Homeಕರ್ನಾಟಕಬಿಜೆಪಿಯ ಹೊಸ ಸ್ಲೋಗನ್: ಅನರ್ಹರಿಗೆ ಆದ್ಯತೆ, ಪಕ್ಷನಿಷ್ಠರಿಗೆ ಬಾದ್ಯತೆ!

ಬಿಜೆಪಿಯ ಹೊಸ ಸ್ಲೋಗನ್: ಅನರ್ಹರಿಗೆ ಆದ್ಯತೆ, ಪಕ್ಷನಿಷ್ಠರಿಗೆ ಬಾದ್ಯತೆ!

ಇವತ್ತು ಇಡೀ ರಾಜ್ಯ ಸರ್ಕಾರವನ್ನು ದೆಹಲಿ ನಿಯಂತ್ರಿಸುತ್ತಿದೆ. ದಹಲಿಯಿಂದ ಅಮಿತ್ ಶಾ ಮತ್ತು ಬಿ.ಎಲ್ ಸಂತೋಷ್ ಎಂಬಿಬ್ಬರು ಎಲ್ಲವನ್ನೂ ನಿಯಂತ್ರಿಸುವ ಮೂಲಕ ಬಿಜೆಪಿಯ ಚುನಾಯಿತ ಪ್ರತಿನಿಧಿಗಳನ್ನು ಅವಮಾನಿಸುತ್ತಿದ್ದಾರೆ!

- Advertisement -
- Advertisement -

ಈಗ ಸರ್ಕಾರ ರಚನೆಯ ಮಟ್ಟಿಗೆ ಬಿಜೆಪಿ ಒಂದು ಹೊಸ ಸ್ಲೋಗನ್ನು ಹಾಕಿಕೊಂಡಂತಿದೆ. ಅದು ‘ಅನರ್ಹರಿಗೆ ಆದ್ಯತೆ, ಪಕ್ಷನಿಷ್ಠರಿಗೆ ಬಾದ್ಯತೆ’ ಎಂಬುದಾಗಿದೆ. ಬಾದ್ಯತೆಗೊಳಗಾದ ಎಲ್ಲ ಹಿರಿಯ ನಾಯಕರು ಇದನ್ನು ಒಪ್ಪಿಕೊಂಡು ಸುಮ್ಮನೆ ತೆಪ್ಪಗೆ ಬಿದ್ದಿದ್ದಾರೆ. ಆದರೆ ಕನಿಷ್ಠ ಅವರ ಅಭಿಮಾನಿಗಳಾದರೂ ಇದನ್ನೆಲ್ಲ ಪ್ರತಿಭಟಿಸಬಹುದಿತ್ತು. ಆದರೆ ಈ ಅತೃಪ್ತ ಸಚಿವರು ಅದಕ್ಕೂ ಅವಕಾಶ ನೀಡುತ್ತಿಲ್ಲ. ಆದರೆ ಮೋದಿಯ ಜಪದಲ್ಲಿ ಕಾಮನ್ ಸೆನ್ಸ್ ಕಳೆದುಕೊಂಡಿರುವ ಕಾರ್ಯಕರ್ತರು ತಮ್ಮನ್ನು ತಾವೇ ವಂಚಿಸಿಕೊಳ್ಳುತ್ತಿದ್ದಾರೆ.

ಚುನಾವಣೆಯೇ ಗೊತ್ತಿಲ್ಲದ ಸಂತೋಷ್ ಕಾರುಬಾರು!

ಜೀವನದಲ್ಲಿ ಎಂದೂ ಒಂದೂ ಚುನಾವಣೆ ಎದುರಿಸದ ಬಿ.ಎಲ್ ಸಂತೋಷ್ ಎಂಬ ಆರೆಸ್ಸೆಸ್ ಮನುಷ್ಯ ಇತ್ತೀಚಿನವರೆಗೂ ಸಾರ್ವಜನಿಕವಾಗಿ ಕಾಣಿಸಿಕೊಂಡು ಸಭೆ ನಡೆಸಿದ ವ್ಯಕ್ತಿಯಲ್ಲ. ಆದರೆ ಈಗ ಈ ವ್ಯಕ್ತಿಯೇ ರಾಜ್ಯ ಬಿಜೆಪಿಯ ಪ್ರಶ್ನಾತೀತ ನಾಯಕ. ಎಂದಾದರೂ ಒಂದಿನ ಈ ರಾಜ್ಯದ ಮುಖ್ಯಮಂತ್ರಿ ಆಗುವ ಅದಮ್ಯ ಆಸೆಯನ್ನು ದಶಕದಿಂದ ಕಾಪಾಡಿಕೊಂಡು ಬಂದಿರುವ ಸಂತೋಷ್‍ರಿಗೆ ನೇರ ಚುನಾವಣೆ ಎದುರಿಸಿ ಗೆಲ್ಲುವ ಛಾತಿಯಂತೂ ಇಲ್ಲವೇ ಇಲ್ಲ. ಹಂತ ಹಂತವಾಗಿ ಮೇಲೇರಿ ರಾಜಕೀಯ ಅಧಿಕಾರ ಪಡೆಯುವ ತಾಳ್ಮೆಯೂ ಇಲ್ಲ. ಹೀಗಾಗಿ ಅವರು ಬಿಜೆಪಿಗೆ ಬಹುಮತ ಬಂದಾಗ ವಾಮಮಾರ್ಗದ ಮೂಲಕ ಮುಖ್ಯಮಂತ್ರಿಯಾಗುವ ದೀಕ್ಷೆ ತೊಟ್ಟಿದ್ದಾರೆ. ಆದರೆ ಪಾಪ ಅದಕ್ಕೆ ಕಾಲ ಕೂಡಿ ಬರುತ್ತಿಲ್ಲ.

ಇಲ್ಲಿ ಯಡಿಯೂರಪ್ಪ ಲಿಂಗಾಯತ ನಾಯಕ ಎಂದು ಬಿಂಬಿತವಾದ ಕಾರಣಕ್ಕೆ ಸಂತೋಷ್ ಸುಮ್ಮನಿದ್ದರು. ಅಮಿತ್ ಶಾ ಕೂಡ ಸುಮ್ಮನಿರ ಬೇಕಾಗಿತ್ತು. ಮುಂದೆ ಚುನಾವಣೆ ನಡೆದರೆ ಬಿಜೆಪಿಗೆ ಸ್ಪಷ್ಟ ಬಹುಮತ ಎಂದು ಲೆಕ್ಕ ಹಾಕಿರುವ ಇವರೀಗ ಮುಂದೆ ಅಡ್ಡಿ ಆಗಬಹುದಾದ ಯಡಿಯೂರಪ್ಪ ಅವರನ್ನು ಈಗಲೇ ಕುಗ್ಗಿಸಿ, ಅವರನ್ನು ತಮ್ಮ ಹಿಡಿತಕ್ಕೆ ತಂದುಕೊಂಡಿದ್ದಾರೆ. ಹಂತ ಹಂತವಾಗಿ ಯಡಿಯೂರಪ್ಪನವರ ರಾಜಕೀಯ ವರ್ಚಸ್ಸು ಹಾಳಾದಂತೆಲ್ಲ ತನಗೆ ಲಾಭ ಎಂದು ಸಂತೋಷ್ ನಂಬಿದಂತಿದೆ. ಅದಕ್ಕಾಗಿ ಈಗ ಯಡಿಯೂರಪ್ಪ ಮೇಲೇಳದಂತೆ ಮೂವರು ಡಿಸಿಎಂಗಳನ್ನು ಸುತ್ತುವರಿಸಲಾಗಿದೆ.

ಅನರ್ಹರಿಗಾಗಿ ಕಾದಿವೆ ಪ್ರಮುಖ ಖಾತೆಗಳು
ಸಮಾಜ ಕಲ್ಯಾಣ, ಬೆಂಗಳೂರು ನಗರಾಭಿವೃದ್ಧಿಯಂತಹ ಪ್ರಮುಖ ಖಾತೆಗಳನ್ನು ಈಗ ಅನರ್ಹಗೊಂಡಿರುವ ಶಾಸಕರಿಗಾಗಿ ಮೀಸಲಿಟ್ಟಿದ್ದಾರೆ. ಅವರು ಸುಪ್ರಿಕೋರ್ಟಿನಿಂದ ಅರ್ಹಗೊಂಡು ಬಂದ ನಂತರವಷ್ಟೇ ಆ ಮಾತಲ್ಲವೇ? ಆದರೂ ಆ ಅನರ್ಹರಿಗಾಗಿ ಈಗ ಪಕ್ಷನಿಷ್ಠ ಅನೇಕ ಹಿರಿಯರನ್ನು ಕಡೆಗಣಿಸಲಾಗಿದೆ. ಚುನಾವಣೆಯಲ್ಲಿ ಸೋತ ಮತ್ತು ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸದನದಲ್ಲೇ ಬ್ಲೂ ಫಿಲಂ ನೋಡಿ ಸಚಿವ ಸ್ಥಾನ ಕಳೆದುಕೊಂಡಿದ್ದ ಲಕ್ಷ್ಮಣ ಸವದಿ ಅವರಿಗೆ ಪ್ರಮುಖ ಖಾತೆಯ ಜೊತೆಗೇ ಡಿಸಿಎಂ ಹುದ್ದೆ ನೀಡುವ ಮೂಲಕ ‘ನಮ್ಮಲ್ಲಿ ಅನರ್ಹರಿಗಷ್ಟೇ ಅಲ್ಲ, ಅಯೋಗ್ಯರಿಗೂ ಆದ್ಯತೆ’ ಎಂದು ಸಂತೋಷ್ ನೇತೃತ್ವದ ಬಿಜೆಪಿ ಟೀಮ್ ಘೋಷಣೆ ಮಾಡಿದೆ.

ಧಮ್ಮೇ ಇಲ್ಲದ ರಾಜ್ಯದ ಪ್ರಮುಖ ನಾಯಕರು ಗಪ್‍ಚುಪ್ ಕೂಡುವ ಮೂಲಕ ತಮ್ಮನ್ನೂ ಅವಮಾನಿಸಿಕೊಂಡು, ಮತ ಹಾಕಿದ ಪ್ರಜೆಗಳನ್ನೂ ಅವಮಾನಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...