Homeಕರ್ನಾಟಕಸರ್ಕಾರಿ ಶಾಲೆಯಲ್ಲಿ ಬಿಜೆಪಿ ಪಕ್ಷದ ಕಾರ್ಯಕ್ರಮ: RSS ಗಾಗಿ ಪರೀಕ್ಷೆ ದಿನಾಂಕಗಳೇ ಅದಲು ಬದಲು..

ಸರ್ಕಾರಿ ಶಾಲೆಯಲ್ಲಿ ಬಿಜೆಪಿ ಪಕ್ಷದ ಕಾರ್ಯಕ್ರಮ: RSS ಗಾಗಿ ಪರೀಕ್ಷೆ ದಿನಾಂಕಗಳೇ ಅದಲು ಬದಲು..

- Advertisement -
- Advertisement -

“ರಾಜಕೀಯ ಪಕ್ಷವಾದ BJP ಶಾಲಾ ಕಾಲೇಜುಗಳಲ್ಲಿ ಮೋದಿಯವರ ಹುಟ್ಟುಹಬ್ಬವನ್ನು ಆಚರಣೆ ಮಾಡಬಹುದೆ? ಇಂತಹ ಮೂರು ಬಿಟ್ಟವರ ಕೆಲಸವನ್ನು BJP ಮಾಡುತ್ತಿದೆ. ನಮ್ಮೂರಿನ ಹೈಸ್ಕೂಲಿನ ಶಾಲಾ ವಿದ್ಯಾರ್ಥಿಗಳನ್ನು ಹೀಗೆ ರಾಜಕೀಯ ಕಾರ್ಯಕ್ರಮದಲ್ಲಿ ಬಳಸಿಕೊಳ್ಳಲು ಯಾರು ಇವರಿಗೆ ಅನುಮತಿ ಕೊಟ್ಟವರು?

ಪಕ್ಷದ ಚಿಹ್ನೆಗಳನ್ನು ಬಳಸಿಕೊಂಡು, ರಾಜಕೀಯ ನಾಯಕರನ್ನು ಸೇರಿಸಿಕೊಂಡು ಶಾಲಾ ಅವಧಿಯಲ್ಲಿ ಹೀಗೆ ಕಾರ್ಯಕ್ರಮ ಮಾಡುವುದು ಎಷ್ಟರ ಮಟ್ಟಿಗೆ ಸರಿ? ಇದು ಮಕ್ಕಳ ಬೆಳವಣಿಗೆ ಮೇಲೆ ಪ್ರಭಾವ ಬೀರುವುದಿಲ್ಲವೇ? ನಾಳೆ ಕಾಂಗ್ರೆಸ್, ನಾಳಿದ್ದು ಜೆ‌.ಡಿ.ಎಸ್ ಕಾರ್ಯಕ್ರಮ ಮಾಡುತ್ತೇವೆ ಎಂದರೆ ಶಾಲಾ ಮುಖ್ಯಸ್ಥರು ಅನುಮತಿ ಕೊಡುತ್ತಾರಾ? ತಾಲ್ಲೂಕಿನ ಶಿಕ್ಷಣಾಧಿಕಾರಿಗಳು ಮಲಗಿದ್ದಾರೆಯೇ? ಚೇ.. ನಾಚಿಕೆ ಆಗುತ್ತಿದೆ ಎಂಬಂತಹ ವಾಟ್ಸಾಪ್ ಸಂದೇಶವೊಂದು ವೈರಲ್ ಆಗಿದೆ. ಜೊತೆಗೆ ಕಾರ್ಯಕ್ರಮದ ಫೋಟೊಗಳು ಹರಿದಾಡುತ್ತಿವೆ.

ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಹಿರೆಮಸಳಿ ಗ್ರಾಮದಲ್ಲಿ ಸರ್ಕಾರಿ ಪ್ರೌಢಶಾಲೆಯಲ್ಲಿ ಬಿಜೆಪಿ ಮುಖಂಡರು ತಮ್ಮ ಪಕ್ಷದ ಬ್ಯಾನರ್ ಹಾಕಿ ಮೋದಿ ಜನ್ಮದಿನಾಚರಣೆ ಕಾರ್ಯಕ್ರಮ ಮಾಡಿದ್ದಾರೆ. ಭಾಷಣಗಳನ್ನು ಸಹ ಮಾಡಿದ್ದಲ್ಲದೇ, ಮೋದಿಯವರ ಬಗ್ಗೆ ವಿದ್ಯಾರ್ಥಿಗಳಿಂದಲೂ ಮಾತಾಡಿದ್ದಾರೆ. ಈ ಕುರಿತು ಅದೇ ಊರಿನ ಬಹಳಷ್ಟು ಜನರು ಕಾರ್ಯಕ್ರಮದ ಬಗ್ಗೆ ಅಪಸ್ವರ ಎತ್ತಿದ್ದಾರೆ.

ನರೇಂದ್ರ ಮೋದಿಯವರು ನಮ್ಮ ದೇಶದ ಪ್ರಧಾನಿಗಳು. ಅವರಿಗೆ ನಾವು ಗೌರವಿಸುವ, ಶುಭ ಹಾರೈಸುವ ಹಕ್ಕು ಎಲ್ಲರಿಗೂ ಇದೆ. ಆದರೆ ಅದು ಖಾಸಗಿಯಾಗಿರಬೇಕೆ ಹೊರತು ಸಾರ್ವಜನಿಕವಾಗಿರಬಾರದು. ಅದರಲ್ಲೂ ಶಾಲಾ ಕಾಲೇಜುಗಳು ಪಕ್ಷರಾಜಕೀಯ ಮುಕ್ತ ಕಲಿಕೆಯ ತಾಣಗಳು. ಅಲ್ಲಿ ಒಂದು ಪಕ್ಷದ ಪರವಾಗಿ ಕಾರ್ಯಕ್ರಮ ಮಾಡುವುದು ಯಾವುದೇ ಕಾರಣಕ್ಕೂ ಸರಿಯಲ್ಲ. ಇಂತಹ ಕನಿಷ್ಠ ಸಾಮಾನ್ಯ ಜ್ಞಾನವೂ ಬಿಜೆಪಿಗಿಲ್ಲವೇ? ಅಥವಾ ಗೊತ್ತಿದ್ದೂ ಸಹ ಕೇಂದ್ರ ಮತ್ತು ರಾಜ್ಯ ಎರಡೂ ಕಡೆ ನಮ್ಮ ಸರಕಾರವೇ ಇದೆ ಎಂಬ ಅಹಂಕಾರದಿಂದ ಹೀಗೆ ಮಾಡಿದ್ದಾರೆಯೇ ಎಂಬ ಪ್ರಶ್ನೆಗಳು ಎದ್ದಿವೆ.

ಇದೊಂದು ಕೆಟ್ಟ ಮಾದರಿಯಾಗಿದ್ದು, ತೀರಾ ರಾಜಕೀಯ ಲಾಭಕ್ಕಾಗಿ ನಡೆಸಿದ ಕುತಂತ್ರದಂತೆ ಕಾಣುತ್ತಿದೆ. ಬೆಳೆಯುವ ಮಕ್ಕಳ ಮನಸ್ಸಿನಲ್ಲಿ ಯಾವುದೇ ಪಕ್ಷದ ಸಿದ್ಧಾಂತವನ್ನು ತುರುಕುವುದು ಅಕ್ಷಮ್ಯ ಅಪರಾಧ.. ಮಕ್ಕಳು ಸ್ವಂತಂತ್ರವಾಗಿ ಅಭ್ಯಸಿಸಿ ತಮ್ಮ ಅಭಿಪ್ರಾಯಗಳನ್ನು ರೂಪಿಸಿಕೊಳ್ಳುವಂತೆ ಶಿಕ್ಷಣವಿರಬೇಕು. ಚಿಕ್ಕ ವಯಸ್ಸಿನಲ್ಲಿಯೇ ಅವರ ಮೇಲೆ ಬಲವಂತವಾಗಿ ಪಕ್ಷ ರಾಜಕೀಯವನ್ನು ಹೇರುವುದು ಮಕ್ಕಳ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ವಿಜಯಪುರದಲ್ಲಿ ನಡೆದಿರುವ ಈ ಕಾನೂನು ಬಾಹಿರ ಕಾರ್ಯಕ್ರಮದ ಕುರಿತು ಕೂಡಲೇ ಶಿಕ್ಷಣ ಇಲಾಖೆ ಸಮರ್ಪಕ ತನಿಖೆ ನಡೆಸಿ ಕ್ರಮ ಜರುಗಿಸಬೇಕು. ಮುಂದೆ ಇಂತಹ ಘಟನೆಗಳು ಜರುಗದಂತೆ ಎಚ್ಚರ ವಹಿಸಬೇಕೆಂದು ವಿಜಯಪುರದ ವಕೀಲರು ಮತ್ತು ಯುವಜನ ಹೋರಾಟಗಾರರಾದ ಶ್ರೀನಾಥ್ ಪೂಜಾರಿಯವರು ಒತ್ತಾಯಿಸಿದ್ದಾರೆ.

RSS ಗಾಗಿ ಅರ್ಧವಾರ್ಷಿಕ ಪರೀಕ್ಷೆಯನ್ನು ಮುಂಚಿತವಾಗಿ ನಡೆಸುತ್ತಿರುವ ಉಡುಪಿ ಜಿಲ್ಲಾಡಳಿತ

ಉಡುಪಿಯಲ್ಲಿ ಅರ್ಧವಾರ್ಷಿಕ ಪರೀಕ್ಷೆ ಬಹಳಷ್ಟು ಮುಂಚಿತವಾಗಿ ನಡೆಯಲಿದೆ. ಏಕೆ ಗೊತ್ತೆ? RSS ನವರು ಅಕ್ಟೋಬರ್ 9 ರಿಂದ 16 ರವರೆಗೆ ನಡೆಸುವ ITC ತರಬೇತಿಯಲ್ಲಿ ಮಕ್ಕಳನ್ನು ಭಾಗವಹಿಸಲು ಅನುವು ಮಾಡಿ ಕೊಡುವ ಸಲುವಾಗಿ ಪರೀಕ್ಷಾ ದಿನಾಂಕದಲ್ಲಿ ಬದಲಾವಣೆ ಮಾಡಲಾಗಿದೆಯಂತೆ. ಉಸ್ತುವಾರಿ ಸಚಿವರ ಸಭೆಯಲ್ಲಿ RSS ಮುಖಂಡರು ಶಿಕ್ಷಣ ಇಲಾಖೆಯ ಉಪನಿರ್ದೇಶಕರನ್ನು ಕರೆಸಿ ಆದೇಶ ನೀಡಲಾಗಿದೆಯಂತೆ.. ಹೀಗೊಂದು ಸುದ್ದಿ ಉಡುಪಿಯಿಂದ ಹೊರಬಿದ್ದಿದೆ.

“ಶಿಕ್ಷಣದ ಉದ್ದೇಶ ಮಾನವೀಯವಾದ, ಸಮಾನವಾದ, ಪ್ರಜಾತಾಂತ್ರಿಕವಾದ, ಬಹುವೈವಿಧ್ಯತೆಯನ್ನು ಗೌರವಿಸುವ ಸಮಾಜ ನಿರ್ಮಾಣ ಮಾಡುವುದಾಗಿದೆ”. ಆದರೆ ಇಂದು ಬಿಜೆಪಿ ಸೇರಿದಂತೆ ಕೆಲವು ಪಕ್ಷಗಳು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಶಾಲಾ ಕಾಲೇಜುಗಳಿಗೆ ಮನಬಂದಂತೆ ನುಗ್ಗಿ ತಮ್ಮ ಅಜೆಂಡಾಗಳನ್ನು ಮಕ್ಕಳ ಮನಸ್ಸಲ್ಲಿ ತುರುಕುತ್ತಿರುವುದು ಅಪಾಯಕಾರಿ ನಡೆಯಾಗಿದೆ. ಇದರ ವಿರುದ್ಧ ಪ್ರಜಾತಂತ್ರವನ್ನು ಉಳಿಸುವ ಎಲ್ಲಾ ಸಂಘಟನೆಗಳು ಒಗ್ಗೂಡಿ ಹೋರಾಡಬೇಕಾದ ಅನಿವಾರ್ಯತೆಯಿದೆ ಎಂದು ಕೆವಿಎಸ್ ಸಂಚಾಲಕ ಸರೋವರ್ ಬೆಂಕಿಕೆರೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. This is good from childhood patriotism will come. Nice idea. Only frustrated depressed lot can thing negative of this programme. Nothing wrong in conducting and involving future citizens into main stream of future India.?????✌?????

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...