Homeಕರ್ನಾಟಕಪಿಸ್ತೂಲ್ ಹಿಡಿದ ಬಿಜೆಪಿ ಅಭ್ಯರ್ಥಿ ಮಣಿಕಂಠ; ರೌಡಿಶೀಟರ್‌ನ ವಿಡಿಯೊ ವೈರಲ್‌

ಪಿಸ್ತೂಲ್ ಹಿಡಿದ ಬಿಜೆಪಿ ಅಭ್ಯರ್ಥಿ ಮಣಿಕಂಠ; ರೌಡಿಶೀಟರ್‌ನ ವಿಡಿಯೊ ವೈರಲ್‌

- Advertisement -
- Advertisement -

ಚಿತ್ತಾಪುರ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ರೌಡಿಶೀಟರ್‌ ಮಣಿಕಂಠ ರಾಠೋಡ ಅವರು ಪಿಸ್ತೂಲ್ ಹಿಡಿದು ಪ್ರದರ್ಶಿಸುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ್‌ ಖರ್ಗೆಯವರ ವಿರುದ್ಧ ರೌಡಿ ಶೀಟರ್‌ ಮಣಿಕಂಠ ಅವರನ್ನು ಬಿಜೆಪಿ ಕಣಕ್ಕಿಳಿಸಿರುವ ಬೆನ್ನಲ್ಲೇ ವಿಡಿಯೊ ಮುನ್ನೆಲೆಗೆ ಬಂದಿದೆ.

ಕುರ್ಚಿಯಲ್ಲಿ ಕೂತಿರುವ ಮಣಿಕಂಠ ತಮ್ಮ ಬಲಗೈ ತೋರುಬೆರಳಿನಿಂದ ಪಿಸ್ತೂಲ್ ತಿರುಗಿಸುತ್ತಿರುವುದು ವಿಡಿಯೊದಲ್ಲಿ ಸೆರೆಯಾಗಿದೆ. ಇದು ಹಳೆಯ ವಿಡಿಯೊ ಎನ್ನಲಾಗಿದ್ದು, ಮಣಿಕಂಠ ಬಿಜೆಪಿ ಅಭ್ಯರ್ಥಿಯಾಗಿರುವ ಕಾರಣ ಇದು ಚರ್ಚೆಗೆ ಗ್ರಾಸವಾಗಿದೆ. ಇತ್ತೀಚೆಗೆ ಯಾದಗಿರಿ ಜಿಲ್ಲಾ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಿರುವ ರಾಠೋಡ ಅವರನ್ನು ಬಿಜೆಪಿ ಕಣಕ್ಕಿಳಿಸಿರುವುದು ಅಚ್ಚರಿಯ ಬೆಳವಣಿಗೆಯಾಗಿದೆ.

ಬಿಜೆಪಿ ಅಭ್ಯರ್ಥಿ ಮಣಿಕಂಠ ವಿರುದ್ದ ರಾಜ್ಯ ಮತ್ತು ಹೊರ ರಾಜ್ಯಗಳ ವಿವಿಧ ಪೊಲೀಸ್ ಠಾಣೆಗಳಲ್ಲಿ 40 ಪ್ರಕರಣಗಳು ದಾಖಲಾಗಿವೆ. ಅನ್ನಭಾಗ್ಯ ಅಕ್ಕಿಯನ್ನು ಕದ್ದ ಪ್ರಕರಣದಲ್ಲಿ ಒಂದು ವರ್ಷ ಶಿಕ್ಷೆಯೂ ಆಗಿದ್ದು ನ್ಯಾಯಾಲಯದಿಂದ ತಡೆಯಾಜ್ಞೆ ಪಡೆದಿದ್ದಾರೆ.

ಯಾದಗಿರಿ, ವಿಜಯಪುರ, ಕಲಬುರಗಿ ಮೂರು ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಪ್ರಕರಣಗಳನ್ನು ಎದುರಿಸುತ್ತಿರುವ ಬಿಜೆಪಿ ಮುಖಂಡ ಮಣಿಕಂಠ ರಾಥೋಡನನ್ನು ಒಂದು ವರ್ಷಗಳ ಕಾಲ ಗಡಿಪಾರು ಮಾಡಿ ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ವೈ. ಎಸ್. ರವಿಕುಮಾರ ಆದೇಶ ಹೊರಡಿಸಿದ್ದರು. ಇದಕ್ಕೆ ಮಣಿಕಂಠ, ಹೈಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದರು.

ಚುನಾವಣೆ ಪ್ರಚಾರಕ್ಕೆಂದು ಶುಕ್ರವಾರ ಚಿತ್ತಾಪುರಕ್ಕೆ ಬಂದಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, “ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಮತ್ತು ರಾಜ್ಯ ನಾಯಕರ ಮೇಲೂ ಪ್ರಕರಣಗಳಿದ್ದು ಜಾಮೀನಿನ ಮೇಲಿದ್ದಾರೆ. ಮಣಿಕಂಠ ಸಹ ಜಾಮೀನು ಪಡೆದಿದ್ದಾರೆ” ಎಂದು ಬಿಜೆಪಿ ಅಭ್ಯರ್ಥಿಯಾಗಿ ಮಣಿಕಂಠ ಅವರನ್ನು ಸಮರ್ಥಿಸಿಕೊಂಡ ದಿನವೇ ವಿಡಿಯೊ ವೈರಲ್ ಆಗಿದೆ.

ಈ ವಿಡಿಯೊ ಮಣಿಕಂಠ ಅವರದ್ದಲ್ಲ ಎಂದು ಆತನ ಆಪ್ತರು ಹೇಳಿಕೊಂಡಿದ್ದಾರೆ. ಆದರೆ ಪೊಲೀಸ್ ಮೂಲಗಳು ಇದು ಮಣಿಕಂಠ ಅವರದ್ದೇ ವಿಡಿಯೊ ಎಂದು ಖಚಿತಪಡಿಸಿರುವುದಾಗಿ ‘ಪ್ರಜಾವಾಣಿ’ ವರದಿ ಮಾಡಿದೆ.

ರೌಡಿ ಶೀಟರ್‌ ಪರ ಮೋದಿ ಪ್ರಚಾರ!

“ಚಿತ್ತಾಪುರ ವಿಧಾನಸಭಾ ಕ್ರೇತ್ರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ ಪರ ಪ್ರಚಾರ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಕ್ಷೇತ್ರಕ್ಕೆ ಬರಲಿದ್ದಾರೆ” ಎಂದು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಇತ್ತೀಚೆಗೆ ಹೇಳಿದ್ದಾರೆ.

“ಪ್ರಧಾನಿ ಮೋದಿ ಅವರು ಮೇ 2ರಂದು ಕಲಬುರಗಿ ನಗರದಲ್ಲಿ ರೋಡ್ ಶೋ ನಡೆಸಿ ವಾಪಸ್‌ ತೆರಳುವರು. ಮೇ 6ರಂದು ಚಿತ್ತಾಪುರ ಕ್ಷೇತ್ರದ ರಾವೂರ ಗ್ರಾಮ ಸಮೀಪದ ಕಲಬುರಗಿ–ಯಾದಗಿರಿ ರಾಷ್ಟ್ರೀಯ ಹೆದ್ದಾರಿ–150ರ ಬದಿಯ ಖಾಸಗಿ ಜಮೀನಿನಲ್ಲಿ ಸಮಾವೇಶ ನಡೆಸಲಾಗುವುದು. ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಂದ ಸುಮಾರು 5 ಲಕ್ಷ ಜನ ಸೇರುವ ನಿರೀಕ್ಷೆಯಿದೆ” ಎಂದು ತಿಳಿಸಿದ್ದಾರೆ.

ರೌಡಿಶೀಟರ್‌ ಮಣಿಕಂಠನನ್ನು ಕಣಕ್ಕಿಳಿಸಿರುವುದು ಬಿಜೆಪಿಯೊಳಗೆಯೇ ಟೀಕೆಗೆ ಒಳಗಾಗಿತ್ತು. ಚಿತ್ತಾಪುರ ಅಭ್ಯರ್ಥಿ ಬದಲಾವಣೆ ಮಾಡಬೇಕೆಂದು ಪಟ್ಟು ಹಿಡಿದಿದ್ದ ಮಾಜಿ ಶಾಸಕ ವಿಶ್ವನಾಥ ಪಾಟೀಲ ಹೆಬ್ಬಾಳ, ಟಿಕೆಟ್ ಆಕಾಂಕ್ಷಿ ಅರವಿಂದ ಚವ್ಹಾಣ ಸೇರಿ ಹಲವರು ಪಕ್ಷದಿಂದ ಹೊರ ಬಂದು ಕಾಂಗ್ರೆಸ್ ಸೇರಿಕೊಂಡಿದ್ದರು.

ಇದನ್ನೂ ಓದಿರಿ: ಅಮಿತ್ ಶಾ ಸೂಚನೆಯಂತೆ ಗಲಭೆಗೆ ತಯಾರಿಯೇ?: ಪರಮೇಶ್ವರ್ ಮೇಲಿನ ಹಲ್ಲೆಗೆ ಕಾಂಗ್ರೆಸ್ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...