Homeಮುಖಪುಟಬಿಜೆಪಿ ಸಭೆಯಲ್ಲಿ ಕಾರ್ಯಕರ್ತರ ಹೊಡೆದಾಟ: ಮೂವರಿಗೆ ಗಾಯ

ಬಿಜೆಪಿ ಸಭೆಯಲ್ಲಿ ಕಾರ್ಯಕರ್ತರ ಹೊಡೆದಾಟ: ಮೂವರಿಗೆ ಗಾಯ

- Advertisement -
- Advertisement -

ಪಂಜಾಬ್‌ ಬಿಜೆಪಿಯಲ್ಲಿನ ಆಂತರಿಕ ಕಿತ್ತಾಟ ಬೀದಿಗೆ ಬಂದಿದ್ದು, ಲೂಧಿಯಾನ ಜಿಲ್ಲೆಯ ಪಾಯಲ್ ಪಟ್ಟಣದಲ್ಲಿ ಭಾನುವಾರ ನಡೆದ ಬೂತ್ ಶೃಂಗಸಭೆಯಲ್ಲಿ ಬಿಜೆಪಿ ಕಾರ್ಯಕರ್ತರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ವೇದಿಕೆಯಲ್ಲಿದ್ದ ಮೇಜುಗಳು, ಕುರ್ಚಿಗಳು, ಮೈಕ್ರೊಫೋನ್ ಸ್ಟ್ಯಾಂಡ್ ಇತ್ಯಾದಿಗಳನ್ನು ತೂರಾಡಿದ್ದಾರೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ.

ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿ ಸದಸ್ಯ ಹರ್ಜಿತ್ ಸಿಂಗ್ ಗ್ರೆವಾಲ್ ಅವರ ಸಮ್ಮುಖದಲ್ಲಿ ಈ ಬೆಳವಣಿಗೆ ನಡೆದಿದೆ. ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಬಿಜೆಪಿ ಕಾರ್ಯಕರ್ತರು ಮೈಕ್‌ ಸ್ಟ್ಯಾಂಡ್‌, ರಾಡ್‌, ಟೇಬಲ್‌ಗಳು, ಕುರ್ಚಿಗಳಿಂದ ಪರಸ್ಪರ ಹಲ್ಲೆ ನಡೆಸುತ್ತಿರುವುದು ವಿಡಿಯೋದಲ್ಲಿ ಸರೆಯಾಗಿದೆ.

ಈ ಕುರಿತು ಮಾದ್ಯಮಗಳ ಜೊತೆ ಮಾತನಾಡಿದ ಹರ್ಜಿತ್ ಸಿಂಗ್ ಗ್ರೆವಾಲ್, ಫತೇಘರ್ ಸಾಹಿಬ್ ಲೋಕಸಭಾ ಕ್ಷೇತ್ರದ ಬೂತ್ ಶೃಂಗಸಭೆ ನಡೆದಿತ್ತು. ನಾನು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದೆ. ಸಭೆಯಲ್ಲಿ ಘರ್ಷಣೆ ಸಂಭವಿಸಿದೆ. ವೇದಿಕೆಯಲ್ಲಿ ಮಾತನಾಡಲು ಅವಕಾಶ ನೀಡಬೇಕೆಂದು ಸ್ಥಳೀಯ ಮುಖಂಡರೊಬ್ಬರು ಒತ್ತಾಯಿಸಿದ ನಂತರ ಮಾತಿನ ಚಕಮಕಿ ನಡೆಯಿತು. ಆದರೆ, ಸಮಯದ ಅಭಾವದಿಂದ ಹಿರಿಯ ನಾಯಕರಿಗೆ ಮಾತ್ರ ಸಭೆಯನ್ನು ಉದ್ದೇಶಿಸಿ ಮಾತನಾಡಲು ಅವಕಾಶ ನೀಡಲಾಯಿತು. ತನಗೂ ವೇದಿಕೆಯಲ್ಲಿ ಮಾತನಾಡಬೇಕು ಎಂದು ಹೇಳಿದ ಆ ವ್ಯಕ್ತಿ ವೇದಿಕೆಯ ಕಾರ್ಯಕ್ರಮದ ಉಸ್ತುವಾರಿ ವಹಿಸಿಕೊಂಡಿದ್ದ ವ್ಯಕ್ತಿಯ ಜೊತೆ ವಾಗ್ವಾದ ನಡೆಸಿದರು. ಬಳಿಕ ಇಬ್ಬರೂ ಒಬ್ಬರಿಗೊಬ್ಬರು ಕಪಾಳಮೋಕ್ಷ ಮಾಡಿಕೊಂಡರು ಮತ್ತು ನಂತರ ಕುರ್ಚಿಗಳು ಮತ್ತು ಟೇಬಲ್‌ಗಳಂತಹ ವಸ್ತುಗಳನ್ನು ಪರಸ್ಪರ ಎಸೆಯಲು ಪ್ರಾರಂಭಿಸಿದ್ದಾರೆ. ನಾನು ಸ್ಥಳದಿಂದ ಹೊರಗೆ ಹೋಗಿದ್ದೆ ಎಂದು ಹೇಳಿದ್ದಾರೆ.

ಬಿಜೆಪಿ ಖನ್ನಾ ಜಿಲ್ಲಾಧ್ಯಕ್ಷ ಭೂಪಿಂದರ್ ಸಿಂಗ್ ಚೀಮಾ ಮಾತನಾಡಿ, ಬೂತ್ ಶೃಂಗಸಭೆಯ ಶಿಷ್ಟಾಚಾರವನ್ನು ಅನುಸರಿಸಿ, ಹಿರಿಯ ನಾಯಕರಿಗೆ ಮಾತ್ರ ವೇದಿಕೆಯಲ್ಲಿ ಕುಳಿತುಕೊಳ್ಳಲು ಮತ್ತು ಸಭೆಯನ್ನು ಉದ್ದೇಶಿಸಿ ಮಾತನಾಡಲು ಅವಕಾಶವಿದೆ. ಆದರೆ ಸಭಿಕರ ನಡುವೆ ಕುಳಿತಿದ್ದ ನಮ್ಮ ಪಕ್ಷದ ಮಹಿಳಾ ವಿಭಾಗದ ಜಿಲ್ಲಾಧ್ಯಕ್ಷೆ ಜಸ್ವಿರ್ ಕೌರ್ ಅವರ ಪತಿ ಗುಲ್ಜಾರ್ ಸಿಂಗ್ ಅವರು ವೇದಿಕೆಯಲ್ಲಿ ಮಾತನಾಡಲು ಸಮಯ ನೀಡಬೇಕು ಎಂದು ಒತ್ತಾಯಿಸಿದರು. ನಿರಾಕರಿಸಿದಾಗ ಅವರು ಆಕ್ರೋಶಗೊಂಡು ಇತರರ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಗಾಯಗೊಂಡಿದ್ದಾರೆ ಮತ್ತು ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ, ಅವರ ಮೇಲೆ ಮೈಕ್ರೊಫೋನ್ ಸ್ಟ್ಯಾಂಡ್‌ನಿಂದ ದಾಳಿ ಮಾಡಲಾಗಿದೆ ಎಂದು ಹೇಳಿದ್ದಾರೆ.

ಮತ್ತೊಂದೆಡೆ ಖನ್ನಾ ಮಹಿಳಾ ಮೋರ್ಚಾದ ಅಧ್ಯಕ್ಷೆ ಜಸ್ವಿರ್ ಕೌರ್, ಚೀಮಾ ಅವರ ಸಹಾಯಕರು ತನ್ನ ಪತಿಯ ಮೇಲೆ ಕ್ರೂರವಾಗಿ ಹಲ್ಲೆ ಮಾಡಿದ್ದಾರೆ ಮತ್ತು ನಿಂದಿಸಿದ್ದಾರೆ ಮತ್ತು ಅವರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಪ್ರತ್ಯಾರೋಪ ಮಾಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಪಾಯಲ್‌ನ ಉಪ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಗರ್ಗ್, ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿದರು. ಯಾವುದೇ ವ್ಯಕ್ತಿಯು ಈ ಸಂಬಂಧ ಲಿಖಿತ ದೂರನ್ನು ಸಲ್ಲಿಸದ ಕಾರಣ ಇಲ್ಲಿಯವರೆಗೆ ಯಾವುದೇ ಎಫ್‌ಐಆರ್ ದಾಖಲಿಸಿಕೊಂಡಿಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿ: ಚುನಾವಣಾ ಪ್ರಚಾರದ ವೇಳೆ ಮಹಿಳೆಯೋರ್ವರು ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಸ್ಥಳದಿಂದ ಕಾಲ್ಕಿತ್ತ ಬಿಜೆಪಿ ಸಂಸದ ಪಿಸಿ ಮೋಹನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...