Homeಮುಖಪುಟತೂಗು ಸೇತುವೆ ದುರಂತದ ಮೊರ್ಬಿಯಲ್ಲಿ ಗೆಲುವಿನತ್ತ ಬಿಜೆಪಿ ಅಭ್ಯರ್ಥಿ

ತೂಗು ಸೇತುವೆ ದುರಂತದ ಮೊರ್ಬಿಯಲ್ಲಿ ಗೆಲುವಿನತ್ತ ಬಿಜೆಪಿ ಅಭ್ಯರ್ಥಿ

- Advertisement -
- Advertisement -

ಗುಜರಾತ್‌ನಲ್ಲಿ ಬಿಜೆಪಿ ಅಭೂತಪೂರ್ವ ದಿಗ್ವಿಜಯ ಸಾಧಿಸುತ್ತಿದ್ದು ಮೊರ್ಬಿಯಲ್ಲಿ ಗೆಲುವಿನತ್ತ ಮುನ್ನುಗ್ಗುತ್ತಿದೆ. ಭೀಕರ ಸೇತುವೆ ಕುಸಿತದಿಂದಾಗಿ 130ಕ್ಕೂ ಹೆಚ್ಚು ಜನರ ದುರ್ಮಣದ ಮೂಲಕ ಸುದ್ದಿಯಾಗಿದ್ದ ಮೊರ್ಬಿಯಲ್ಲಿ ಬಿಜೆಪಿ ಗೆಲುವಿನತ್ತ ಹೆಜ್ಜೆ ಇರಿಸಿದೆ.

ಅಕ್ಟೋಬರ್ 30ರಂದು ಘಟಿಸಿದ ಭೀಕರ ಸೇತುವೆ ಕುಸಿತದಲ್ಲಿ 130ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. ಸೇತುವೆ ದುರಂತದ ನಂತರ ಗಮನ ಸೆಳೆದಿದ್ದ ಕ್ಷೇತ್ರದಲ್ಲಿ ಐದು ಬಾರಿ ಶಾಸಕರಾಗಿರುವ ಬಿಜೆಪಿಯ ಕಾಂತಿಭಾಯಿ ಅಮೃತಿಯಾ ಅವರು ಗೆಲುವಿನ ಹಾದಿಯಲ್ಲಿದ್ದಾರೆ.

ಸೇತುವೆ ದುರಸ್ತಿ ಮತ್ತು ನಿರ್ವಹಣೆಯ ಕೆಲಸವನ್ನು ಖಾಸಗಿ ಸಂಸ್ಥೆಗೆ ವಹಿಸುವಾಗ ನಿಯಮಗಳನ್ನು ಸ್ಥಳೀಯ ಆಡಳಿತ ಉಲ್ಲಂಘಿಸಿದೆ ಎಂದು ಆರೋಪಿಸಲಾಗಿತ್ತು. ಸೇತುವೆ ದುರಂತದ ಬಳಿಕ ಅಮೃತಿಯಾ ಅವರು ರಕ್ಷಣಾ ಕಾರ್ಯಾಚರಣೆಯಲ್ಲಿ ಸಹಾಯ ಮಾಡಲು ಓಡಾಡುತ್ತಿದ್ದ ವಿಡಿಯೊ ವೈರಲ್ ಆಗಿತ್ತು. ಜಯಂತಿ ಪಟೇಲ್ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು, ಆಮ್ ಆದ್ಮಿ ಪಕ್ಷವು ಪಂಕಜ್ ರಣಸಾರಿಯಾ ಅವರನ್ನು ಕಣಕ್ಕಿಳಿಸಿದೆ.

ಪ್ರಾಥಮಿಕವಾಗಿ ಗಡಿಯಾರ ತಯಾರಕ ಸಂಸ್ಥೆ ಎಂದು ಕರೆಯಲ್ಪಡುವ ಒರೆವಾ ಕಂಪನಿಗೆ ವಸಾಹತುಶಾಹಿ ಕಾಲದ ಸೇತುವೆಯ ದುರಸ್ತಿ ಕೆಲಸವನ್ನು ವಹಿಸಲಾಗಿತ್ತು. ಆದರೆ ಕಂಪನಿಯ ಮಾಲೀಕರನ್ನು ಇನ್ನೂ ಬಂಧಿಸಬೇಕಿದೆ.

ಪಾಟಿದಾರ್ ಪ್ರಾಬಲ್ಯವಿರುವ ಮೊರ್ಬಿ ವಿಧಾನಸಭಾ ಕ್ಷೇತ್ರದಿಂದ ಹಾಲಿ ಶಾಸಕ ಬ್ರಿಜೇಶ್ ಮಿರ್ಜಾ ಬದಲಿಗೆ ಮಾಜಿ ಶಾಸಕ ಕಾಂತಿಲಾಲ್ ಅಮೃತಿಯ ಅವರನ್ನು ಬಿಜೆಪಿ ಕಣಕ್ಕಿಳಿಸಿತ್ತು.

ಗುಜರಾತಿನ ಶತಮಾನದಷ್ಟು ಹಳೆಯದಾದ ಸೇತುವೆಯ ನವೀಕರಣ ನಡೆಸಿದ ಖಾಸಗಿ ಸಂಸ್ಥೆಯು ಕೆಲವು ಹಳೆಯ ತಂತಿಗಳನ್ನೂ ತನ್ನ ಏಳು ತಿಂಗಳ ನವೀಕರಣದ ಸಮಯದಲ್ಲಿ ಬದಲಿಸಿಲ್ಲ ಎಂದು ಮೂಲಗಳು ತಿಳಿಸಿದ್ದವು.

‘ಸೇತುವೆಯನ್ನು ನವೀಕರಿಸಿದ ಗುಜರಾತ್ ಮೂಲದ ಗಡಿಯಾರ ತಯಾರಿಕಾ ಒರೆವಾ ಸಂಸ್ಥೆಗೆ ಮಾರ್ಚ್‌ನಲ್ಲಿ ಮೋರ್ಬಿ ನಗರ ಪುರಸಭೆಯಿಂದ ಗುತ್ತಿಗೆ ನೀಡಲಾಯಿತು. ಆದರೆ ಯಾವುದೇ ಟೆಂಡರ್ ನೀಡುವ ಕ್ರಮ ಜರುಗಿಸಿರಲಿಲ್ಲ’ ಎಂದು ಒಪ್ಪಂದದ ಕಡತಗಳು ಹೇಳುತ್ತಿವೆ. ಸೇತುವೆಯಲ್ಲಿ ಕಟ್ಟಲಾಗಿದ್ದ ಕೆಲವು ಹಳೆಯ ತಂತಿಗಳನ್ನು ನವೀಕರಣದ ನಂತರವೂ ಉಳಿಸಿಕೊಳ್ಳಲಾಗಿದೆ ಎಂಬ ಸಂಗತಿ ಹೊರಬಿದ್ದಿತ್ತು.

“ಸೇತುವೆಯನ್ನು ಮತ್ತೆ ತೆರೆಯುವ ಬಗ್ಗೆ ಓರೆವಾ ಸಂಸ್ಥೆ ಸ್ಥಳೀಯ ಅಧಿಕಾರಿಗಳಿಗೆ ತಿಳಿಸಿರಲಿಲ್ಲ. ಹಾಗೆ ಮಾಡಲು ಕಂಪನಿಗೆ ಫಿಟ್‌ನೆಸ್ ಪ್ರಮಾಣಪತ್ರವನ್ನು ನೀಡಲಾಗಿಲ್ಲ” ಎಂದು ಪುರಸಭೆಯ ಮುಖ್ಯಾಧಿಕಾರಿ ಸಂದೀಪ್‌ಸಿಂಗ್ ಝಾಲಾ ಹೇಳಿದ್ದರು.

ಓರೆವಾ ವ್ಯವಸ್ಥಾಪಕ ನಿರ್ದೇಶಕ ಜಯಸುಖ್ಭಾಯ್ ಪಟೇಲ್ ಮಾತನಾಡುತ್ತಾ, “ಕಂಪನಿಯು ₹ 2 ಕೋಟಿ ವೆಚ್ಚದಲ್ಲಿ 100 ರಷ್ಟು ನವೀಕರಣವನ್ನು ನೆರವೇರಿಸಿದೆ” ಎಂದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...