Homeಕರ್ನಾಟಕಸರ್ಕಾರಿ ಶಾಲೆಯಲ್ಲಿ ಬಿಜೆಪಿ ಪಕ್ಷದ ಕಾರ್ಯಕ್ರಮ: RSS ಗಾಗಿ ಪರೀಕ್ಷೆ ದಿನಾಂಕಗಳೇ ಅದಲು ಬದಲು..

ಸರ್ಕಾರಿ ಶಾಲೆಯಲ್ಲಿ ಬಿಜೆಪಿ ಪಕ್ಷದ ಕಾರ್ಯಕ್ರಮ: RSS ಗಾಗಿ ಪರೀಕ್ಷೆ ದಿನಾಂಕಗಳೇ ಅದಲು ಬದಲು..

- Advertisement -
- Advertisement -

“ರಾಜಕೀಯ ಪಕ್ಷವಾದ BJP ಶಾಲಾ ಕಾಲೇಜುಗಳಲ್ಲಿ ಮೋದಿಯವರ ಹುಟ್ಟುಹಬ್ಬವನ್ನು ಆಚರಣೆ ಮಾಡಬಹುದೆ? ಇಂತಹ ಮೂರು ಬಿಟ್ಟವರ ಕೆಲಸವನ್ನು BJP ಮಾಡುತ್ತಿದೆ. ನಮ್ಮೂರಿನ ಹೈಸ್ಕೂಲಿನ ಶಾಲಾ ವಿದ್ಯಾರ್ಥಿಗಳನ್ನು ಹೀಗೆ ರಾಜಕೀಯ ಕಾರ್ಯಕ್ರಮದಲ್ಲಿ ಬಳಸಿಕೊಳ್ಳಲು ಯಾರು ಇವರಿಗೆ ಅನುಮತಿ ಕೊಟ್ಟವರು?

ಪಕ್ಷದ ಚಿಹ್ನೆಗಳನ್ನು ಬಳಸಿಕೊಂಡು, ರಾಜಕೀಯ ನಾಯಕರನ್ನು ಸೇರಿಸಿಕೊಂಡು ಶಾಲಾ ಅವಧಿಯಲ್ಲಿ ಹೀಗೆ ಕಾರ್ಯಕ್ರಮ ಮಾಡುವುದು ಎಷ್ಟರ ಮಟ್ಟಿಗೆ ಸರಿ? ಇದು ಮಕ್ಕಳ ಬೆಳವಣಿಗೆ ಮೇಲೆ ಪ್ರಭಾವ ಬೀರುವುದಿಲ್ಲವೇ? ನಾಳೆ ಕಾಂಗ್ರೆಸ್, ನಾಳಿದ್ದು ಜೆ‌.ಡಿ.ಎಸ್ ಕಾರ್ಯಕ್ರಮ ಮಾಡುತ್ತೇವೆ ಎಂದರೆ ಶಾಲಾ ಮುಖ್ಯಸ್ಥರು ಅನುಮತಿ ಕೊಡುತ್ತಾರಾ? ತಾಲ್ಲೂಕಿನ ಶಿಕ್ಷಣಾಧಿಕಾರಿಗಳು ಮಲಗಿದ್ದಾರೆಯೇ? ಚೇ.. ನಾಚಿಕೆ ಆಗುತ್ತಿದೆ ಎಂಬಂತಹ ವಾಟ್ಸಾಪ್ ಸಂದೇಶವೊಂದು ವೈರಲ್ ಆಗಿದೆ. ಜೊತೆಗೆ ಕಾರ್ಯಕ್ರಮದ ಫೋಟೊಗಳು ಹರಿದಾಡುತ್ತಿವೆ.

ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಹಿರೆಮಸಳಿ ಗ್ರಾಮದಲ್ಲಿ ಸರ್ಕಾರಿ ಪ್ರೌಢಶಾಲೆಯಲ್ಲಿ ಬಿಜೆಪಿ ಮುಖಂಡರು ತಮ್ಮ ಪಕ್ಷದ ಬ್ಯಾನರ್ ಹಾಕಿ ಮೋದಿ ಜನ್ಮದಿನಾಚರಣೆ ಕಾರ್ಯಕ್ರಮ ಮಾಡಿದ್ದಾರೆ. ಭಾಷಣಗಳನ್ನು ಸಹ ಮಾಡಿದ್ದಲ್ಲದೇ, ಮೋದಿಯವರ ಬಗ್ಗೆ ವಿದ್ಯಾರ್ಥಿಗಳಿಂದಲೂ ಮಾತಾಡಿದ್ದಾರೆ. ಈ ಕುರಿತು ಅದೇ ಊರಿನ ಬಹಳಷ್ಟು ಜನರು ಕಾರ್ಯಕ್ರಮದ ಬಗ್ಗೆ ಅಪಸ್ವರ ಎತ್ತಿದ್ದಾರೆ.

ನರೇಂದ್ರ ಮೋದಿಯವರು ನಮ್ಮ ದೇಶದ ಪ್ರಧಾನಿಗಳು. ಅವರಿಗೆ ನಾವು ಗೌರವಿಸುವ, ಶುಭ ಹಾರೈಸುವ ಹಕ್ಕು ಎಲ್ಲರಿಗೂ ಇದೆ. ಆದರೆ ಅದು ಖಾಸಗಿಯಾಗಿರಬೇಕೆ ಹೊರತು ಸಾರ್ವಜನಿಕವಾಗಿರಬಾರದು. ಅದರಲ್ಲೂ ಶಾಲಾ ಕಾಲೇಜುಗಳು ಪಕ್ಷರಾಜಕೀಯ ಮುಕ್ತ ಕಲಿಕೆಯ ತಾಣಗಳು. ಅಲ್ಲಿ ಒಂದು ಪಕ್ಷದ ಪರವಾಗಿ ಕಾರ್ಯಕ್ರಮ ಮಾಡುವುದು ಯಾವುದೇ ಕಾರಣಕ್ಕೂ ಸರಿಯಲ್ಲ. ಇಂತಹ ಕನಿಷ್ಠ ಸಾಮಾನ್ಯ ಜ್ಞಾನವೂ ಬಿಜೆಪಿಗಿಲ್ಲವೇ? ಅಥವಾ ಗೊತ್ತಿದ್ದೂ ಸಹ ಕೇಂದ್ರ ಮತ್ತು ರಾಜ್ಯ ಎರಡೂ ಕಡೆ ನಮ್ಮ ಸರಕಾರವೇ ಇದೆ ಎಂಬ ಅಹಂಕಾರದಿಂದ ಹೀಗೆ ಮಾಡಿದ್ದಾರೆಯೇ ಎಂಬ ಪ್ರಶ್ನೆಗಳು ಎದ್ದಿವೆ.

ಇದೊಂದು ಕೆಟ್ಟ ಮಾದರಿಯಾಗಿದ್ದು, ತೀರಾ ರಾಜಕೀಯ ಲಾಭಕ್ಕಾಗಿ ನಡೆಸಿದ ಕುತಂತ್ರದಂತೆ ಕಾಣುತ್ತಿದೆ. ಬೆಳೆಯುವ ಮಕ್ಕಳ ಮನಸ್ಸಿನಲ್ಲಿ ಯಾವುದೇ ಪಕ್ಷದ ಸಿದ್ಧಾಂತವನ್ನು ತುರುಕುವುದು ಅಕ್ಷಮ್ಯ ಅಪರಾಧ.. ಮಕ್ಕಳು ಸ್ವಂತಂತ್ರವಾಗಿ ಅಭ್ಯಸಿಸಿ ತಮ್ಮ ಅಭಿಪ್ರಾಯಗಳನ್ನು ರೂಪಿಸಿಕೊಳ್ಳುವಂತೆ ಶಿಕ್ಷಣವಿರಬೇಕು. ಚಿಕ್ಕ ವಯಸ್ಸಿನಲ್ಲಿಯೇ ಅವರ ಮೇಲೆ ಬಲವಂತವಾಗಿ ಪಕ್ಷ ರಾಜಕೀಯವನ್ನು ಹೇರುವುದು ಮಕ್ಕಳ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ವಿಜಯಪುರದಲ್ಲಿ ನಡೆದಿರುವ ಈ ಕಾನೂನು ಬಾಹಿರ ಕಾರ್ಯಕ್ರಮದ ಕುರಿತು ಕೂಡಲೇ ಶಿಕ್ಷಣ ಇಲಾಖೆ ಸಮರ್ಪಕ ತನಿಖೆ ನಡೆಸಿ ಕ್ರಮ ಜರುಗಿಸಬೇಕು. ಮುಂದೆ ಇಂತಹ ಘಟನೆಗಳು ಜರುಗದಂತೆ ಎಚ್ಚರ ವಹಿಸಬೇಕೆಂದು ವಿಜಯಪುರದ ವಕೀಲರು ಮತ್ತು ಯುವಜನ ಹೋರಾಟಗಾರರಾದ ಶ್ರೀನಾಥ್ ಪೂಜಾರಿಯವರು ಒತ್ತಾಯಿಸಿದ್ದಾರೆ.

RSS ಗಾಗಿ ಅರ್ಧವಾರ್ಷಿಕ ಪರೀಕ್ಷೆಯನ್ನು ಮುಂಚಿತವಾಗಿ ನಡೆಸುತ್ತಿರುವ ಉಡುಪಿ ಜಿಲ್ಲಾಡಳಿತ

ಉಡುಪಿಯಲ್ಲಿ ಅರ್ಧವಾರ್ಷಿಕ ಪರೀಕ್ಷೆ ಬಹಳಷ್ಟು ಮುಂಚಿತವಾಗಿ ನಡೆಯಲಿದೆ. ಏಕೆ ಗೊತ್ತೆ? RSS ನವರು ಅಕ್ಟೋಬರ್ 9 ರಿಂದ 16 ರವರೆಗೆ ನಡೆಸುವ ITC ತರಬೇತಿಯಲ್ಲಿ ಮಕ್ಕಳನ್ನು ಭಾಗವಹಿಸಲು ಅನುವು ಮಾಡಿ ಕೊಡುವ ಸಲುವಾಗಿ ಪರೀಕ್ಷಾ ದಿನಾಂಕದಲ್ಲಿ ಬದಲಾವಣೆ ಮಾಡಲಾಗಿದೆಯಂತೆ. ಉಸ್ತುವಾರಿ ಸಚಿವರ ಸಭೆಯಲ್ಲಿ RSS ಮುಖಂಡರು ಶಿಕ್ಷಣ ಇಲಾಖೆಯ ಉಪನಿರ್ದೇಶಕರನ್ನು ಕರೆಸಿ ಆದೇಶ ನೀಡಲಾಗಿದೆಯಂತೆ.. ಹೀಗೊಂದು ಸುದ್ದಿ ಉಡುಪಿಯಿಂದ ಹೊರಬಿದ್ದಿದೆ.

“ಶಿಕ್ಷಣದ ಉದ್ದೇಶ ಮಾನವೀಯವಾದ, ಸಮಾನವಾದ, ಪ್ರಜಾತಾಂತ್ರಿಕವಾದ, ಬಹುವೈವಿಧ್ಯತೆಯನ್ನು ಗೌರವಿಸುವ ಸಮಾಜ ನಿರ್ಮಾಣ ಮಾಡುವುದಾಗಿದೆ”. ಆದರೆ ಇಂದು ಬಿಜೆಪಿ ಸೇರಿದಂತೆ ಕೆಲವು ಪಕ್ಷಗಳು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಶಾಲಾ ಕಾಲೇಜುಗಳಿಗೆ ಮನಬಂದಂತೆ ನುಗ್ಗಿ ತಮ್ಮ ಅಜೆಂಡಾಗಳನ್ನು ಮಕ್ಕಳ ಮನಸ್ಸಲ್ಲಿ ತುರುಕುತ್ತಿರುವುದು ಅಪಾಯಕಾರಿ ನಡೆಯಾಗಿದೆ. ಇದರ ವಿರುದ್ಧ ಪ್ರಜಾತಂತ್ರವನ್ನು ಉಳಿಸುವ ಎಲ್ಲಾ ಸಂಘಟನೆಗಳು ಒಗ್ಗೂಡಿ ಹೋರಾಡಬೇಕಾದ ಅನಿವಾರ್ಯತೆಯಿದೆ ಎಂದು ಕೆವಿಎಸ್ ಸಂಚಾಲಕ ಸರೋವರ್ ಬೆಂಕಿಕೆರೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. This is good from childhood patriotism will come. Nice idea. Only frustrated depressed lot can thing negative of this programme. Nothing wrong in conducting and involving future citizens into main stream of future India.?????✌?????

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...