Homeಮುಖಪುಟಬಿಜೆಪಿ ನನ್ನನ್ನು ಜೈಲಿಗೆ ಹಾಕಬಹುದು ಆದರೆ ವಯನಾಡ ಜನರನ್ನು ಪ್ರತಿನಿಧಿಸುವುದಕ್ಕೆ ತಡೆಯೊಡ್ಡಲಾಗದು: ರಾಹುಲ್‌

ಬಿಜೆಪಿ ನನ್ನನ್ನು ಜೈಲಿಗೆ ಹಾಕಬಹುದು ಆದರೆ ವಯನಾಡ ಜನರನ್ನು ಪ್ರತಿನಿಧಿಸುವುದಕ್ಕೆ ತಡೆಯೊಡ್ಡಲಾಗದು: ರಾಹುಲ್‌

- Advertisement -
- Advertisement -

ಆಡಳಿತಾರೂಢ  ಬಿಜೆಪಿ ತಮ್ಮನ್ನು ಜೈಲಿಗೆ ಹಾಕಬಹುದು ಆದರೆ ವಯನಾಡಿನ ಜನರನ್ನು ಪ್ರತಿನಿಧಿಸುವುದಕ್ಕೆ ತಡೆಯೊಡ್ಡಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಹೇಳಿದ್ದಾರೆ.

ಸಂಸತ್ತ ಸದಸ್ಯತ್ವದಿಂದ ಅನರ್ಹಗೊಂಡ ಬಳಿಕ ರಾಹುಲ್ ಗಾಂಧಿ ಅವರು ಮೊದಲ ಬಾರಿಗೆ ತಾವು ಪ್ರತಿನಿಧಿಸಿದ್ದ ಕೇರಳದ ವಯನಾಡ ಕ್ಷೇತ್ರಕ್ಕೆ ತೆರಳಿದ್ದಾರೆ. ಈ ವೇಳೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ”ಸಂಸದ, ಸಂಸದರು ಎನ್ನುವುದು ಕೇವಲ ಟ್ಯಾಗ್, ಅದೊಂದು ಸ್ಥಾನ, ಅದೊಂದು ಹುದ್ದೆ” ಅಷ್ಟೇ ಹಾಗಾಗಿ ಬಿಜೆಪಿ ಆ ಟ್ಯಾಗ್‌ನ್ನು ತೆಗೆಯಬಹುದು, ಅವರು ಮನೆಯನ್ನು ಕಸಿದುಕೊಳ್ಳಬಹುದು, ಅವರು ನನ್ನನ್ನು ಜೈಲಿಗೆ ಹಾಕಬಹುದು, ಆದರೆ ವಯನಾಡಿನ ಜನರನ್ನು ಪ್ರತಿನಿಧಿಸುವುದನ್ನು ತಡೆಯಲು ಅವರಿಗೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ವಯನಾಡಿನ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸುವುದನ್ನು ನಾನು ಮುಂದುವರಿಸುತ್ತೇನೆ ಎಂದು ರಾಹುಲ್ ಹೇಳಿದರು.

”ನಾನು ಕೆಲವು ವರ್ಷಗಳಿಂದ ಬಿಜೆಪಿ ವಿರುದ್ಧ ಹೋರಾಡುತ್ತಿದ್ದೇನೆ ಮತ್ತು ಇಷ್ಟು ವರ್ಷಗಳಲ್ಲಿ ಅವರ ಈ ನಡೆ ನನಗೆ ಆಶ್ಚರ್ಯವನ್ನುಂಟು ಮಾಡುತ್ತಿದೆ. ಅವರು ತಮ್ಮ ಎದುರಾಳಿಯನ್ನು ಅರ್ಥಮಾಡಿಕೊಳ್ಳಲು ಅಸಮರ್ಥರಾಗಿದ್ದಾರೆ. ತಮ್ಮ ಎದುರಾಳಿಯು ಬೆದರುವುದಿಲ್ಲ ಎಂದು ಅವರಿಗೆ ಅರ್ಥವಾಗುವುದಿಲ್ಲ. ನಾನಿರುವಲ್ಲಿಗೆ ಪೊಲೀಸರನ್ನು ಕಳುಹಿಸಿದರೆ ನಾನು ಹೆದರುತ್ತೇನೆ ಎಂದುಕೊಂಡಿದ್ದಾರೆ, ಆದರೆ ನಾನು ಯಾವುದೇ ಕಾರಣಕ್ಕೂ ಹೆದರುವುದಿಲ್ಲ. ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಈ ಹೋರಾಟವು ಭಾರತದ ಎರಡು ವಿಭಿನ್ನ ದೃಷ್ಟಿಕೋನಗಳ ಹೋರಾಟವಾಗಿದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಸೂರತ್‌ ಸೆಷನ್ಸ್‌ ನ್ಯಾಯಾಲಯದಿಂದ ರಾಹುಲ್‌ ಗಾಂಧಿಗೆ ಜಾಮೀನು

”ಬಿಜೆಪಿ ಜನರನ್ನು ವಿಭಜಿಸುತ್ತದೆ, ನೀವು ಜನರ ನಡುವೆ ಗಲಾಟೆ ನಡೆಸುತ್ತೀರಿ, ನೀವು ಜನರನ್ನು ಹೆದರಿಸುತ್ತೀರಿ, ನಿಮ್ಮ ವಿರೋಧಿಗಳನ್ನು ಎಷ್ಟು ಬೇಕಾದರೂ ನಿಂದಿಸುತ್ತೀರಿ. ಆದರೆ ನಾನು ಜನರನ್ನು ಒಗ್ಗೂಡಿಸುತ್ತಲೇ ಇರುತ್ತೇನೆ, ಪ್ರತಿಯೊಂದು ಸಮುದಾಯ, ಪ್ರತಿಯೊಂದು ಧರ್ಮ, ಪ್ರತಿಯೊಂದು ವಿಚಾರವನ್ನು ಗೌರವಿಸುತ್ತಲೇ ಇರುತ್ತೇನೆ. ನೀವು ಬಯಸಿದಷ್ಟು ನನ್ನನ್ನು ವಿರೋಧ ಮಾಡಿ, ಆದರೆ ನಾನು ನಿಮಗೆ ಸಾಧ್ಯವಾದಷ್ಟು ದಯೆ ತೋರುತ್ತೇನೆ. ಏಕೆಂದರೆ ಇದು ಭಾರತದ ಎರಡು ದೃಷ್ಟಿಕೋನಗಳ ಹೋರಾಟವಾಗಿದೆ” ಎಂದು ರಾಹುಲ್ ಹೇಳಿದರು.

ರಾಹುಲ್ ಗಾಂಧಿ ಕೇರಳದ ವಯನಾಡ ಕ್ಷೇತ್ರದ ಸಂಸದರಾಗಿದ್ದರು ಆದರೆ ಮಾರ್ಚ್ 23ರಂದು ಸೂರತ್ ನ್ಯಾಯಾಲಯವು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 499 (ಮಾನನಷ್ಟ) ಮತ್ತು 500 (ಮಾನನಷ್ಟಕ್ಕೆ ಶಿಕ್ಷೆ) ಅಡಿಯಲ್ಲಿ ಗಾಂಧಿಯನ್ನು ದೋಷಿ ಎಂದು ಘೋಷಿಸಿತು. ಈ ಪ್ರಕರಣದಲ್ಲಿ ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಯಿತು. ಶಿಕ್ಷೆ ಪ್ರಕಟವಾದ ಮರುದಿನವೇ ಅವರನ್ನು ಸಂಸತ್ತ ಸ್ಥಾನದಿಂದ ಅನರ್ಹಗೊಳಿಸಲಾಯಿತು. ನಂತರ ಅವರಿಗೆ ಲೋಕಸಭಾ ಸಂಸದರಾಗಿ ಮಂಜೂರು ಮಾಡಿದ ಮನೆಯನ್ನು ಖಾಲಿ ಮಾಡುವಂತೆಯೂ ನೋಟಿಸ್ ಕಳುಹಿಸಲಾಯಿತು. ಏಪ್ರಿಲ್ 3 ರಂದು, ಅವರಿಗೆ ನ್ಯಾಯಾಲಯ ಜಾಮೀನು ನೀಡಲಾಯಿತು.

1951ರ ಜನತಾ ಪ್ರಾತಿನಿಧ್ಯ ಕಾಯಿದೆಯ ಅಡಿಯಲ್ಲಿ ರಾಹುಲ್‌ ಅವರನ್ನು ಲೋಕಸಭಾ ಸಂಸದರಾಗಿ ಅನರ್ಹಗೊಳಿಸಲಾಯಿತು. ಕಾನೂನಿನ ಸೆಕ್ಷನ್ 8(3)ರ ಪ್ರಕಾರ, ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಅವಧಿಗೆ ಜೈಲು ಶಿಕ್ಷೆಗೆ ಗುರಿಯಾದ ಶಾಸಕನನ್ನು ಅಪರಾಧ ನಿರ್ಣಯದ ದಿನಾಂಕದಿಂದ ಆರು ವರ್ಷಗಳವರೆಗೆ ಅನರ್ಹಗೊಳಿಸಲಾಗುತ್ತದೆ. ಒಂದು ವೇಳೆ ಉನ್ನತ ನ್ಯಾಯಾಲಯವು ಅವರ ಅಪರಾಧವನ್ನು ತಡೆಹಿಡಿದರೆ ರಾಹುಲ್‌ ಗಾಂಧಿಯವರ ಲೋಕಸಭೆಗೆ ಅನರ್ಹಗೊಳಿಸುವಿಕೆಯನ್ನು ರದ್ದುಗೊಳಿಸಲಾಗುತ್ತದೆ.

ಪ್ರಕರಣದ ಹಿನ್ನೆಲೆ

2019ರ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದ ಕೋಲಾರದಲ್ಲಿ ಹಮ್ಮಿಕೊಂಡಿದ್ದ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದ ರಾಹುಲ್‌, ”ನೀರವ್ ಮೋದಿ, ಲಲಿತ್ ಮೋದಿ ಅಥವಾ ನರೇಂದ್ರ ಮೋದಿ ಆಗಿರಲಿ, ಎಲ್ಲ ಕಳ್ಳರು ತಮ್ಮ ಹೆಸರಿನಲ್ಲಿ ಮೋದಿ ಹೊಂದಿದ್ದಾರೆಯೇ?” ಎಂದು ಪ್ರಶ್ನಿಸಿದ್ದರು.

ರಾಹುಲ್‌ ಅವರು ತಮ್ಮ ಹೇಳಿಕೆ ಮೂಲಕ ”ಮೋದಿ ಸರ್‌ನೇಮ್‌” ಹೊಂದಿರುವವರನ್ನೆಲ್ಲಾ ಹೀಯಾಳಿಸಿದ್ದಾರೆ ಎಂದು ಆರೋಪಿಸಿದ್ದ ಗುಜರಾತ್‌ನ ಬಿಜೆಪಿ ಶಾಸಕ ಪೂರ್ಣೇಶ್‌ ಮೋದಿ ಅವರು ಕಾಂಗ್ರೆಸ್‌ ಸಂಸದನ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ನೀರವ್ ಮೋದಿ ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದ ಆರೋಪಿಯಾಗಿದ್ದು ದೇಶ ಬಿಟ್ಟು ಓಡಿಹೋಗಿರುವ ಉದ್ಯಮಿಯಾಗಿದ್ದಾರೆ. ಇನ್ನು ಲಲಿತ್ ಮೋದಿ ಇಂಡಿಯನ್ ಪ್ರೀಮಿಯರ್ ಲೀಗ್‌ನ ಮಾಜಿ ಮುಖ್ಯಸ್ಥರಾಗಿದ್ದು, ಕ್ರಿಕೆಟ್ ಆಡಳಿತ ಮಂಡಳಿಯಿಂದ ಆಜೀವ ನಿಷೇಧಕ್ಕೊಳಗಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...