Homeಕರ್ನಾಟಕಬಿಜೆಪಿಯ ಹೊಸ ಸ್ಲೋಗನ್: ಅನರ್ಹರಿಗೆ ಆದ್ಯತೆ, ಪಕ್ಷನಿಷ್ಠರಿಗೆ ಬಾದ್ಯತೆ!

ಬಿಜೆಪಿಯ ಹೊಸ ಸ್ಲೋಗನ್: ಅನರ್ಹರಿಗೆ ಆದ್ಯತೆ, ಪಕ್ಷನಿಷ್ಠರಿಗೆ ಬಾದ್ಯತೆ!

ಇವತ್ತು ಇಡೀ ರಾಜ್ಯ ಸರ್ಕಾರವನ್ನು ದೆಹಲಿ ನಿಯಂತ್ರಿಸುತ್ತಿದೆ. ದಹಲಿಯಿಂದ ಅಮಿತ್ ಶಾ ಮತ್ತು ಬಿ.ಎಲ್ ಸಂತೋಷ್ ಎಂಬಿಬ್ಬರು ಎಲ್ಲವನ್ನೂ ನಿಯಂತ್ರಿಸುವ ಮೂಲಕ ಬಿಜೆಪಿಯ ಚುನಾಯಿತ ಪ್ರತಿನಿಧಿಗಳನ್ನು ಅವಮಾನಿಸುತ್ತಿದ್ದಾರೆ!

- Advertisement -
- Advertisement -

ಈಗ ಸರ್ಕಾರ ರಚನೆಯ ಮಟ್ಟಿಗೆ ಬಿಜೆಪಿ ಒಂದು ಹೊಸ ಸ್ಲೋಗನ್ನು ಹಾಕಿಕೊಂಡಂತಿದೆ. ಅದು ‘ಅನರ್ಹರಿಗೆ ಆದ್ಯತೆ, ಪಕ್ಷನಿಷ್ಠರಿಗೆ ಬಾದ್ಯತೆ’ ಎಂಬುದಾಗಿದೆ. ಬಾದ್ಯತೆಗೊಳಗಾದ ಎಲ್ಲ ಹಿರಿಯ ನಾಯಕರು ಇದನ್ನು ಒಪ್ಪಿಕೊಂಡು ಸುಮ್ಮನೆ ತೆಪ್ಪಗೆ ಬಿದ್ದಿದ್ದಾರೆ. ಆದರೆ ಕನಿಷ್ಠ ಅವರ ಅಭಿಮಾನಿಗಳಾದರೂ ಇದನ್ನೆಲ್ಲ ಪ್ರತಿಭಟಿಸಬಹುದಿತ್ತು. ಆದರೆ ಈ ಅತೃಪ್ತ ಸಚಿವರು ಅದಕ್ಕೂ ಅವಕಾಶ ನೀಡುತ್ತಿಲ್ಲ. ಆದರೆ ಮೋದಿಯ ಜಪದಲ್ಲಿ ಕಾಮನ್ ಸೆನ್ಸ್ ಕಳೆದುಕೊಂಡಿರುವ ಕಾರ್ಯಕರ್ತರು ತಮ್ಮನ್ನು ತಾವೇ ವಂಚಿಸಿಕೊಳ್ಳುತ್ತಿದ್ದಾರೆ.

ಚುನಾವಣೆಯೇ ಗೊತ್ತಿಲ್ಲದ ಸಂತೋಷ್ ಕಾರುಬಾರು!

ಜೀವನದಲ್ಲಿ ಎಂದೂ ಒಂದೂ ಚುನಾವಣೆ ಎದುರಿಸದ ಬಿ.ಎಲ್ ಸಂತೋಷ್ ಎಂಬ ಆರೆಸ್ಸೆಸ್ ಮನುಷ್ಯ ಇತ್ತೀಚಿನವರೆಗೂ ಸಾರ್ವಜನಿಕವಾಗಿ ಕಾಣಿಸಿಕೊಂಡು ಸಭೆ ನಡೆಸಿದ ವ್ಯಕ್ತಿಯಲ್ಲ. ಆದರೆ ಈಗ ಈ ವ್ಯಕ್ತಿಯೇ ರಾಜ್ಯ ಬಿಜೆಪಿಯ ಪ್ರಶ್ನಾತೀತ ನಾಯಕ. ಎಂದಾದರೂ ಒಂದಿನ ಈ ರಾಜ್ಯದ ಮುಖ್ಯಮಂತ್ರಿ ಆಗುವ ಅದಮ್ಯ ಆಸೆಯನ್ನು ದಶಕದಿಂದ ಕಾಪಾಡಿಕೊಂಡು ಬಂದಿರುವ ಸಂತೋಷ್‍ರಿಗೆ ನೇರ ಚುನಾವಣೆ ಎದುರಿಸಿ ಗೆಲ್ಲುವ ಛಾತಿಯಂತೂ ಇಲ್ಲವೇ ಇಲ್ಲ. ಹಂತ ಹಂತವಾಗಿ ಮೇಲೇರಿ ರಾಜಕೀಯ ಅಧಿಕಾರ ಪಡೆಯುವ ತಾಳ್ಮೆಯೂ ಇಲ್ಲ. ಹೀಗಾಗಿ ಅವರು ಬಿಜೆಪಿಗೆ ಬಹುಮತ ಬಂದಾಗ ವಾಮಮಾರ್ಗದ ಮೂಲಕ ಮುಖ್ಯಮಂತ್ರಿಯಾಗುವ ದೀಕ್ಷೆ ತೊಟ್ಟಿದ್ದಾರೆ. ಆದರೆ ಪಾಪ ಅದಕ್ಕೆ ಕಾಲ ಕೂಡಿ ಬರುತ್ತಿಲ್ಲ.

ಇಲ್ಲಿ ಯಡಿಯೂರಪ್ಪ ಲಿಂಗಾಯತ ನಾಯಕ ಎಂದು ಬಿಂಬಿತವಾದ ಕಾರಣಕ್ಕೆ ಸಂತೋಷ್ ಸುಮ್ಮನಿದ್ದರು. ಅಮಿತ್ ಶಾ ಕೂಡ ಸುಮ್ಮನಿರ ಬೇಕಾಗಿತ್ತು. ಮುಂದೆ ಚುನಾವಣೆ ನಡೆದರೆ ಬಿಜೆಪಿಗೆ ಸ್ಪಷ್ಟ ಬಹುಮತ ಎಂದು ಲೆಕ್ಕ ಹಾಕಿರುವ ಇವರೀಗ ಮುಂದೆ ಅಡ್ಡಿ ಆಗಬಹುದಾದ ಯಡಿಯೂರಪ್ಪ ಅವರನ್ನು ಈಗಲೇ ಕುಗ್ಗಿಸಿ, ಅವರನ್ನು ತಮ್ಮ ಹಿಡಿತಕ್ಕೆ ತಂದುಕೊಂಡಿದ್ದಾರೆ. ಹಂತ ಹಂತವಾಗಿ ಯಡಿಯೂರಪ್ಪನವರ ರಾಜಕೀಯ ವರ್ಚಸ್ಸು ಹಾಳಾದಂತೆಲ್ಲ ತನಗೆ ಲಾಭ ಎಂದು ಸಂತೋಷ್ ನಂಬಿದಂತಿದೆ. ಅದಕ್ಕಾಗಿ ಈಗ ಯಡಿಯೂರಪ್ಪ ಮೇಲೇಳದಂತೆ ಮೂವರು ಡಿಸಿಎಂಗಳನ್ನು ಸುತ್ತುವರಿಸಲಾಗಿದೆ.

ಅನರ್ಹರಿಗಾಗಿ ಕಾದಿವೆ ಪ್ರಮುಖ ಖಾತೆಗಳು
ಸಮಾಜ ಕಲ್ಯಾಣ, ಬೆಂಗಳೂರು ನಗರಾಭಿವೃದ್ಧಿಯಂತಹ ಪ್ರಮುಖ ಖಾತೆಗಳನ್ನು ಈಗ ಅನರ್ಹಗೊಂಡಿರುವ ಶಾಸಕರಿಗಾಗಿ ಮೀಸಲಿಟ್ಟಿದ್ದಾರೆ. ಅವರು ಸುಪ್ರಿಕೋರ್ಟಿನಿಂದ ಅರ್ಹಗೊಂಡು ಬಂದ ನಂತರವಷ್ಟೇ ಆ ಮಾತಲ್ಲವೇ? ಆದರೂ ಆ ಅನರ್ಹರಿಗಾಗಿ ಈಗ ಪಕ್ಷನಿಷ್ಠ ಅನೇಕ ಹಿರಿಯರನ್ನು ಕಡೆಗಣಿಸಲಾಗಿದೆ. ಚುನಾವಣೆಯಲ್ಲಿ ಸೋತ ಮತ್ತು ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸದನದಲ್ಲೇ ಬ್ಲೂ ಫಿಲಂ ನೋಡಿ ಸಚಿವ ಸ್ಥಾನ ಕಳೆದುಕೊಂಡಿದ್ದ ಲಕ್ಷ್ಮಣ ಸವದಿ ಅವರಿಗೆ ಪ್ರಮುಖ ಖಾತೆಯ ಜೊತೆಗೇ ಡಿಸಿಎಂ ಹುದ್ದೆ ನೀಡುವ ಮೂಲಕ ‘ನಮ್ಮಲ್ಲಿ ಅನರ್ಹರಿಗಷ್ಟೇ ಅಲ್ಲ, ಅಯೋಗ್ಯರಿಗೂ ಆದ್ಯತೆ’ ಎಂದು ಸಂತೋಷ್ ನೇತೃತ್ವದ ಬಿಜೆಪಿ ಟೀಮ್ ಘೋಷಣೆ ಮಾಡಿದೆ.

ಧಮ್ಮೇ ಇಲ್ಲದ ರಾಜ್ಯದ ಪ್ರಮುಖ ನಾಯಕರು ಗಪ್‍ಚುಪ್ ಕೂಡುವ ಮೂಲಕ ತಮ್ಮನ್ನೂ ಅವಮಾನಿಸಿಕೊಂಡು, ಮತ ಹಾಕಿದ ಪ್ರಜೆಗಳನ್ನೂ ಅವಮಾನಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...