Homeಮುಖಪುಟಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾವಣೆ: ವಿವಾದ ಸೃಷ್ಟಿಸಿದ ಬಿಜೆಪಿ ನಾಯಕಿ

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾವಣೆ: ವಿವಾದ ಸೃಷ್ಟಿಸಿದ ಬಿಜೆಪಿ ನಾಯಕಿ

- Advertisement -
- Advertisement -

ದೇಶದ ಹಿತಾಸಕ್ತಿಯಿಂದ ಹಲವಾರು ಕಠಿಣ ನಿರ್ಧಾರಗಳನ್ನು ಕೈಗೊಳ್ಳಬೇಕಿದ್ದು, ಅದಕ್ಕಾಗಿ ಸಂವಿಧಾನಕ್ಕೆ ಬದಲಾವಣೆ ಮಾಡಬೇಕಿದೆ. ನಾವು ಸಂವಿಧಾನ ಬದಲಾವಣೆ ಮಾಡಬೇಕಿದ್ದರೆ ಲೋಕಸಭೆ ಹಾಗೂ ರಾಜ್ಯಸಭೆಗಳೆರಡರಲ್ಲೂ ಅಂಗೀಕಾರದ ಅಗತ್ಯವಿದೆ, ಅದಕ್ಕೆ ಬಹುಮತ ಬೇಕಾಗಿದೆ ಎಂದು ಬಿಜೆಪಿ ನಾಯಕಿ ಜ್ಯೋತಿ ಮಿರ್ಧಾ ಸಂವಿಧಾನ ಬದಲಾಯಿಸುವ ಬಗ್ಗೆ ಹೇಳಿಕೆಯನ್ನು ನೀಡಿ ವಿವಾದವನ್ನು ಸೃಷ್ಟಿಸಿದ್ದಾರೆ.

ಮಾರ್ಚ್ 30ರಂದು ರಾಜಸ್ಥಾನದ ರಾಜಾಶನ ನಗೌರ್‌ನಲ್ಲಿ ಮಾತನಾಡಿ ಬಿಜೆಪಿ ನಾಯಕಿ ಜ್ಯೋತಿ ಮಿರ್ಧಾ ಸಂವಿಧಾನ ಬದಲಾಯಿಸುವ ಬಗ್ಗೆ ಉಲ್ಲೇಖಿಸಿದ್ದು, ಸಂವಿಧಾನವನ್ನು ಬದಲಾಯಿಸುವ ಕುರಿತು ಬಿಜೆಪಿ ನಾಯಕಿಯ ಹೇಳಿಕೆ ಪ್ರತಿಪಕ್ಷಗಳ ಟೀಕೆಗೆ ಕಾರಣವಾಗಿದೆ. ಇದಲ್ಲದೆ ಇದು ಬಿಜೆಪಿಯ ಉದ್ದೇಶಪೂರ್ವಕ ಕಾರ್ಯತಂತ್ರದ ಭಾಗವಾಗಿದೆ ಎಂದು ವರದಿಯಾಗಿದೆ.

ಜ್ಯೋತಿ ಮಿರ್ಧಾ ಭಾಷಣವನ್ನು ಎಕ್ಸ್‌ನಲ್ಲಿ ಹಂಚಿಕೊಂಡ ಕಾಂಗ್ರೆಸ್, “ಇದು ರಾಜಸ್ಥಾನದ ನಾಗೌರ್‌ನಿಂದ ಸ್ಪರ್ಧಿಸುತ್ತಿರುವ ಬಿಜೆಪಿ ಅಭ್ಯರ್ಥಿ ಜ್ಯೋತಿ ಮಿರ್ಧಾ, ಸಂವಿಧಾನವನ್ನು ಬದಲಾಯಿಸಲು ನಮಗೆ ಉಭಯ ಸದನಗಳಲ್ಲಿ ಅತ್ಯಧಿಕ ಬಹುಮತ ಬೇಕು ಎಂದು ಜ್ಯೋತಿ ಮಿರ್ಧಾ ಹೇಳುತ್ತಾರೆ. ಲೋಕಸಭೆ ಚುನಾವಣೆಯಲ್ಲಿ 400 ಸ್ಥಾನ ಪಡೆದರೆ ಸಂವಿಧಾನ ಬದಲಿಸುತ್ತೇವೆ ಎಂದು ಬಿಜೆಪಿ ಸಂಸದ ಅನಂತ ಹೆಗಡೆ ಕೂಡ ಹೇಳಿದ್ದಾರೆ. ಬಿಜೆಪಿ ಮತ್ತು ಪ್ರಧಾನಿ ಮೋದಿಯವರು ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ದ್ವೇಷಿಸುತ್ತಾರೆ ಎಂಬುದು ಈ ಹೇಳಿಕೆಗಳಿಂದ ಸ್ಪಷ್ಟವಾಗಿದೆ. ಬಾಬಾಸಾಹೇಬರು ನೀಡಿದ ಸಂವಿಧಾನವನ್ನು ರದ್ದುಪಡಿಸುವ ಮೂಲಕ ಬಿಜೆಪಿ ಜನರ ಹಕ್ಕುಗಳನ್ನು ಕಿತ್ತುಕೊಳ್ಳಲು ಹೊರಟಿದೆ ಎಂದು ಹೇಳಿದೆ.

ಲೋಕಸಭೆಯಲ್ಲಿ, ಬಿಜೆಪಿ ಮತ್ತು ಎನ್‌ಡಿಎಗೆ ಭಾರಿ ಜನಾದೇಶವಿದೆ, ಆದರೆ ರಾಜ್ಯಸಭೆಯಲ್ಲಿ ನಮಗೆ ಇನ್ನೂ ಬಹುಮತವಿಲ್ಲ. ಎನ್‌ಡಿಎ ಸರ್ಕಾರ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದರೆ ನಾವು ಸಂವಿಧಾನಕ್ಕೆ ತಿದ್ದುಪಡಿ ಮಾಡಬೇಕಿದ್ದರೆ ಲೋಕಸಭೆ ಹಾಗೂ ರಾಜ್ಯಸಭೆಗಳೆರಡರಲ್ಲೂ ಅಂಗೀಕಾರದ ಅಗತ್ಯವಿದೆ ಎಂದು ಮಿರ್ಧಾ ಹೇಳುವುದನ್ನು ಕೇಳಬಹುದು.

ಕಾಂಗ್ರೆಸ್ ಸಂಸದ ಶಶಿ ತರೂರ್ ಮಿರ್ಧಾ ಹೇಳಿಕೆಗೆ ಪ್ರತಿಕ್ರಿಯಿಸಿ, ಅನಂತ್ ಕುಮಾರ್‌ ಹೆಗಡೆ ಸಂವಿಧಾನ ಬದಲಾಯಿಸುವ ಬಗ್ಗೆ ಹೇಳಿದರು, ಬಿಜೆಪಿ ನಾಯಕರು ಅಭ್ಯರ್ಥಿ ಪಟ್ಟಿಯಿಂದ ಅವರನ್ನು ಕೈಬಿಟ್ಟಿದ್ದರು. ಈಗ ಮತ್ತೊಬ್ಬ ಬಿಜೆಪಿ ಅಭ್ಯರ್ಥಿ ಬಹಿರಂಗವಾಗಿ ಬಿಜೆಪಿಯ ಉದ್ದೇಶ ಸಂವಿಧಾನವನ್ನು ಬದಲಿಸುವುದಾಗಿದೆ ಎಂದು ಹೇಳಿದ್ದಾರೆ. ಸತ್ಯವನ್ನು ಬಹಿರಂಗಪಡಿಸಿದ್ದಕ್ಕಾಗಿ ಬಿಜೆಪಿ ಇನ್ನೂ ಎಷ್ಟು ಅಭ್ಯರ್ಥಿಗಳಿಗೆ ಟಿಕೆಟ್‌ ನಿರಾಕರಿಸಬಹುದು ಎಂದು ಪ್ರಶ್ನಿಸಿದ್ದಾರೆ.

ತರೂರ್ ಅವರ ಟ್ವೀಟ್‌ನ್ನು ಉಲ್ಲೇಖಿಸಿ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಪ್ರತಿಕ್ರಿಯೆ ನೀಡಿದ್ದು, ಇವೆಲ್ಲವನ್ನೂ ಮಹಾಸೂತ್ರದಾರರೇ ಆಯೋಜಿಸಿದ್ದಾರೆ. ಇದು ಉದ್ದೇಶಪೂರ್ವಕ ತಂತ್ರವಾಗಿದೆ ಎಂದು ಹೇಳಿದ್ದಾರೆ.

ಈ ಕ್ಷೇತ್ರದಲ್ಲಿ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ‘ರಾಷ್ಟ್ರೀಯ ಲೋಕತಾಂತ್ರಿಕ ಪಕ್ಷದ ಮುಖ್ಯಸ್ಥ ಹನುಮಾನ್ ಬೇನಿವಾಲ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಬಾಬಾಸಾಹೇಬರ ಸಂವಿಧಾನವನ್ನು ಮುಗಿಸಲು ಬಿಜೆಪಿ ಮುಂದಾಗಿದೆ ಎಂಬುದನ್ನು ಈ ಹೇಳಿಕೆ ಸ್ಪಷ್ಟಪಡಿಸುತ್ತದೆ ಎಂದು ಹೇಳಿದ್ದಾರೆ.

1950ರಿಂದ ಸಂವಿಧಾನಕ್ಕೆ 106 ತಿದ್ದುಪಡಿಗಳನ್ನು ಮಾಡಲಾಗಿದೆ. ನಮ್ಮ ಪವಿತ್ರ ಸಂವಿಧಾನವು ಜೀವಂತ ದಾಖಲೆಯಾಗಿದೆ. ಜನರು ಮತ್ತು ದೇಶದ ಕಲ್ಯಾಣವನ್ನು ಪರಿಗಣಿಸಿ ಕಾಲಕಾಲಕ್ಕೆ ತಿದ್ದುಪಡಿ ಮಾಡಲಾಗುತ್ತದೆ ಎಂದು ಮಿರ್ಧಾ ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಇದನ್ನು ಓದಿ: ಮಹುವಾ ಮೊಯಿತ್ರಾ ವಿರುದ್ಧ ಮನಿ ಲಾಂಡರಿಂಗ್ ಕೇಸ್ ದಾಖಲಿಸಿದ ಜಾರಿ ನಿರ್ದೇಶನಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...