Homeಮುಖಪುಟಮುಂದಿನ 10 ವರ್ಷಗಳಲ್ಲಿ ಒಡಿಶಾವನ್ನು ಗೆಲ್ಲಲು ಬಿಜೆಪಿಗೆ ಸಾಧ್ಯವಿಲ್ಲ: ನವೀನ್ ಪಟ್ನಾಯಕ್

ಮುಂದಿನ 10 ವರ್ಷಗಳಲ್ಲಿ ಒಡಿಶಾವನ್ನು ಗೆಲ್ಲಲು ಬಿಜೆಪಿಗೆ ಸಾಧ್ಯವಿಲ್ಲ: ನವೀನ್ ಪಟ್ನಾಯಕ್

- Advertisement -
- Advertisement -

“ಜೂನ್‌ 10ನ್ನು ಮರೆತುಬಿಡಿ, ಮುಂದಿನ 10 ವರ್ಷಗಳಲ್ಲಿ ಒಡಿಶಾವನ್ನು ಗೆಲ್ಲಲು ಬಿಜೆಪಿಗೆ ಸಾಧ್ಯವಿಲ್ಲ” ಎಂದು ಪ್ರತಿಪಾದಿಸಿದ ಮುಖ್ಯಮಂತ್ರಿ ನವೀನ್ ಪಟ್ನಾಯಕ್, “ವಿಧಾನಸಭಾ ಚುನಾವಣೆಯ ನಂತರ ತಮ್ಮ ಬಿಜೆಡಿ ಸತತ ಆರನೇ ಬಾರಿಗೆ ಅಧಿಕಾರಕ್ಕೆ ಮರಳಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಜೂನ್ 10 ರಂದು ಭುವನೇಶ್ವರದಲ್ಲಿ “ಬಿಜೆಪಿ ಮುಖ್ಯಮಂತ್ರಿ” ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಹಿಂದಿನ ದಿನ ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಕ್ಕೆ ಪಟ್ನಾಯಕ್ ತಿರುಗೇಟು ಕೊಟ್ಟಿದ್ದಾರೆ.

“ಜೂನ್ 10 ರಂದು ಏನೂ ಆಗುವುದಿಲ್ಲ; ಮುಂದಿನ 10 ವರ್ಷಗಳಲ್ಲಿ ಬಿಜೆಪಿ ಜನರ ಹೃದಯವನ್ನು ಗೆಲ್ಲಲು ಸಾಧ್ಯವಾಗುವುದಿಲ್ಲ, ಜೂನ್ 10 ಅನ್ನು ಮರೆತುಬಿಡಿ. ಒಡಿಶಾದಲ್ಲಿ ಬಿಜೆಡಿ ಸತತ ಆರನೇ ಬಾರಿಗೆ ಸರ್ಕಾರ ರಚಿಸುತ್ತದೆ” ಎಂದು ಹೇಳಿದ್ದಾರೆ.

“ಬಿಜು ಪಟ್ನಾಯಕ್ ಅವರನ್ನು ಭಾರತ ರತ್ನ ಪ್ರಶಸ್ತಿಗೆ ಏಕೆ ಪರಿಗಣಿಸುತ್ತಿಲ್ಲ” ಎಂದು ಅವರು ಬಿಜೆಪಿಯನ್ನು ಪ್ರಶ್ನಿಸಿದರು.

“ಒಡಿಶಾದ ಅನೇಕ ವೀರ ಪುತ್ರರಿದ್ದಾರೆ, ಅವರಲ್ಲಿ ಕೆಲವರ ಬಗ್ಗೆ ನೀವು ಇಂದು ಮಾತನಾಡಿದ್ದೀರಿ. ಬಿಜು ಪಟ್ನಾಯಕ್ ಸೇರಿದಂತೆ ಅವರಲ್ಲಿ ಯಾರೂ ಭಾರತ ರತ್ನಕ್ಕೆ ಅರ್ಹರಲ್ಲವೇ?” ಎಂದರು.

2014 ಮತ್ತು 2019ರಲ್ಲಿ ಮೋದಿ-ಬಿಜೆಪಿ ಜನರಿಗೆ ನೀಡಿದ ಭರವಸೆಗಳನ್ನು ಒಡಿಶಾದ ಜನರು ನೆನಪಿಸಿಕೊಳ್ಳುತ್ತಾರೆ. ಅವರು ಕಳೆದ 24 ವರ್ಷಗಳಿಂದ ಬಿಜೆಡಿ ಸರ್ಕಾರವನ್ನು ಸಹ ನೋಡಿದ್ದಾರೆ ಎಂದು ಅವರು ಹೇಳಿದರು.

“2014 ಮತ್ತು 2019 ರಲ್ಲಿ ನೀವು ನೀಡಿದ ಭರವಸೆಗಳು ನಿಮಗೆ ನೆನಪಿದೆಯೇ? ಒಡಿಶಾದ ಜನರು ನಿಮ್ಮ ಭರವಸೆಯನ್ನು ನೆನಪಿಸಿಕೊಳ್ಳುತ್ತಾರೆ. ಅಗತ್ಯ ವಸ್ತುಗಳ ಬೆಲೆ ನಿಯಂತ್ರಣ, 2 ಕೋಟಿ ಉದ್ಯೋಗಗಳನ್ನು ಸೃಷ್ಟಿಸುವುದು, ಎಲ್‌ಪಿಜಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಕಡಿಮೆ ಮಾಡುವುದು ಮತ್ತು ದೂರದ ಪ್ರದೇಶಗಳಲ್ಲಿ ಮೊಬೈಲ್ ಸಂಪರ್ಕವನ್ನು ಒದಗಿಸುವುದು” ಎಂದು ಅವರು ಹೇಳಿದರು.

“ನೀವು ಒಡಿಶಾವನ್ನು ಚುನಾವಣೆ ಸಮಯದಲ್ಲಿ ಮಾತ್ರ ನೆನಪಿಸಿಕೊಳ್ಳುತ್ತೀರಿ ಮತ್ತು ಇದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ” ಎಂದು ಅವರು ಹೇಳಿದರು.

ಸಂಸ್ಕೃತವನ್ನು ಉತ್ತೇಜಿಸಲು ಕೇಂದ್ರದಿಂದ 1,000 ಕೋಟಿ ರೂ.ಗಳನ್ನು ನಿಗದಿಪಡಿಸಲಾಗಿದೆ, ಆದರೆ ಒಡಿಯಾ ಶಾಸ್ತ್ರೀಯ ಭಾಷೆಯಾದಾಗಲೂ ಹಣ ನೀಡಲಿಲ್ಲ ಎಂದು ಪಟ್ನಾಯಕ್ ಹೇಳಿದರು.

“ನಾನು ಶಾಸ್ತ್ರೀಯ ಒಡಿಸ್ಸಿ ಸಂಗೀತಕ್ಕೆ ಮಾನ್ಯತೆ ನೀಡುವಂತೆ ಪ್ರಸ್ತಾವನೆಗಳನ್ನು ಕಳುಹಿಸಿದ್ದೆ ಮತ್ತು ನೀವು ಅವುಗಳನ್ನು ಎರಡು ಬಾರಿ ತಿರಸ್ಕರಿಸಿದ್ದೀರಿ. ರಾಜ್ಯದ ರೈತರನ್ನು ಮತ್ತು ಎಂಎಸ್‌ಪಿ ದ್ವಿಗುಣಗೊಳಿಸುವ ಭರವಸೆಯನ್ನೂ ಪ್ರಧಾನಿ ಮರೆತಿದ್ದಾರೆ. ಒಡಿಶಾದ ಜನರನ್ನು ಗಮನದಲ್ಲಿಟ್ಟುಕೊಂಡು ಕರಾವಳಿ ಹೆದ್ದಾರಿ ನಿರ್ಮಿಸಬೇಕಿದ್ದ ನೀವು ಮತ್ತೆ ಈ ಯೋಜನೆಯನ್ನು ಮರೆತಿದ್ದೀರಿ” ಎಂದರು.

ಕಲ್ಲಿದ್ದಲು ಒಡಿಶಾದ ನೈಸರ್ಗಿಕ ಸಂಪತ್ತು ಎಂದು ಹೇಳಿದ ಪಟ್ನಾಯಕ್, “ಪ್ರಧಾನಿ ಅವರು 10 ವರ್ಷಗಳ ರಾಯಧನವನ್ನು ಪರಿಷ್ಕರಿಸಲು ಸಹ ಮರೆತಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ; ನನ್ನ ಬಂಧನದ ನಂತರ ಎಎಪಿ ಸರ್ಕಾರಗಳನ್ನು ಉರುಳಿಸುವುದು ಬಿಜೆಪಿಯ ಯೋಜನೆಯಾಗಿತ್ತು: ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...