Homeಕರ್ನಾಟಕಬಿಜೆಪಿಯ ಹೊಸ ಸ್ಲೋಗನ್: ಅನರ್ಹರಿಗೆ ಆದ್ಯತೆ, ಪಕ್ಷನಿಷ್ಠರಿಗೆ ಬಾದ್ಯತೆ!

ಬಿಜೆಪಿಯ ಹೊಸ ಸ್ಲೋಗನ್: ಅನರ್ಹರಿಗೆ ಆದ್ಯತೆ, ಪಕ್ಷನಿಷ್ಠರಿಗೆ ಬಾದ್ಯತೆ!

ಇವತ್ತು ಇಡೀ ರಾಜ್ಯ ಸರ್ಕಾರವನ್ನು ದೆಹಲಿ ನಿಯಂತ್ರಿಸುತ್ತಿದೆ. ದಹಲಿಯಿಂದ ಅಮಿತ್ ಶಾ ಮತ್ತು ಬಿ.ಎಲ್ ಸಂತೋಷ್ ಎಂಬಿಬ್ಬರು ಎಲ್ಲವನ್ನೂ ನಿಯಂತ್ರಿಸುವ ಮೂಲಕ ಬಿಜೆಪಿಯ ಚುನಾಯಿತ ಪ್ರತಿನಿಧಿಗಳನ್ನು ಅವಮಾನಿಸುತ್ತಿದ್ದಾರೆ!

- Advertisement -
- Advertisement -

ಈಗ ಸರ್ಕಾರ ರಚನೆಯ ಮಟ್ಟಿಗೆ ಬಿಜೆಪಿ ಒಂದು ಹೊಸ ಸ್ಲೋಗನ್ನು ಹಾಕಿಕೊಂಡಂತಿದೆ. ಅದು ‘ಅನರ್ಹರಿಗೆ ಆದ್ಯತೆ, ಪಕ್ಷನಿಷ್ಠರಿಗೆ ಬಾದ್ಯತೆ’ ಎಂಬುದಾಗಿದೆ. ಬಾದ್ಯತೆಗೊಳಗಾದ ಎಲ್ಲ ಹಿರಿಯ ನಾಯಕರು ಇದನ್ನು ಒಪ್ಪಿಕೊಂಡು ಸುಮ್ಮನೆ ತೆಪ್ಪಗೆ ಬಿದ್ದಿದ್ದಾರೆ. ಆದರೆ ಕನಿಷ್ಠ ಅವರ ಅಭಿಮಾನಿಗಳಾದರೂ ಇದನ್ನೆಲ್ಲ ಪ್ರತಿಭಟಿಸಬಹುದಿತ್ತು. ಆದರೆ ಈ ಅತೃಪ್ತ ಸಚಿವರು ಅದಕ್ಕೂ ಅವಕಾಶ ನೀಡುತ್ತಿಲ್ಲ. ಆದರೆ ಮೋದಿಯ ಜಪದಲ್ಲಿ ಕಾಮನ್ ಸೆನ್ಸ್ ಕಳೆದುಕೊಂಡಿರುವ ಕಾರ್ಯಕರ್ತರು ತಮ್ಮನ್ನು ತಾವೇ ವಂಚಿಸಿಕೊಳ್ಳುತ್ತಿದ್ದಾರೆ.

ಚುನಾವಣೆಯೇ ಗೊತ್ತಿಲ್ಲದ ಸಂತೋಷ್ ಕಾರುಬಾರು!

ಜೀವನದಲ್ಲಿ ಎಂದೂ ಒಂದೂ ಚುನಾವಣೆ ಎದುರಿಸದ ಬಿ.ಎಲ್ ಸಂತೋಷ್ ಎಂಬ ಆರೆಸ್ಸೆಸ್ ಮನುಷ್ಯ ಇತ್ತೀಚಿನವರೆಗೂ ಸಾರ್ವಜನಿಕವಾಗಿ ಕಾಣಿಸಿಕೊಂಡು ಸಭೆ ನಡೆಸಿದ ವ್ಯಕ್ತಿಯಲ್ಲ. ಆದರೆ ಈಗ ಈ ವ್ಯಕ್ತಿಯೇ ರಾಜ್ಯ ಬಿಜೆಪಿಯ ಪ್ರಶ್ನಾತೀತ ನಾಯಕ. ಎಂದಾದರೂ ಒಂದಿನ ಈ ರಾಜ್ಯದ ಮುಖ್ಯಮಂತ್ರಿ ಆಗುವ ಅದಮ್ಯ ಆಸೆಯನ್ನು ದಶಕದಿಂದ ಕಾಪಾಡಿಕೊಂಡು ಬಂದಿರುವ ಸಂತೋಷ್‍ರಿಗೆ ನೇರ ಚುನಾವಣೆ ಎದುರಿಸಿ ಗೆಲ್ಲುವ ಛಾತಿಯಂತೂ ಇಲ್ಲವೇ ಇಲ್ಲ. ಹಂತ ಹಂತವಾಗಿ ಮೇಲೇರಿ ರಾಜಕೀಯ ಅಧಿಕಾರ ಪಡೆಯುವ ತಾಳ್ಮೆಯೂ ಇಲ್ಲ. ಹೀಗಾಗಿ ಅವರು ಬಿಜೆಪಿಗೆ ಬಹುಮತ ಬಂದಾಗ ವಾಮಮಾರ್ಗದ ಮೂಲಕ ಮುಖ್ಯಮಂತ್ರಿಯಾಗುವ ದೀಕ್ಷೆ ತೊಟ್ಟಿದ್ದಾರೆ. ಆದರೆ ಪಾಪ ಅದಕ್ಕೆ ಕಾಲ ಕೂಡಿ ಬರುತ್ತಿಲ್ಲ.

ಇಲ್ಲಿ ಯಡಿಯೂರಪ್ಪ ಲಿಂಗಾಯತ ನಾಯಕ ಎಂದು ಬಿಂಬಿತವಾದ ಕಾರಣಕ್ಕೆ ಸಂತೋಷ್ ಸುಮ್ಮನಿದ್ದರು. ಅಮಿತ್ ಶಾ ಕೂಡ ಸುಮ್ಮನಿರ ಬೇಕಾಗಿತ್ತು. ಮುಂದೆ ಚುನಾವಣೆ ನಡೆದರೆ ಬಿಜೆಪಿಗೆ ಸ್ಪಷ್ಟ ಬಹುಮತ ಎಂದು ಲೆಕ್ಕ ಹಾಕಿರುವ ಇವರೀಗ ಮುಂದೆ ಅಡ್ಡಿ ಆಗಬಹುದಾದ ಯಡಿಯೂರಪ್ಪ ಅವರನ್ನು ಈಗಲೇ ಕುಗ್ಗಿಸಿ, ಅವರನ್ನು ತಮ್ಮ ಹಿಡಿತಕ್ಕೆ ತಂದುಕೊಂಡಿದ್ದಾರೆ. ಹಂತ ಹಂತವಾಗಿ ಯಡಿಯೂರಪ್ಪನವರ ರಾಜಕೀಯ ವರ್ಚಸ್ಸು ಹಾಳಾದಂತೆಲ್ಲ ತನಗೆ ಲಾಭ ಎಂದು ಸಂತೋಷ್ ನಂಬಿದಂತಿದೆ. ಅದಕ್ಕಾಗಿ ಈಗ ಯಡಿಯೂರಪ್ಪ ಮೇಲೇಳದಂತೆ ಮೂವರು ಡಿಸಿಎಂಗಳನ್ನು ಸುತ್ತುವರಿಸಲಾಗಿದೆ.

ಅನರ್ಹರಿಗಾಗಿ ಕಾದಿವೆ ಪ್ರಮುಖ ಖಾತೆಗಳು
ಸಮಾಜ ಕಲ್ಯಾಣ, ಬೆಂಗಳೂರು ನಗರಾಭಿವೃದ್ಧಿಯಂತಹ ಪ್ರಮುಖ ಖಾತೆಗಳನ್ನು ಈಗ ಅನರ್ಹಗೊಂಡಿರುವ ಶಾಸಕರಿಗಾಗಿ ಮೀಸಲಿಟ್ಟಿದ್ದಾರೆ. ಅವರು ಸುಪ್ರಿಕೋರ್ಟಿನಿಂದ ಅರ್ಹಗೊಂಡು ಬಂದ ನಂತರವಷ್ಟೇ ಆ ಮಾತಲ್ಲವೇ? ಆದರೂ ಆ ಅನರ್ಹರಿಗಾಗಿ ಈಗ ಪಕ್ಷನಿಷ್ಠ ಅನೇಕ ಹಿರಿಯರನ್ನು ಕಡೆಗಣಿಸಲಾಗಿದೆ. ಚುನಾವಣೆಯಲ್ಲಿ ಸೋತ ಮತ್ತು ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸದನದಲ್ಲೇ ಬ್ಲೂ ಫಿಲಂ ನೋಡಿ ಸಚಿವ ಸ್ಥಾನ ಕಳೆದುಕೊಂಡಿದ್ದ ಲಕ್ಷ್ಮಣ ಸವದಿ ಅವರಿಗೆ ಪ್ರಮುಖ ಖಾತೆಯ ಜೊತೆಗೇ ಡಿಸಿಎಂ ಹುದ್ದೆ ನೀಡುವ ಮೂಲಕ ‘ನಮ್ಮಲ್ಲಿ ಅನರ್ಹರಿಗಷ್ಟೇ ಅಲ್ಲ, ಅಯೋಗ್ಯರಿಗೂ ಆದ್ಯತೆ’ ಎಂದು ಸಂತೋಷ್ ನೇತೃತ್ವದ ಬಿಜೆಪಿ ಟೀಮ್ ಘೋಷಣೆ ಮಾಡಿದೆ.

ಧಮ್ಮೇ ಇಲ್ಲದ ರಾಜ್ಯದ ಪ್ರಮುಖ ನಾಯಕರು ಗಪ್‍ಚುಪ್ ಕೂಡುವ ಮೂಲಕ ತಮ್ಮನ್ನೂ ಅವಮಾನಿಸಿಕೊಂಡು, ಮತ ಹಾಕಿದ ಪ್ರಜೆಗಳನ್ನೂ ಅವಮಾನಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....