Homeಕರ್ನಾಟಕಬಿಜೆಪಿಯ ಹೊಸ ಸ್ಲೋಗನ್: ಅನರ್ಹರಿಗೆ ಆದ್ಯತೆ, ಪಕ್ಷನಿಷ್ಠರಿಗೆ ಬಾದ್ಯತೆ!

ಬಿಜೆಪಿಯ ಹೊಸ ಸ್ಲೋಗನ್: ಅನರ್ಹರಿಗೆ ಆದ್ಯತೆ, ಪಕ್ಷನಿಷ್ಠರಿಗೆ ಬಾದ್ಯತೆ!

ಇವತ್ತು ಇಡೀ ರಾಜ್ಯ ಸರ್ಕಾರವನ್ನು ದೆಹಲಿ ನಿಯಂತ್ರಿಸುತ್ತಿದೆ. ದಹಲಿಯಿಂದ ಅಮಿತ್ ಶಾ ಮತ್ತು ಬಿ.ಎಲ್ ಸಂತೋಷ್ ಎಂಬಿಬ್ಬರು ಎಲ್ಲವನ್ನೂ ನಿಯಂತ್ರಿಸುವ ಮೂಲಕ ಬಿಜೆಪಿಯ ಚುನಾಯಿತ ಪ್ರತಿನಿಧಿಗಳನ್ನು ಅವಮಾನಿಸುತ್ತಿದ್ದಾರೆ!

- Advertisement -
- Advertisement -

ಈಗ ಸರ್ಕಾರ ರಚನೆಯ ಮಟ್ಟಿಗೆ ಬಿಜೆಪಿ ಒಂದು ಹೊಸ ಸ್ಲೋಗನ್ನು ಹಾಕಿಕೊಂಡಂತಿದೆ. ಅದು ‘ಅನರ್ಹರಿಗೆ ಆದ್ಯತೆ, ಪಕ್ಷನಿಷ್ಠರಿಗೆ ಬಾದ್ಯತೆ’ ಎಂಬುದಾಗಿದೆ. ಬಾದ್ಯತೆಗೊಳಗಾದ ಎಲ್ಲ ಹಿರಿಯ ನಾಯಕರು ಇದನ್ನು ಒಪ್ಪಿಕೊಂಡು ಸುಮ್ಮನೆ ತೆಪ್ಪಗೆ ಬಿದ್ದಿದ್ದಾರೆ. ಆದರೆ ಕನಿಷ್ಠ ಅವರ ಅಭಿಮಾನಿಗಳಾದರೂ ಇದನ್ನೆಲ್ಲ ಪ್ರತಿಭಟಿಸಬಹುದಿತ್ತು. ಆದರೆ ಈ ಅತೃಪ್ತ ಸಚಿವರು ಅದಕ್ಕೂ ಅವಕಾಶ ನೀಡುತ್ತಿಲ್ಲ. ಆದರೆ ಮೋದಿಯ ಜಪದಲ್ಲಿ ಕಾಮನ್ ಸೆನ್ಸ್ ಕಳೆದುಕೊಂಡಿರುವ ಕಾರ್ಯಕರ್ತರು ತಮ್ಮನ್ನು ತಾವೇ ವಂಚಿಸಿಕೊಳ್ಳುತ್ತಿದ್ದಾರೆ.

ಚುನಾವಣೆಯೇ ಗೊತ್ತಿಲ್ಲದ ಸಂತೋಷ್ ಕಾರುಬಾರು!

ಜೀವನದಲ್ಲಿ ಎಂದೂ ಒಂದೂ ಚುನಾವಣೆ ಎದುರಿಸದ ಬಿ.ಎಲ್ ಸಂತೋಷ್ ಎಂಬ ಆರೆಸ್ಸೆಸ್ ಮನುಷ್ಯ ಇತ್ತೀಚಿನವರೆಗೂ ಸಾರ್ವಜನಿಕವಾಗಿ ಕಾಣಿಸಿಕೊಂಡು ಸಭೆ ನಡೆಸಿದ ವ್ಯಕ್ತಿಯಲ್ಲ. ಆದರೆ ಈಗ ಈ ವ್ಯಕ್ತಿಯೇ ರಾಜ್ಯ ಬಿಜೆಪಿಯ ಪ್ರಶ್ನಾತೀತ ನಾಯಕ. ಎಂದಾದರೂ ಒಂದಿನ ಈ ರಾಜ್ಯದ ಮುಖ್ಯಮಂತ್ರಿ ಆಗುವ ಅದಮ್ಯ ಆಸೆಯನ್ನು ದಶಕದಿಂದ ಕಾಪಾಡಿಕೊಂಡು ಬಂದಿರುವ ಸಂತೋಷ್‍ರಿಗೆ ನೇರ ಚುನಾವಣೆ ಎದುರಿಸಿ ಗೆಲ್ಲುವ ಛಾತಿಯಂತೂ ಇಲ್ಲವೇ ಇಲ್ಲ. ಹಂತ ಹಂತವಾಗಿ ಮೇಲೇರಿ ರಾಜಕೀಯ ಅಧಿಕಾರ ಪಡೆಯುವ ತಾಳ್ಮೆಯೂ ಇಲ್ಲ. ಹೀಗಾಗಿ ಅವರು ಬಿಜೆಪಿಗೆ ಬಹುಮತ ಬಂದಾಗ ವಾಮಮಾರ್ಗದ ಮೂಲಕ ಮುಖ್ಯಮಂತ್ರಿಯಾಗುವ ದೀಕ್ಷೆ ತೊಟ್ಟಿದ್ದಾರೆ. ಆದರೆ ಪಾಪ ಅದಕ್ಕೆ ಕಾಲ ಕೂಡಿ ಬರುತ್ತಿಲ್ಲ.

ಇಲ್ಲಿ ಯಡಿಯೂರಪ್ಪ ಲಿಂಗಾಯತ ನಾಯಕ ಎಂದು ಬಿಂಬಿತವಾದ ಕಾರಣಕ್ಕೆ ಸಂತೋಷ್ ಸುಮ್ಮನಿದ್ದರು. ಅಮಿತ್ ಶಾ ಕೂಡ ಸುಮ್ಮನಿರ ಬೇಕಾಗಿತ್ತು. ಮುಂದೆ ಚುನಾವಣೆ ನಡೆದರೆ ಬಿಜೆಪಿಗೆ ಸ್ಪಷ್ಟ ಬಹುಮತ ಎಂದು ಲೆಕ್ಕ ಹಾಕಿರುವ ಇವರೀಗ ಮುಂದೆ ಅಡ್ಡಿ ಆಗಬಹುದಾದ ಯಡಿಯೂರಪ್ಪ ಅವರನ್ನು ಈಗಲೇ ಕುಗ್ಗಿಸಿ, ಅವರನ್ನು ತಮ್ಮ ಹಿಡಿತಕ್ಕೆ ತಂದುಕೊಂಡಿದ್ದಾರೆ. ಹಂತ ಹಂತವಾಗಿ ಯಡಿಯೂರಪ್ಪನವರ ರಾಜಕೀಯ ವರ್ಚಸ್ಸು ಹಾಳಾದಂತೆಲ್ಲ ತನಗೆ ಲಾಭ ಎಂದು ಸಂತೋಷ್ ನಂಬಿದಂತಿದೆ. ಅದಕ್ಕಾಗಿ ಈಗ ಯಡಿಯೂರಪ್ಪ ಮೇಲೇಳದಂತೆ ಮೂವರು ಡಿಸಿಎಂಗಳನ್ನು ಸುತ್ತುವರಿಸಲಾಗಿದೆ.

ಅನರ್ಹರಿಗಾಗಿ ಕಾದಿವೆ ಪ್ರಮುಖ ಖಾತೆಗಳು
ಸಮಾಜ ಕಲ್ಯಾಣ, ಬೆಂಗಳೂರು ನಗರಾಭಿವೃದ್ಧಿಯಂತಹ ಪ್ರಮುಖ ಖಾತೆಗಳನ್ನು ಈಗ ಅನರ್ಹಗೊಂಡಿರುವ ಶಾಸಕರಿಗಾಗಿ ಮೀಸಲಿಟ್ಟಿದ್ದಾರೆ. ಅವರು ಸುಪ್ರಿಕೋರ್ಟಿನಿಂದ ಅರ್ಹಗೊಂಡು ಬಂದ ನಂತರವಷ್ಟೇ ಆ ಮಾತಲ್ಲವೇ? ಆದರೂ ಆ ಅನರ್ಹರಿಗಾಗಿ ಈಗ ಪಕ್ಷನಿಷ್ಠ ಅನೇಕ ಹಿರಿಯರನ್ನು ಕಡೆಗಣಿಸಲಾಗಿದೆ. ಚುನಾವಣೆಯಲ್ಲಿ ಸೋತ ಮತ್ತು ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸದನದಲ್ಲೇ ಬ್ಲೂ ಫಿಲಂ ನೋಡಿ ಸಚಿವ ಸ್ಥಾನ ಕಳೆದುಕೊಂಡಿದ್ದ ಲಕ್ಷ್ಮಣ ಸವದಿ ಅವರಿಗೆ ಪ್ರಮುಖ ಖಾತೆಯ ಜೊತೆಗೇ ಡಿಸಿಎಂ ಹುದ್ದೆ ನೀಡುವ ಮೂಲಕ ‘ನಮ್ಮಲ್ಲಿ ಅನರ್ಹರಿಗಷ್ಟೇ ಅಲ್ಲ, ಅಯೋಗ್ಯರಿಗೂ ಆದ್ಯತೆ’ ಎಂದು ಸಂತೋಷ್ ನೇತೃತ್ವದ ಬಿಜೆಪಿ ಟೀಮ್ ಘೋಷಣೆ ಮಾಡಿದೆ.

ಧಮ್ಮೇ ಇಲ್ಲದ ರಾಜ್ಯದ ಪ್ರಮುಖ ನಾಯಕರು ಗಪ್‍ಚುಪ್ ಕೂಡುವ ಮೂಲಕ ತಮ್ಮನ್ನೂ ಅವಮಾನಿಸಿಕೊಂಡು, ಮತ ಹಾಕಿದ ಪ್ರಜೆಗಳನ್ನೂ ಅವಮಾನಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...