Homeಮುಖಪುಟತೂಗು ಸೇತುವೆ ದುರಂತದ ಮೊರ್ಬಿಯಲ್ಲಿ ಗೆಲುವಿನತ್ತ ಬಿಜೆಪಿ ಅಭ್ಯರ್ಥಿ

ತೂಗು ಸೇತುವೆ ದುರಂತದ ಮೊರ್ಬಿಯಲ್ಲಿ ಗೆಲುವಿನತ್ತ ಬಿಜೆಪಿ ಅಭ್ಯರ್ಥಿ

- Advertisement -
- Advertisement -

ಗುಜರಾತ್‌ನಲ್ಲಿ ಬಿಜೆಪಿ ಅಭೂತಪೂರ್ವ ದಿಗ್ವಿಜಯ ಸಾಧಿಸುತ್ತಿದ್ದು ಮೊರ್ಬಿಯಲ್ಲಿ ಗೆಲುವಿನತ್ತ ಮುನ್ನುಗ್ಗುತ್ತಿದೆ. ಭೀಕರ ಸೇತುವೆ ಕುಸಿತದಿಂದಾಗಿ 130ಕ್ಕೂ ಹೆಚ್ಚು ಜನರ ದುರ್ಮಣದ ಮೂಲಕ ಸುದ್ದಿಯಾಗಿದ್ದ ಮೊರ್ಬಿಯಲ್ಲಿ ಬಿಜೆಪಿ ಗೆಲುವಿನತ್ತ ಹೆಜ್ಜೆ ಇರಿಸಿದೆ.

ಅಕ್ಟೋಬರ್ 30ರಂದು ಘಟಿಸಿದ ಭೀಕರ ಸೇತುವೆ ಕುಸಿತದಲ್ಲಿ 130ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. ಸೇತುವೆ ದುರಂತದ ನಂತರ ಗಮನ ಸೆಳೆದಿದ್ದ ಕ್ಷೇತ್ರದಲ್ಲಿ ಐದು ಬಾರಿ ಶಾಸಕರಾಗಿರುವ ಬಿಜೆಪಿಯ ಕಾಂತಿಭಾಯಿ ಅಮೃತಿಯಾ ಅವರು ಗೆಲುವಿನ ಹಾದಿಯಲ್ಲಿದ್ದಾರೆ.

ಸೇತುವೆ ದುರಸ್ತಿ ಮತ್ತು ನಿರ್ವಹಣೆಯ ಕೆಲಸವನ್ನು ಖಾಸಗಿ ಸಂಸ್ಥೆಗೆ ವಹಿಸುವಾಗ ನಿಯಮಗಳನ್ನು ಸ್ಥಳೀಯ ಆಡಳಿತ ಉಲ್ಲಂಘಿಸಿದೆ ಎಂದು ಆರೋಪಿಸಲಾಗಿತ್ತು. ಸೇತುವೆ ದುರಂತದ ಬಳಿಕ ಅಮೃತಿಯಾ ಅವರು ರಕ್ಷಣಾ ಕಾರ್ಯಾಚರಣೆಯಲ್ಲಿ ಸಹಾಯ ಮಾಡಲು ಓಡಾಡುತ್ತಿದ್ದ ವಿಡಿಯೊ ವೈರಲ್ ಆಗಿತ್ತು. ಜಯಂತಿ ಪಟೇಲ್ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು, ಆಮ್ ಆದ್ಮಿ ಪಕ್ಷವು ಪಂಕಜ್ ರಣಸಾರಿಯಾ ಅವರನ್ನು ಕಣಕ್ಕಿಳಿಸಿದೆ.

ಪ್ರಾಥಮಿಕವಾಗಿ ಗಡಿಯಾರ ತಯಾರಕ ಸಂಸ್ಥೆ ಎಂದು ಕರೆಯಲ್ಪಡುವ ಒರೆವಾ ಕಂಪನಿಗೆ ವಸಾಹತುಶಾಹಿ ಕಾಲದ ಸೇತುವೆಯ ದುರಸ್ತಿ ಕೆಲಸವನ್ನು ವಹಿಸಲಾಗಿತ್ತು. ಆದರೆ ಕಂಪನಿಯ ಮಾಲೀಕರನ್ನು ಇನ್ನೂ ಬಂಧಿಸಬೇಕಿದೆ.

ಪಾಟಿದಾರ್ ಪ್ರಾಬಲ್ಯವಿರುವ ಮೊರ್ಬಿ ವಿಧಾನಸಭಾ ಕ್ಷೇತ್ರದಿಂದ ಹಾಲಿ ಶಾಸಕ ಬ್ರಿಜೇಶ್ ಮಿರ್ಜಾ ಬದಲಿಗೆ ಮಾಜಿ ಶಾಸಕ ಕಾಂತಿಲಾಲ್ ಅಮೃತಿಯ ಅವರನ್ನು ಬಿಜೆಪಿ ಕಣಕ್ಕಿಳಿಸಿತ್ತು.

ಗುಜರಾತಿನ ಶತಮಾನದಷ್ಟು ಹಳೆಯದಾದ ಸೇತುವೆಯ ನವೀಕರಣ ನಡೆಸಿದ ಖಾಸಗಿ ಸಂಸ್ಥೆಯು ಕೆಲವು ಹಳೆಯ ತಂತಿಗಳನ್ನೂ ತನ್ನ ಏಳು ತಿಂಗಳ ನವೀಕರಣದ ಸಮಯದಲ್ಲಿ ಬದಲಿಸಿಲ್ಲ ಎಂದು ಮೂಲಗಳು ತಿಳಿಸಿದ್ದವು.

‘ಸೇತುವೆಯನ್ನು ನವೀಕರಿಸಿದ ಗುಜರಾತ್ ಮೂಲದ ಗಡಿಯಾರ ತಯಾರಿಕಾ ಒರೆವಾ ಸಂಸ್ಥೆಗೆ ಮಾರ್ಚ್‌ನಲ್ಲಿ ಮೋರ್ಬಿ ನಗರ ಪುರಸಭೆಯಿಂದ ಗುತ್ತಿಗೆ ನೀಡಲಾಯಿತು. ಆದರೆ ಯಾವುದೇ ಟೆಂಡರ್ ನೀಡುವ ಕ್ರಮ ಜರುಗಿಸಿರಲಿಲ್ಲ’ ಎಂದು ಒಪ್ಪಂದದ ಕಡತಗಳು ಹೇಳುತ್ತಿವೆ. ಸೇತುವೆಯಲ್ಲಿ ಕಟ್ಟಲಾಗಿದ್ದ ಕೆಲವು ಹಳೆಯ ತಂತಿಗಳನ್ನು ನವೀಕರಣದ ನಂತರವೂ ಉಳಿಸಿಕೊಳ್ಳಲಾಗಿದೆ ಎಂಬ ಸಂಗತಿ ಹೊರಬಿದ್ದಿತ್ತು.

“ಸೇತುವೆಯನ್ನು ಮತ್ತೆ ತೆರೆಯುವ ಬಗ್ಗೆ ಓರೆವಾ ಸಂಸ್ಥೆ ಸ್ಥಳೀಯ ಅಧಿಕಾರಿಗಳಿಗೆ ತಿಳಿಸಿರಲಿಲ್ಲ. ಹಾಗೆ ಮಾಡಲು ಕಂಪನಿಗೆ ಫಿಟ್‌ನೆಸ್ ಪ್ರಮಾಣಪತ್ರವನ್ನು ನೀಡಲಾಗಿಲ್ಲ” ಎಂದು ಪುರಸಭೆಯ ಮುಖ್ಯಾಧಿಕಾರಿ ಸಂದೀಪ್‌ಸಿಂಗ್ ಝಾಲಾ ಹೇಳಿದ್ದರು.

ಓರೆವಾ ವ್ಯವಸ್ಥಾಪಕ ನಿರ್ದೇಶಕ ಜಯಸುಖ್ಭಾಯ್ ಪಟೇಲ್ ಮಾತನಾಡುತ್ತಾ, “ಕಂಪನಿಯು ₹ 2 ಕೋಟಿ ವೆಚ್ಚದಲ್ಲಿ 100 ರಷ್ಟು ನವೀಕರಣವನ್ನು ನೆರವೇರಿಸಿದೆ” ಎಂದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...