Homeಮುಖಪುಟಛತ್ ಪೂಜೆಗಾಗಿ ಪ್ರಧಾನಿಗೆ ಫಿಲ್ಟರ್ ನೀರಿನ 'ನಕಲಿ' ಯಮುನಾ ಘಾಟ್ ನಿರ್ಮಾಣ: ಎಎಪಿ ಆರೋಪ

ಛತ್ ಪೂಜೆಗಾಗಿ ಪ್ರಧಾನಿಗೆ ಫಿಲ್ಟರ್ ನೀರಿನ ‘ನಕಲಿ’ ಯಮುನಾ ಘಾಟ್ ನಿರ್ಮಾಣ: ಎಎಪಿ ಆರೋಪ

- Advertisement -
- Advertisement -

ಛತ್ ಪೂಜೆಗಾಗಿ ನಿಮಿತ್ತ ಸಾಮಾನ್ಯ ಜನರು ಮಲಿನಗೊಂಡ ಯಮುನಾ ನದಿಯಲ್ಲಿ ಪುಣ್ಯಸ್ನಾನ ಮಾಡಬೇಕಾದರೆ, ಪ್ರಧಾನಿ ಮೋದಿಯವರಿಗೆ ಬಿಜೆಪಿ ಫಿಲ್ಟರ್ ನೀರಿನ ನಕಲಿ ‘ಯಮುನಾ ಘಾಟ್’ ನಿರ್ಮಿಸಿದೆ ಎಂದು ಆಮ್‌ ಆದ್ಮಿ ಪಕ್ಷ (ಎಎಪಿ) ಭಾನುವಾರ (26) ಆರೋಪಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಎಪಿ ದೆಹಲಿ ಘಟಕದ ಅಧ್ಯಕ್ಷ ಸೌರಭ್ ಭಾರದ್ವಾಜ್, “ಬಿಜೆಪಿ ಭಕ್ತರನ್ನು ‘ಮೋಸ’ ಮಾಡುತ್ತಿದೆ ಮತ್ತು ಪೂರ್ವಾಂಚಲಿಗಳ ಜೀವನದ ಜೊತೆ ಆಟವಾಡುತ್ತಿದೆ” ಎಂದು ಹೇಳಿದ್ದಾರೆ.

“ಬಿಹಾರದಲ್ಲಿ ಅಧಿಕಾರ ಹಿಡಿಯುವ ಹತಾಶ ಪ್ರಯತ್ನದಲ್ಲಿ ಬಿಜೆಪಿ ದೆಹಲಿಯ ಲಕ್ಷಾಂತರ ಪೂರ್ವಾಂಚಲಿಗಳ ಜೀವನದ ಜೊತೆ ಆಟವಾಡುತ್ತಿದೆ. ಪ್ರಧಾನಿ ಮೋದಿಗಾಗಿ ವಾಸುದೇವ್ ಘಾಟ್‌ನಲ್ಲಿ ಫಿಲ್ಟರ್ ನೀರಿನ ನಕಲಿ ಯಮುನಾ ಘಾಟ್ ನಿರ್ಮಿಸಲಾಗಿದೆ. ಭಕ್ತರು ಕಲುಷಿತ ನದಿಯಲ್ಲಿ ನಿಲ್ಲಬೇಕಾಗಿದೆ” ಎಂದು ಭಾರದ್ವಾಜ್ ಕಿಡಿಕಾರಿದ್ದಾರೆ.

ದೆಹಲಿಗೆ ಕುಡಿಯುವ ನೀರು ಪೂರೈಸುವ ವಝೀರಾಬಾದ್ ನೀರು ಸಂಸ್ಕರಣಾ ಘಟಕದ ಪೈಪ್‌ಲೈನ್‌ನಿಂದ ಘಾಟ್‌ಗೆ ನೀರನ್ನು ತೆಗೆದುಕೊಳ್ಳಲಾಗಿದೆ ಎಂದು ಭಾರದ್ವಾಜ್ ಆರೋಪಿಸಿದ್ದಾರೆ.

ದೆಹಲಿ ಜಲ ಸಚಿವ ಪರ್ವೇಶ್ ವರ್ಮಾ ಅವರು ಹಿಂದಿನ ಎಎಪಿ ಸರ್ಕಾರವನ್ನು ನಿಂದಿಸಿ ಅಧಿಕಾರಿಗಳ ಹಲ್ಲೆ ಮಾಡಿದ್ದ ನೊರೆಯನ್ನು ತೆರವುಗೊಳಿಸಲು ಈಗ ಅದೇ ರಾಸಾಯನಿಕವನ್ನು ಯಮುನಾ ನದಿಗೆ ಸಿಂಪಡಿಸುತ್ತಿದ್ದಾರೆ ಎಂದು ಭಾರದ್ವಾಜ್ ಹೇಳಿದ್ದಾರೆ.

ಬಿಜೆಪಿ ಒಂದು ಸುಳ್ಳು ಮರೆಮಾಚಲು ಸಾವಿರ ಸುಳ್ಳು ಹೇಳುತ್ತಿದೆ. ಮತದಾರರನ್ನು ಮರುಳು ಮಾಡಲು ಮತ್ತು ಯಮುನಾ ನದಿ ಅಪಾಯಕಾರಿಯಾಗಿ ವಿಷಕಾರಿಯಾಗಿದೆ ಎಂಬ ಸತ್ಯವನ್ನು ಮರೆಮಾಚಲು ನಾಟಕ ಮಾಡುತ್ತಿದೆ ಎಂದು ಭಾರದ್ವಾಜ್ ಆರೋಪಿಸಿದ್ದಾರೆ.

“ಯಮುನಾ ನೀರು ಗಂಭೀರ ಕಾಯಿಲೆಗಳಿಗೆ ಕಾರಣವಾಗಬಹುದು ಎಂದು ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿ ಒಪ್ಪಿಕೊಂಡಿದೆ. ಆದರೂ, ಬಿಜೆಪಿ ನಾಯಕರು ಫೋಟೋ ತೆಗೆಯಲು ಮತ್ತು ನೊರೆಯನ್ನು ಮರೆಮಾಚಲು ರಾಸಾಯನಿಕಗಳನ್ನು ಸಿಂಪಡಿಸುವಲ್ಲಿ ನಿರತರಾಗಿದ್ದಾರೆ” ಎಂದು ಭಾರದ್ವಾಜ್ ಹೇಳಿದ್ದಾರೆ.

ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ ಪತ್ರಿಕಾಗೋಷ್ಠಿಯಲ್ಲಿ ಎಎಪಿಯ ಆರೋಪಗಳನ್ನು ತಳ್ಳಿಹಾಕಿದ್ದಾರೆ.

“ದೆಹಲಿಯ ಮತ್ತು ಇಡೀ ದೇಶದ ಜನರು ಆಮ್ ಆದ್ಮಿ ಪಕ್ಷದ ನಾಯಕತ್ವದ ರಾಜಕೀಯ ಹತಾಶೆಯ ನಾಚಿಕೆಗೇಡಿನ ಮಾದರಿಯನ್ನು ಕಂಡಿದ್ದಾರೆ. ಯಮುನಾ ನದಿಯ ದಡದಲ್ಲಿರುವ ನೈಸರ್ಗಿಕ ವಾಸುದೇವ್ ಘಾಟ್ ಅನ್ನು ಸ್ವಚ್ಛಗೊಳಿಸಲು ಮತ್ತು ಅಲ್ಲಿ ಶುದ್ಧ ನೀರಿನ ಲಭ್ಯತೆಗೆ ಎಎಪಿ ನಾಯಕ ಸೌರಭ್ ಭಾರದ್ವಾಜ್ ಆಕ್ಷೇಪ ವ್ಯಕ್ತಪಡಿಸಿದ್ದನ್ನು ಜನರು ನೋಡಿದ್ದಾರೆ” ಎಂದು ಹೇಳಿದ್ದಾರೆ.

“ಯಮುನಾ ನದಿಯ ಶುದ್ಧೀಕರಣಕ್ಕೆ ಆಕ್ಷೇಪ ವ್ಯಕ್ತಪಡಿಸಿ ಸೌರಭ್ ಭಾರದ್ವಾಜ್ ಅವರು ಯಮುನಾ ದಡದಿಂದ ಬಿಡುಗಡೆ ಮಾಡಿದ ಲೈವ್ ವಿಡಿಯೋ, ಸರ್ಕಾರದ ಸ್ವಚ್ಛತೆ ಮತ್ತು ನೈರ್ಮಲ್ಯ ಪ್ರಯತ್ನಗಳ ವಿರುದ್ಧ ವಿರೋಧ ಪಕ್ಷದ ನಾಯಕರೊಬ್ಬರು ಆಕ್ಷೇಪಣೆ ವ್ಯಕ್ತಪಡಿಸಿದ ಮೊದಲ ರಾಜಕೀಯ ನಾಟಕವಾಗಿದೆ” ಎಂದು ಸಚ್‌ದೇವ ವಾಗ್ದಾಳಿ ನಡೆಸಿದ್ದಾರೆ.

ಹಿಂದಿನ ಎಎಪಿ ಸರ್ಕಾರವನ್ನು ಟೀಕಿಸಿದ ಸಚ್‌ದೇವ, 2018 ರಿಂದ 2024 ರವರೆಗೆ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಯಮುನಾ ನದಿಯ ದಡದಲ್ಲಿ ಛತ್ ಪೂಜೆಯನ್ನು ನಿಷೇಧಿಸಿದ್ದರು ಎಂದು ಹೇಳಿದ್ದಾರೆ.

ಈಗ, ರೇಖಾ ಗುಪ್ತಾ ಅವರ ಸರ್ಕಾರವು ಯಮುನಾದ ಮೂಲಭೂತ ಶುಚಿಗೊಳಿಸುವಿಕೆಯನ್ನು ಪೂರ್ಣಗೊಳಿಸಿ, ಕೇವಲ ಎಂಟು ತಿಂಗಳಲ್ಲಿ ಭಕ್ತರಿಗೆ ಛತ್ ಆಚರಣೆಗಳನ್ನು ಮಾಡಲು ನೈಸರ್ಗಿಕ ಘಾಟ್‌ಗಳು ಲಭ್ಯವಾಗುವಂತೆ ಮಾಡಿದಾಗ, ಅವರು ಗದ್ದಲ ಎಬ್ಬಿಸುತ್ತಿದ್ದಾರೆ ಎಂದಿದ್ದಾರೆ.

ಎಎಪಿ ನಾಯಕ ಭಾರದ್ವಾಜ್ ಅವರ ಸುದ್ದಿಗೋಷ್ಠಿ ಬಳಿಕ ಪ್ರಧಾನಿ ನಕಲಿ ಯಮುನಾ ಘಾಟ್ ವಿಷಯ ದೇಶದಾದ್ಯಂತ ಚರ್ಚೆಯಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್‌ಗಳಿಗೆ ಆಹಾರವಾಗಿದೆ.

ದೆಹಲಿ ಗಲಭೆ ಪ್ರಕರಣ | ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಜಾಮೀನು ಅರ್ಜಿ ವಿಚಾರಣೆ ಅ.31ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...