Homeಕರ್ನಾಟಕಸರ್ಕಾರಿ ಶಾಲೆಯಲ್ಲಿ ಬಿಜೆಪಿ ಪಕ್ಷದ ಕಾರ್ಯಕ್ರಮ: RSS ಗಾಗಿ ಪರೀಕ್ಷೆ ದಿನಾಂಕಗಳೇ ಅದಲು ಬದಲು..

ಸರ್ಕಾರಿ ಶಾಲೆಯಲ್ಲಿ ಬಿಜೆಪಿ ಪಕ್ಷದ ಕಾರ್ಯಕ್ರಮ: RSS ಗಾಗಿ ಪರೀಕ್ಷೆ ದಿನಾಂಕಗಳೇ ಅದಲು ಬದಲು..

- Advertisement -
- Advertisement -

“ರಾಜಕೀಯ ಪಕ್ಷವಾದ BJP ಶಾಲಾ ಕಾಲೇಜುಗಳಲ್ಲಿ ಮೋದಿಯವರ ಹುಟ್ಟುಹಬ್ಬವನ್ನು ಆಚರಣೆ ಮಾಡಬಹುದೆ? ಇಂತಹ ಮೂರು ಬಿಟ್ಟವರ ಕೆಲಸವನ್ನು BJP ಮಾಡುತ್ತಿದೆ. ನಮ್ಮೂರಿನ ಹೈಸ್ಕೂಲಿನ ಶಾಲಾ ವಿದ್ಯಾರ್ಥಿಗಳನ್ನು ಹೀಗೆ ರಾಜಕೀಯ ಕಾರ್ಯಕ್ರಮದಲ್ಲಿ ಬಳಸಿಕೊಳ್ಳಲು ಯಾರು ಇವರಿಗೆ ಅನುಮತಿ ಕೊಟ್ಟವರು?

ಪಕ್ಷದ ಚಿಹ್ನೆಗಳನ್ನು ಬಳಸಿಕೊಂಡು, ರಾಜಕೀಯ ನಾಯಕರನ್ನು ಸೇರಿಸಿಕೊಂಡು ಶಾಲಾ ಅವಧಿಯಲ್ಲಿ ಹೀಗೆ ಕಾರ್ಯಕ್ರಮ ಮಾಡುವುದು ಎಷ್ಟರ ಮಟ್ಟಿಗೆ ಸರಿ? ಇದು ಮಕ್ಕಳ ಬೆಳವಣಿಗೆ ಮೇಲೆ ಪ್ರಭಾವ ಬೀರುವುದಿಲ್ಲವೇ? ನಾಳೆ ಕಾಂಗ್ರೆಸ್, ನಾಳಿದ್ದು ಜೆ‌.ಡಿ.ಎಸ್ ಕಾರ್ಯಕ್ರಮ ಮಾಡುತ್ತೇವೆ ಎಂದರೆ ಶಾಲಾ ಮುಖ್ಯಸ್ಥರು ಅನುಮತಿ ಕೊಡುತ್ತಾರಾ? ತಾಲ್ಲೂಕಿನ ಶಿಕ್ಷಣಾಧಿಕಾರಿಗಳು ಮಲಗಿದ್ದಾರೆಯೇ? ಚೇ.. ನಾಚಿಕೆ ಆಗುತ್ತಿದೆ ಎಂಬಂತಹ ವಾಟ್ಸಾಪ್ ಸಂದೇಶವೊಂದು ವೈರಲ್ ಆಗಿದೆ. ಜೊತೆಗೆ ಕಾರ್ಯಕ್ರಮದ ಫೋಟೊಗಳು ಹರಿದಾಡುತ್ತಿವೆ.

ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಹಿರೆಮಸಳಿ ಗ್ರಾಮದಲ್ಲಿ ಸರ್ಕಾರಿ ಪ್ರೌಢಶಾಲೆಯಲ್ಲಿ ಬಿಜೆಪಿ ಮುಖಂಡರು ತಮ್ಮ ಪಕ್ಷದ ಬ್ಯಾನರ್ ಹಾಕಿ ಮೋದಿ ಜನ್ಮದಿನಾಚರಣೆ ಕಾರ್ಯಕ್ರಮ ಮಾಡಿದ್ದಾರೆ. ಭಾಷಣಗಳನ್ನು ಸಹ ಮಾಡಿದ್ದಲ್ಲದೇ, ಮೋದಿಯವರ ಬಗ್ಗೆ ವಿದ್ಯಾರ್ಥಿಗಳಿಂದಲೂ ಮಾತಾಡಿದ್ದಾರೆ. ಈ ಕುರಿತು ಅದೇ ಊರಿನ ಬಹಳಷ್ಟು ಜನರು ಕಾರ್ಯಕ್ರಮದ ಬಗ್ಗೆ ಅಪಸ್ವರ ಎತ್ತಿದ್ದಾರೆ.

ನರೇಂದ್ರ ಮೋದಿಯವರು ನಮ್ಮ ದೇಶದ ಪ್ರಧಾನಿಗಳು. ಅವರಿಗೆ ನಾವು ಗೌರವಿಸುವ, ಶುಭ ಹಾರೈಸುವ ಹಕ್ಕು ಎಲ್ಲರಿಗೂ ಇದೆ. ಆದರೆ ಅದು ಖಾಸಗಿಯಾಗಿರಬೇಕೆ ಹೊರತು ಸಾರ್ವಜನಿಕವಾಗಿರಬಾರದು. ಅದರಲ್ಲೂ ಶಾಲಾ ಕಾಲೇಜುಗಳು ಪಕ್ಷರಾಜಕೀಯ ಮುಕ್ತ ಕಲಿಕೆಯ ತಾಣಗಳು. ಅಲ್ಲಿ ಒಂದು ಪಕ್ಷದ ಪರವಾಗಿ ಕಾರ್ಯಕ್ರಮ ಮಾಡುವುದು ಯಾವುದೇ ಕಾರಣಕ್ಕೂ ಸರಿಯಲ್ಲ. ಇಂತಹ ಕನಿಷ್ಠ ಸಾಮಾನ್ಯ ಜ್ಞಾನವೂ ಬಿಜೆಪಿಗಿಲ್ಲವೇ? ಅಥವಾ ಗೊತ್ತಿದ್ದೂ ಸಹ ಕೇಂದ್ರ ಮತ್ತು ರಾಜ್ಯ ಎರಡೂ ಕಡೆ ನಮ್ಮ ಸರಕಾರವೇ ಇದೆ ಎಂಬ ಅಹಂಕಾರದಿಂದ ಹೀಗೆ ಮಾಡಿದ್ದಾರೆಯೇ ಎಂಬ ಪ್ರಶ್ನೆಗಳು ಎದ್ದಿವೆ.

ಇದೊಂದು ಕೆಟ್ಟ ಮಾದರಿಯಾಗಿದ್ದು, ತೀರಾ ರಾಜಕೀಯ ಲಾಭಕ್ಕಾಗಿ ನಡೆಸಿದ ಕುತಂತ್ರದಂತೆ ಕಾಣುತ್ತಿದೆ. ಬೆಳೆಯುವ ಮಕ್ಕಳ ಮನಸ್ಸಿನಲ್ಲಿ ಯಾವುದೇ ಪಕ್ಷದ ಸಿದ್ಧಾಂತವನ್ನು ತುರುಕುವುದು ಅಕ್ಷಮ್ಯ ಅಪರಾಧ.. ಮಕ್ಕಳು ಸ್ವಂತಂತ್ರವಾಗಿ ಅಭ್ಯಸಿಸಿ ತಮ್ಮ ಅಭಿಪ್ರಾಯಗಳನ್ನು ರೂಪಿಸಿಕೊಳ್ಳುವಂತೆ ಶಿಕ್ಷಣವಿರಬೇಕು. ಚಿಕ್ಕ ವಯಸ್ಸಿನಲ್ಲಿಯೇ ಅವರ ಮೇಲೆ ಬಲವಂತವಾಗಿ ಪಕ್ಷ ರಾಜಕೀಯವನ್ನು ಹೇರುವುದು ಮಕ್ಕಳ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ವಿಜಯಪುರದಲ್ಲಿ ನಡೆದಿರುವ ಈ ಕಾನೂನು ಬಾಹಿರ ಕಾರ್ಯಕ್ರಮದ ಕುರಿತು ಕೂಡಲೇ ಶಿಕ್ಷಣ ಇಲಾಖೆ ಸಮರ್ಪಕ ತನಿಖೆ ನಡೆಸಿ ಕ್ರಮ ಜರುಗಿಸಬೇಕು. ಮುಂದೆ ಇಂತಹ ಘಟನೆಗಳು ಜರುಗದಂತೆ ಎಚ್ಚರ ವಹಿಸಬೇಕೆಂದು ವಿಜಯಪುರದ ವಕೀಲರು ಮತ್ತು ಯುವಜನ ಹೋರಾಟಗಾರರಾದ ಶ್ರೀನಾಥ್ ಪೂಜಾರಿಯವರು ಒತ್ತಾಯಿಸಿದ್ದಾರೆ.

RSS ಗಾಗಿ ಅರ್ಧವಾರ್ಷಿಕ ಪರೀಕ್ಷೆಯನ್ನು ಮುಂಚಿತವಾಗಿ ನಡೆಸುತ್ತಿರುವ ಉಡುಪಿ ಜಿಲ್ಲಾಡಳಿತ

ಉಡುಪಿಯಲ್ಲಿ ಅರ್ಧವಾರ್ಷಿಕ ಪರೀಕ್ಷೆ ಬಹಳಷ್ಟು ಮುಂಚಿತವಾಗಿ ನಡೆಯಲಿದೆ. ಏಕೆ ಗೊತ್ತೆ? RSS ನವರು ಅಕ್ಟೋಬರ್ 9 ರಿಂದ 16 ರವರೆಗೆ ನಡೆಸುವ ITC ತರಬೇತಿಯಲ್ಲಿ ಮಕ್ಕಳನ್ನು ಭಾಗವಹಿಸಲು ಅನುವು ಮಾಡಿ ಕೊಡುವ ಸಲುವಾಗಿ ಪರೀಕ್ಷಾ ದಿನಾಂಕದಲ್ಲಿ ಬದಲಾವಣೆ ಮಾಡಲಾಗಿದೆಯಂತೆ. ಉಸ್ತುವಾರಿ ಸಚಿವರ ಸಭೆಯಲ್ಲಿ RSS ಮುಖಂಡರು ಶಿಕ್ಷಣ ಇಲಾಖೆಯ ಉಪನಿರ್ದೇಶಕರನ್ನು ಕರೆಸಿ ಆದೇಶ ನೀಡಲಾಗಿದೆಯಂತೆ.. ಹೀಗೊಂದು ಸುದ್ದಿ ಉಡುಪಿಯಿಂದ ಹೊರಬಿದ್ದಿದೆ.

“ಶಿಕ್ಷಣದ ಉದ್ದೇಶ ಮಾನವೀಯವಾದ, ಸಮಾನವಾದ, ಪ್ರಜಾತಾಂತ್ರಿಕವಾದ, ಬಹುವೈವಿಧ್ಯತೆಯನ್ನು ಗೌರವಿಸುವ ಸಮಾಜ ನಿರ್ಮಾಣ ಮಾಡುವುದಾಗಿದೆ”. ಆದರೆ ಇಂದು ಬಿಜೆಪಿ ಸೇರಿದಂತೆ ಕೆಲವು ಪಕ್ಷಗಳು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಶಾಲಾ ಕಾಲೇಜುಗಳಿಗೆ ಮನಬಂದಂತೆ ನುಗ್ಗಿ ತಮ್ಮ ಅಜೆಂಡಾಗಳನ್ನು ಮಕ್ಕಳ ಮನಸ್ಸಲ್ಲಿ ತುರುಕುತ್ತಿರುವುದು ಅಪಾಯಕಾರಿ ನಡೆಯಾಗಿದೆ. ಇದರ ವಿರುದ್ಧ ಪ್ರಜಾತಂತ್ರವನ್ನು ಉಳಿಸುವ ಎಲ್ಲಾ ಸಂಘಟನೆಗಳು ಒಗ್ಗೂಡಿ ಹೋರಾಡಬೇಕಾದ ಅನಿವಾರ್ಯತೆಯಿದೆ ಎಂದು ಕೆವಿಎಸ್ ಸಂಚಾಲಕ ಸರೋವರ್ ಬೆಂಕಿಕೆರೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. This is good from childhood patriotism will come. Nice idea. Only frustrated depressed lot can thing negative of this programme. Nothing wrong in conducting and involving future citizens into main stream of future India.?????✌?????

LEAVE A REPLY

Please enter your comment!
Please enter your name here

- Advertisment -

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...