Homeಕರ್ನಾಟಕಪಿಸ್ತೂಲ್ ಹಿಡಿದ ಬಿಜೆಪಿ ಅಭ್ಯರ್ಥಿ ಮಣಿಕಂಠ; ರೌಡಿಶೀಟರ್‌ನ ವಿಡಿಯೊ ವೈರಲ್‌

ಪಿಸ್ತೂಲ್ ಹಿಡಿದ ಬಿಜೆಪಿ ಅಭ್ಯರ್ಥಿ ಮಣಿಕಂಠ; ರೌಡಿಶೀಟರ್‌ನ ವಿಡಿಯೊ ವೈರಲ್‌

- Advertisement -
- Advertisement -

ಚಿತ್ತಾಪುರ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ರೌಡಿಶೀಟರ್‌ ಮಣಿಕಂಠ ರಾಠೋಡ ಅವರು ಪಿಸ್ತೂಲ್ ಹಿಡಿದು ಪ್ರದರ್ಶಿಸುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ್‌ ಖರ್ಗೆಯವರ ವಿರುದ್ಧ ರೌಡಿ ಶೀಟರ್‌ ಮಣಿಕಂಠ ಅವರನ್ನು ಬಿಜೆಪಿ ಕಣಕ್ಕಿಳಿಸಿರುವ ಬೆನ್ನಲ್ಲೇ ವಿಡಿಯೊ ಮುನ್ನೆಲೆಗೆ ಬಂದಿದೆ.

ಕುರ್ಚಿಯಲ್ಲಿ ಕೂತಿರುವ ಮಣಿಕಂಠ ತಮ್ಮ ಬಲಗೈ ತೋರುಬೆರಳಿನಿಂದ ಪಿಸ್ತೂಲ್ ತಿರುಗಿಸುತ್ತಿರುವುದು ವಿಡಿಯೊದಲ್ಲಿ ಸೆರೆಯಾಗಿದೆ. ಇದು ಹಳೆಯ ವಿಡಿಯೊ ಎನ್ನಲಾಗಿದ್ದು, ಮಣಿಕಂಠ ಬಿಜೆಪಿ ಅಭ್ಯರ್ಥಿಯಾಗಿರುವ ಕಾರಣ ಇದು ಚರ್ಚೆಗೆ ಗ್ರಾಸವಾಗಿದೆ. ಇತ್ತೀಚೆಗೆ ಯಾದಗಿರಿ ಜಿಲ್ಲಾ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಿರುವ ರಾಠೋಡ ಅವರನ್ನು ಬಿಜೆಪಿ ಕಣಕ್ಕಿಳಿಸಿರುವುದು ಅಚ್ಚರಿಯ ಬೆಳವಣಿಗೆಯಾಗಿದೆ.

ಬಿಜೆಪಿ ಅಭ್ಯರ್ಥಿ ಮಣಿಕಂಠ ವಿರುದ್ದ ರಾಜ್ಯ ಮತ್ತು ಹೊರ ರಾಜ್ಯಗಳ ವಿವಿಧ ಪೊಲೀಸ್ ಠಾಣೆಗಳಲ್ಲಿ 40 ಪ್ರಕರಣಗಳು ದಾಖಲಾಗಿವೆ. ಅನ್ನಭಾಗ್ಯ ಅಕ್ಕಿಯನ್ನು ಕದ್ದ ಪ್ರಕರಣದಲ್ಲಿ ಒಂದು ವರ್ಷ ಶಿಕ್ಷೆಯೂ ಆಗಿದ್ದು ನ್ಯಾಯಾಲಯದಿಂದ ತಡೆಯಾಜ್ಞೆ ಪಡೆದಿದ್ದಾರೆ.

ಯಾದಗಿರಿ, ವಿಜಯಪುರ, ಕಲಬುರಗಿ ಮೂರು ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಪ್ರಕರಣಗಳನ್ನು ಎದುರಿಸುತ್ತಿರುವ ಬಿಜೆಪಿ ಮುಖಂಡ ಮಣಿಕಂಠ ರಾಥೋಡನನ್ನು ಒಂದು ವರ್ಷಗಳ ಕಾಲ ಗಡಿಪಾರು ಮಾಡಿ ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ವೈ. ಎಸ್. ರವಿಕುಮಾರ ಆದೇಶ ಹೊರಡಿಸಿದ್ದರು. ಇದಕ್ಕೆ ಮಣಿಕಂಠ, ಹೈಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದರು.

ಚುನಾವಣೆ ಪ್ರಚಾರಕ್ಕೆಂದು ಶುಕ್ರವಾರ ಚಿತ್ತಾಪುರಕ್ಕೆ ಬಂದಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, “ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಮತ್ತು ರಾಜ್ಯ ನಾಯಕರ ಮೇಲೂ ಪ್ರಕರಣಗಳಿದ್ದು ಜಾಮೀನಿನ ಮೇಲಿದ್ದಾರೆ. ಮಣಿಕಂಠ ಸಹ ಜಾಮೀನು ಪಡೆದಿದ್ದಾರೆ” ಎಂದು ಬಿಜೆಪಿ ಅಭ್ಯರ್ಥಿಯಾಗಿ ಮಣಿಕಂಠ ಅವರನ್ನು ಸಮರ್ಥಿಸಿಕೊಂಡ ದಿನವೇ ವಿಡಿಯೊ ವೈರಲ್ ಆಗಿದೆ.

ಈ ವಿಡಿಯೊ ಮಣಿಕಂಠ ಅವರದ್ದಲ್ಲ ಎಂದು ಆತನ ಆಪ್ತರು ಹೇಳಿಕೊಂಡಿದ್ದಾರೆ. ಆದರೆ ಪೊಲೀಸ್ ಮೂಲಗಳು ಇದು ಮಣಿಕಂಠ ಅವರದ್ದೇ ವಿಡಿಯೊ ಎಂದು ಖಚಿತಪಡಿಸಿರುವುದಾಗಿ ‘ಪ್ರಜಾವಾಣಿ’ ವರದಿ ಮಾಡಿದೆ.

ರೌಡಿ ಶೀಟರ್‌ ಪರ ಮೋದಿ ಪ್ರಚಾರ!

“ಚಿತ್ತಾಪುರ ವಿಧಾನಸಭಾ ಕ್ರೇತ್ರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ ಪರ ಪ್ರಚಾರ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಕ್ಷೇತ್ರಕ್ಕೆ ಬರಲಿದ್ದಾರೆ” ಎಂದು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಇತ್ತೀಚೆಗೆ ಹೇಳಿದ್ದಾರೆ.

“ಪ್ರಧಾನಿ ಮೋದಿ ಅವರು ಮೇ 2ರಂದು ಕಲಬುರಗಿ ನಗರದಲ್ಲಿ ರೋಡ್ ಶೋ ನಡೆಸಿ ವಾಪಸ್‌ ತೆರಳುವರು. ಮೇ 6ರಂದು ಚಿತ್ತಾಪುರ ಕ್ಷೇತ್ರದ ರಾವೂರ ಗ್ರಾಮ ಸಮೀಪದ ಕಲಬುರಗಿ–ಯಾದಗಿರಿ ರಾಷ್ಟ್ರೀಯ ಹೆದ್ದಾರಿ–150ರ ಬದಿಯ ಖಾಸಗಿ ಜಮೀನಿನಲ್ಲಿ ಸಮಾವೇಶ ನಡೆಸಲಾಗುವುದು. ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಂದ ಸುಮಾರು 5 ಲಕ್ಷ ಜನ ಸೇರುವ ನಿರೀಕ್ಷೆಯಿದೆ” ಎಂದು ತಿಳಿಸಿದ್ದಾರೆ.

ರೌಡಿಶೀಟರ್‌ ಮಣಿಕಂಠನನ್ನು ಕಣಕ್ಕಿಳಿಸಿರುವುದು ಬಿಜೆಪಿಯೊಳಗೆಯೇ ಟೀಕೆಗೆ ಒಳಗಾಗಿತ್ತು. ಚಿತ್ತಾಪುರ ಅಭ್ಯರ್ಥಿ ಬದಲಾವಣೆ ಮಾಡಬೇಕೆಂದು ಪಟ್ಟು ಹಿಡಿದಿದ್ದ ಮಾಜಿ ಶಾಸಕ ವಿಶ್ವನಾಥ ಪಾಟೀಲ ಹೆಬ್ಬಾಳ, ಟಿಕೆಟ್ ಆಕಾಂಕ್ಷಿ ಅರವಿಂದ ಚವ್ಹಾಣ ಸೇರಿ ಹಲವರು ಪಕ್ಷದಿಂದ ಹೊರ ಬಂದು ಕಾಂಗ್ರೆಸ್ ಸೇರಿಕೊಂಡಿದ್ದರು.

ಇದನ್ನೂ ಓದಿರಿ: ಅಮಿತ್ ಶಾ ಸೂಚನೆಯಂತೆ ಗಲಭೆಗೆ ತಯಾರಿಯೇ?: ಪರಮೇಶ್ವರ್ ಮೇಲಿನ ಹಲ್ಲೆಗೆ ಕಾಂಗ್ರೆಸ್ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...