Homeಮುಖಪುಟಬಿಜೆಪಿ ಸಭೆಯಲ್ಲಿ ಕಾರ್ಯಕರ್ತರ ಹೊಡೆದಾಟ: ಮೂವರಿಗೆ ಗಾಯ

ಬಿಜೆಪಿ ಸಭೆಯಲ್ಲಿ ಕಾರ್ಯಕರ್ತರ ಹೊಡೆದಾಟ: ಮೂವರಿಗೆ ಗಾಯ

- Advertisement -
- Advertisement -

ಪಂಜಾಬ್‌ ಬಿಜೆಪಿಯಲ್ಲಿನ ಆಂತರಿಕ ಕಿತ್ತಾಟ ಬೀದಿಗೆ ಬಂದಿದ್ದು, ಲೂಧಿಯಾನ ಜಿಲ್ಲೆಯ ಪಾಯಲ್ ಪಟ್ಟಣದಲ್ಲಿ ಭಾನುವಾರ ನಡೆದ ಬೂತ್ ಶೃಂಗಸಭೆಯಲ್ಲಿ ಬಿಜೆಪಿ ಕಾರ್ಯಕರ್ತರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ವೇದಿಕೆಯಲ್ಲಿದ್ದ ಮೇಜುಗಳು, ಕುರ್ಚಿಗಳು, ಮೈಕ್ರೊಫೋನ್ ಸ್ಟ್ಯಾಂಡ್ ಇತ್ಯಾದಿಗಳನ್ನು ತೂರಾಡಿದ್ದಾರೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ.

ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿ ಸದಸ್ಯ ಹರ್ಜಿತ್ ಸಿಂಗ್ ಗ್ರೆವಾಲ್ ಅವರ ಸಮ್ಮುಖದಲ್ಲಿ ಈ ಬೆಳವಣಿಗೆ ನಡೆದಿದೆ. ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಬಿಜೆಪಿ ಕಾರ್ಯಕರ್ತರು ಮೈಕ್‌ ಸ್ಟ್ಯಾಂಡ್‌, ರಾಡ್‌, ಟೇಬಲ್‌ಗಳು, ಕುರ್ಚಿಗಳಿಂದ ಪರಸ್ಪರ ಹಲ್ಲೆ ನಡೆಸುತ್ತಿರುವುದು ವಿಡಿಯೋದಲ್ಲಿ ಸರೆಯಾಗಿದೆ.

ಈ ಕುರಿತು ಮಾದ್ಯಮಗಳ ಜೊತೆ ಮಾತನಾಡಿದ ಹರ್ಜಿತ್ ಸಿಂಗ್ ಗ್ರೆವಾಲ್, ಫತೇಘರ್ ಸಾಹಿಬ್ ಲೋಕಸಭಾ ಕ್ಷೇತ್ರದ ಬೂತ್ ಶೃಂಗಸಭೆ ನಡೆದಿತ್ತು. ನಾನು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದೆ. ಸಭೆಯಲ್ಲಿ ಘರ್ಷಣೆ ಸಂಭವಿಸಿದೆ. ವೇದಿಕೆಯಲ್ಲಿ ಮಾತನಾಡಲು ಅವಕಾಶ ನೀಡಬೇಕೆಂದು ಸ್ಥಳೀಯ ಮುಖಂಡರೊಬ್ಬರು ಒತ್ತಾಯಿಸಿದ ನಂತರ ಮಾತಿನ ಚಕಮಕಿ ನಡೆಯಿತು. ಆದರೆ, ಸಮಯದ ಅಭಾವದಿಂದ ಹಿರಿಯ ನಾಯಕರಿಗೆ ಮಾತ್ರ ಸಭೆಯನ್ನು ಉದ್ದೇಶಿಸಿ ಮಾತನಾಡಲು ಅವಕಾಶ ನೀಡಲಾಯಿತು. ತನಗೂ ವೇದಿಕೆಯಲ್ಲಿ ಮಾತನಾಡಬೇಕು ಎಂದು ಹೇಳಿದ ಆ ವ್ಯಕ್ತಿ ವೇದಿಕೆಯ ಕಾರ್ಯಕ್ರಮದ ಉಸ್ತುವಾರಿ ವಹಿಸಿಕೊಂಡಿದ್ದ ವ್ಯಕ್ತಿಯ ಜೊತೆ ವಾಗ್ವಾದ ನಡೆಸಿದರು. ಬಳಿಕ ಇಬ್ಬರೂ ಒಬ್ಬರಿಗೊಬ್ಬರು ಕಪಾಳಮೋಕ್ಷ ಮಾಡಿಕೊಂಡರು ಮತ್ತು ನಂತರ ಕುರ್ಚಿಗಳು ಮತ್ತು ಟೇಬಲ್‌ಗಳಂತಹ ವಸ್ತುಗಳನ್ನು ಪರಸ್ಪರ ಎಸೆಯಲು ಪ್ರಾರಂಭಿಸಿದ್ದಾರೆ. ನಾನು ಸ್ಥಳದಿಂದ ಹೊರಗೆ ಹೋಗಿದ್ದೆ ಎಂದು ಹೇಳಿದ್ದಾರೆ.

ಬಿಜೆಪಿ ಖನ್ನಾ ಜಿಲ್ಲಾಧ್ಯಕ್ಷ ಭೂಪಿಂದರ್ ಸಿಂಗ್ ಚೀಮಾ ಮಾತನಾಡಿ, ಬೂತ್ ಶೃಂಗಸಭೆಯ ಶಿಷ್ಟಾಚಾರವನ್ನು ಅನುಸರಿಸಿ, ಹಿರಿಯ ನಾಯಕರಿಗೆ ಮಾತ್ರ ವೇದಿಕೆಯಲ್ಲಿ ಕುಳಿತುಕೊಳ್ಳಲು ಮತ್ತು ಸಭೆಯನ್ನು ಉದ್ದೇಶಿಸಿ ಮಾತನಾಡಲು ಅವಕಾಶವಿದೆ. ಆದರೆ ಸಭಿಕರ ನಡುವೆ ಕುಳಿತಿದ್ದ ನಮ್ಮ ಪಕ್ಷದ ಮಹಿಳಾ ವಿಭಾಗದ ಜಿಲ್ಲಾಧ್ಯಕ್ಷೆ ಜಸ್ವಿರ್ ಕೌರ್ ಅವರ ಪತಿ ಗುಲ್ಜಾರ್ ಸಿಂಗ್ ಅವರು ವೇದಿಕೆಯಲ್ಲಿ ಮಾತನಾಡಲು ಸಮಯ ನೀಡಬೇಕು ಎಂದು ಒತ್ತಾಯಿಸಿದರು. ನಿರಾಕರಿಸಿದಾಗ ಅವರು ಆಕ್ರೋಶಗೊಂಡು ಇತರರ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಗಾಯಗೊಂಡಿದ್ದಾರೆ ಮತ್ತು ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ, ಅವರ ಮೇಲೆ ಮೈಕ್ರೊಫೋನ್ ಸ್ಟ್ಯಾಂಡ್‌ನಿಂದ ದಾಳಿ ಮಾಡಲಾಗಿದೆ ಎಂದು ಹೇಳಿದ್ದಾರೆ.

ಮತ್ತೊಂದೆಡೆ ಖನ್ನಾ ಮಹಿಳಾ ಮೋರ್ಚಾದ ಅಧ್ಯಕ್ಷೆ ಜಸ್ವಿರ್ ಕೌರ್, ಚೀಮಾ ಅವರ ಸಹಾಯಕರು ತನ್ನ ಪತಿಯ ಮೇಲೆ ಕ್ರೂರವಾಗಿ ಹಲ್ಲೆ ಮಾಡಿದ್ದಾರೆ ಮತ್ತು ನಿಂದಿಸಿದ್ದಾರೆ ಮತ್ತು ಅವರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಪ್ರತ್ಯಾರೋಪ ಮಾಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಪಾಯಲ್‌ನ ಉಪ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಗರ್ಗ್, ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿದರು. ಯಾವುದೇ ವ್ಯಕ್ತಿಯು ಈ ಸಂಬಂಧ ಲಿಖಿತ ದೂರನ್ನು ಸಲ್ಲಿಸದ ಕಾರಣ ಇಲ್ಲಿಯವರೆಗೆ ಯಾವುದೇ ಎಫ್‌ಐಆರ್ ದಾಖಲಿಸಿಕೊಂಡಿಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿ: ಚುನಾವಣಾ ಪ್ರಚಾರದ ವೇಳೆ ಮಹಿಳೆಯೋರ್ವರು ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಸ್ಥಳದಿಂದ ಕಾಲ್ಕಿತ್ತ ಬಿಜೆಪಿ ಸಂಸದ ಪಿಸಿ ಮೋಹನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...