Homeಮುಖಪುಟಬಿಜೆಪಿ ನನ್ನನ್ನು ಜೈಲಿಗೆ ಹಾಕಬಹುದು ಆದರೆ ವಯನಾಡ ಜನರನ್ನು ಪ್ರತಿನಿಧಿಸುವುದಕ್ಕೆ ತಡೆಯೊಡ್ಡಲಾಗದು: ರಾಹುಲ್‌

ಬಿಜೆಪಿ ನನ್ನನ್ನು ಜೈಲಿಗೆ ಹಾಕಬಹುದು ಆದರೆ ವಯನಾಡ ಜನರನ್ನು ಪ್ರತಿನಿಧಿಸುವುದಕ್ಕೆ ತಡೆಯೊಡ್ಡಲಾಗದು: ರಾಹುಲ್‌

- Advertisement -
- Advertisement -

ಆಡಳಿತಾರೂಢ  ಬಿಜೆಪಿ ತಮ್ಮನ್ನು ಜೈಲಿಗೆ ಹಾಕಬಹುದು ಆದರೆ ವಯನಾಡಿನ ಜನರನ್ನು ಪ್ರತಿನಿಧಿಸುವುದಕ್ಕೆ ತಡೆಯೊಡ್ಡಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಹೇಳಿದ್ದಾರೆ.

ಸಂಸತ್ತ ಸದಸ್ಯತ್ವದಿಂದ ಅನರ್ಹಗೊಂಡ ಬಳಿಕ ರಾಹುಲ್ ಗಾಂಧಿ ಅವರು ಮೊದಲ ಬಾರಿಗೆ ತಾವು ಪ್ರತಿನಿಧಿಸಿದ್ದ ಕೇರಳದ ವಯನಾಡ ಕ್ಷೇತ್ರಕ್ಕೆ ತೆರಳಿದ್ದಾರೆ. ಈ ವೇಳೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ”ಸಂಸದ, ಸಂಸದರು ಎನ್ನುವುದು ಕೇವಲ ಟ್ಯಾಗ್, ಅದೊಂದು ಸ್ಥಾನ, ಅದೊಂದು ಹುದ್ದೆ” ಅಷ್ಟೇ ಹಾಗಾಗಿ ಬಿಜೆಪಿ ಆ ಟ್ಯಾಗ್‌ನ್ನು ತೆಗೆಯಬಹುದು, ಅವರು ಮನೆಯನ್ನು ಕಸಿದುಕೊಳ್ಳಬಹುದು, ಅವರು ನನ್ನನ್ನು ಜೈಲಿಗೆ ಹಾಕಬಹುದು, ಆದರೆ ವಯನಾಡಿನ ಜನರನ್ನು ಪ್ರತಿನಿಧಿಸುವುದನ್ನು ತಡೆಯಲು ಅವರಿಗೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ವಯನಾಡಿನ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸುವುದನ್ನು ನಾನು ಮುಂದುವರಿಸುತ್ತೇನೆ ಎಂದು ರಾಹುಲ್ ಹೇಳಿದರು.

”ನಾನು ಕೆಲವು ವರ್ಷಗಳಿಂದ ಬಿಜೆಪಿ ವಿರುದ್ಧ ಹೋರಾಡುತ್ತಿದ್ದೇನೆ ಮತ್ತು ಇಷ್ಟು ವರ್ಷಗಳಲ್ಲಿ ಅವರ ಈ ನಡೆ ನನಗೆ ಆಶ್ಚರ್ಯವನ್ನುಂಟು ಮಾಡುತ್ತಿದೆ. ಅವರು ತಮ್ಮ ಎದುರಾಳಿಯನ್ನು ಅರ್ಥಮಾಡಿಕೊಳ್ಳಲು ಅಸಮರ್ಥರಾಗಿದ್ದಾರೆ. ತಮ್ಮ ಎದುರಾಳಿಯು ಬೆದರುವುದಿಲ್ಲ ಎಂದು ಅವರಿಗೆ ಅರ್ಥವಾಗುವುದಿಲ್ಲ. ನಾನಿರುವಲ್ಲಿಗೆ ಪೊಲೀಸರನ್ನು ಕಳುಹಿಸಿದರೆ ನಾನು ಹೆದರುತ್ತೇನೆ ಎಂದುಕೊಂಡಿದ್ದಾರೆ, ಆದರೆ ನಾನು ಯಾವುದೇ ಕಾರಣಕ್ಕೂ ಹೆದರುವುದಿಲ್ಲ. ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಈ ಹೋರಾಟವು ಭಾರತದ ಎರಡು ವಿಭಿನ್ನ ದೃಷ್ಟಿಕೋನಗಳ ಹೋರಾಟವಾಗಿದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಸೂರತ್‌ ಸೆಷನ್ಸ್‌ ನ್ಯಾಯಾಲಯದಿಂದ ರಾಹುಲ್‌ ಗಾಂಧಿಗೆ ಜಾಮೀನು

”ಬಿಜೆಪಿ ಜನರನ್ನು ವಿಭಜಿಸುತ್ತದೆ, ನೀವು ಜನರ ನಡುವೆ ಗಲಾಟೆ ನಡೆಸುತ್ತೀರಿ, ನೀವು ಜನರನ್ನು ಹೆದರಿಸುತ್ತೀರಿ, ನಿಮ್ಮ ವಿರೋಧಿಗಳನ್ನು ಎಷ್ಟು ಬೇಕಾದರೂ ನಿಂದಿಸುತ್ತೀರಿ. ಆದರೆ ನಾನು ಜನರನ್ನು ಒಗ್ಗೂಡಿಸುತ್ತಲೇ ಇರುತ್ತೇನೆ, ಪ್ರತಿಯೊಂದು ಸಮುದಾಯ, ಪ್ರತಿಯೊಂದು ಧರ್ಮ, ಪ್ರತಿಯೊಂದು ವಿಚಾರವನ್ನು ಗೌರವಿಸುತ್ತಲೇ ಇರುತ್ತೇನೆ. ನೀವು ಬಯಸಿದಷ್ಟು ನನ್ನನ್ನು ವಿರೋಧ ಮಾಡಿ, ಆದರೆ ನಾನು ನಿಮಗೆ ಸಾಧ್ಯವಾದಷ್ಟು ದಯೆ ತೋರುತ್ತೇನೆ. ಏಕೆಂದರೆ ಇದು ಭಾರತದ ಎರಡು ದೃಷ್ಟಿಕೋನಗಳ ಹೋರಾಟವಾಗಿದೆ” ಎಂದು ರಾಹುಲ್ ಹೇಳಿದರು.

ರಾಹುಲ್ ಗಾಂಧಿ ಕೇರಳದ ವಯನಾಡ ಕ್ಷೇತ್ರದ ಸಂಸದರಾಗಿದ್ದರು ಆದರೆ ಮಾರ್ಚ್ 23ರಂದು ಸೂರತ್ ನ್ಯಾಯಾಲಯವು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 499 (ಮಾನನಷ್ಟ) ಮತ್ತು 500 (ಮಾನನಷ್ಟಕ್ಕೆ ಶಿಕ್ಷೆ) ಅಡಿಯಲ್ಲಿ ಗಾಂಧಿಯನ್ನು ದೋಷಿ ಎಂದು ಘೋಷಿಸಿತು. ಈ ಪ್ರಕರಣದಲ್ಲಿ ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಯಿತು. ಶಿಕ್ಷೆ ಪ್ರಕಟವಾದ ಮರುದಿನವೇ ಅವರನ್ನು ಸಂಸತ್ತ ಸ್ಥಾನದಿಂದ ಅನರ್ಹಗೊಳಿಸಲಾಯಿತು. ನಂತರ ಅವರಿಗೆ ಲೋಕಸಭಾ ಸಂಸದರಾಗಿ ಮಂಜೂರು ಮಾಡಿದ ಮನೆಯನ್ನು ಖಾಲಿ ಮಾಡುವಂತೆಯೂ ನೋಟಿಸ್ ಕಳುಹಿಸಲಾಯಿತು. ಏಪ್ರಿಲ್ 3 ರಂದು, ಅವರಿಗೆ ನ್ಯಾಯಾಲಯ ಜಾಮೀನು ನೀಡಲಾಯಿತು.

1951ರ ಜನತಾ ಪ್ರಾತಿನಿಧ್ಯ ಕಾಯಿದೆಯ ಅಡಿಯಲ್ಲಿ ರಾಹುಲ್‌ ಅವರನ್ನು ಲೋಕಸಭಾ ಸಂಸದರಾಗಿ ಅನರ್ಹಗೊಳಿಸಲಾಯಿತು. ಕಾನೂನಿನ ಸೆಕ್ಷನ್ 8(3)ರ ಪ್ರಕಾರ, ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಅವಧಿಗೆ ಜೈಲು ಶಿಕ್ಷೆಗೆ ಗುರಿಯಾದ ಶಾಸಕನನ್ನು ಅಪರಾಧ ನಿರ್ಣಯದ ದಿನಾಂಕದಿಂದ ಆರು ವರ್ಷಗಳವರೆಗೆ ಅನರ್ಹಗೊಳಿಸಲಾಗುತ್ತದೆ. ಒಂದು ವೇಳೆ ಉನ್ನತ ನ್ಯಾಯಾಲಯವು ಅವರ ಅಪರಾಧವನ್ನು ತಡೆಹಿಡಿದರೆ ರಾಹುಲ್‌ ಗಾಂಧಿಯವರ ಲೋಕಸಭೆಗೆ ಅನರ್ಹಗೊಳಿಸುವಿಕೆಯನ್ನು ರದ್ದುಗೊಳಿಸಲಾಗುತ್ತದೆ.

ಪ್ರಕರಣದ ಹಿನ್ನೆಲೆ

2019ರ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದ ಕೋಲಾರದಲ್ಲಿ ಹಮ್ಮಿಕೊಂಡಿದ್ದ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದ ರಾಹುಲ್‌, ”ನೀರವ್ ಮೋದಿ, ಲಲಿತ್ ಮೋದಿ ಅಥವಾ ನರೇಂದ್ರ ಮೋದಿ ಆಗಿರಲಿ, ಎಲ್ಲ ಕಳ್ಳರು ತಮ್ಮ ಹೆಸರಿನಲ್ಲಿ ಮೋದಿ ಹೊಂದಿದ್ದಾರೆಯೇ?” ಎಂದು ಪ್ರಶ್ನಿಸಿದ್ದರು.

ರಾಹುಲ್‌ ಅವರು ತಮ್ಮ ಹೇಳಿಕೆ ಮೂಲಕ ”ಮೋದಿ ಸರ್‌ನೇಮ್‌” ಹೊಂದಿರುವವರನ್ನೆಲ್ಲಾ ಹೀಯಾಳಿಸಿದ್ದಾರೆ ಎಂದು ಆರೋಪಿಸಿದ್ದ ಗುಜರಾತ್‌ನ ಬಿಜೆಪಿ ಶಾಸಕ ಪೂರ್ಣೇಶ್‌ ಮೋದಿ ಅವರು ಕಾಂಗ್ರೆಸ್‌ ಸಂಸದನ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ನೀರವ್ ಮೋದಿ ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದ ಆರೋಪಿಯಾಗಿದ್ದು ದೇಶ ಬಿಟ್ಟು ಓಡಿಹೋಗಿರುವ ಉದ್ಯಮಿಯಾಗಿದ್ದಾರೆ. ಇನ್ನು ಲಲಿತ್ ಮೋದಿ ಇಂಡಿಯನ್ ಪ್ರೀಮಿಯರ್ ಲೀಗ್‌ನ ಮಾಜಿ ಮುಖ್ಯಸ್ಥರಾಗಿದ್ದು, ಕ್ರಿಕೆಟ್ ಆಡಳಿತ ಮಂಡಳಿಯಿಂದ ಆಜೀವ ನಿಷೇಧಕ್ಕೊಳಗಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...