Homeಮುಖಪುಟತೂಗು ಸೇತುವೆ ದುರಂತದ ಮೊರ್ಬಿಯಲ್ಲಿ ಗೆಲುವಿನತ್ತ ಬಿಜೆಪಿ ಅಭ್ಯರ್ಥಿ

ತೂಗು ಸೇತುವೆ ದುರಂತದ ಮೊರ್ಬಿಯಲ್ಲಿ ಗೆಲುವಿನತ್ತ ಬಿಜೆಪಿ ಅಭ್ಯರ್ಥಿ

- Advertisement -
- Advertisement -

ಗುಜರಾತ್‌ನಲ್ಲಿ ಬಿಜೆಪಿ ಅಭೂತಪೂರ್ವ ದಿಗ್ವಿಜಯ ಸಾಧಿಸುತ್ತಿದ್ದು ಮೊರ್ಬಿಯಲ್ಲಿ ಗೆಲುವಿನತ್ತ ಮುನ್ನುಗ್ಗುತ್ತಿದೆ. ಭೀಕರ ಸೇತುವೆ ಕುಸಿತದಿಂದಾಗಿ 130ಕ್ಕೂ ಹೆಚ್ಚು ಜನರ ದುರ್ಮಣದ ಮೂಲಕ ಸುದ್ದಿಯಾಗಿದ್ದ ಮೊರ್ಬಿಯಲ್ಲಿ ಬಿಜೆಪಿ ಗೆಲುವಿನತ್ತ ಹೆಜ್ಜೆ ಇರಿಸಿದೆ.

ಅಕ್ಟೋಬರ್ 30ರಂದು ಘಟಿಸಿದ ಭೀಕರ ಸೇತುವೆ ಕುಸಿತದಲ್ಲಿ 130ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. ಸೇತುವೆ ದುರಂತದ ನಂತರ ಗಮನ ಸೆಳೆದಿದ್ದ ಕ್ಷೇತ್ರದಲ್ಲಿ ಐದು ಬಾರಿ ಶಾಸಕರಾಗಿರುವ ಬಿಜೆಪಿಯ ಕಾಂತಿಭಾಯಿ ಅಮೃತಿಯಾ ಅವರು ಗೆಲುವಿನ ಹಾದಿಯಲ್ಲಿದ್ದಾರೆ.

ಸೇತುವೆ ದುರಸ್ತಿ ಮತ್ತು ನಿರ್ವಹಣೆಯ ಕೆಲಸವನ್ನು ಖಾಸಗಿ ಸಂಸ್ಥೆಗೆ ವಹಿಸುವಾಗ ನಿಯಮಗಳನ್ನು ಸ್ಥಳೀಯ ಆಡಳಿತ ಉಲ್ಲಂಘಿಸಿದೆ ಎಂದು ಆರೋಪಿಸಲಾಗಿತ್ತು. ಸೇತುವೆ ದುರಂತದ ಬಳಿಕ ಅಮೃತಿಯಾ ಅವರು ರಕ್ಷಣಾ ಕಾರ್ಯಾಚರಣೆಯಲ್ಲಿ ಸಹಾಯ ಮಾಡಲು ಓಡಾಡುತ್ತಿದ್ದ ವಿಡಿಯೊ ವೈರಲ್ ಆಗಿತ್ತು. ಜಯಂತಿ ಪಟೇಲ್ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು, ಆಮ್ ಆದ್ಮಿ ಪಕ್ಷವು ಪಂಕಜ್ ರಣಸಾರಿಯಾ ಅವರನ್ನು ಕಣಕ್ಕಿಳಿಸಿದೆ.

ಪ್ರಾಥಮಿಕವಾಗಿ ಗಡಿಯಾರ ತಯಾರಕ ಸಂಸ್ಥೆ ಎಂದು ಕರೆಯಲ್ಪಡುವ ಒರೆವಾ ಕಂಪನಿಗೆ ವಸಾಹತುಶಾಹಿ ಕಾಲದ ಸೇತುವೆಯ ದುರಸ್ತಿ ಕೆಲಸವನ್ನು ವಹಿಸಲಾಗಿತ್ತು. ಆದರೆ ಕಂಪನಿಯ ಮಾಲೀಕರನ್ನು ಇನ್ನೂ ಬಂಧಿಸಬೇಕಿದೆ.

ಪಾಟಿದಾರ್ ಪ್ರಾಬಲ್ಯವಿರುವ ಮೊರ್ಬಿ ವಿಧಾನಸಭಾ ಕ್ಷೇತ್ರದಿಂದ ಹಾಲಿ ಶಾಸಕ ಬ್ರಿಜೇಶ್ ಮಿರ್ಜಾ ಬದಲಿಗೆ ಮಾಜಿ ಶಾಸಕ ಕಾಂತಿಲಾಲ್ ಅಮೃತಿಯ ಅವರನ್ನು ಬಿಜೆಪಿ ಕಣಕ್ಕಿಳಿಸಿತ್ತು.

ಗುಜರಾತಿನ ಶತಮಾನದಷ್ಟು ಹಳೆಯದಾದ ಸೇತುವೆಯ ನವೀಕರಣ ನಡೆಸಿದ ಖಾಸಗಿ ಸಂಸ್ಥೆಯು ಕೆಲವು ಹಳೆಯ ತಂತಿಗಳನ್ನೂ ತನ್ನ ಏಳು ತಿಂಗಳ ನವೀಕರಣದ ಸಮಯದಲ್ಲಿ ಬದಲಿಸಿಲ್ಲ ಎಂದು ಮೂಲಗಳು ತಿಳಿಸಿದ್ದವು.

‘ಸೇತುವೆಯನ್ನು ನವೀಕರಿಸಿದ ಗುಜರಾತ್ ಮೂಲದ ಗಡಿಯಾರ ತಯಾರಿಕಾ ಒರೆವಾ ಸಂಸ್ಥೆಗೆ ಮಾರ್ಚ್‌ನಲ್ಲಿ ಮೋರ್ಬಿ ನಗರ ಪುರಸಭೆಯಿಂದ ಗುತ್ತಿಗೆ ನೀಡಲಾಯಿತು. ಆದರೆ ಯಾವುದೇ ಟೆಂಡರ್ ನೀಡುವ ಕ್ರಮ ಜರುಗಿಸಿರಲಿಲ್ಲ’ ಎಂದು ಒಪ್ಪಂದದ ಕಡತಗಳು ಹೇಳುತ್ತಿವೆ. ಸೇತುವೆಯಲ್ಲಿ ಕಟ್ಟಲಾಗಿದ್ದ ಕೆಲವು ಹಳೆಯ ತಂತಿಗಳನ್ನು ನವೀಕರಣದ ನಂತರವೂ ಉಳಿಸಿಕೊಳ್ಳಲಾಗಿದೆ ಎಂಬ ಸಂಗತಿ ಹೊರಬಿದ್ದಿತ್ತು.

“ಸೇತುವೆಯನ್ನು ಮತ್ತೆ ತೆರೆಯುವ ಬಗ್ಗೆ ಓರೆವಾ ಸಂಸ್ಥೆ ಸ್ಥಳೀಯ ಅಧಿಕಾರಿಗಳಿಗೆ ತಿಳಿಸಿರಲಿಲ್ಲ. ಹಾಗೆ ಮಾಡಲು ಕಂಪನಿಗೆ ಫಿಟ್‌ನೆಸ್ ಪ್ರಮಾಣಪತ್ರವನ್ನು ನೀಡಲಾಗಿಲ್ಲ” ಎಂದು ಪುರಸಭೆಯ ಮುಖ್ಯಾಧಿಕಾರಿ ಸಂದೀಪ್‌ಸಿಂಗ್ ಝಾಲಾ ಹೇಳಿದ್ದರು.

ಓರೆವಾ ವ್ಯವಸ್ಥಾಪಕ ನಿರ್ದೇಶಕ ಜಯಸುಖ್ಭಾಯ್ ಪಟೇಲ್ ಮಾತನಾಡುತ್ತಾ, “ಕಂಪನಿಯು ₹ 2 ಕೋಟಿ ವೆಚ್ಚದಲ್ಲಿ 100 ರಷ್ಟು ನವೀಕರಣವನ್ನು ನೆರವೇರಿಸಿದೆ” ಎಂದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...