Homeಕರ್ನಾಟಕಬಿಜೆಪಿಯ ಹೊಸ ಸ್ಲೋಗನ್: ಅನರ್ಹರಿಗೆ ಆದ್ಯತೆ, ಪಕ್ಷನಿಷ್ಠರಿಗೆ ಬಾದ್ಯತೆ!

ಬಿಜೆಪಿಯ ಹೊಸ ಸ್ಲೋಗನ್: ಅನರ್ಹರಿಗೆ ಆದ್ಯತೆ, ಪಕ್ಷನಿಷ್ಠರಿಗೆ ಬಾದ್ಯತೆ!

ಇವತ್ತು ಇಡೀ ರಾಜ್ಯ ಸರ್ಕಾರವನ್ನು ದೆಹಲಿ ನಿಯಂತ್ರಿಸುತ್ತಿದೆ. ದಹಲಿಯಿಂದ ಅಮಿತ್ ಶಾ ಮತ್ತು ಬಿ.ಎಲ್ ಸಂತೋಷ್ ಎಂಬಿಬ್ಬರು ಎಲ್ಲವನ್ನೂ ನಿಯಂತ್ರಿಸುವ ಮೂಲಕ ಬಿಜೆಪಿಯ ಚುನಾಯಿತ ಪ್ರತಿನಿಧಿಗಳನ್ನು ಅವಮಾನಿಸುತ್ತಿದ್ದಾರೆ!

- Advertisement -
- Advertisement -

ಈಗ ಸರ್ಕಾರ ರಚನೆಯ ಮಟ್ಟಿಗೆ ಬಿಜೆಪಿ ಒಂದು ಹೊಸ ಸ್ಲೋಗನ್ನು ಹಾಕಿಕೊಂಡಂತಿದೆ. ಅದು ‘ಅನರ್ಹರಿಗೆ ಆದ್ಯತೆ, ಪಕ್ಷನಿಷ್ಠರಿಗೆ ಬಾದ್ಯತೆ’ ಎಂಬುದಾಗಿದೆ. ಬಾದ್ಯತೆಗೊಳಗಾದ ಎಲ್ಲ ಹಿರಿಯ ನಾಯಕರು ಇದನ್ನು ಒಪ್ಪಿಕೊಂಡು ಸುಮ್ಮನೆ ತೆಪ್ಪಗೆ ಬಿದ್ದಿದ್ದಾರೆ. ಆದರೆ ಕನಿಷ್ಠ ಅವರ ಅಭಿಮಾನಿಗಳಾದರೂ ಇದನ್ನೆಲ್ಲ ಪ್ರತಿಭಟಿಸಬಹುದಿತ್ತು. ಆದರೆ ಈ ಅತೃಪ್ತ ಸಚಿವರು ಅದಕ್ಕೂ ಅವಕಾಶ ನೀಡುತ್ತಿಲ್ಲ. ಆದರೆ ಮೋದಿಯ ಜಪದಲ್ಲಿ ಕಾಮನ್ ಸೆನ್ಸ್ ಕಳೆದುಕೊಂಡಿರುವ ಕಾರ್ಯಕರ್ತರು ತಮ್ಮನ್ನು ತಾವೇ ವಂಚಿಸಿಕೊಳ್ಳುತ್ತಿದ್ದಾರೆ.

ಚುನಾವಣೆಯೇ ಗೊತ್ತಿಲ್ಲದ ಸಂತೋಷ್ ಕಾರುಬಾರು!

ಜೀವನದಲ್ಲಿ ಎಂದೂ ಒಂದೂ ಚುನಾವಣೆ ಎದುರಿಸದ ಬಿ.ಎಲ್ ಸಂತೋಷ್ ಎಂಬ ಆರೆಸ್ಸೆಸ್ ಮನುಷ್ಯ ಇತ್ತೀಚಿನವರೆಗೂ ಸಾರ್ವಜನಿಕವಾಗಿ ಕಾಣಿಸಿಕೊಂಡು ಸಭೆ ನಡೆಸಿದ ವ್ಯಕ್ತಿಯಲ್ಲ. ಆದರೆ ಈಗ ಈ ವ್ಯಕ್ತಿಯೇ ರಾಜ್ಯ ಬಿಜೆಪಿಯ ಪ್ರಶ್ನಾತೀತ ನಾಯಕ. ಎಂದಾದರೂ ಒಂದಿನ ಈ ರಾಜ್ಯದ ಮುಖ್ಯಮಂತ್ರಿ ಆಗುವ ಅದಮ್ಯ ಆಸೆಯನ್ನು ದಶಕದಿಂದ ಕಾಪಾಡಿಕೊಂಡು ಬಂದಿರುವ ಸಂತೋಷ್‍ರಿಗೆ ನೇರ ಚುನಾವಣೆ ಎದುರಿಸಿ ಗೆಲ್ಲುವ ಛಾತಿಯಂತೂ ಇಲ್ಲವೇ ಇಲ್ಲ. ಹಂತ ಹಂತವಾಗಿ ಮೇಲೇರಿ ರಾಜಕೀಯ ಅಧಿಕಾರ ಪಡೆಯುವ ತಾಳ್ಮೆಯೂ ಇಲ್ಲ. ಹೀಗಾಗಿ ಅವರು ಬಿಜೆಪಿಗೆ ಬಹುಮತ ಬಂದಾಗ ವಾಮಮಾರ್ಗದ ಮೂಲಕ ಮುಖ್ಯಮಂತ್ರಿಯಾಗುವ ದೀಕ್ಷೆ ತೊಟ್ಟಿದ್ದಾರೆ. ಆದರೆ ಪಾಪ ಅದಕ್ಕೆ ಕಾಲ ಕೂಡಿ ಬರುತ್ತಿಲ್ಲ.

ಇಲ್ಲಿ ಯಡಿಯೂರಪ್ಪ ಲಿಂಗಾಯತ ನಾಯಕ ಎಂದು ಬಿಂಬಿತವಾದ ಕಾರಣಕ್ಕೆ ಸಂತೋಷ್ ಸುಮ್ಮನಿದ್ದರು. ಅಮಿತ್ ಶಾ ಕೂಡ ಸುಮ್ಮನಿರ ಬೇಕಾಗಿತ್ತು. ಮುಂದೆ ಚುನಾವಣೆ ನಡೆದರೆ ಬಿಜೆಪಿಗೆ ಸ್ಪಷ್ಟ ಬಹುಮತ ಎಂದು ಲೆಕ್ಕ ಹಾಕಿರುವ ಇವರೀಗ ಮುಂದೆ ಅಡ್ಡಿ ಆಗಬಹುದಾದ ಯಡಿಯೂರಪ್ಪ ಅವರನ್ನು ಈಗಲೇ ಕುಗ್ಗಿಸಿ, ಅವರನ್ನು ತಮ್ಮ ಹಿಡಿತಕ್ಕೆ ತಂದುಕೊಂಡಿದ್ದಾರೆ. ಹಂತ ಹಂತವಾಗಿ ಯಡಿಯೂರಪ್ಪನವರ ರಾಜಕೀಯ ವರ್ಚಸ್ಸು ಹಾಳಾದಂತೆಲ್ಲ ತನಗೆ ಲಾಭ ಎಂದು ಸಂತೋಷ್ ನಂಬಿದಂತಿದೆ. ಅದಕ್ಕಾಗಿ ಈಗ ಯಡಿಯೂರಪ್ಪ ಮೇಲೇಳದಂತೆ ಮೂವರು ಡಿಸಿಎಂಗಳನ್ನು ಸುತ್ತುವರಿಸಲಾಗಿದೆ.

ಅನರ್ಹರಿಗಾಗಿ ಕಾದಿವೆ ಪ್ರಮುಖ ಖಾತೆಗಳು
ಸಮಾಜ ಕಲ್ಯಾಣ, ಬೆಂಗಳೂರು ನಗರಾಭಿವೃದ್ಧಿಯಂತಹ ಪ್ರಮುಖ ಖಾತೆಗಳನ್ನು ಈಗ ಅನರ್ಹಗೊಂಡಿರುವ ಶಾಸಕರಿಗಾಗಿ ಮೀಸಲಿಟ್ಟಿದ್ದಾರೆ. ಅವರು ಸುಪ್ರಿಕೋರ್ಟಿನಿಂದ ಅರ್ಹಗೊಂಡು ಬಂದ ನಂತರವಷ್ಟೇ ಆ ಮಾತಲ್ಲವೇ? ಆದರೂ ಆ ಅನರ್ಹರಿಗಾಗಿ ಈಗ ಪಕ್ಷನಿಷ್ಠ ಅನೇಕ ಹಿರಿಯರನ್ನು ಕಡೆಗಣಿಸಲಾಗಿದೆ. ಚುನಾವಣೆಯಲ್ಲಿ ಸೋತ ಮತ್ತು ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸದನದಲ್ಲೇ ಬ್ಲೂ ಫಿಲಂ ನೋಡಿ ಸಚಿವ ಸ್ಥಾನ ಕಳೆದುಕೊಂಡಿದ್ದ ಲಕ್ಷ್ಮಣ ಸವದಿ ಅವರಿಗೆ ಪ್ರಮುಖ ಖಾತೆಯ ಜೊತೆಗೇ ಡಿಸಿಎಂ ಹುದ್ದೆ ನೀಡುವ ಮೂಲಕ ‘ನಮ್ಮಲ್ಲಿ ಅನರ್ಹರಿಗಷ್ಟೇ ಅಲ್ಲ, ಅಯೋಗ್ಯರಿಗೂ ಆದ್ಯತೆ’ ಎಂದು ಸಂತೋಷ್ ನೇತೃತ್ವದ ಬಿಜೆಪಿ ಟೀಮ್ ಘೋಷಣೆ ಮಾಡಿದೆ.

ಧಮ್ಮೇ ಇಲ್ಲದ ರಾಜ್ಯದ ಪ್ರಮುಖ ನಾಯಕರು ಗಪ್‍ಚುಪ್ ಕೂಡುವ ಮೂಲಕ ತಮ್ಮನ್ನೂ ಅವಮಾನಿಸಿಕೊಂಡು, ಮತ ಹಾಕಿದ ಪ್ರಜೆಗಳನ್ನೂ ಅವಮಾನಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....