Homeಕರ್ನಾಟಕಬಿಜೆಪಿಯ ಹೊಸ ಸ್ಲೋಗನ್: ಅನರ್ಹರಿಗೆ ಆದ್ಯತೆ, ಪಕ್ಷನಿಷ್ಠರಿಗೆ ಬಾದ್ಯತೆ!

ಬಿಜೆಪಿಯ ಹೊಸ ಸ್ಲೋಗನ್: ಅನರ್ಹರಿಗೆ ಆದ್ಯತೆ, ಪಕ್ಷನಿಷ್ಠರಿಗೆ ಬಾದ್ಯತೆ!

ಇವತ್ತು ಇಡೀ ರಾಜ್ಯ ಸರ್ಕಾರವನ್ನು ದೆಹಲಿ ನಿಯಂತ್ರಿಸುತ್ತಿದೆ. ದಹಲಿಯಿಂದ ಅಮಿತ್ ಶಾ ಮತ್ತು ಬಿ.ಎಲ್ ಸಂತೋಷ್ ಎಂಬಿಬ್ಬರು ಎಲ್ಲವನ್ನೂ ನಿಯಂತ್ರಿಸುವ ಮೂಲಕ ಬಿಜೆಪಿಯ ಚುನಾಯಿತ ಪ್ರತಿನಿಧಿಗಳನ್ನು ಅವಮಾನಿಸುತ್ತಿದ್ದಾರೆ!

- Advertisement -
- Advertisement -

ಈಗ ಸರ್ಕಾರ ರಚನೆಯ ಮಟ್ಟಿಗೆ ಬಿಜೆಪಿ ಒಂದು ಹೊಸ ಸ್ಲೋಗನ್ನು ಹಾಕಿಕೊಂಡಂತಿದೆ. ಅದು ‘ಅನರ್ಹರಿಗೆ ಆದ್ಯತೆ, ಪಕ್ಷನಿಷ್ಠರಿಗೆ ಬಾದ್ಯತೆ’ ಎಂಬುದಾಗಿದೆ. ಬಾದ್ಯತೆಗೊಳಗಾದ ಎಲ್ಲ ಹಿರಿಯ ನಾಯಕರು ಇದನ್ನು ಒಪ್ಪಿಕೊಂಡು ಸುಮ್ಮನೆ ತೆಪ್ಪಗೆ ಬಿದ್ದಿದ್ದಾರೆ. ಆದರೆ ಕನಿಷ್ಠ ಅವರ ಅಭಿಮಾನಿಗಳಾದರೂ ಇದನ್ನೆಲ್ಲ ಪ್ರತಿಭಟಿಸಬಹುದಿತ್ತು. ಆದರೆ ಈ ಅತೃಪ್ತ ಸಚಿವರು ಅದಕ್ಕೂ ಅವಕಾಶ ನೀಡುತ್ತಿಲ್ಲ. ಆದರೆ ಮೋದಿಯ ಜಪದಲ್ಲಿ ಕಾಮನ್ ಸೆನ್ಸ್ ಕಳೆದುಕೊಂಡಿರುವ ಕಾರ್ಯಕರ್ತರು ತಮ್ಮನ್ನು ತಾವೇ ವಂಚಿಸಿಕೊಳ್ಳುತ್ತಿದ್ದಾರೆ.

ಚುನಾವಣೆಯೇ ಗೊತ್ತಿಲ್ಲದ ಸಂತೋಷ್ ಕಾರುಬಾರು!

ಜೀವನದಲ್ಲಿ ಎಂದೂ ಒಂದೂ ಚುನಾವಣೆ ಎದುರಿಸದ ಬಿ.ಎಲ್ ಸಂತೋಷ್ ಎಂಬ ಆರೆಸ್ಸೆಸ್ ಮನುಷ್ಯ ಇತ್ತೀಚಿನವರೆಗೂ ಸಾರ್ವಜನಿಕವಾಗಿ ಕಾಣಿಸಿಕೊಂಡು ಸಭೆ ನಡೆಸಿದ ವ್ಯಕ್ತಿಯಲ್ಲ. ಆದರೆ ಈಗ ಈ ವ್ಯಕ್ತಿಯೇ ರಾಜ್ಯ ಬಿಜೆಪಿಯ ಪ್ರಶ್ನಾತೀತ ನಾಯಕ. ಎಂದಾದರೂ ಒಂದಿನ ಈ ರಾಜ್ಯದ ಮುಖ್ಯಮಂತ್ರಿ ಆಗುವ ಅದಮ್ಯ ಆಸೆಯನ್ನು ದಶಕದಿಂದ ಕಾಪಾಡಿಕೊಂಡು ಬಂದಿರುವ ಸಂತೋಷ್‍ರಿಗೆ ನೇರ ಚುನಾವಣೆ ಎದುರಿಸಿ ಗೆಲ್ಲುವ ಛಾತಿಯಂತೂ ಇಲ್ಲವೇ ಇಲ್ಲ. ಹಂತ ಹಂತವಾಗಿ ಮೇಲೇರಿ ರಾಜಕೀಯ ಅಧಿಕಾರ ಪಡೆಯುವ ತಾಳ್ಮೆಯೂ ಇಲ್ಲ. ಹೀಗಾಗಿ ಅವರು ಬಿಜೆಪಿಗೆ ಬಹುಮತ ಬಂದಾಗ ವಾಮಮಾರ್ಗದ ಮೂಲಕ ಮುಖ್ಯಮಂತ್ರಿಯಾಗುವ ದೀಕ್ಷೆ ತೊಟ್ಟಿದ್ದಾರೆ. ಆದರೆ ಪಾಪ ಅದಕ್ಕೆ ಕಾಲ ಕೂಡಿ ಬರುತ್ತಿಲ್ಲ.

ಇಲ್ಲಿ ಯಡಿಯೂರಪ್ಪ ಲಿಂಗಾಯತ ನಾಯಕ ಎಂದು ಬಿಂಬಿತವಾದ ಕಾರಣಕ್ಕೆ ಸಂತೋಷ್ ಸುಮ್ಮನಿದ್ದರು. ಅಮಿತ್ ಶಾ ಕೂಡ ಸುಮ್ಮನಿರ ಬೇಕಾಗಿತ್ತು. ಮುಂದೆ ಚುನಾವಣೆ ನಡೆದರೆ ಬಿಜೆಪಿಗೆ ಸ್ಪಷ್ಟ ಬಹುಮತ ಎಂದು ಲೆಕ್ಕ ಹಾಕಿರುವ ಇವರೀಗ ಮುಂದೆ ಅಡ್ಡಿ ಆಗಬಹುದಾದ ಯಡಿಯೂರಪ್ಪ ಅವರನ್ನು ಈಗಲೇ ಕುಗ್ಗಿಸಿ, ಅವರನ್ನು ತಮ್ಮ ಹಿಡಿತಕ್ಕೆ ತಂದುಕೊಂಡಿದ್ದಾರೆ. ಹಂತ ಹಂತವಾಗಿ ಯಡಿಯೂರಪ್ಪನವರ ರಾಜಕೀಯ ವರ್ಚಸ್ಸು ಹಾಳಾದಂತೆಲ್ಲ ತನಗೆ ಲಾಭ ಎಂದು ಸಂತೋಷ್ ನಂಬಿದಂತಿದೆ. ಅದಕ್ಕಾಗಿ ಈಗ ಯಡಿಯೂರಪ್ಪ ಮೇಲೇಳದಂತೆ ಮೂವರು ಡಿಸಿಎಂಗಳನ್ನು ಸುತ್ತುವರಿಸಲಾಗಿದೆ.

ಅನರ್ಹರಿಗಾಗಿ ಕಾದಿವೆ ಪ್ರಮುಖ ಖಾತೆಗಳು
ಸಮಾಜ ಕಲ್ಯಾಣ, ಬೆಂಗಳೂರು ನಗರಾಭಿವೃದ್ಧಿಯಂತಹ ಪ್ರಮುಖ ಖಾತೆಗಳನ್ನು ಈಗ ಅನರ್ಹಗೊಂಡಿರುವ ಶಾಸಕರಿಗಾಗಿ ಮೀಸಲಿಟ್ಟಿದ್ದಾರೆ. ಅವರು ಸುಪ್ರಿಕೋರ್ಟಿನಿಂದ ಅರ್ಹಗೊಂಡು ಬಂದ ನಂತರವಷ್ಟೇ ಆ ಮಾತಲ್ಲವೇ? ಆದರೂ ಆ ಅನರ್ಹರಿಗಾಗಿ ಈಗ ಪಕ್ಷನಿಷ್ಠ ಅನೇಕ ಹಿರಿಯರನ್ನು ಕಡೆಗಣಿಸಲಾಗಿದೆ. ಚುನಾವಣೆಯಲ್ಲಿ ಸೋತ ಮತ್ತು ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸದನದಲ್ಲೇ ಬ್ಲೂ ಫಿಲಂ ನೋಡಿ ಸಚಿವ ಸ್ಥಾನ ಕಳೆದುಕೊಂಡಿದ್ದ ಲಕ್ಷ್ಮಣ ಸವದಿ ಅವರಿಗೆ ಪ್ರಮುಖ ಖಾತೆಯ ಜೊತೆಗೇ ಡಿಸಿಎಂ ಹುದ್ದೆ ನೀಡುವ ಮೂಲಕ ‘ನಮ್ಮಲ್ಲಿ ಅನರ್ಹರಿಗಷ್ಟೇ ಅಲ್ಲ, ಅಯೋಗ್ಯರಿಗೂ ಆದ್ಯತೆ’ ಎಂದು ಸಂತೋಷ್ ನೇತೃತ್ವದ ಬಿಜೆಪಿ ಟೀಮ್ ಘೋಷಣೆ ಮಾಡಿದೆ.

ಧಮ್ಮೇ ಇಲ್ಲದ ರಾಜ್ಯದ ಪ್ರಮುಖ ನಾಯಕರು ಗಪ್‍ಚುಪ್ ಕೂಡುವ ಮೂಲಕ ತಮ್ಮನ್ನೂ ಅವಮಾನಿಸಿಕೊಂಡು, ಮತ ಹಾಕಿದ ಪ್ರಜೆಗಳನ್ನೂ ಅವಮಾನಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...