Homeಮುಖಪುಟಛತ್ ಪೂಜೆಗಾಗಿ ಪ್ರಧಾನಿಗೆ ಫಿಲ್ಟರ್ ನೀರಿನ 'ನಕಲಿ' ಯಮುನಾ ಘಾಟ್ ನಿರ್ಮಾಣ: ಎಎಪಿ ಆರೋಪ

ಛತ್ ಪೂಜೆಗಾಗಿ ಪ್ರಧಾನಿಗೆ ಫಿಲ್ಟರ್ ನೀರಿನ ‘ನಕಲಿ’ ಯಮುನಾ ಘಾಟ್ ನಿರ್ಮಾಣ: ಎಎಪಿ ಆರೋಪ

- Advertisement -
- Advertisement -

ಛತ್ ಪೂಜೆಗಾಗಿ ನಿಮಿತ್ತ ಸಾಮಾನ್ಯ ಜನರು ಮಲಿನಗೊಂಡ ಯಮುನಾ ನದಿಯಲ್ಲಿ ಪುಣ್ಯಸ್ನಾನ ಮಾಡಬೇಕಾದರೆ, ಪ್ರಧಾನಿ ಮೋದಿಯವರಿಗೆ ಬಿಜೆಪಿ ಫಿಲ್ಟರ್ ನೀರಿನ ನಕಲಿ ‘ಯಮುನಾ ಘಾಟ್’ ನಿರ್ಮಿಸಿದೆ ಎಂದು ಆಮ್‌ ಆದ್ಮಿ ಪಕ್ಷ (ಎಎಪಿ) ಭಾನುವಾರ (26) ಆರೋಪಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಎಪಿ ದೆಹಲಿ ಘಟಕದ ಅಧ್ಯಕ್ಷ ಸೌರಭ್ ಭಾರದ್ವಾಜ್, “ಬಿಜೆಪಿ ಭಕ್ತರನ್ನು ‘ಮೋಸ’ ಮಾಡುತ್ತಿದೆ ಮತ್ತು ಪೂರ್ವಾಂಚಲಿಗಳ ಜೀವನದ ಜೊತೆ ಆಟವಾಡುತ್ತಿದೆ” ಎಂದು ಹೇಳಿದ್ದಾರೆ.

“ಬಿಹಾರದಲ್ಲಿ ಅಧಿಕಾರ ಹಿಡಿಯುವ ಹತಾಶ ಪ್ರಯತ್ನದಲ್ಲಿ ಬಿಜೆಪಿ ದೆಹಲಿಯ ಲಕ್ಷಾಂತರ ಪೂರ್ವಾಂಚಲಿಗಳ ಜೀವನದ ಜೊತೆ ಆಟವಾಡುತ್ತಿದೆ. ಪ್ರಧಾನಿ ಮೋದಿಗಾಗಿ ವಾಸುದೇವ್ ಘಾಟ್‌ನಲ್ಲಿ ಫಿಲ್ಟರ್ ನೀರಿನ ನಕಲಿ ಯಮುನಾ ಘಾಟ್ ನಿರ್ಮಿಸಲಾಗಿದೆ. ಭಕ್ತರು ಕಲುಷಿತ ನದಿಯಲ್ಲಿ ನಿಲ್ಲಬೇಕಾಗಿದೆ” ಎಂದು ಭಾರದ್ವಾಜ್ ಕಿಡಿಕಾರಿದ್ದಾರೆ.

ದೆಹಲಿಗೆ ಕುಡಿಯುವ ನೀರು ಪೂರೈಸುವ ವಝೀರಾಬಾದ್ ನೀರು ಸಂಸ್ಕರಣಾ ಘಟಕದ ಪೈಪ್‌ಲೈನ್‌ನಿಂದ ಘಾಟ್‌ಗೆ ನೀರನ್ನು ತೆಗೆದುಕೊಳ್ಳಲಾಗಿದೆ ಎಂದು ಭಾರದ್ವಾಜ್ ಆರೋಪಿಸಿದ್ದಾರೆ.

ದೆಹಲಿ ಜಲ ಸಚಿವ ಪರ್ವೇಶ್ ವರ್ಮಾ ಅವರು ಹಿಂದಿನ ಎಎಪಿ ಸರ್ಕಾರವನ್ನು ನಿಂದಿಸಿ ಅಧಿಕಾರಿಗಳ ಹಲ್ಲೆ ಮಾಡಿದ್ದ ನೊರೆಯನ್ನು ತೆರವುಗೊಳಿಸಲು ಈಗ ಅದೇ ರಾಸಾಯನಿಕವನ್ನು ಯಮುನಾ ನದಿಗೆ ಸಿಂಪಡಿಸುತ್ತಿದ್ದಾರೆ ಎಂದು ಭಾರದ್ವಾಜ್ ಹೇಳಿದ್ದಾರೆ.

ಬಿಜೆಪಿ ಒಂದು ಸುಳ್ಳು ಮರೆಮಾಚಲು ಸಾವಿರ ಸುಳ್ಳು ಹೇಳುತ್ತಿದೆ. ಮತದಾರರನ್ನು ಮರುಳು ಮಾಡಲು ಮತ್ತು ಯಮುನಾ ನದಿ ಅಪಾಯಕಾರಿಯಾಗಿ ವಿಷಕಾರಿಯಾಗಿದೆ ಎಂಬ ಸತ್ಯವನ್ನು ಮರೆಮಾಚಲು ನಾಟಕ ಮಾಡುತ್ತಿದೆ ಎಂದು ಭಾರದ್ವಾಜ್ ಆರೋಪಿಸಿದ್ದಾರೆ.

“ಯಮುನಾ ನೀರು ಗಂಭೀರ ಕಾಯಿಲೆಗಳಿಗೆ ಕಾರಣವಾಗಬಹುದು ಎಂದು ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿ ಒಪ್ಪಿಕೊಂಡಿದೆ. ಆದರೂ, ಬಿಜೆಪಿ ನಾಯಕರು ಫೋಟೋ ತೆಗೆಯಲು ಮತ್ತು ನೊರೆಯನ್ನು ಮರೆಮಾಚಲು ರಾಸಾಯನಿಕಗಳನ್ನು ಸಿಂಪಡಿಸುವಲ್ಲಿ ನಿರತರಾಗಿದ್ದಾರೆ” ಎಂದು ಭಾರದ್ವಾಜ್ ಹೇಳಿದ್ದಾರೆ.

ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ ಪತ್ರಿಕಾಗೋಷ್ಠಿಯಲ್ಲಿ ಎಎಪಿಯ ಆರೋಪಗಳನ್ನು ತಳ್ಳಿಹಾಕಿದ್ದಾರೆ.

“ದೆಹಲಿಯ ಮತ್ತು ಇಡೀ ದೇಶದ ಜನರು ಆಮ್ ಆದ್ಮಿ ಪಕ್ಷದ ನಾಯಕತ್ವದ ರಾಜಕೀಯ ಹತಾಶೆಯ ನಾಚಿಕೆಗೇಡಿನ ಮಾದರಿಯನ್ನು ಕಂಡಿದ್ದಾರೆ. ಯಮುನಾ ನದಿಯ ದಡದಲ್ಲಿರುವ ನೈಸರ್ಗಿಕ ವಾಸುದೇವ್ ಘಾಟ್ ಅನ್ನು ಸ್ವಚ್ಛಗೊಳಿಸಲು ಮತ್ತು ಅಲ್ಲಿ ಶುದ್ಧ ನೀರಿನ ಲಭ್ಯತೆಗೆ ಎಎಪಿ ನಾಯಕ ಸೌರಭ್ ಭಾರದ್ವಾಜ್ ಆಕ್ಷೇಪ ವ್ಯಕ್ತಪಡಿಸಿದ್ದನ್ನು ಜನರು ನೋಡಿದ್ದಾರೆ” ಎಂದು ಹೇಳಿದ್ದಾರೆ.

“ಯಮುನಾ ನದಿಯ ಶುದ್ಧೀಕರಣಕ್ಕೆ ಆಕ್ಷೇಪ ವ್ಯಕ್ತಪಡಿಸಿ ಸೌರಭ್ ಭಾರದ್ವಾಜ್ ಅವರು ಯಮುನಾ ದಡದಿಂದ ಬಿಡುಗಡೆ ಮಾಡಿದ ಲೈವ್ ವಿಡಿಯೋ, ಸರ್ಕಾರದ ಸ್ವಚ್ಛತೆ ಮತ್ತು ನೈರ್ಮಲ್ಯ ಪ್ರಯತ್ನಗಳ ವಿರುದ್ಧ ವಿರೋಧ ಪಕ್ಷದ ನಾಯಕರೊಬ್ಬರು ಆಕ್ಷೇಪಣೆ ವ್ಯಕ್ತಪಡಿಸಿದ ಮೊದಲ ರಾಜಕೀಯ ನಾಟಕವಾಗಿದೆ” ಎಂದು ಸಚ್‌ದೇವ ವಾಗ್ದಾಳಿ ನಡೆಸಿದ್ದಾರೆ.

ಹಿಂದಿನ ಎಎಪಿ ಸರ್ಕಾರವನ್ನು ಟೀಕಿಸಿದ ಸಚ್‌ದೇವ, 2018 ರಿಂದ 2024 ರವರೆಗೆ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಯಮುನಾ ನದಿಯ ದಡದಲ್ಲಿ ಛತ್ ಪೂಜೆಯನ್ನು ನಿಷೇಧಿಸಿದ್ದರು ಎಂದು ಹೇಳಿದ್ದಾರೆ.

ಈಗ, ರೇಖಾ ಗುಪ್ತಾ ಅವರ ಸರ್ಕಾರವು ಯಮುನಾದ ಮೂಲಭೂತ ಶುಚಿಗೊಳಿಸುವಿಕೆಯನ್ನು ಪೂರ್ಣಗೊಳಿಸಿ, ಕೇವಲ ಎಂಟು ತಿಂಗಳಲ್ಲಿ ಭಕ್ತರಿಗೆ ಛತ್ ಆಚರಣೆಗಳನ್ನು ಮಾಡಲು ನೈಸರ್ಗಿಕ ಘಾಟ್‌ಗಳು ಲಭ್ಯವಾಗುವಂತೆ ಮಾಡಿದಾಗ, ಅವರು ಗದ್ದಲ ಎಬ್ಬಿಸುತ್ತಿದ್ದಾರೆ ಎಂದಿದ್ದಾರೆ.

ಎಎಪಿ ನಾಯಕ ಭಾರದ್ವಾಜ್ ಅವರ ಸುದ್ದಿಗೋಷ್ಠಿ ಬಳಿಕ ಪ್ರಧಾನಿ ನಕಲಿ ಯಮುನಾ ಘಾಟ್ ವಿಷಯ ದೇಶದಾದ್ಯಂತ ಚರ್ಚೆಯಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್‌ಗಳಿಗೆ ಆಹಾರವಾಗಿದೆ.

ದೆಹಲಿ ಗಲಭೆ ಪ್ರಕರಣ | ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಜಾಮೀನು ಅರ್ಜಿ ವಿಚಾರಣೆ ಅ.31ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...