ನೆ ಕೇಳುತ್ತಾರೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...