Homeಮುಖಪುಟಛತ್ ಪೂಜೆಗಾಗಿ ಪ್ರಧಾನಿಗೆ ಫಿಲ್ಟರ್ ನೀರಿನ 'ನಕಲಿ' ಯಮುನಾ ಘಾಟ್ ನಿರ್ಮಾಣ: ಎಎಪಿ ಆರೋಪ

ಛತ್ ಪೂಜೆಗಾಗಿ ಪ್ರಧಾನಿಗೆ ಫಿಲ್ಟರ್ ನೀರಿನ ‘ನಕಲಿ’ ಯಮುನಾ ಘಾಟ್ ನಿರ್ಮಾಣ: ಎಎಪಿ ಆರೋಪ

- Advertisement -
- Advertisement -

ಛತ್ ಪೂಜೆಗಾಗಿ ನಿಮಿತ್ತ ಸಾಮಾನ್ಯ ಜನರು ಮಲಿನಗೊಂಡ ಯಮುನಾ ನದಿಯಲ್ಲಿ ಪುಣ್ಯಸ್ನಾನ ಮಾಡಬೇಕಾದರೆ, ಪ್ರಧಾನಿ ಮೋದಿಯವರಿಗೆ ಬಿಜೆಪಿ ಫಿಲ್ಟರ್ ನೀರಿನ ನಕಲಿ ‘ಯಮುನಾ ಘಾಟ್’ ನಿರ್ಮಿಸಿದೆ ಎಂದು ಆಮ್‌ ಆದ್ಮಿ ಪಕ್ಷ (ಎಎಪಿ) ಭಾನುವಾರ (26) ಆರೋಪಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಎಪಿ ದೆಹಲಿ ಘಟಕದ ಅಧ್ಯಕ್ಷ ಸೌರಭ್ ಭಾರದ್ವಾಜ್, “ಬಿಜೆಪಿ ಭಕ್ತರನ್ನು ‘ಮೋಸ’ ಮಾಡುತ್ತಿದೆ ಮತ್ತು ಪೂರ್ವಾಂಚಲಿಗಳ ಜೀವನದ ಜೊತೆ ಆಟವಾಡುತ್ತಿದೆ” ಎಂದು ಹೇಳಿದ್ದಾರೆ.

“ಬಿಹಾರದಲ್ಲಿ ಅಧಿಕಾರ ಹಿಡಿಯುವ ಹತಾಶ ಪ್ರಯತ್ನದಲ್ಲಿ ಬಿಜೆಪಿ ದೆಹಲಿಯ ಲಕ್ಷಾಂತರ ಪೂರ್ವಾಂಚಲಿಗಳ ಜೀವನದ ಜೊತೆ ಆಟವಾಡುತ್ತಿದೆ. ಪ್ರಧಾನಿ ಮೋದಿಗಾಗಿ ವಾಸುದೇವ್ ಘಾಟ್‌ನಲ್ಲಿ ಫಿಲ್ಟರ್ ನೀರಿನ ನಕಲಿ ಯಮುನಾ ಘಾಟ್ ನಿರ್ಮಿಸಲಾಗಿದೆ. ಭಕ್ತರು ಕಲುಷಿತ ನದಿಯಲ್ಲಿ ನಿಲ್ಲಬೇಕಾಗಿದೆ” ಎಂದು ಭಾರದ್ವಾಜ್ ಕಿಡಿಕಾರಿದ್ದಾರೆ.

ದೆಹಲಿಗೆ ಕುಡಿಯುವ ನೀರು ಪೂರೈಸುವ ವಝೀರಾಬಾದ್ ನೀರು ಸಂಸ್ಕರಣಾ ಘಟಕದ ಪೈಪ್‌ಲೈನ್‌ನಿಂದ ಘಾಟ್‌ಗೆ ನೀರನ್ನು ತೆಗೆದುಕೊಳ್ಳಲಾಗಿದೆ ಎಂದು ಭಾರದ್ವಾಜ್ ಆರೋಪಿಸಿದ್ದಾರೆ.

ದೆಹಲಿ ಜಲ ಸಚಿವ ಪರ್ವೇಶ್ ವರ್ಮಾ ಅವರು ಹಿಂದಿನ ಎಎಪಿ ಸರ್ಕಾರವನ್ನು ನಿಂದಿಸಿ ಅಧಿಕಾರಿಗಳ ಹಲ್ಲೆ ಮಾಡಿದ್ದ ನೊರೆಯನ್ನು ತೆರವುಗೊಳಿಸಲು ಈಗ ಅದೇ ರಾಸಾಯನಿಕವನ್ನು ಯಮುನಾ ನದಿಗೆ ಸಿಂಪಡಿಸುತ್ತಿದ್ದಾರೆ ಎಂದು ಭಾರದ್ವಾಜ್ ಹೇಳಿದ್ದಾರೆ.

ಬಿಜೆಪಿ ಒಂದು ಸುಳ್ಳು ಮರೆಮಾಚಲು ಸಾವಿರ ಸುಳ್ಳು ಹೇಳುತ್ತಿದೆ. ಮತದಾರರನ್ನು ಮರುಳು ಮಾಡಲು ಮತ್ತು ಯಮುನಾ ನದಿ ಅಪಾಯಕಾರಿಯಾಗಿ ವಿಷಕಾರಿಯಾಗಿದೆ ಎಂಬ ಸತ್ಯವನ್ನು ಮರೆಮಾಚಲು ನಾಟಕ ಮಾಡುತ್ತಿದೆ ಎಂದು ಭಾರದ್ವಾಜ್ ಆರೋಪಿಸಿದ್ದಾರೆ.

“ಯಮುನಾ ನೀರು ಗಂಭೀರ ಕಾಯಿಲೆಗಳಿಗೆ ಕಾರಣವಾಗಬಹುದು ಎಂದು ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿ ಒಪ್ಪಿಕೊಂಡಿದೆ. ಆದರೂ, ಬಿಜೆಪಿ ನಾಯಕರು ಫೋಟೋ ತೆಗೆಯಲು ಮತ್ತು ನೊರೆಯನ್ನು ಮರೆಮಾಚಲು ರಾಸಾಯನಿಕಗಳನ್ನು ಸಿಂಪಡಿಸುವಲ್ಲಿ ನಿರತರಾಗಿದ್ದಾರೆ” ಎಂದು ಭಾರದ್ವಾಜ್ ಹೇಳಿದ್ದಾರೆ.

ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ ಪತ್ರಿಕಾಗೋಷ್ಠಿಯಲ್ಲಿ ಎಎಪಿಯ ಆರೋಪಗಳನ್ನು ತಳ್ಳಿಹಾಕಿದ್ದಾರೆ.

“ದೆಹಲಿಯ ಮತ್ತು ಇಡೀ ದೇಶದ ಜನರು ಆಮ್ ಆದ್ಮಿ ಪಕ್ಷದ ನಾಯಕತ್ವದ ರಾಜಕೀಯ ಹತಾಶೆಯ ನಾಚಿಕೆಗೇಡಿನ ಮಾದರಿಯನ್ನು ಕಂಡಿದ್ದಾರೆ. ಯಮುನಾ ನದಿಯ ದಡದಲ್ಲಿರುವ ನೈಸರ್ಗಿಕ ವಾಸುದೇವ್ ಘಾಟ್ ಅನ್ನು ಸ್ವಚ್ಛಗೊಳಿಸಲು ಮತ್ತು ಅಲ್ಲಿ ಶುದ್ಧ ನೀರಿನ ಲಭ್ಯತೆಗೆ ಎಎಪಿ ನಾಯಕ ಸೌರಭ್ ಭಾರದ್ವಾಜ್ ಆಕ್ಷೇಪ ವ್ಯಕ್ತಪಡಿಸಿದ್ದನ್ನು ಜನರು ನೋಡಿದ್ದಾರೆ” ಎಂದು ಹೇಳಿದ್ದಾರೆ.

“ಯಮುನಾ ನದಿಯ ಶುದ್ಧೀಕರಣಕ್ಕೆ ಆಕ್ಷೇಪ ವ್ಯಕ್ತಪಡಿಸಿ ಸೌರಭ್ ಭಾರದ್ವಾಜ್ ಅವರು ಯಮುನಾ ದಡದಿಂದ ಬಿಡುಗಡೆ ಮಾಡಿದ ಲೈವ್ ವಿಡಿಯೋ, ಸರ್ಕಾರದ ಸ್ವಚ್ಛತೆ ಮತ್ತು ನೈರ್ಮಲ್ಯ ಪ್ರಯತ್ನಗಳ ವಿರುದ್ಧ ವಿರೋಧ ಪಕ್ಷದ ನಾಯಕರೊಬ್ಬರು ಆಕ್ಷೇಪಣೆ ವ್ಯಕ್ತಪಡಿಸಿದ ಮೊದಲ ರಾಜಕೀಯ ನಾಟಕವಾಗಿದೆ” ಎಂದು ಸಚ್‌ದೇವ ವಾಗ್ದಾಳಿ ನಡೆಸಿದ್ದಾರೆ.

ಹಿಂದಿನ ಎಎಪಿ ಸರ್ಕಾರವನ್ನು ಟೀಕಿಸಿದ ಸಚ್‌ದೇವ, 2018 ರಿಂದ 2024 ರವರೆಗೆ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಯಮುನಾ ನದಿಯ ದಡದಲ್ಲಿ ಛತ್ ಪೂಜೆಯನ್ನು ನಿಷೇಧಿಸಿದ್ದರು ಎಂದು ಹೇಳಿದ್ದಾರೆ.

ಈಗ, ರೇಖಾ ಗುಪ್ತಾ ಅವರ ಸರ್ಕಾರವು ಯಮುನಾದ ಮೂಲಭೂತ ಶುಚಿಗೊಳಿಸುವಿಕೆಯನ್ನು ಪೂರ್ಣಗೊಳಿಸಿ, ಕೇವಲ ಎಂಟು ತಿಂಗಳಲ್ಲಿ ಭಕ್ತರಿಗೆ ಛತ್ ಆಚರಣೆಗಳನ್ನು ಮಾಡಲು ನೈಸರ್ಗಿಕ ಘಾಟ್‌ಗಳು ಲಭ್ಯವಾಗುವಂತೆ ಮಾಡಿದಾಗ, ಅವರು ಗದ್ದಲ ಎಬ್ಬಿಸುತ್ತಿದ್ದಾರೆ ಎಂದಿದ್ದಾರೆ.

ಎಎಪಿ ನಾಯಕ ಭಾರದ್ವಾಜ್ ಅವರ ಸುದ್ದಿಗೋಷ್ಠಿ ಬಳಿಕ ಪ್ರಧಾನಿ ನಕಲಿ ಯಮುನಾ ಘಾಟ್ ವಿಷಯ ದೇಶದಾದ್ಯಂತ ಚರ್ಚೆಯಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್‌ಗಳಿಗೆ ಆಹಾರವಾಗಿದೆ.

ದೆಹಲಿ ಗಲಭೆ ಪ್ರಕರಣ | ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಜಾಮೀನು ಅರ್ಜಿ ವಿಚಾರಣೆ ಅ.31ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...