Homeಮುಖಪುಟಮುಂದಿನ 10 ವರ್ಷಗಳಲ್ಲಿ ಒಡಿಶಾವನ್ನು ಗೆಲ್ಲಲು ಬಿಜೆಪಿಗೆ ಸಾಧ್ಯವಿಲ್ಲ: ನವೀನ್ ಪಟ್ನಾಯಕ್

ಮುಂದಿನ 10 ವರ್ಷಗಳಲ್ಲಿ ಒಡಿಶಾವನ್ನು ಗೆಲ್ಲಲು ಬಿಜೆಪಿಗೆ ಸಾಧ್ಯವಿಲ್ಲ: ನವೀನ್ ಪಟ್ನಾಯಕ್

- Advertisement -
- Advertisement -

“ಜೂನ್‌ 10ನ್ನು ಮರೆತುಬಿಡಿ, ಮುಂದಿನ 10 ವರ್ಷಗಳಲ್ಲಿ ಒಡಿಶಾವನ್ನು ಗೆಲ್ಲಲು ಬಿಜೆಪಿಗೆ ಸಾಧ್ಯವಿಲ್ಲ” ಎಂದು ಪ್ರತಿಪಾದಿಸಿದ ಮುಖ್ಯಮಂತ್ರಿ ನವೀನ್ ಪಟ್ನಾಯಕ್, “ವಿಧಾನಸಭಾ ಚುನಾವಣೆಯ ನಂತರ ತಮ್ಮ ಬಿಜೆಡಿ ಸತತ ಆರನೇ ಬಾರಿಗೆ ಅಧಿಕಾರಕ್ಕೆ ಮರಳಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಜೂನ್ 10 ರಂದು ಭುವನೇಶ್ವರದಲ್ಲಿ “ಬಿಜೆಪಿ ಮುಖ್ಯಮಂತ್ರಿ” ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಹಿಂದಿನ ದಿನ ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಕ್ಕೆ ಪಟ್ನಾಯಕ್ ತಿರುಗೇಟು ಕೊಟ್ಟಿದ್ದಾರೆ.

“ಜೂನ್ 10 ರಂದು ಏನೂ ಆಗುವುದಿಲ್ಲ; ಮುಂದಿನ 10 ವರ್ಷಗಳಲ್ಲಿ ಬಿಜೆಪಿ ಜನರ ಹೃದಯವನ್ನು ಗೆಲ್ಲಲು ಸಾಧ್ಯವಾಗುವುದಿಲ್ಲ, ಜೂನ್ 10 ಅನ್ನು ಮರೆತುಬಿಡಿ. ಒಡಿಶಾದಲ್ಲಿ ಬಿಜೆಡಿ ಸತತ ಆರನೇ ಬಾರಿಗೆ ಸರ್ಕಾರ ರಚಿಸುತ್ತದೆ” ಎಂದು ಹೇಳಿದ್ದಾರೆ.

“ಬಿಜು ಪಟ್ನಾಯಕ್ ಅವರನ್ನು ಭಾರತ ರತ್ನ ಪ್ರಶಸ್ತಿಗೆ ಏಕೆ ಪರಿಗಣಿಸುತ್ತಿಲ್ಲ” ಎಂದು ಅವರು ಬಿಜೆಪಿಯನ್ನು ಪ್ರಶ್ನಿಸಿದರು.

“ಒಡಿಶಾದ ಅನೇಕ ವೀರ ಪುತ್ರರಿದ್ದಾರೆ, ಅವರಲ್ಲಿ ಕೆಲವರ ಬಗ್ಗೆ ನೀವು ಇಂದು ಮಾತನಾಡಿದ್ದೀರಿ. ಬಿಜು ಪಟ್ನಾಯಕ್ ಸೇರಿದಂತೆ ಅವರಲ್ಲಿ ಯಾರೂ ಭಾರತ ರತ್ನಕ್ಕೆ ಅರ್ಹರಲ್ಲವೇ?” ಎಂದರು.

2014 ಮತ್ತು 2019ರಲ್ಲಿ ಮೋದಿ-ಬಿಜೆಪಿ ಜನರಿಗೆ ನೀಡಿದ ಭರವಸೆಗಳನ್ನು ಒಡಿಶಾದ ಜನರು ನೆನಪಿಸಿಕೊಳ್ಳುತ್ತಾರೆ. ಅವರು ಕಳೆದ 24 ವರ್ಷಗಳಿಂದ ಬಿಜೆಡಿ ಸರ್ಕಾರವನ್ನು ಸಹ ನೋಡಿದ್ದಾರೆ ಎಂದು ಅವರು ಹೇಳಿದರು.

“2014 ಮತ್ತು 2019 ರಲ್ಲಿ ನೀವು ನೀಡಿದ ಭರವಸೆಗಳು ನಿಮಗೆ ನೆನಪಿದೆಯೇ? ಒಡಿಶಾದ ಜನರು ನಿಮ್ಮ ಭರವಸೆಯನ್ನು ನೆನಪಿಸಿಕೊಳ್ಳುತ್ತಾರೆ. ಅಗತ್ಯ ವಸ್ತುಗಳ ಬೆಲೆ ನಿಯಂತ್ರಣ, 2 ಕೋಟಿ ಉದ್ಯೋಗಗಳನ್ನು ಸೃಷ್ಟಿಸುವುದು, ಎಲ್‌ಪಿಜಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಕಡಿಮೆ ಮಾಡುವುದು ಮತ್ತು ದೂರದ ಪ್ರದೇಶಗಳಲ್ಲಿ ಮೊಬೈಲ್ ಸಂಪರ್ಕವನ್ನು ಒದಗಿಸುವುದು” ಎಂದು ಅವರು ಹೇಳಿದರು.

“ನೀವು ಒಡಿಶಾವನ್ನು ಚುನಾವಣೆ ಸಮಯದಲ್ಲಿ ಮಾತ್ರ ನೆನಪಿಸಿಕೊಳ್ಳುತ್ತೀರಿ ಮತ್ತು ಇದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ” ಎಂದು ಅವರು ಹೇಳಿದರು.

ಸಂಸ್ಕೃತವನ್ನು ಉತ್ತೇಜಿಸಲು ಕೇಂದ್ರದಿಂದ 1,000 ಕೋಟಿ ರೂ.ಗಳನ್ನು ನಿಗದಿಪಡಿಸಲಾಗಿದೆ, ಆದರೆ ಒಡಿಯಾ ಶಾಸ್ತ್ರೀಯ ಭಾಷೆಯಾದಾಗಲೂ ಹಣ ನೀಡಲಿಲ್ಲ ಎಂದು ಪಟ್ನಾಯಕ್ ಹೇಳಿದರು.

“ನಾನು ಶಾಸ್ತ್ರೀಯ ಒಡಿಸ್ಸಿ ಸಂಗೀತಕ್ಕೆ ಮಾನ್ಯತೆ ನೀಡುವಂತೆ ಪ್ರಸ್ತಾವನೆಗಳನ್ನು ಕಳುಹಿಸಿದ್ದೆ ಮತ್ತು ನೀವು ಅವುಗಳನ್ನು ಎರಡು ಬಾರಿ ತಿರಸ್ಕರಿಸಿದ್ದೀರಿ. ರಾಜ್ಯದ ರೈತರನ್ನು ಮತ್ತು ಎಂಎಸ್‌ಪಿ ದ್ವಿಗುಣಗೊಳಿಸುವ ಭರವಸೆಯನ್ನೂ ಪ್ರಧಾನಿ ಮರೆತಿದ್ದಾರೆ. ಒಡಿಶಾದ ಜನರನ್ನು ಗಮನದಲ್ಲಿಟ್ಟುಕೊಂಡು ಕರಾವಳಿ ಹೆದ್ದಾರಿ ನಿರ್ಮಿಸಬೇಕಿದ್ದ ನೀವು ಮತ್ತೆ ಈ ಯೋಜನೆಯನ್ನು ಮರೆತಿದ್ದೀರಿ” ಎಂದರು.

ಕಲ್ಲಿದ್ದಲು ಒಡಿಶಾದ ನೈಸರ್ಗಿಕ ಸಂಪತ್ತು ಎಂದು ಹೇಳಿದ ಪಟ್ನಾಯಕ್, “ಪ್ರಧಾನಿ ಅವರು 10 ವರ್ಷಗಳ ರಾಯಧನವನ್ನು ಪರಿಷ್ಕರಿಸಲು ಸಹ ಮರೆತಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ; ನನ್ನ ಬಂಧನದ ನಂತರ ಎಎಪಿ ಸರ್ಕಾರಗಳನ್ನು ಉರುಳಿಸುವುದು ಬಿಜೆಪಿಯ ಯೋಜನೆಯಾಗಿತ್ತು: ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...