Homeಕರ್ನಾಟಕಪಿಸ್ತೂಲ್ ಹಿಡಿದ ಬಿಜೆಪಿ ಅಭ್ಯರ್ಥಿ ಮಣಿಕಂಠ; ರೌಡಿಶೀಟರ್‌ನ ವಿಡಿಯೊ ವೈರಲ್‌

ಪಿಸ್ತೂಲ್ ಹಿಡಿದ ಬಿಜೆಪಿ ಅಭ್ಯರ್ಥಿ ಮಣಿಕಂಠ; ರೌಡಿಶೀಟರ್‌ನ ವಿಡಿಯೊ ವೈರಲ್‌

- Advertisement -
- Advertisement -

ಚಿತ್ತಾಪುರ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ರೌಡಿಶೀಟರ್‌ ಮಣಿಕಂಠ ರಾಠೋಡ ಅವರು ಪಿಸ್ತೂಲ್ ಹಿಡಿದು ಪ್ರದರ್ಶಿಸುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ್‌ ಖರ್ಗೆಯವರ ವಿರುದ್ಧ ರೌಡಿ ಶೀಟರ್‌ ಮಣಿಕಂಠ ಅವರನ್ನು ಬಿಜೆಪಿ ಕಣಕ್ಕಿಳಿಸಿರುವ ಬೆನ್ನಲ್ಲೇ ವಿಡಿಯೊ ಮುನ್ನೆಲೆಗೆ ಬಂದಿದೆ.

ಕುರ್ಚಿಯಲ್ಲಿ ಕೂತಿರುವ ಮಣಿಕಂಠ ತಮ್ಮ ಬಲಗೈ ತೋರುಬೆರಳಿನಿಂದ ಪಿಸ್ತೂಲ್ ತಿರುಗಿಸುತ್ತಿರುವುದು ವಿಡಿಯೊದಲ್ಲಿ ಸೆರೆಯಾಗಿದೆ. ಇದು ಹಳೆಯ ವಿಡಿಯೊ ಎನ್ನಲಾಗಿದ್ದು, ಮಣಿಕಂಠ ಬಿಜೆಪಿ ಅಭ್ಯರ್ಥಿಯಾಗಿರುವ ಕಾರಣ ಇದು ಚರ್ಚೆಗೆ ಗ್ರಾಸವಾಗಿದೆ. ಇತ್ತೀಚೆಗೆ ಯಾದಗಿರಿ ಜಿಲ್ಲಾ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಿರುವ ರಾಠೋಡ ಅವರನ್ನು ಬಿಜೆಪಿ ಕಣಕ್ಕಿಳಿಸಿರುವುದು ಅಚ್ಚರಿಯ ಬೆಳವಣಿಗೆಯಾಗಿದೆ.

ಬಿಜೆಪಿ ಅಭ್ಯರ್ಥಿ ಮಣಿಕಂಠ ವಿರುದ್ದ ರಾಜ್ಯ ಮತ್ತು ಹೊರ ರಾಜ್ಯಗಳ ವಿವಿಧ ಪೊಲೀಸ್ ಠಾಣೆಗಳಲ್ಲಿ 40 ಪ್ರಕರಣಗಳು ದಾಖಲಾಗಿವೆ. ಅನ್ನಭಾಗ್ಯ ಅಕ್ಕಿಯನ್ನು ಕದ್ದ ಪ್ರಕರಣದಲ್ಲಿ ಒಂದು ವರ್ಷ ಶಿಕ್ಷೆಯೂ ಆಗಿದ್ದು ನ್ಯಾಯಾಲಯದಿಂದ ತಡೆಯಾಜ್ಞೆ ಪಡೆದಿದ್ದಾರೆ.

ಯಾದಗಿರಿ, ವಿಜಯಪುರ, ಕಲಬುರಗಿ ಮೂರು ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಪ್ರಕರಣಗಳನ್ನು ಎದುರಿಸುತ್ತಿರುವ ಬಿಜೆಪಿ ಮುಖಂಡ ಮಣಿಕಂಠ ರಾಥೋಡನನ್ನು ಒಂದು ವರ್ಷಗಳ ಕಾಲ ಗಡಿಪಾರು ಮಾಡಿ ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ವೈ. ಎಸ್. ರವಿಕುಮಾರ ಆದೇಶ ಹೊರಡಿಸಿದ್ದರು. ಇದಕ್ಕೆ ಮಣಿಕಂಠ, ಹೈಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದರು.

ಚುನಾವಣೆ ಪ್ರಚಾರಕ್ಕೆಂದು ಶುಕ್ರವಾರ ಚಿತ್ತಾಪುರಕ್ಕೆ ಬಂದಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, “ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಮತ್ತು ರಾಜ್ಯ ನಾಯಕರ ಮೇಲೂ ಪ್ರಕರಣಗಳಿದ್ದು ಜಾಮೀನಿನ ಮೇಲಿದ್ದಾರೆ. ಮಣಿಕಂಠ ಸಹ ಜಾಮೀನು ಪಡೆದಿದ್ದಾರೆ” ಎಂದು ಬಿಜೆಪಿ ಅಭ್ಯರ್ಥಿಯಾಗಿ ಮಣಿಕಂಠ ಅವರನ್ನು ಸಮರ್ಥಿಸಿಕೊಂಡ ದಿನವೇ ವಿಡಿಯೊ ವೈರಲ್ ಆಗಿದೆ.

ಈ ವಿಡಿಯೊ ಮಣಿಕಂಠ ಅವರದ್ದಲ್ಲ ಎಂದು ಆತನ ಆಪ್ತರು ಹೇಳಿಕೊಂಡಿದ್ದಾರೆ. ಆದರೆ ಪೊಲೀಸ್ ಮೂಲಗಳು ಇದು ಮಣಿಕಂಠ ಅವರದ್ದೇ ವಿಡಿಯೊ ಎಂದು ಖಚಿತಪಡಿಸಿರುವುದಾಗಿ ‘ಪ್ರಜಾವಾಣಿ’ ವರದಿ ಮಾಡಿದೆ.

ರೌಡಿ ಶೀಟರ್‌ ಪರ ಮೋದಿ ಪ್ರಚಾರ!

“ಚಿತ್ತಾಪುರ ವಿಧಾನಸಭಾ ಕ್ರೇತ್ರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ ಪರ ಪ್ರಚಾರ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಕ್ಷೇತ್ರಕ್ಕೆ ಬರಲಿದ್ದಾರೆ” ಎಂದು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಇತ್ತೀಚೆಗೆ ಹೇಳಿದ್ದಾರೆ.

“ಪ್ರಧಾನಿ ಮೋದಿ ಅವರು ಮೇ 2ರಂದು ಕಲಬುರಗಿ ನಗರದಲ್ಲಿ ರೋಡ್ ಶೋ ನಡೆಸಿ ವಾಪಸ್‌ ತೆರಳುವರು. ಮೇ 6ರಂದು ಚಿತ್ತಾಪುರ ಕ್ಷೇತ್ರದ ರಾವೂರ ಗ್ರಾಮ ಸಮೀಪದ ಕಲಬುರಗಿ–ಯಾದಗಿರಿ ರಾಷ್ಟ್ರೀಯ ಹೆದ್ದಾರಿ–150ರ ಬದಿಯ ಖಾಸಗಿ ಜಮೀನಿನಲ್ಲಿ ಸಮಾವೇಶ ನಡೆಸಲಾಗುವುದು. ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಂದ ಸುಮಾರು 5 ಲಕ್ಷ ಜನ ಸೇರುವ ನಿರೀಕ್ಷೆಯಿದೆ” ಎಂದು ತಿಳಿಸಿದ್ದಾರೆ.

ರೌಡಿಶೀಟರ್‌ ಮಣಿಕಂಠನನ್ನು ಕಣಕ್ಕಿಳಿಸಿರುವುದು ಬಿಜೆಪಿಯೊಳಗೆಯೇ ಟೀಕೆಗೆ ಒಳಗಾಗಿತ್ತು. ಚಿತ್ತಾಪುರ ಅಭ್ಯರ್ಥಿ ಬದಲಾವಣೆ ಮಾಡಬೇಕೆಂದು ಪಟ್ಟು ಹಿಡಿದಿದ್ದ ಮಾಜಿ ಶಾಸಕ ವಿಶ್ವನಾಥ ಪಾಟೀಲ ಹೆಬ್ಬಾಳ, ಟಿಕೆಟ್ ಆಕಾಂಕ್ಷಿ ಅರವಿಂದ ಚವ್ಹಾಣ ಸೇರಿ ಹಲವರು ಪಕ್ಷದಿಂದ ಹೊರ ಬಂದು ಕಾಂಗ್ರೆಸ್ ಸೇರಿಕೊಂಡಿದ್ದರು.

ಇದನ್ನೂ ಓದಿರಿ: ಅಮಿತ್ ಶಾ ಸೂಚನೆಯಂತೆ ಗಲಭೆಗೆ ತಯಾರಿಯೇ?: ಪರಮೇಶ್ವರ್ ಮೇಲಿನ ಹಲ್ಲೆಗೆ ಕಾಂಗ್ರೆಸ್ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...