Homeಮುಖಪುಟಛತ್ ಪೂಜೆಗಾಗಿ ಪ್ರಧಾನಿಗೆ ಫಿಲ್ಟರ್ ನೀರಿನ 'ನಕಲಿ' ಯಮುನಾ ಘಾಟ್ ನಿರ್ಮಾಣ: ಎಎಪಿ ಆರೋಪ

ಛತ್ ಪೂಜೆಗಾಗಿ ಪ್ರಧಾನಿಗೆ ಫಿಲ್ಟರ್ ನೀರಿನ ‘ನಕಲಿ’ ಯಮುನಾ ಘಾಟ್ ನಿರ್ಮಾಣ: ಎಎಪಿ ಆರೋಪ

- Advertisement -
- Advertisement -

ಛತ್ ಪೂಜೆಗಾಗಿ ನಿಮಿತ್ತ ಸಾಮಾನ್ಯ ಜನರು ಮಲಿನಗೊಂಡ ಯಮುನಾ ನದಿಯಲ್ಲಿ ಪುಣ್ಯಸ್ನಾನ ಮಾಡಬೇಕಾದರೆ, ಪ್ರಧಾನಿ ಮೋದಿಯವರಿಗೆ ಬಿಜೆಪಿ ಫಿಲ್ಟರ್ ನೀರಿನ ನಕಲಿ ‘ಯಮುನಾ ಘಾಟ್’ ನಿರ್ಮಿಸಿದೆ ಎಂದು ಆಮ್‌ ಆದ್ಮಿ ಪಕ್ಷ (ಎಎಪಿ) ಭಾನುವಾರ (26) ಆರೋಪಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಎಪಿ ದೆಹಲಿ ಘಟಕದ ಅಧ್ಯಕ್ಷ ಸೌರಭ್ ಭಾರದ್ವಾಜ್, “ಬಿಜೆಪಿ ಭಕ್ತರನ್ನು ‘ಮೋಸ’ ಮಾಡುತ್ತಿದೆ ಮತ್ತು ಪೂರ್ವಾಂಚಲಿಗಳ ಜೀವನದ ಜೊತೆ ಆಟವಾಡುತ್ತಿದೆ” ಎಂದು ಹೇಳಿದ್ದಾರೆ.

“ಬಿಹಾರದಲ್ಲಿ ಅಧಿಕಾರ ಹಿಡಿಯುವ ಹತಾಶ ಪ್ರಯತ್ನದಲ್ಲಿ ಬಿಜೆಪಿ ದೆಹಲಿಯ ಲಕ್ಷಾಂತರ ಪೂರ್ವಾಂಚಲಿಗಳ ಜೀವನದ ಜೊತೆ ಆಟವಾಡುತ್ತಿದೆ. ಪ್ರಧಾನಿ ಮೋದಿಗಾಗಿ ವಾಸುದೇವ್ ಘಾಟ್‌ನಲ್ಲಿ ಫಿಲ್ಟರ್ ನೀರಿನ ನಕಲಿ ಯಮುನಾ ಘಾಟ್ ನಿರ್ಮಿಸಲಾಗಿದೆ. ಭಕ್ತರು ಕಲುಷಿತ ನದಿಯಲ್ಲಿ ನಿಲ್ಲಬೇಕಾಗಿದೆ” ಎಂದು ಭಾರದ್ವಾಜ್ ಕಿಡಿಕಾರಿದ್ದಾರೆ.

ದೆಹಲಿಗೆ ಕುಡಿಯುವ ನೀರು ಪೂರೈಸುವ ವಝೀರಾಬಾದ್ ನೀರು ಸಂಸ್ಕರಣಾ ಘಟಕದ ಪೈಪ್‌ಲೈನ್‌ನಿಂದ ಘಾಟ್‌ಗೆ ನೀರನ್ನು ತೆಗೆದುಕೊಳ್ಳಲಾಗಿದೆ ಎಂದು ಭಾರದ್ವಾಜ್ ಆರೋಪಿಸಿದ್ದಾರೆ.

ದೆಹಲಿ ಜಲ ಸಚಿವ ಪರ್ವೇಶ್ ವರ್ಮಾ ಅವರು ಹಿಂದಿನ ಎಎಪಿ ಸರ್ಕಾರವನ್ನು ನಿಂದಿಸಿ ಅಧಿಕಾರಿಗಳ ಹಲ್ಲೆ ಮಾಡಿದ್ದ ನೊರೆಯನ್ನು ತೆರವುಗೊಳಿಸಲು ಈಗ ಅದೇ ರಾಸಾಯನಿಕವನ್ನು ಯಮುನಾ ನದಿಗೆ ಸಿಂಪಡಿಸುತ್ತಿದ್ದಾರೆ ಎಂದು ಭಾರದ್ವಾಜ್ ಹೇಳಿದ್ದಾರೆ.

ಬಿಜೆಪಿ ಒಂದು ಸುಳ್ಳು ಮರೆಮಾಚಲು ಸಾವಿರ ಸುಳ್ಳು ಹೇಳುತ್ತಿದೆ. ಮತದಾರರನ್ನು ಮರುಳು ಮಾಡಲು ಮತ್ತು ಯಮುನಾ ನದಿ ಅಪಾಯಕಾರಿಯಾಗಿ ವಿಷಕಾರಿಯಾಗಿದೆ ಎಂಬ ಸತ್ಯವನ್ನು ಮರೆಮಾಚಲು ನಾಟಕ ಮಾಡುತ್ತಿದೆ ಎಂದು ಭಾರದ್ವಾಜ್ ಆರೋಪಿಸಿದ್ದಾರೆ.

“ಯಮುನಾ ನೀರು ಗಂಭೀರ ಕಾಯಿಲೆಗಳಿಗೆ ಕಾರಣವಾಗಬಹುದು ಎಂದು ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿ ಒಪ್ಪಿಕೊಂಡಿದೆ. ಆದರೂ, ಬಿಜೆಪಿ ನಾಯಕರು ಫೋಟೋ ತೆಗೆಯಲು ಮತ್ತು ನೊರೆಯನ್ನು ಮರೆಮಾಚಲು ರಾಸಾಯನಿಕಗಳನ್ನು ಸಿಂಪಡಿಸುವಲ್ಲಿ ನಿರತರಾಗಿದ್ದಾರೆ” ಎಂದು ಭಾರದ್ವಾಜ್ ಹೇಳಿದ್ದಾರೆ.

ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ ಪತ್ರಿಕಾಗೋಷ್ಠಿಯಲ್ಲಿ ಎಎಪಿಯ ಆರೋಪಗಳನ್ನು ತಳ್ಳಿಹಾಕಿದ್ದಾರೆ.

“ದೆಹಲಿಯ ಮತ್ತು ಇಡೀ ದೇಶದ ಜನರು ಆಮ್ ಆದ್ಮಿ ಪಕ್ಷದ ನಾಯಕತ್ವದ ರಾಜಕೀಯ ಹತಾಶೆಯ ನಾಚಿಕೆಗೇಡಿನ ಮಾದರಿಯನ್ನು ಕಂಡಿದ್ದಾರೆ. ಯಮುನಾ ನದಿಯ ದಡದಲ್ಲಿರುವ ನೈಸರ್ಗಿಕ ವಾಸುದೇವ್ ಘಾಟ್ ಅನ್ನು ಸ್ವಚ್ಛಗೊಳಿಸಲು ಮತ್ತು ಅಲ್ಲಿ ಶುದ್ಧ ನೀರಿನ ಲಭ್ಯತೆಗೆ ಎಎಪಿ ನಾಯಕ ಸೌರಭ್ ಭಾರದ್ವಾಜ್ ಆಕ್ಷೇಪ ವ್ಯಕ್ತಪಡಿಸಿದ್ದನ್ನು ಜನರು ನೋಡಿದ್ದಾರೆ” ಎಂದು ಹೇಳಿದ್ದಾರೆ.

“ಯಮುನಾ ನದಿಯ ಶುದ್ಧೀಕರಣಕ್ಕೆ ಆಕ್ಷೇಪ ವ್ಯಕ್ತಪಡಿಸಿ ಸೌರಭ್ ಭಾರದ್ವಾಜ್ ಅವರು ಯಮುನಾ ದಡದಿಂದ ಬಿಡುಗಡೆ ಮಾಡಿದ ಲೈವ್ ವಿಡಿಯೋ, ಸರ್ಕಾರದ ಸ್ವಚ್ಛತೆ ಮತ್ತು ನೈರ್ಮಲ್ಯ ಪ್ರಯತ್ನಗಳ ವಿರುದ್ಧ ವಿರೋಧ ಪಕ್ಷದ ನಾಯಕರೊಬ್ಬರು ಆಕ್ಷೇಪಣೆ ವ್ಯಕ್ತಪಡಿಸಿದ ಮೊದಲ ರಾಜಕೀಯ ನಾಟಕವಾಗಿದೆ” ಎಂದು ಸಚ್‌ದೇವ ವಾಗ್ದಾಳಿ ನಡೆಸಿದ್ದಾರೆ.

ಹಿಂದಿನ ಎಎಪಿ ಸರ್ಕಾರವನ್ನು ಟೀಕಿಸಿದ ಸಚ್‌ದೇವ, 2018 ರಿಂದ 2024 ರವರೆಗೆ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಯಮುನಾ ನದಿಯ ದಡದಲ್ಲಿ ಛತ್ ಪೂಜೆಯನ್ನು ನಿಷೇಧಿಸಿದ್ದರು ಎಂದು ಹೇಳಿದ್ದಾರೆ.

ಈಗ, ರೇಖಾ ಗುಪ್ತಾ ಅವರ ಸರ್ಕಾರವು ಯಮುನಾದ ಮೂಲಭೂತ ಶುಚಿಗೊಳಿಸುವಿಕೆಯನ್ನು ಪೂರ್ಣಗೊಳಿಸಿ, ಕೇವಲ ಎಂಟು ತಿಂಗಳಲ್ಲಿ ಭಕ್ತರಿಗೆ ಛತ್ ಆಚರಣೆಗಳನ್ನು ಮಾಡಲು ನೈಸರ್ಗಿಕ ಘಾಟ್‌ಗಳು ಲಭ್ಯವಾಗುವಂತೆ ಮಾಡಿದಾಗ, ಅವರು ಗದ್ದಲ ಎಬ್ಬಿಸುತ್ತಿದ್ದಾರೆ ಎಂದಿದ್ದಾರೆ.

ಎಎಪಿ ನಾಯಕ ಭಾರದ್ವಾಜ್ ಅವರ ಸುದ್ದಿಗೋಷ್ಠಿ ಬಳಿಕ ಪ್ರಧಾನಿ ನಕಲಿ ಯಮುನಾ ಘಾಟ್ ವಿಷಯ ದೇಶದಾದ್ಯಂತ ಚರ್ಚೆಯಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್‌ಗಳಿಗೆ ಆಹಾರವಾಗಿದೆ.

ದೆಹಲಿ ಗಲಭೆ ಪ್ರಕರಣ | ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಜಾಮೀನು ಅರ್ಜಿ ವಿಚಾರಣೆ ಅ.31ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...