Homeಮುಖಪುಟಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾವಣೆ: ವಿವಾದ ಸೃಷ್ಟಿಸಿದ ಬಿಜೆಪಿ ನಾಯಕಿ

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾವಣೆ: ವಿವಾದ ಸೃಷ್ಟಿಸಿದ ಬಿಜೆಪಿ ನಾಯಕಿ

- Advertisement -
- Advertisement -

ದೇಶದ ಹಿತಾಸಕ್ತಿಯಿಂದ ಹಲವಾರು ಕಠಿಣ ನಿರ್ಧಾರಗಳನ್ನು ಕೈಗೊಳ್ಳಬೇಕಿದ್ದು, ಅದಕ್ಕಾಗಿ ಸಂವಿಧಾನಕ್ಕೆ ಬದಲಾವಣೆ ಮಾಡಬೇಕಿದೆ. ನಾವು ಸಂವಿಧಾನ ಬದಲಾವಣೆ ಮಾಡಬೇಕಿದ್ದರೆ ಲೋಕಸಭೆ ಹಾಗೂ ರಾಜ್ಯಸಭೆಗಳೆರಡರಲ್ಲೂ ಅಂಗೀಕಾರದ ಅಗತ್ಯವಿದೆ, ಅದಕ್ಕೆ ಬಹುಮತ ಬೇಕಾಗಿದೆ ಎಂದು ಬಿಜೆಪಿ ನಾಯಕಿ ಜ್ಯೋತಿ ಮಿರ್ಧಾ ಸಂವಿಧಾನ ಬದಲಾಯಿಸುವ ಬಗ್ಗೆ ಹೇಳಿಕೆಯನ್ನು ನೀಡಿ ವಿವಾದವನ್ನು ಸೃಷ್ಟಿಸಿದ್ದಾರೆ.

ಮಾರ್ಚ್ 30ರಂದು ರಾಜಸ್ಥಾನದ ರಾಜಾಶನ ನಗೌರ್‌ನಲ್ಲಿ ಮಾತನಾಡಿ ಬಿಜೆಪಿ ನಾಯಕಿ ಜ್ಯೋತಿ ಮಿರ್ಧಾ ಸಂವಿಧಾನ ಬದಲಾಯಿಸುವ ಬಗ್ಗೆ ಉಲ್ಲೇಖಿಸಿದ್ದು, ಸಂವಿಧಾನವನ್ನು ಬದಲಾಯಿಸುವ ಕುರಿತು ಬಿಜೆಪಿ ನಾಯಕಿಯ ಹೇಳಿಕೆ ಪ್ರತಿಪಕ್ಷಗಳ ಟೀಕೆಗೆ ಕಾರಣವಾಗಿದೆ. ಇದಲ್ಲದೆ ಇದು ಬಿಜೆಪಿಯ ಉದ್ದೇಶಪೂರ್ವಕ ಕಾರ್ಯತಂತ್ರದ ಭಾಗವಾಗಿದೆ ಎಂದು ವರದಿಯಾಗಿದೆ.

ಜ್ಯೋತಿ ಮಿರ್ಧಾ ಭಾಷಣವನ್ನು ಎಕ್ಸ್‌ನಲ್ಲಿ ಹಂಚಿಕೊಂಡ ಕಾಂಗ್ರೆಸ್, “ಇದು ರಾಜಸ್ಥಾನದ ನಾಗೌರ್‌ನಿಂದ ಸ್ಪರ್ಧಿಸುತ್ತಿರುವ ಬಿಜೆಪಿ ಅಭ್ಯರ್ಥಿ ಜ್ಯೋತಿ ಮಿರ್ಧಾ, ಸಂವಿಧಾನವನ್ನು ಬದಲಾಯಿಸಲು ನಮಗೆ ಉಭಯ ಸದನಗಳಲ್ಲಿ ಅತ್ಯಧಿಕ ಬಹುಮತ ಬೇಕು ಎಂದು ಜ್ಯೋತಿ ಮಿರ್ಧಾ ಹೇಳುತ್ತಾರೆ. ಲೋಕಸಭೆ ಚುನಾವಣೆಯಲ್ಲಿ 400 ಸ್ಥಾನ ಪಡೆದರೆ ಸಂವಿಧಾನ ಬದಲಿಸುತ್ತೇವೆ ಎಂದು ಬಿಜೆಪಿ ಸಂಸದ ಅನಂತ ಹೆಗಡೆ ಕೂಡ ಹೇಳಿದ್ದಾರೆ. ಬಿಜೆಪಿ ಮತ್ತು ಪ್ರಧಾನಿ ಮೋದಿಯವರು ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ದ್ವೇಷಿಸುತ್ತಾರೆ ಎಂಬುದು ಈ ಹೇಳಿಕೆಗಳಿಂದ ಸ್ಪಷ್ಟವಾಗಿದೆ. ಬಾಬಾಸಾಹೇಬರು ನೀಡಿದ ಸಂವಿಧಾನವನ್ನು ರದ್ದುಪಡಿಸುವ ಮೂಲಕ ಬಿಜೆಪಿ ಜನರ ಹಕ್ಕುಗಳನ್ನು ಕಿತ್ತುಕೊಳ್ಳಲು ಹೊರಟಿದೆ ಎಂದು ಹೇಳಿದೆ.

ಲೋಕಸಭೆಯಲ್ಲಿ, ಬಿಜೆಪಿ ಮತ್ತು ಎನ್‌ಡಿಎಗೆ ಭಾರಿ ಜನಾದೇಶವಿದೆ, ಆದರೆ ರಾಜ್ಯಸಭೆಯಲ್ಲಿ ನಮಗೆ ಇನ್ನೂ ಬಹುಮತವಿಲ್ಲ. ಎನ್‌ಡಿಎ ಸರ್ಕಾರ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದರೆ ನಾವು ಸಂವಿಧಾನಕ್ಕೆ ತಿದ್ದುಪಡಿ ಮಾಡಬೇಕಿದ್ದರೆ ಲೋಕಸಭೆ ಹಾಗೂ ರಾಜ್ಯಸಭೆಗಳೆರಡರಲ್ಲೂ ಅಂಗೀಕಾರದ ಅಗತ್ಯವಿದೆ ಎಂದು ಮಿರ್ಧಾ ಹೇಳುವುದನ್ನು ಕೇಳಬಹುದು.

ಕಾಂಗ್ರೆಸ್ ಸಂಸದ ಶಶಿ ತರೂರ್ ಮಿರ್ಧಾ ಹೇಳಿಕೆಗೆ ಪ್ರತಿಕ್ರಿಯಿಸಿ, ಅನಂತ್ ಕುಮಾರ್‌ ಹೆಗಡೆ ಸಂವಿಧಾನ ಬದಲಾಯಿಸುವ ಬಗ್ಗೆ ಹೇಳಿದರು, ಬಿಜೆಪಿ ನಾಯಕರು ಅಭ್ಯರ್ಥಿ ಪಟ್ಟಿಯಿಂದ ಅವರನ್ನು ಕೈಬಿಟ್ಟಿದ್ದರು. ಈಗ ಮತ್ತೊಬ್ಬ ಬಿಜೆಪಿ ಅಭ್ಯರ್ಥಿ ಬಹಿರಂಗವಾಗಿ ಬಿಜೆಪಿಯ ಉದ್ದೇಶ ಸಂವಿಧಾನವನ್ನು ಬದಲಿಸುವುದಾಗಿದೆ ಎಂದು ಹೇಳಿದ್ದಾರೆ. ಸತ್ಯವನ್ನು ಬಹಿರಂಗಪಡಿಸಿದ್ದಕ್ಕಾಗಿ ಬಿಜೆಪಿ ಇನ್ನೂ ಎಷ್ಟು ಅಭ್ಯರ್ಥಿಗಳಿಗೆ ಟಿಕೆಟ್‌ ನಿರಾಕರಿಸಬಹುದು ಎಂದು ಪ್ರಶ್ನಿಸಿದ್ದಾರೆ.

ತರೂರ್ ಅವರ ಟ್ವೀಟ್‌ನ್ನು ಉಲ್ಲೇಖಿಸಿ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಪ್ರತಿಕ್ರಿಯೆ ನೀಡಿದ್ದು, ಇವೆಲ್ಲವನ್ನೂ ಮಹಾಸೂತ್ರದಾರರೇ ಆಯೋಜಿಸಿದ್ದಾರೆ. ಇದು ಉದ್ದೇಶಪೂರ್ವಕ ತಂತ್ರವಾಗಿದೆ ಎಂದು ಹೇಳಿದ್ದಾರೆ.

ಈ ಕ್ಷೇತ್ರದಲ್ಲಿ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ‘ರಾಷ್ಟ್ರೀಯ ಲೋಕತಾಂತ್ರಿಕ ಪಕ್ಷದ ಮುಖ್ಯಸ್ಥ ಹನುಮಾನ್ ಬೇನಿವಾಲ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಬಾಬಾಸಾಹೇಬರ ಸಂವಿಧಾನವನ್ನು ಮುಗಿಸಲು ಬಿಜೆಪಿ ಮುಂದಾಗಿದೆ ಎಂಬುದನ್ನು ಈ ಹೇಳಿಕೆ ಸ್ಪಷ್ಟಪಡಿಸುತ್ತದೆ ಎಂದು ಹೇಳಿದ್ದಾರೆ.

1950ರಿಂದ ಸಂವಿಧಾನಕ್ಕೆ 106 ತಿದ್ದುಪಡಿಗಳನ್ನು ಮಾಡಲಾಗಿದೆ. ನಮ್ಮ ಪವಿತ್ರ ಸಂವಿಧಾನವು ಜೀವಂತ ದಾಖಲೆಯಾಗಿದೆ. ಜನರು ಮತ್ತು ದೇಶದ ಕಲ್ಯಾಣವನ್ನು ಪರಿಗಣಿಸಿ ಕಾಲಕಾಲಕ್ಕೆ ತಿದ್ದುಪಡಿ ಮಾಡಲಾಗುತ್ತದೆ ಎಂದು ಮಿರ್ಧಾ ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಇದನ್ನು ಓದಿ: ಮಹುವಾ ಮೊಯಿತ್ರಾ ವಿರುದ್ಧ ಮನಿ ಲಾಂಡರಿಂಗ್ ಕೇಸ್ ದಾಖಲಿಸಿದ ಜಾರಿ ನಿರ್ದೇಶನಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...