Homeಕರ್ನಾಟಕಸರ್ಕಾರಿ ಶಾಲೆಯಲ್ಲಿ ಬಿಜೆಪಿ ಪಕ್ಷದ ಕಾರ್ಯಕ್ರಮ: RSS ಗಾಗಿ ಪರೀಕ್ಷೆ ದಿನಾಂಕಗಳೇ ಅದಲು ಬದಲು..

ಸರ್ಕಾರಿ ಶಾಲೆಯಲ್ಲಿ ಬಿಜೆಪಿ ಪಕ್ಷದ ಕಾರ್ಯಕ್ರಮ: RSS ಗಾಗಿ ಪರೀಕ್ಷೆ ದಿನಾಂಕಗಳೇ ಅದಲು ಬದಲು..

- Advertisement -
- Advertisement -

“ರಾಜಕೀಯ ಪಕ್ಷವಾದ BJP ಶಾಲಾ ಕಾಲೇಜುಗಳಲ್ಲಿ ಮೋದಿಯವರ ಹುಟ್ಟುಹಬ್ಬವನ್ನು ಆಚರಣೆ ಮಾಡಬಹುದೆ? ಇಂತಹ ಮೂರು ಬಿಟ್ಟವರ ಕೆಲಸವನ್ನು BJP ಮಾಡುತ್ತಿದೆ. ನಮ್ಮೂರಿನ ಹೈಸ್ಕೂಲಿನ ಶಾಲಾ ವಿದ್ಯಾರ್ಥಿಗಳನ್ನು ಹೀಗೆ ರಾಜಕೀಯ ಕಾರ್ಯಕ್ರಮದಲ್ಲಿ ಬಳಸಿಕೊಳ್ಳಲು ಯಾರು ಇವರಿಗೆ ಅನುಮತಿ ಕೊಟ್ಟವರು?

ಪಕ್ಷದ ಚಿಹ್ನೆಗಳನ್ನು ಬಳಸಿಕೊಂಡು, ರಾಜಕೀಯ ನಾಯಕರನ್ನು ಸೇರಿಸಿಕೊಂಡು ಶಾಲಾ ಅವಧಿಯಲ್ಲಿ ಹೀಗೆ ಕಾರ್ಯಕ್ರಮ ಮಾಡುವುದು ಎಷ್ಟರ ಮಟ್ಟಿಗೆ ಸರಿ? ಇದು ಮಕ್ಕಳ ಬೆಳವಣಿಗೆ ಮೇಲೆ ಪ್ರಭಾವ ಬೀರುವುದಿಲ್ಲವೇ? ನಾಳೆ ಕಾಂಗ್ರೆಸ್, ನಾಳಿದ್ದು ಜೆ‌.ಡಿ.ಎಸ್ ಕಾರ್ಯಕ್ರಮ ಮಾಡುತ್ತೇವೆ ಎಂದರೆ ಶಾಲಾ ಮುಖ್ಯಸ್ಥರು ಅನುಮತಿ ಕೊಡುತ್ತಾರಾ? ತಾಲ್ಲೂಕಿನ ಶಿಕ್ಷಣಾಧಿಕಾರಿಗಳು ಮಲಗಿದ್ದಾರೆಯೇ? ಚೇ.. ನಾಚಿಕೆ ಆಗುತ್ತಿದೆ ಎಂಬಂತಹ ವಾಟ್ಸಾಪ್ ಸಂದೇಶವೊಂದು ವೈರಲ್ ಆಗಿದೆ. ಜೊತೆಗೆ ಕಾರ್ಯಕ್ರಮದ ಫೋಟೊಗಳು ಹರಿದಾಡುತ್ತಿವೆ.

ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಹಿರೆಮಸಳಿ ಗ್ರಾಮದಲ್ಲಿ ಸರ್ಕಾರಿ ಪ್ರೌಢಶಾಲೆಯಲ್ಲಿ ಬಿಜೆಪಿ ಮುಖಂಡರು ತಮ್ಮ ಪಕ್ಷದ ಬ್ಯಾನರ್ ಹಾಕಿ ಮೋದಿ ಜನ್ಮದಿನಾಚರಣೆ ಕಾರ್ಯಕ್ರಮ ಮಾಡಿದ್ದಾರೆ. ಭಾಷಣಗಳನ್ನು ಸಹ ಮಾಡಿದ್ದಲ್ಲದೇ, ಮೋದಿಯವರ ಬಗ್ಗೆ ವಿದ್ಯಾರ್ಥಿಗಳಿಂದಲೂ ಮಾತಾಡಿದ್ದಾರೆ. ಈ ಕುರಿತು ಅದೇ ಊರಿನ ಬಹಳಷ್ಟು ಜನರು ಕಾರ್ಯಕ್ರಮದ ಬಗ್ಗೆ ಅಪಸ್ವರ ಎತ್ತಿದ್ದಾರೆ.

ನರೇಂದ್ರ ಮೋದಿಯವರು ನಮ್ಮ ದೇಶದ ಪ್ರಧಾನಿಗಳು. ಅವರಿಗೆ ನಾವು ಗೌರವಿಸುವ, ಶುಭ ಹಾರೈಸುವ ಹಕ್ಕು ಎಲ್ಲರಿಗೂ ಇದೆ. ಆದರೆ ಅದು ಖಾಸಗಿಯಾಗಿರಬೇಕೆ ಹೊರತು ಸಾರ್ವಜನಿಕವಾಗಿರಬಾರದು. ಅದರಲ್ಲೂ ಶಾಲಾ ಕಾಲೇಜುಗಳು ಪಕ್ಷರಾಜಕೀಯ ಮುಕ್ತ ಕಲಿಕೆಯ ತಾಣಗಳು. ಅಲ್ಲಿ ಒಂದು ಪಕ್ಷದ ಪರವಾಗಿ ಕಾರ್ಯಕ್ರಮ ಮಾಡುವುದು ಯಾವುದೇ ಕಾರಣಕ್ಕೂ ಸರಿಯಲ್ಲ. ಇಂತಹ ಕನಿಷ್ಠ ಸಾಮಾನ್ಯ ಜ್ಞಾನವೂ ಬಿಜೆಪಿಗಿಲ್ಲವೇ? ಅಥವಾ ಗೊತ್ತಿದ್ದೂ ಸಹ ಕೇಂದ್ರ ಮತ್ತು ರಾಜ್ಯ ಎರಡೂ ಕಡೆ ನಮ್ಮ ಸರಕಾರವೇ ಇದೆ ಎಂಬ ಅಹಂಕಾರದಿಂದ ಹೀಗೆ ಮಾಡಿದ್ದಾರೆಯೇ ಎಂಬ ಪ್ರಶ್ನೆಗಳು ಎದ್ದಿವೆ.

ಇದೊಂದು ಕೆಟ್ಟ ಮಾದರಿಯಾಗಿದ್ದು, ತೀರಾ ರಾಜಕೀಯ ಲಾಭಕ್ಕಾಗಿ ನಡೆಸಿದ ಕುತಂತ್ರದಂತೆ ಕಾಣುತ್ತಿದೆ. ಬೆಳೆಯುವ ಮಕ್ಕಳ ಮನಸ್ಸಿನಲ್ಲಿ ಯಾವುದೇ ಪಕ್ಷದ ಸಿದ್ಧಾಂತವನ್ನು ತುರುಕುವುದು ಅಕ್ಷಮ್ಯ ಅಪರಾಧ.. ಮಕ್ಕಳು ಸ್ವಂತಂತ್ರವಾಗಿ ಅಭ್ಯಸಿಸಿ ತಮ್ಮ ಅಭಿಪ್ರಾಯಗಳನ್ನು ರೂಪಿಸಿಕೊಳ್ಳುವಂತೆ ಶಿಕ್ಷಣವಿರಬೇಕು. ಚಿಕ್ಕ ವಯಸ್ಸಿನಲ್ಲಿಯೇ ಅವರ ಮೇಲೆ ಬಲವಂತವಾಗಿ ಪಕ್ಷ ರಾಜಕೀಯವನ್ನು ಹೇರುವುದು ಮಕ್ಕಳ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ವಿಜಯಪುರದಲ್ಲಿ ನಡೆದಿರುವ ಈ ಕಾನೂನು ಬಾಹಿರ ಕಾರ್ಯಕ್ರಮದ ಕುರಿತು ಕೂಡಲೇ ಶಿಕ್ಷಣ ಇಲಾಖೆ ಸಮರ್ಪಕ ತನಿಖೆ ನಡೆಸಿ ಕ್ರಮ ಜರುಗಿಸಬೇಕು. ಮುಂದೆ ಇಂತಹ ಘಟನೆಗಳು ಜರುಗದಂತೆ ಎಚ್ಚರ ವಹಿಸಬೇಕೆಂದು ವಿಜಯಪುರದ ವಕೀಲರು ಮತ್ತು ಯುವಜನ ಹೋರಾಟಗಾರರಾದ ಶ್ರೀನಾಥ್ ಪೂಜಾರಿಯವರು ಒತ್ತಾಯಿಸಿದ್ದಾರೆ.

RSS ಗಾಗಿ ಅರ್ಧವಾರ್ಷಿಕ ಪರೀಕ್ಷೆಯನ್ನು ಮುಂಚಿತವಾಗಿ ನಡೆಸುತ್ತಿರುವ ಉಡುಪಿ ಜಿಲ್ಲಾಡಳಿತ

ಉಡುಪಿಯಲ್ಲಿ ಅರ್ಧವಾರ್ಷಿಕ ಪರೀಕ್ಷೆ ಬಹಳಷ್ಟು ಮುಂಚಿತವಾಗಿ ನಡೆಯಲಿದೆ. ಏಕೆ ಗೊತ್ತೆ? RSS ನವರು ಅಕ್ಟೋಬರ್ 9 ರಿಂದ 16 ರವರೆಗೆ ನಡೆಸುವ ITC ತರಬೇತಿಯಲ್ಲಿ ಮಕ್ಕಳನ್ನು ಭಾಗವಹಿಸಲು ಅನುವು ಮಾಡಿ ಕೊಡುವ ಸಲುವಾಗಿ ಪರೀಕ್ಷಾ ದಿನಾಂಕದಲ್ಲಿ ಬದಲಾವಣೆ ಮಾಡಲಾಗಿದೆಯಂತೆ. ಉಸ್ತುವಾರಿ ಸಚಿವರ ಸಭೆಯಲ್ಲಿ RSS ಮುಖಂಡರು ಶಿಕ್ಷಣ ಇಲಾಖೆಯ ಉಪನಿರ್ದೇಶಕರನ್ನು ಕರೆಸಿ ಆದೇಶ ನೀಡಲಾಗಿದೆಯಂತೆ.. ಹೀಗೊಂದು ಸುದ್ದಿ ಉಡುಪಿಯಿಂದ ಹೊರಬಿದ್ದಿದೆ.

“ಶಿಕ್ಷಣದ ಉದ್ದೇಶ ಮಾನವೀಯವಾದ, ಸಮಾನವಾದ, ಪ್ರಜಾತಾಂತ್ರಿಕವಾದ, ಬಹುವೈವಿಧ್ಯತೆಯನ್ನು ಗೌರವಿಸುವ ಸಮಾಜ ನಿರ್ಮಾಣ ಮಾಡುವುದಾಗಿದೆ”. ಆದರೆ ಇಂದು ಬಿಜೆಪಿ ಸೇರಿದಂತೆ ಕೆಲವು ಪಕ್ಷಗಳು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಶಾಲಾ ಕಾಲೇಜುಗಳಿಗೆ ಮನಬಂದಂತೆ ನುಗ್ಗಿ ತಮ್ಮ ಅಜೆಂಡಾಗಳನ್ನು ಮಕ್ಕಳ ಮನಸ್ಸಲ್ಲಿ ತುರುಕುತ್ತಿರುವುದು ಅಪಾಯಕಾರಿ ನಡೆಯಾಗಿದೆ. ಇದರ ವಿರುದ್ಧ ಪ್ರಜಾತಂತ್ರವನ್ನು ಉಳಿಸುವ ಎಲ್ಲಾ ಸಂಘಟನೆಗಳು ಒಗ್ಗೂಡಿ ಹೋರಾಡಬೇಕಾದ ಅನಿವಾರ್ಯತೆಯಿದೆ ಎಂದು ಕೆವಿಎಸ್ ಸಂಚಾಲಕ ಸರೋವರ್ ಬೆಂಕಿಕೆರೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. This is good from childhood patriotism will come. Nice idea. Only frustrated depressed lot can thing negative of this programme. Nothing wrong in conducting and involving future citizens into main stream of future India.?????✌?????

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...