Homeಕರ್ನಾಟಕಸರ್ಕಾರಿ ಶಾಲೆಯಲ್ಲಿ ಬಿಜೆಪಿ ಪಕ್ಷದ ಕಾರ್ಯಕ್ರಮ: RSS ಗಾಗಿ ಪರೀಕ್ಷೆ ದಿನಾಂಕಗಳೇ ಅದಲು ಬದಲು..

ಸರ್ಕಾರಿ ಶಾಲೆಯಲ್ಲಿ ಬಿಜೆಪಿ ಪಕ್ಷದ ಕಾರ್ಯಕ್ರಮ: RSS ಗಾಗಿ ಪರೀಕ್ಷೆ ದಿನಾಂಕಗಳೇ ಅದಲು ಬದಲು..

- Advertisement -
- Advertisement -

“ರಾಜಕೀಯ ಪಕ್ಷವಾದ BJP ಶಾಲಾ ಕಾಲೇಜುಗಳಲ್ಲಿ ಮೋದಿಯವರ ಹುಟ್ಟುಹಬ್ಬವನ್ನು ಆಚರಣೆ ಮಾಡಬಹುದೆ? ಇಂತಹ ಮೂರು ಬಿಟ್ಟವರ ಕೆಲಸವನ್ನು BJP ಮಾಡುತ್ತಿದೆ. ನಮ್ಮೂರಿನ ಹೈಸ್ಕೂಲಿನ ಶಾಲಾ ವಿದ್ಯಾರ್ಥಿಗಳನ್ನು ಹೀಗೆ ರಾಜಕೀಯ ಕಾರ್ಯಕ್ರಮದಲ್ಲಿ ಬಳಸಿಕೊಳ್ಳಲು ಯಾರು ಇವರಿಗೆ ಅನುಮತಿ ಕೊಟ್ಟವರು?

ಪಕ್ಷದ ಚಿಹ್ನೆಗಳನ್ನು ಬಳಸಿಕೊಂಡು, ರಾಜಕೀಯ ನಾಯಕರನ್ನು ಸೇರಿಸಿಕೊಂಡು ಶಾಲಾ ಅವಧಿಯಲ್ಲಿ ಹೀಗೆ ಕಾರ್ಯಕ್ರಮ ಮಾಡುವುದು ಎಷ್ಟರ ಮಟ್ಟಿಗೆ ಸರಿ? ಇದು ಮಕ್ಕಳ ಬೆಳವಣಿಗೆ ಮೇಲೆ ಪ್ರಭಾವ ಬೀರುವುದಿಲ್ಲವೇ? ನಾಳೆ ಕಾಂಗ್ರೆಸ್, ನಾಳಿದ್ದು ಜೆ‌.ಡಿ.ಎಸ್ ಕಾರ್ಯಕ್ರಮ ಮಾಡುತ್ತೇವೆ ಎಂದರೆ ಶಾಲಾ ಮುಖ್ಯಸ್ಥರು ಅನುಮತಿ ಕೊಡುತ್ತಾರಾ? ತಾಲ್ಲೂಕಿನ ಶಿಕ್ಷಣಾಧಿಕಾರಿಗಳು ಮಲಗಿದ್ದಾರೆಯೇ? ಚೇ.. ನಾಚಿಕೆ ಆಗುತ್ತಿದೆ ಎಂಬಂತಹ ವಾಟ್ಸಾಪ್ ಸಂದೇಶವೊಂದು ವೈರಲ್ ಆಗಿದೆ. ಜೊತೆಗೆ ಕಾರ್ಯಕ್ರಮದ ಫೋಟೊಗಳು ಹರಿದಾಡುತ್ತಿವೆ.

ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಹಿರೆಮಸಳಿ ಗ್ರಾಮದಲ್ಲಿ ಸರ್ಕಾರಿ ಪ್ರೌಢಶಾಲೆಯಲ್ಲಿ ಬಿಜೆಪಿ ಮುಖಂಡರು ತಮ್ಮ ಪಕ್ಷದ ಬ್ಯಾನರ್ ಹಾಕಿ ಮೋದಿ ಜನ್ಮದಿನಾಚರಣೆ ಕಾರ್ಯಕ್ರಮ ಮಾಡಿದ್ದಾರೆ. ಭಾಷಣಗಳನ್ನು ಸಹ ಮಾಡಿದ್ದಲ್ಲದೇ, ಮೋದಿಯವರ ಬಗ್ಗೆ ವಿದ್ಯಾರ್ಥಿಗಳಿಂದಲೂ ಮಾತಾಡಿದ್ದಾರೆ. ಈ ಕುರಿತು ಅದೇ ಊರಿನ ಬಹಳಷ್ಟು ಜನರು ಕಾರ್ಯಕ್ರಮದ ಬಗ್ಗೆ ಅಪಸ್ವರ ಎತ್ತಿದ್ದಾರೆ.

ನರೇಂದ್ರ ಮೋದಿಯವರು ನಮ್ಮ ದೇಶದ ಪ್ರಧಾನಿಗಳು. ಅವರಿಗೆ ನಾವು ಗೌರವಿಸುವ, ಶುಭ ಹಾರೈಸುವ ಹಕ್ಕು ಎಲ್ಲರಿಗೂ ಇದೆ. ಆದರೆ ಅದು ಖಾಸಗಿಯಾಗಿರಬೇಕೆ ಹೊರತು ಸಾರ್ವಜನಿಕವಾಗಿರಬಾರದು. ಅದರಲ್ಲೂ ಶಾಲಾ ಕಾಲೇಜುಗಳು ಪಕ್ಷರಾಜಕೀಯ ಮುಕ್ತ ಕಲಿಕೆಯ ತಾಣಗಳು. ಅಲ್ಲಿ ಒಂದು ಪಕ್ಷದ ಪರವಾಗಿ ಕಾರ್ಯಕ್ರಮ ಮಾಡುವುದು ಯಾವುದೇ ಕಾರಣಕ್ಕೂ ಸರಿಯಲ್ಲ. ಇಂತಹ ಕನಿಷ್ಠ ಸಾಮಾನ್ಯ ಜ್ಞಾನವೂ ಬಿಜೆಪಿಗಿಲ್ಲವೇ? ಅಥವಾ ಗೊತ್ತಿದ್ದೂ ಸಹ ಕೇಂದ್ರ ಮತ್ತು ರಾಜ್ಯ ಎರಡೂ ಕಡೆ ನಮ್ಮ ಸರಕಾರವೇ ಇದೆ ಎಂಬ ಅಹಂಕಾರದಿಂದ ಹೀಗೆ ಮಾಡಿದ್ದಾರೆಯೇ ಎಂಬ ಪ್ರಶ್ನೆಗಳು ಎದ್ದಿವೆ.

ಇದೊಂದು ಕೆಟ್ಟ ಮಾದರಿಯಾಗಿದ್ದು, ತೀರಾ ರಾಜಕೀಯ ಲಾಭಕ್ಕಾಗಿ ನಡೆಸಿದ ಕುತಂತ್ರದಂತೆ ಕಾಣುತ್ತಿದೆ. ಬೆಳೆಯುವ ಮಕ್ಕಳ ಮನಸ್ಸಿನಲ್ಲಿ ಯಾವುದೇ ಪಕ್ಷದ ಸಿದ್ಧಾಂತವನ್ನು ತುರುಕುವುದು ಅಕ್ಷಮ್ಯ ಅಪರಾಧ.. ಮಕ್ಕಳು ಸ್ವಂತಂತ್ರವಾಗಿ ಅಭ್ಯಸಿಸಿ ತಮ್ಮ ಅಭಿಪ್ರಾಯಗಳನ್ನು ರೂಪಿಸಿಕೊಳ್ಳುವಂತೆ ಶಿಕ್ಷಣವಿರಬೇಕು. ಚಿಕ್ಕ ವಯಸ್ಸಿನಲ್ಲಿಯೇ ಅವರ ಮೇಲೆ ಬಲವಂತವಾಗಿ ಪಕ್ಷ ರಾಜಕೀಯವನ್ನು ಹೇರುವುದು ಮಕ್ಕಳ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ವಿಜಯಪುರದಲ್ಲಿ ನಡೆದಿರುವ ಈ ಕಾನೂನು ಬಾಹಿರ ಕಾರ್ಯಕ್ರಮದ ಕುರಿತು ಕೂಡಲೇ ಶಿಕ್ಷಣ ಇಲಾಖೆ ಸಮರ್ಪಕ ತನಿಖೆ ನಡೆಸಿ ಕ್ರಮ ಜರುಗಿಸಬೇಕು. ಮುಂದೆ ಇಂತಹ ಘಟನೆಗಳು ಜರುಗದಂತೆ ಎಚ್ಚರ ವಹಿಸಬೇಕೆಂದು ವಿಜಯಪುರದ ವಕೀಲರು ಮತ್ತು ಯುವಜನ ಹೋರಾಟಗಾರರಾದ ಶ್ರೀನಾಥ್ ಪೂಜಾರಿಯವರು ಒತ್ತಾಯಿಸಿದ್ದಾರೆ.

RSS ಗಾಗಿ ಅರ್ಧವಾರ್ಷಿಕ ಪರೀಕ್ಷೆಯನ್ನು ಮುಂಚಿತವಾಗಿ ನಡೆಸುತ್ತಿರುವ ಉಡುಪಿ ಜಿಲ್ಲಾಡಳಿತ

ಉಡುಪಿಯಲ್ಲಿ ಅರ್ಧವಾರ್ಷಿಕ ಪರೀಕ್ಷೆ ಬಹಳಷ್ಟು ಮುಂಚಿತವಾಗಿ ನಡೆಯಲಿದೆ. ಏಕೆ ಗೊತ್ತೆ? RSS ನವರು ಅಕ್ಟೋಬರ್ 9 ರಿಂದ 16 ರವರೆಗೆ ನಡೆಸುವ ITC ತರಬೇತಿಯಲ್ಲಿ ಮಕ್ಕಳನ್ನು ಭಾಗವಹಿಸಲು ಅನುವು ಮಾಡಿ ಕೊಡುವ ಸಲುವಾಗಿ ಪರೀಕ್ಷಾ ದಿನಾಂಕದಲ್ಲಿ ಬದಲಾವಣೆ ಮಾಡಲಾಗಿದೆಯಂತೆ. ಉಸ್ತುವಾರಿ ಸಚಿವರ ಸಭೆಯಲ್ಲಿ RSS ಮುಖಂಡರು ಶಿಕ್ಷಣ ಇಲಾಖೆಯ ಉಪನಿರ್ದೇಶಕರನ್ನು ಕರೆಸಿ ಆದೇಶ ನೀಡಲಾಗಿದೆಯಂತೆ.. ಹೀಗೊಂದು ಸುದ್ದಿ ಉಡುಪಿಯಿಂದ ಹೊರಬಿದ್ದಿದೆ.

“ಶಿಕ್ಷಣದ ಉದ್ದೇಶ ಮಾನವೀಯವಾದ, ಸಮಾನವಾದ, ಪ್ರಜಾತಾಂತ್ರಿಕವಾದ, ಬಹುವೈವಿಧ್ಯತೆಯನ್ನು ಗೌರವಿಸುವ ಸಮಾಜ ನಿರ್ಮಾಣ ಮಾಡುವುದಾಗಿದೆ”. ಆದರೆ ಇಂದು ಬಿಜೆಪಿ ಸೇರಿದಂತೆ ಕೆಲವು ಪಕ್ಷಗಳು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಶಾಲಾ ಕಾಲೇಜುಗಳಿಗೆ ಮನಬಂದಂತೆ ನುಗ್ಗಿ ತಮ್ಮ ಅಜೆಂಡಾಗಳನ್ನು ಮಕ್ಕಳ ಮನಸ್ಸಲ್ಲಿ ತುರುಕುತ್ತಿರುವುದು ಅಪಾಯಕಾರಿ ನಡೆಯಾಗಿದೆ. ಇದರ ವಿರುದ್ಧ ಪ್ರಜಾತಂತ್ರವನ್ನು ಉಳಿಸುವ ಎಲ್ಲಾ ಸಂಘಟನೆಗಳು ಒಗ್ಗೂಡಿ ಹೋರಾಡಬೇಕಾದ ಅನಿವಾರ್ಯತೆಯಿದೆ ಎಂದು ಕೆವಿಎಸ್ ಸಂಚಾಲಕ ಸರೋವರ್ ಬೆಂಕಿಕೆರೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. This is good from childhood patriotism will come. Nice idea. Only frustrated depressed lot can thing negative of this programme. Nothing wrong in conducting and involving future citizens into main stream of future India.?????✌?????

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...