Homeಮುಖಪುಟಮುಂದಿನ 10 ವರ್ಷಗಳಲ್ಲಿ ಒಡಿಶಾವನ್ನು ಗೆಲ್ಲಲು ಬಿಜೆಪಿಗೆ ಸಾಧ್ಯವಿಲ್ಲ: ನವೀನ್ ಪಟ್ನಾಯಕ್

ಮುಂದಿನ 10 ವರ್ಷಗಳಲ್ಲಿ ಒಡಿಶಾವನ್ನು ಗೆಲ್ಲಲು ಬಿಜೆಪಿಗೆ ಸಾಧ್ಯವಿಲ್ಲ: ನವೀನ್ ಪಟ್ನಾಯಕ್

- Advertisement -
- Advertisement -

“ಜೂನ್‌ 10ನ್ನು ಮರೆತುಬಿಡಿ, ಮುಂದಿನ 10 ವರ್ಷಗಳಲ್ಲಿ ಒಡಿಶಾವನ್ನು ಗೆಲ್ಲಲು ಬಿಜೆಪಿಗೆ ಸಾಧ್ಯವಿಲ್ಲ” ಎಂದು ಪ್ರತಿಪಾದಿಸಿದ ಮುಖ್ಯಮಂತ್ರಿ ನವೀನ್ ಪಟ್ನಾಯಕ್, “ವಿಧಾನಸಭಾ ಚುನಾವಣೆಯ ನಂತರ ತಮ್ಮ ಬಿಜೆಡಿ ಸತತ ಆರನೇ ಬಾರಿಗೆ ಅಧಿಕಾರಕ್ಕೆ ಮರಳಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಜೂನ್ 10 ರಂದು ಭುವನೇಶ್ವರದಲ್ಲಿ “ಬಿಜೆಪಿ ಮುಖ್ಯಮಂತ್ರಿ” ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಹಿಂದಿನ ದಿನ ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಕ್ಕೆ ಪಟ್ನಾಯಕ್ ತಿರುಗೇಟು ಕೊಟ್ಟಿದ್ದಾರೆ.

“ಜೂನ್ 10 ರಂದು ಏನೂ ಆಗುವುದಿಲ್ಲ; ಮುಂದಿನ 10 ವರ್ಷಗಳಲ್ಲಿ ಬಿಜೆಪಿ ಜನರ ಹೃದಯವನ್ನು ಗೆಲ್ಲಲು ಸಾಧ್ಯವಾಗುವುದಿಲ್ಲ, ಜೂನ್ 10 ಅನ್ನು ಮರೆತುಬಿಡಿ. ಒಡಿಶಾದಲ್ಲಿ ಬಿಜೆಡಿ ಸತತ ಆರನೇ ಬಾರಿಗೆ ಸರ್ಕಾರ ರಚಿಸುತ್ತದೆ” ಎಂದು ಹೇಳಿದ್ದಾರೆ.

“ಬಿಜು ಪಟ್ನಾಯಕ್ ಅವರನ್ನು ಭಾರತ ರತ್ನ ಪ್ರಶಸ್ತಿಗೆ ಏಕೆ ಪರಿಗಣಿಸುತ್ತಿಲ್ಲ” ಎಂದು ಅವರು ಬಿಜೆಪಿಯನ್ನು ಪ್ರಶ್ನಿಸಿದರು.

“ಒಡಿಶಾದ ಅನೇಕ ವೀರ ಪುತ್ರರಿದ್ದಾರೆ, ಅವರಲ್ಲಿ ಕೆಲವರ ಬಗ್ಗೆ ನೀವು ಇಂದು ಮಾತನಾಡಿದ್ದೀರಿ. ಬಿಜು ಪಟ್ನಾಯಕ್ ಸೇರಿದಂತೆ ಅವರಲ್ಲಿ ಯಾರೂ ಭಾರತ ರತ್ನಕ್ಕೆ ಅರ್ಹರಲ್ಲವೇ?” ಎಂದರು.

2014 ಮತ್ತು 2019ರಲ್ಲಿ ಮೋದಿ-ಬಿಜೆಪಿ ಜನರಿಗೆ ನೀಡಿದ ಭರವಸೆಗಳನ್ನು ಒಡಿಶಾದ ಜನರು ನೆನಪಿಸಿಕೊಳ್ಳುತ್ತಾರೆ. ಅವರು ಕಳೆದ 24 ವರ್ಷಗಳಿಂದ ಬಿಜೆಡಿ ಸರ್ಕಾರವನ್ನು ಸಹ ನೋಡಿದ್ದಾರೆ ಎಂದು ಅವರು ಹೇಳಿದರು.

“2014 ಮತ್ತು 2019 ರಲ್ಲಿ ನೀವು ನೀಡಿದ ಭರವಸೆಗಳು ನಿಮಗೆ ನೆನಪಿದೆಯೇ? ಒಡಿಶಾದ ಜನರು ನಿಮ್ಮ ಭರವಸೆಯನ್ನು ನೆನಪಿಸಿಕೊಳ್ಳುತ್ತಾರೆ. ಅಗತ್ಯ ವಸ್ತುಗಳ ಬೆಲೆ ನಿಯಂತ್ರಣ, 2 ಕೋಟಿ ಉದ್ಯೋಗಗಳನ್ನು ಸೃಷ್ಟಿಸುವುದು, ಎಲ್‌ಪಿಜಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಕಡಿಮೆ ಮಾಡುವುದು ಮತ್ತು ದೂರದ ಪ್ರದೇಶಗಳಲ್ಲಿ ಮೊಬೈಲ್ ಸಂಪರ್ಕವನ್ನು ಒದಗಿಸುವುದು” ಎಂದು ಅವರು ಹೇಳಿದರು.

“ನೀವು ಒಡಿಶಾವನ್ನು ಚುನಾವಣೆ ಸಮಯದಲ್ಲಿ ಮಾತ್ರ ನೆನಪಿಸಿಕೊಳ್ಳುತ್ತೀರಿ ಮತ್ತು ಇದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ” ಎಂದು ಅವರು ಹೇಳಿದರು.

ಸಂಸ್ಕೃತವನ್ನು ಉತ್ತೇಜಿಸಲು ಕೇಂದ್ರದಿಂದ 1,000 ಕೋಟಿ ರೂ.ಗಳನ್ನು ನಿಗದಿಪಡಿಸಲಾಗಿದೆ, ಆದರೆ ಒಡಿಯಾ ಶಾಸ್ತ್ರೀಯ ಭಾಷೆಯಾದಾಗಲೂ ಹಣ ನೀಡಲಿಲ್ಲ ಎಂದು ಪಟ್ನಾಯಕ್ ಹೇಳಿದರು.

“ನಾನು ಶಾಸ್ತ್ರೀಯ ಒಡಿಸ್ಸಿ ಸಂಗೀತಕ್ಕೆ ಮಾನ್ಯತೆ ನೀಡುವಂತೆ ಪ್ರಸ್ತಾವನೆಗಳನ್ನು ಕಳುಹಿಸಿದ್ದೆ ಮತ್ತು ನೀವು ಅವುಗಳನ್ನು ಎರಡು ಬಾರಿ ತಿರಸ್ಕರಿಸಿದ್ದೀರಿ. ರಾಜ್ಯದ ರೈತರನ್ನು ಮತ್ತು ಎಂಎಸ್‌ಪಿ ದ್ವಿಗುಣಗೊಳಿಸುವ ಭರವಸೆಯನ್ನೂ ಪ್ರಧಾನಿ ಮರೆತಿದ್ದಾರೆ. ಒಡಿಶಾದ ಜನರನ್ನು ಗಮನದಲ್ಲಿಟ್ಟುಕೊಂಡು ಕರಾವಳಿ ಹೆದ್ದಾರಿ ನಿರ್ಮಿಸಬೇಕಿದ್ದ ನೀವು ಮತ್ತೆ ಈ ಯೋಜನೆಯನ್ನು ಮರೆತಿದ್ದೀರಿ” ಎಂದರು.

ಕಲ್ಲಿದ್ದಲು ಒಡಿಶಾದ ನೈಸರ್ಗಿಕ ಸಂಪತ್ತು ಎಂದು ಹೇಳಿದ ಪಟ್ನಾಯಕ್, “ಪ್ರಧಾನಿ ಅವರು 10 ವರ್ಷಗಳ ರಾಯಧನವನ್ನು ಪರಿಷ್ಕರಿಸಲು ಸಹ ಮರೆತಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ; ನನ್ನ ಬಂಧನದ ನಂತರ ಎಎಪಿ ಸರ್ಕಾರಗಳನ್ನು ಉರುಳಿಸುವುದು ಬಿಜೆಪಿಯ ಯೋಜನೆಯಾಗಿತ್ತು: ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...