Homeಕರ್ನಾಟಕಬಿಜೆಪಿಯ ಹೊಸ ಸ್ಲೋಗನ್: ಅನರ್ಹರಿಗೆ ಆದ್ಯತೆ, ಪಕ್ಷನಿಷ್ಠರಿಗೆ ಬಾದ್ಯತೆ!

ಬಿಜೆಪಿಯ ಹೊಸ ಸ್ಲೋಗನ್: ಅನರ್ಹರಿಗೆ ಆದ್ಯತೆ, ಪಕ್ಷನಿಷ್ಠರಿಗೆ ಬಾದ್ಯತೆ!

ಇವತ್ತು ಇಡೀ ರಾಜ್ಯ ಸರ್ಕಾರವನ್ನು ದೆಹಲಿ ನಿಯಂತ್ರಿಸುತ್ತಿದೆ. ದಹಲಿಯಿಂದ ಅಮಿತ್ ಶಾ ಮತ್ತು ಬಿ.ಎಲ್ ಸಂತೋಷ್ ಎಂಬಿಬ್ಬರು ಎಲ್ಲವನ್ನೂ ನಿಯಂತ್ರಿಸುವ ಮೂಲಕ ಬಿಜೆಪಿಯ ಚುನಾಯಿತ ಪ್ರತಿನಿಧಿಗಳನ್ನು ಅವಮಾನಿಸುತ್ತಿದ್ದಾರೆ!

- Advertisement -
- Advertisement -

ಈಗ ಸರ್ಕಾರ ರಚನೆಯ ಮಟ್ಟಿಗೆ ಬಿಜೆಪಿ ಒಂದು ಹೊಸ ಸ್ಲೋಗನ್ನು ಹಾಕಿಕೊಂಡಂತಿದೆ. ಅದು ‘ಅನರ್ಹರಿಗೆ ಆದ್ಯತೆ, ಪಕ್ಷನಿಷ್ಠರಿಗೆ ಬಾದ್ಯತೆ’ ಎಂಬುದಾಗಿದೆ. ಬಾದ್ಯತೆಗೊಳಗಾದ ಎಲ್ಲ ಹಿರಿಯ ನಾಯಕರು ಇದನ್ನು ಒಪ್ಪಿಕೊಂಡು ಸುಮ್ಮನೆ ತೆಪ್ಪಗೆ ಬಿದ್ದಿದ್ದಾರೆ. ಆದರೆ ಕನಿಷ್ಠ ಅವರ ಅಭಿಮಾನಿಗಳಾದರೂ ಇದನ್ನೆಲ್ಲ ಪ್ರತಿಭಟಿಸಬಹುದಿತ್ತು. ಆದರೆ ಈ ಅತೃಪ್ತ ಸಚಿವರು ಅದಕ್ಕೂ ಅವಕಾಶ ನೀಡುತ್ತಿಲ್ಲ. ಆದರೆ ಮೋದಿಯ ಜಪದಲ್ಲಿ ಕಾಮನ್ ಸೆನ್ಸ್ ಕಳೆದುಕೊಂಡಿರುವ ಕಾರ್ಯಕರ್ತರು ತಮ್ಮನ್ನು ತಾವೇ ವಂಚಿಸಿಕೊಳ್ಳುತ್ತಿದ್ದಾರೆ.

ಚುನಾವಣೆಯೇ ಗೊತ್ತಿಲ್ಲದ ಸಂತೋಷ್ ಕಾರುಬಾರು!

ಜೀವನದಲ್ಲಿ ಎಂದೂ ಒಂದೂ ಚುನಾವಣೆ ಎದುರಿಸದ ಬಿ.ಎಲ್ ಸಂತೋಷ್ ಎಂಬ ಆರೆಸ್ಸೆಸ್ ಮನುಷ್ಯ ಇತ್ತೀಚಿನವರೆಗೂ ಸಾರ್ವಜನಿಕವಾಗಿ ಕಾಣಿಸಿಕೊಂಡು ಸಭೆ ನಡೆಸಿದ ವ್ಯಕ್ತಿಯಲ್ಲ. ಆದರೆ ಈಗ ಈ ವ್ಯಕ್ತಿಯೇ ರಾಜ್ಯ ಬಿಜೆಪಿಯ ಪ್ರಶ್ನಾತೀತ ನಾಯಕ. ಎಂದಾದರೂ ಒಂದಿನ ಈ ರಾಜ್ಯದ ಮುಖ್ಯಮಂತ್ರಿ ಆಗುವ ಅದಮ್ಯ ಆಸೆಯನ್ನು ದಶಕದಿಂದ ಕಾಪಾಡಿಕೊಂಡು ಬಂದಿರುವ ಸಂತೋಷ್‍ರಿಗೆ ನೇರ ಚುನಾವಣೆ ಎದುರಿಸಿ ಗೆಲ್ಲುವ ಛಾತಿಯಂತೂ ಇಲ್ಲವೇ ಇಲ್ಲ. ಹಂತ ಹಂತವಾಗಿ ಮೇಲೇರಿ ರಾಜಕೀಯ ಅಧಿಕಾರ ಪಡೆಯುವ ತಾಳ್ಮೆಯೂ ಇಲ್ಲ. ಹೀಗಾಗಿ ಅವರು ಬಿಜೆಪಿಗೆ ಬಹುಮತ ಬಂದಾಗ ವಾಮಮಾರ್ಗದ ಮೂಲಕ ಮುಖ್ಯಮಂತ್ರಿಯಾಗುವ ದೀಕ್ಷೆ ತೊಟ್ಟಿದ್ದಾರೆ. ಆದರೆ ಪಾಪ ಅದಕ್ಕೆ ಕಾಲ ಕೂಡಿ ಬರುತ್ತಿಲ್ಲ.

ಇಲ್ಲಿ ಯಡಿಯೂರಪ್ಪ ಲಿಂಗಾಯತ ನಾಯಕ ಎಂದು ಬಿಂಬಿತವಾದ ಕಾರಣಕ್ಕೆ ಸಂತೋಷ್ ಸುಮ್ಮನಿದ್ದರು. ಅಮಿತ್ ಶಾ ಕೂಡ ಸುಮ್ಮನಿರ ಬೇಕಾಗಿತ್ತು. ಮುಂದೆ ಚುನಾವಣೆ ನಡೆದರೆ ಬಿಜೆಪಿಗೆ ಸ್ಪಷ್ಟ ಬಹುಮತ ಎಂದು ಲೆಕ್ಕ ಹಾಕಿರುವ ಇವರೀಗ ಮುಂದೆ ಅಡ್ಡಿ ಆಗಬಹುದಾದ ಯಡಿಯೂರಪ್ಪ ಅವರನ್ನು ಈಗಲೇ ಕುಗ್ಗಿಸಿ, ಅವರನ್ನು ತಮ್ಮ ಹಿಡಿತಕ್ಕೆ ತಂದುಕೊಂಡಿದ್ದಾರೆ. ಹಂತ ಹಂತವಾಗಿ ಯಡಿಯೂರಪ್ಪನವರ ರಾಜಕೀಯ ವರ್ಚಸ್ಸು ಹಾಳಾದಂತೆಲ್ಲ ತನಗೆ ಲಾಭ ಎಂದು ಸಂತೋಷ್ ನಂಬಿದಂತಿದೆ. ಅದಕ್ಕಾಗಿ ಈಗ ಯಡಿಯೂರಪ್ಪ ಮೇಲೇಳದಂತೆ ಮೂವರು ಡಿಸಿಎಂಗಳನ್ನು ಸುತ್ತುವರಿಸಲಾಗಿದೆ.

ಅನರ್ಹರಿಗಾಗಿ ಕಾದಿವೆ ಪ್ರಮುಖ ಖಾತೆಗಳು
ಸಮಾಜ ಕಲ್ಯಾಣ, ಬೆಂಗಳೂರು ನಗರಾಭಿವೃದ್ಧಿಯಂತಹ ಪ್ರಮುಖ ಖಾತೆಗಳನ್ನು ಈಗ ಅನರ್ಹಗೊಂಡಿರುವ ಶಾಸಕರಿಗಾಗಿ ಮೀಸಲಿಟ್ಟಿದ್ದಾರೆ. ಅವರು ಸುಪ್ರಿಕೋರ್ಟಿನಿಂದ ಅರ್ಹಗೊಂಡು ಬಂದ ನಂತರವಷ್ಟೇ ಆ ಮಾತಲ್ಲವೇ? ಆದರೂ ಆ ಅನರ್ಹರಿಗಾಗಿ ಈಗ ಪಕ್ಷನಿಷ್ಠ ಅನೇಕ ಹಿರಿಯರನ್ನು ಕಡೆಗಣಿಸಲಾಗಿದೆ. ಚುನಾವಣೆಯಲ್ಲಿ ಸೋತ ಮತ್ತು ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸದನದಲ್ಲೇ ಬ್ಲೂ ಫಿಲಂ ನೋಡಿ ಸಚಿವ ಸ್ಥಾನ ಕಳೆದುಕೊಂಡಿದ್ದ ಲಕ್ಷ್ಮಣ ಸವದಿ ಅವರಿಗೆ ಪ್ರಮುಖ ಖಾತೆಯ ಜೊತೆಗೇ ಡಿಸಿಎಂ ಹುದ್ದೆ ನೀಡುವ ಮೂಲಕ ‘ನಮ್ಮಲ್ಲಿ ಅನರ್ಹರಿಗಷ್ಟೇ ಅಲ್ಲ, ಅಯೋಗ್ಯರಿಗೂ ಆದ್ಯತೆ’ ಎಂದು ಸಂತೋಷ್ ನೇತೃತ್ವದ ಬಿಜೆಪಿ ಟೀಮ್ ಘೋಷಣೆ ಮಾಡಿದೆ.

ಧಮ್ಮೇ ಇಲ್ಲದ ರಾಜ್ಯದ ಪ್ರಮುಖ ನಾಯಕರು ಗಪ್‍ಚುಪ್ ಕೂಡುವ ಮೂಲಕ ತಮ್ಮನ್ನೂ ಅವಮಾನಿಸಿಕೊಂಡು, ಮತ ಹಾಕಿದ ಪ್ರಜೆಗಳನ್ನೂ ಅವಮಾನಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...