HomeUncategorizedಬಂಗಾಳದಲ್ಲಿ ಶಾಂತಿ ನೆಲೆಸಿರುವುದು ಬಿಜೆಪಿಗೆ ಸಹಿಸಲು ಸಾಧ್ಯವಿಲ್ಲ: ಮಮತಾ ಬ್ಯಾನರ್ಜಿ

ಬಂಗಾಳದಲ್ಲಿ ಶಾಂತಿ ನೆಲೆಸಿರುವುದು ಬಿಜೆಪಿಗೆ ಸಹಿಸಲು ಸಾಧ್ಯವಿಲ್ಲ: ಮಮತಾ ಬ್ಯಾನರ್ಜಿ

- Advertisement -
- Advertisement -

ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳ ಬಂಧನ ವಿಚಾರವು ಬೆಂಗಳೂರಿನಿಂದ ಬಂಗಾಳದ ಪೂರ್ವ ಮಿಡ್ನಾಪುರ ಜಿಲ್ಲೆಯವರೆಗೆ ತಲುಪಿದ್ದು, ರಾಜ್ಯದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಮತ್ತು ವಿರೋಧ ಪಕ್ಷವಾದ ಭಾರತೀಯ ಜನತಾ ಪಕ್ಷದ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ.

‘ಭಯೋತ್ಪಾದಕರಿಗೆ ಬಂಗಾಳ ಸುರಕ್ಷಿತ ಸ್ವರ್ಗ’ ಎಂಬ ಬಿಜೆಪಿ ಟೀಕೆಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿರುಗೇಟು ನೀಡಿದ್ದು, ಕೂಚ್ ಬೆಹಾರ್‌ನ ದಿನ್ಹಟಾದಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, “ಬಂಧಿತರು ಬಂಗಾಳದ ನಿವಾಸಿಗಳಲ್ಲ; ಅವರು ಇಲ್ಲಿ ಅಡಗಿಕೊಂಡಿದ್ದರು, ಎರಡು ಗಂಟೆಗಳಲ್ಲಿ ಅವರನ್ನು ಬಂಧಿಸಲಾಯಿತು” ಎಂದು ಹೇಳಿದರು.

ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ‘ಬಂಗಾಳದಲ್ಲಿ ಶಾಂತಿ ನೆಲೆಸಿದರೆ ಬಿಜೆಪಿಗೆ ಸಹಿಸಲು ಸಾಧ್ಯವಿಲ್ಲ; ಉತ್ತರ ಪ್ರದೇಶ ಸುರಕ್ಷಿತವೇ? ರಾಜಸ್ಥಾನ ಸುರಕ್ಷಿತವೇ? ಬಿಹಾರ ಸುರಕ್ಷಿತವೇ’ ಎಂದು ಅವರು ಸಭೆಯಲ್ಲಿ ನೆರೆದಿದ್ದ ಜನರನ್ನು ಪ್ರಶ್ನಿಸಿದರು.

ತೃಣಮೂಲ ಕಾಂಗ್ರೆಸ್ ಹಿರಿಯ ನಾಯಕ ಕುನಾಲ್ ಘೋಷ್ ಅವರು ಬಿಜೆಪಿಯ ದಾಳಿಗೆ ತಿರುಗೇಟು ನೀಡಿದ್ದು, ‘ ‘ರಾಷ್ಟ್ರೀಯ ತನಿಖಾ ಸಂಸ್ಥೆಯು ಈ ಕಾರ್ಯಾಚರಣೆಯಲ್ಲಿ ರಾಜ್ಯ ಪೊಲೀಸರ ಸಕ್ರಿಯ ಸಹಕಾರವನ್ನು ಸ್ವೀಕರಿಸಬೇಕಾಗಿದೆ” ಎಂದು ಸೂಚಿಸಿದರು.

“ಎನ್‌ಐಎ ಪತ್ರಿಕಾ ಪ್ರಕಟಣೆಯಲ್ಲಿ, ಅವರು ಮಾಡಿದ ಬಂಧನಗಳಲ್ಲಿ ರಾಜ್ಯ ಪೊಲೀಸರ ಸಹಕಾರವನ್ನು ಉಲ್ಲೇಖಿಸುತ್ತದೆ” ಎಂದು ಅವರು ಪ್ರತಿಪಾದಿಸಿದರು.

ಇಂದು ಬೆಳಗ್ಗೆ ಬಂಧಿಸಲ್ಪಟ್ಟ ವ್ಯಕ್ತಿಗಳಾದ ಮುಸ್ಸಾವಿರ್ ಹುಸೇನ್ ಶಾಝೇಬ್ ಮತ್ತು ಅಬ್ದುಲ್ ಮಥೀನ್ ತಾಹಾ  ಪ್ರಮುಖ ಸಂಚುಕೋರರು ಎನ್ನಲಾಗಿದೆ. ಶಾಝೇಬ್ ಬಾಂಬ್ ಅನ್ನು ಹಾಕಿದಾಗ ತಾಹಾ ಆತ ತಪ್ಪಿಸಿಕೊಳ್ಳಲು ನೆರವಾಗಿದ್ದ ಎಂದು ಆರೋಪಿಸಲಾಗಿದೆ. ಅವರನ್ನು ಪುರ್ಬಾ ಮೇದಿನಿಪುರ್ ಜಿಲ್ಲೆಯ ಕೋಲ್ಕತ್ತಾದಿಂದ 180 ಕಿಮೀ ದೂರದಲ್ಲಿರುವ ಕೊಂಟೈ ಎಂಬ ಸಣ್ಣ ನಗರಕ್ಕೆ ಕಳುಹಿಸಲಾಗಿತ್ತು.

ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಘೋಷ್, ಸುವೇಂದು ಅಧಿಕಾರಿ ಕುಟುಂಬ ಮತ್ತು ರಾಮೇಶ್ವರಂ ಕೆಫೆ ಬಾಂಬರ್‌ಗಳ ನಡುವಿನ ಸಂಪರ್ಕವನ್ನು ತನಿಖೆ ಮಾಡಲು ರಾಜ್ಯ ಅಧಿಕಾರಿಗಳಿಗೆ ಕರೆ ನೀಡಿದರು. ಏಕೆಂದರೆ, ಕೊಂಟೈ ನಗರವು ಸುವೇಂದು ಅವರ ಭದ್ರಕೋಟೆಯಾಗಿದೆ. “ಬಂಗಾಳ ಪೊಲೀಸರು ದೇಶವಿರೋಧಿ ಶಕ್ತಿಗಳನ್ನು ನಿಗ್ರಹಿಸುವಲ್ಲಿ ದೃಢವಾಗಿ ಉಳಿದಿದ್ದಾರೆ; ಇತರ ಏಜೆನ್ಸಿಗಳೊಂದಿಗೆ ಸಹಕರಿಸಲು ಯಾವಾಗಲೂ ಸಿದ್ಧರಾಗಿದ್ದಾರೆ” ಎಂದು ಅವರು ಹೇಳಿದರು.

ಇದನ್ನೂ ಓದಿ; ಮಾಂಸಹಾರ ಸೇವಿಸಿದ್ದ ವಿಪಕ್ಷ ನಾಯಕರನ್ನು ಮೊಘಲರಿಗೆ ಹೋಲಿಸಿದ ಪ್ರಧಾನಿ; ವೈಯಕ್ತಿಕ ಟೀಕೆಗಿಳಿದ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...