Homeಮುಖಪುಟಛತ್ ಪೂಜೆಗಾಗಿ ಪ್ರಧಾನಿಗೆ ಫಿಲ್ಟರ್ ನೀರಿನ 'ನಕಲಿ' ಯಮುನಾ ಘಾಟ್ ನಿರ್ಮಾಣ: ಎಎಪಿ ಆರೋಪ

ಛತ್ ಪೂಜೆಗಾಗಿ ಪ್ರಧಾನಿಗೆ ಫಿಲ್ಟರ್ ನೀರಿನ ‘ನಕಲಿ’ ಯಮುನಾ ಘಾಟ್ ನಿರ್ಮಾಣ: ಎಎಪಿ ಆರೋಪ

- Advertisement -
- Advertisement -

ಛತ್ ಪೂಜೆಗಾಗಿ ನಿಮಿತ್ತ ಸಾಮಾನ್ಯ ಜನರು ಮಲಿನಗೊಂಡ ಯಮುನಾ ನದಿಯಲ್ಲಿ ಪುಣ್ಯಸ್ನಾನ ಮಾಡಬೇಕಾದರೆ, ಪ್ರಧಾನಿ ಮೋದಿಯವರಿಗೆ ಬಿಜೆಪಿ ಫಿಲ್ಟರ್ ನೀರಿನ ನಕಲಿ ‘ಯಮುನಾ ಘಾಟ್’ ನಿರ್ಮಿಸಿದೆ ಎಂದು ಆಮ್‌ ಆದ್ಮಿ ಪಕ್ಷ (ಎಎಪಿ) ಭಾನುವಾರ (26) ಆರೋಪಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಎಪಿ ದೆಹಲಿ ಘಟಕದ ಅಧ್ಯಕ್ಷ ಸೌರಭ್ ಭಾರದ್ವಾಜ್, “ಬಿಜೆಪಿ ಭಕ್ತರನ್ನು ‘ಮೋಸ’ ಮಾಡುತ್ತಿದೆ ಮತ್ತು ಪೂರ್ವಾಂಚಲಿಗಳ ಜೀವನದ ಜೊತೆ ಆಟವಾಡುತ್ತಿದೆ” ಎಂದು ಹೇಳಿದ್ದಾರೆ.

“ಬಿಹಾರದಲ್ಲಿ ಅಧಿಕಾರ ಹಿಡಿಯುವ ಹತಾಶ ಪ್ರಯತ್ನದಲ್ಲಿ ಬಿಜೆಪಿ ದೆಹಲಿಯ ಲಕ್ಷಾಂತರ ಪೂರ್ವಾಂಚಲಿಗಳ ಜೀವನದ ಜೊತೆ ಆಟವಾಡುತ್ತಿದೆ. ಪ್ರಧಾನಿ ಮೋದಿಗಾಗಿ ವಾಸುದೇವ್ ಘಾಟ್‌ನಲ್ಲಿ ಫಿಲ್ಟರ್ ನೀರಿನ ನಕಲಿ ಯಮುನಾ ಘಾಟ್ ನಿರ್ಮಿಸಲಾಗಿದೆ. ಭಕ್ತರು ಕಲುಷಿತ ನದಿಯಲ್ಲಿ ನಿಲ್ಲಬೇಕಾಗಿದೆ” ಎಂದು ಭಾರದ್ವಾಜ್ ಕಿಡಿಕಾರಿದ್ದಾರೆ.

ದೆಹಲಿಗೆ ಕುಡಿಯುವ ನೀರು ಪೂರೈಸುವ ವಝೀರಾಬಾದ್ ನೀರು ಸಂಸ್ಕರಣಾ ಘಟಕದ ಪೈಪ್‌ಲೈನ್‌ನಿಂದ ಘಾಟ್‌ಗೆ ನೀರನ್ನು ತೆಗೆದುಕೊಳ್ಳಲಾಗಿದೆ ಎಂದು ಭಾರದ್ವಾಜ್ ಆರೋಪಿಸಿದ್ದಾರೆ.

ದೆಹಲಿ ಜಲ ಸಚಿವ ಪರ್ವೇಶ್ ವರ್ಮಾ ಅವರು ಹಿಂದಿನ ಎಎಪಿ ಸರ್ಕಾರವನ್ನು ನಿಂದಿಸಿ ಅಧಿಕಾರಿಗಳ ಹಲ್ಲೆ ಮಾಡಿದ್ದ ನೊರೆಯನ್ನು ತೆರವುಗೊಳಿಸಲು ಈಗ ಅದೇ ರಾಸಾಯನಿಕವನ್ನು ಯಮುನಾ ನದಿಗೆ ಸಿಂಪಡಿಸುತ್ತಿದ್ದಾರೆ ಎಂದು ಭಾರದ್ವಾಜ್ ಹೇಳಿದ್ದಾರೆ.

ಬಿಜೆಪಿ ಒಂದು ಸುಳ್ಳು ಮರೆಮಾಚಲು ಸಾವಿರ ಸುಳ್ಳು ಹೇಳುತ್ತಿದೆ. ಮತದಾರರನ್ನು ಮರುಳು ಮಾಡಲು ಮತ್ತು ಯಮುನಾ ನದಿ ಅಪಾಯಕಾರಿಯಾಗಿ ವಿಷಕಾರಿಯಾಗಿದೆ ಎಂಬ ಸತ್ಯವನ್ನು ಮರೆಮಾಚಲು ನಾಟಕ ಮಾಡುತ್ತಿದೆ ಎಂದು ಭಾರದ್ವಾಜ್ ಆರೋಪಿಸಿದ್ದಾರೆ.

“ಯಮುನಾ ನೀರು ಗಂಭೀರ ಕಾಯಿಲೆಗಳಿಗೆ ಕಾರಣವಾಗಬಹುದು ಎಂದು ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿ ಒಪ್ಪಿಕೊಂಡಿದೆ. ಆದರೂ, ಬಿಜೆಪಿ ನಾಯಕರು ಫೋಟೋ ತೆಗೆಯಲು ಮತ್ತು ನೊರೆಯನ್ನು ಮರೆಮಾಚಲು ರಾಸಾಯನಿಕಗಳನ್ನು ಸಿಂಪಡಿಸುವಲ್ಲಿ ನಿರತರಾಗಿದ್ದಾರೆ” ಎಂದು ಭಾರದ್ವಾಜ್ ಹೇಳಿದ್ದಾರೆ.

ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ ಪತ್ರಿಕಾಗೋಷ್ಠಿಯಲ್ಲಿ ಎಎಪಿಯ ಆರೋಪಗಳನ್ನು ತಳ್ಳಿಹಾಕಿದ್ದಾರೆ.

“ದೆಹಲಿಯ ಮತ್ತು ಇಡೀ ದೇಶದ ಜನರು ಆಮ್ ಆದ್ಮಿ ಪಕ್ಷದ ನಾಯಕತ್ವದ ರಾಜಕೀಯ ಹತಾಶೆಯ ನಾಚಿಕೆಗೇಡಿನ ಮಾದರಿಯನ್ನು ಕಂಡಿದ್ದಾರೆ. ಯಮುನಾ ನದಿಯ ದಡದಲ್ಲಿರುವ ನೈಸರ್ಗಿಕ ವಾಸುದೇವ್ ಘಾಟ್ ಅನ್ನು ಸ್ವಚ್ಛಗೊಳಿಸಲು ಮತ್ತು ಅಲ್ಲಿ ಶುದ್ಧ ನೀರಿನ ಲಭ್ಯತೆಗೆ ಎಎಪಿ ನಾಯಕ ಸೌರಭ್ ಭಾರದ್ವಾಜ್ ಆಕ್ಷೇಪ ವ್ಯಕ್ತಪಡಿಸಿದ್ದನ್ನು ಜನರು ನೋಡಿದ್ದಾರೆ” ಎಂದು ಹೇಳಿದ್ದಾರೆ.

“ಯಮುನಾ ನದಿಯ ಶುದ್ಧೀಕರಣಕ್ಕೆ ಆಕ್ಷೇಪ ವ್ಯಕ್ತಪಡಿಸಿ ಸೌರಭ್ ಭಾರದ್ವಾಜ್ ಅವರು ಯಮುನಾ ದಡದಿಂದ ಬಿಡುಗಡೆ ಮಾಡಿದ ಲೈವ್ ವಿಡಿಯೋ, ಸರ್ಕಾರದ ಸ್ವಚ್ಛತೆ ಮತ್ತು ನೈರ್ಮಲ್ಯ ಪ್ರಯತ್ನಗಳ ವಿರುದ್ಧ ವಿರೋಧ ಪಕ್ಷದ ನಾಯಕರೊಬ್ಬರು ಆಕ್ಷೇಪಣೆ ವ್ಯಕ್ತಪಡಿಸಿದ ಮೊದಲ ರಾಜಕೀಯ ನಾಟಕವಾಗಿದೆ” ಎಂದು ಸಚ್‌ದೇವ ವಾಗ್ದಾಳಿ ನಡೆಸಿದ್ದಾರೆ.

ಹಿಂದಿನ ಎಎಪಿ ಸರ್ಕಾರವನ್ನು ಟೀಕಿಸಿದ ಸಚ್‌ದೇವ, 2018 ರಿಂದ 2024 ರವರೆಗೆ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಯಮುನಾ ನದಿಯ ದಡದಲ್ಲಿ ಛತ್ ಪೂಜೆಯನ್ನು ನಿಷೇಧಿಸಿದ್ದರು ಎಂದು ಹೇಳಿದ್ದಾರೆ.

ಈಗ, ರೇಖಾ ಗುಪ್ತಾ ಅವರ ಸರ್ಕಾರವು ಯಮುನಾದ ಮೂಲಭೂತ ಶುಚಿಗೊಳಿಸುವಿಕೆಯನ್ನು ಪೂರ್ಣಗೊಳಿಸಿ, ಕೇವಲ ಎಂಟು ತಿಂಗಳಲ್ಲಿ ಭಕ್ತರಿಗೆ ಛತ್ ಆಚರಣೆಗಳನ್ನು ಮಾಡಲು ನೈಸರ್ಗಿಕ ಘಾಟ್‌ಗಳು ಲಭ್ಯವಾಗುವಂತೆ ಮಾಡಿದಾಗ, ಅವರು ಗದ್ದಲ ಎಬ್ಬಿಸುತ್ತಿದ್ದಾರೆ ಎಂದಿದ್ದಾರೆ.

ಎಎಪಿ ನಾಯಕ ಭಾರದ್ವಾಜ್ ಅವರ ಸುದ್ದಿಗೋಷ್ಠಿ ಬಳಿಕ ಪ್ರಧಾನಿ ನಕಲಿ ಯಮುನಾ ಘಾಟ್ ವಿಷಯ ದೇಶದಾದ್ಯಂತ ಚರ್ಚೆಯಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್‌ಗಳಿಗೆ ಆಹಾರವಾಗಿದೆ.

ದೆಹಲಿ ಗಲಭೆ ಪ್ರಕರಣ | ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಜಾಮೀನು ಅರ್ಜಿ ವಿಚಾರಣೆ ಅ.31ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...