Homeಕರ್ನಾಟಕಬಿಜೆಪಿಯ ಹೊಸ ಸ್ಲೋಗನ್: ಅನರ್ಹರಿಗೆ ಆದ್ಯತೆ, ಪಕ್ಷನಿಷ್ಠರಿಗೆ ಬಾದ್ಯತೆ!

ಬಿಜೆಪಿಯ ಹೊಸ ಸ್ಲೋಗನ್: ಅನರ್ಹರಿಗೆ ಆದ್ಯತೆ, ಪಕ್ಷನಿಷ್ಠರಿಗೆ ಬಾದ್ಯತೆ!

ಇವತ್ತು ಇಡೀ ರಾಜ್ಯ ಸರ್ಕಾರವನ್ನು ದೆಹಲಿ ನಿಯಂತ್ರಿಸುತ್ತಿದೆ. ದಹಲಿಯಿಂದ ಅಮಿತ್ ಶಾ ಮತ್ತು ಬಿ.ಎಲ್ ಸಂತೋಷ್ ಎಂಬಿಬ್ಬರು ಎಲ್ಲವನ್ನೂ ನಿಯಂತ್ರಿಸುವ ಮೂಲಕ ಬಿಜೆಪಿಯ ಚುನಾಯಿತ ಪ್ರತಿನಿಧಿಗಳನ್ನು ಅವಮಾನಿಸುತ್ತಿದ್ದಾರೆ!

- Advertisement -
- Advertisement -

ಈಗ ಸರ್ಕಾರ ರಚನೆಯ ಮಟ್ಟಿಗೆ ಬಿಜೆಪಿ ಒಂದು ಹೊಸ ಸ್ಲೋಗನ್ನು ಹಾಕಿಕೊಂಡಂತಿದೆ. ಅದು ‘ಅನರ್ಹರಿಗೆ ಆದ್ಯತೆ, ಪಕ್ಷನಿಷ್ಠರಿಗೆ ಬಾದ್ಯತೆ’ ಎಂಬುದಾಗಿದೆ. ಬಾದ್ಯತೆಗೊಳಗಾದ ಎಲ್ಲ ಹಿರಿಯ ನಾಯಕರು ಇದನ್ನು ಒಪ್ಪಿಕೊಂಡು ಸುಮ್ಮನೆ ತೆಪ್ಪಗೆ ಬಿದ್ದಿದ್ದಾರೆ. ಆದರೆ ಕನಿಷ್ಠ ಅವರ ಅಭಿಮಾನಿಗಳಾದರೂ ಇದನ್ನೆಲ್ಲ ಪ್ರತಿಭಟಿಸಬಹುದಿತ್ತು. ಆದರೆ ಈ ಅತೃಪ್ತ ಸಚಿವರು ಅದಕ್ಕೂ ಅವಕಾಶ ನೀಡುತ್ತಿಲ್ಲ. ಆದರೆ ಮೋದಿಯ ಜಪದಲ್ಲಿ ಕಾಮನ್ ಸೆನ್ಸ್ ಕಳೆದುಕೊಂಡಿರುವ ಕಾರ್ಯಕರ್ತರು ತಮ್ಮನ್ನು ತಾವೇ ವಂಚಿಸಿಕೊಳ್ಳುತ್ತಿದ್ದಾರೆ.

ಚುನಾವಣೆಯೇ ಗೊತ್ತಿಲ್ಲದ ಸಂತೋಷ್ ಕಾರುಬಾರು!

ಜೀವನದಲ್ಲಿ ಎಂದೂ ಒಂದೂ ಚುನಾವಣೆ ಎದುರಿಸದ ಬಿ.ಎಲ್ ಸಂತೋಷ್ ಎಂಬ ಆರೆಸ್ಸೆಸ್ ಮನುಷ್ಯ ಇತ್ತೀಚಿನವರೆಗೂ ಸಾರ್ವಜನಿಕವಾಗಿ ಕಾಣಿಸಿಕೊಂಡು ಸಭೆ ನಡೆಸಿದ ವ್ಯಕ್ತಿಯಲ್ಲ. ಆದರೆ ಈಗ ಈ ವ್ಯಕ್ತಿಯೇ ರಾಜ್ಯ ಬಿಜೆಪಿಯ ಪ್ರಶ್ನಾತೀತ ನಾಯಕ. ಎಂದಾದರೂ ಒಂದಿನ ಈ ರಾಜ್ಯದ ಮುಖ್ಯಮಂತ್ರಿ ಆಗುವ ಅದಮ್ಯ ಆಸೆಯನ್ನು ದಶಕದಿಂದ ಕಾಪಾಡಿಕೊಂಡು ಬಂದಿರುವ ಸಂತೋಷ್‍ರಿಗೆ ನೇರ ಚುನಾವಣೆ ಎದುರಿಸಿ ಗೆಲ್ಲುವ ಛಾತಿಯಂತೂ ಇಲ್ಲವೇ ಇಲ್ಲ. ಹಂತ ಹಂತವಾಗಿ ಮೇಲೇರಿ ರಾಜಕೀಯ ಅಧಿಕಾರ ಪಡೆಯುವ ತಾಳ್ಮೆಯೂ ಇಲ್ಲ. ಹೀಗಾಗಿ ಅವರು ಬಿಜೆಪಿಗೆ ಬಹುಮತ ಬಂದಾಗ ವಾಮಮಾರ್ಗದ ಮೂಲಕ ಮುಖ್ಯಮಂತ್ರಿಯಾಗುವ ದೀಕ್ಷೆ ತೊಟ್ಟಿದ್ದಾರೆ. ಆದರೆ ಪಾಪ ಅದಕ್ಕೆ ಕಾಲ ಕೂಡಿ ಬರುತ್ತಿಲ್ಲ.

ಇಲ್ಲಿ ಯಡಿಯೂರಪ್ಪ ಲಿಂಗಾಯತ ನಾಯಕ ಎಂದು ಬಿಂಬಿತವಾದ ಕಾರಣಕ್ಕೆ ಸಂತೋಷ್ ಸುಮ್ಮನಿದ್ದರು. ಅಮಿತ್ ಶಾ ಕೂಡ ಸುಮ್ಮನಿರ ಬೇಕಾಗಿತ್ತು. ಮುಂದೆ ಚುನಾವಣೆ ನಡೆದರೆ ಬಿಜೆಪಿಗೆ ಸ್ಪಷ್ಟ ಬಹುಮತ ಎಂದು ಲೆಕ್ಕ ಹಾಕಿರುವ ಇವರೀಗ ಮುಂದೆ ಅಡ್ಡಿ ಆಗಬಹುದಾದ ಯಡಿಯೂರಪ್ಪ ಅವರನ್ನು ಈಗಲೇ ಕುಗ್ಗಿಸಿ, ಅವರನ್ನು ತಮ್ಮ ಹಿಡಿತಕ್ಕೆ ತಂದುಕೊಂಡಿದ್ದಾರೆ. ಹಂತ ಹಂತವಾಗಿ ಯಡಿಯೂರಪ್ಪನವರ ರಾಜಕೀಯ ವರ್ಚಸ್ಸು ಹಾಳಾದಂತೆಲ್ಲ ತನಗೆ ಲಾಭ ಎಂದು ಸಂತೋಷ್ ನಂಬಿದಂತಿದೆ. ಅದಕ್ಕಾಗಿ ಈಗ ಯಡಿಯೂರಪ್ಪ ಮೇಲೇಳದಂತೆ ಮೂವರು ಡಿಸಿಎಂಗಳನ್ನು ಸುತ್ತುವರಿಸಲಾಗಿದೆ.

ಅನರ್ಹರಿಗಾಗಿ ಕಾದಿವೆ ಪ್ರಮುಖ ಖಾತೆಗಳು
ಸಮಾಜ ಕಲ್ಯಾಣ, ಬೆಂಗಳೂರು ನಗರಾಭಿವೃದ್ಧಿಯಂತಹ ಪ್ರಮುಖ ಖಾತೆಗಳನ್ನು ಈಗ ಅನರ್ಹಗೊಂಡಿರುವ ಶಾಸಕರಿಗಾಗಿ ಮೀಸಲಿಟ್ಟಿದ್ದಾರೆ. ಅವರು ಸುಪ್ರಿಕೋರ್ಟಿನಿಂದ ಅರ್ಹಗೊಂಡು ಬಂದ ನಂತರವಷ್ಟೇ ಆ ಮಾತಲ್ಲವೇ? ಆದರೂ ಆ ಅನರ್ಹರಿಗಾಗಿ ಈಗ ಪಕ್ಷನಿಷ್ಠ ಅನೇಕ ಹಿರಿಯರನ್ನು ಕಡೆಗಣಿಸಲಾಗಿದೆ. ಚುನಾವಣೆಯಲ್ಲಿ ಸೋತ ಮತ್ತು ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸದನದಲ್ಲೇ ಬ್ಲೂ ಫಿಲಂ ನೋಡಿ ಸಚಿವ ಸ್ಥಾನ ಕಳೆದುಕೊಂಡಿದ್ದ ಲಕ್ಷ್ಮಣ ಸವದಿ ಅವರಿಗೆ ಪ್ರಮುಖ ಖಾತೆಯ ಜೊತೆಗೇ ಡಿಸಿಎಂ ಹುದ್ದೆ ನೀಡುವ ಮೂಲಕ ‘ನಮ್ಮಲ್ಲಿ ಅನರ್ಹರಿಗಷ್ಟೇ ಅಲ್ಲ, ಅಯೋಗ್ಯರಿಗೂ ಆದ್ಯತೆ’ ಎಂದು ಸಂತೋಷ್ ನೇತೃತ್ವದ ಬಿಜೆಪಿ ಟೀಮ್ ಘೋಷಣೆ ಮಾಡಿದೆ.

ಧಮ್ಮೇ ಇಲ್ಲದ ರಾಜ್ಯದ ಪ್ರಮುಖ ನಾಯಕರು ಗಪ್‍ಚುಪ್ ಕೂಡುವ ಮೂಲಕ ತಮ್ಮನ್ನೂ ಅವಮಾನಿಸಿಕೊಂಡು, ಮತ ಹಾಕಿದ ಪ್ರಜೆಗಳನ್ನೂ ಅವಮಾನಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...