Homeಕರ್ನಾಟಕಸರ್ಕಾರಿ ಶಾಲೆಯಲ್ಲಿ ಬಿಜೆಪಿ ಪಕ್ಷದ ಕಾರ್ಯಕ್ರಮ: RSS ಗಾಗಿ ಪರೀಕ್ಷೆ ದಿನಾಂಕಗಳೇ ಅದಲು ಬದಲು..

ಸರ್ಕಾರಿ ಶಾಲೆಯಲ್ಲಿ ಬಿಜೆಪಿ ಪಕ್ಷದ ಕಾರ್ಯಕ್ರಮ: RSS ಗಾಗಿ ಪರೀಕ್ಷೆ ದಿನಾಂಕಗಳೇ ಅದಲು ಬದಲು..

- Advertisement -
- Advertisement -

“ರಾಜಕೀಯ ಪಕ್ಷವಾದ BJP ಶಾಲಾ ಕಾಲೇಜುಗಳಲ್ಲಿ ಮೋದಿಯವರ ಹುಟ್ಟುಹಬ್ಬವನ್ನು ಆಚರಣೆ ಮಾಡಬಹುದೆ? ಇಂತಹ ಮೂರು ಬಿಟ್ಟವರ ಕೆಲಸವನ್ನು BJP ಮಾಡುತ್ತಿದೆ. ನಮ್ಮೂರಿನ ಹೈಸ್ಕೂಲಿನ ಶಾಲಾ ವಿದ್ಯಾರ್ಥಿಗಳನ್ನು ಹೀಗೆ ರಾಜಕೀಯ ಕಾರ್ಯಕ್ರಮದಲ್ಲಿ ಬಳಸಿಕೊಳ್ಳಲು ಯಾರು ಇವರಿಗೆ ಅನುಮತಿ ಕೊಟ್ಟವರು?

ಪಕ್ಷದ ಚಿಹ್ನೆಗಳನ್ನು ಬಳಸಿಕೊಂಡು, ರಾಜಕೀಯ ನಾಯಕರನ್ನು ಸೇರಿಸಿಕೊಂಡು ಶಾಲಾ ಅವಧಿಯಲ್ಲಿ ಹೀಗೆ ಕಾರ್ಯಕ್ರಮ ಮಾಡುವುದು ಎಷ್ಟರ ಮಟ್ಟಿಗೆ ಸರಿ? ಇದು ಮಕ್ಕಳ ಬೆಳವಣಿಗೆ ಮೇಲೆ ಪ್ರಭಾವ ಬೀರುವುದಿಲ್ಲವೇ? ನಾಳೆ ಕಾಂಗ್ರೆಸ್, ನಾಳಿದ್ದು ಜೆ‌.ಡಿ.ಎಸ್ ಕಾರ್ಯಕ್ರಮ ಮಾಡುತ್ತೇವೆ ಎಂದರೆ ಶಾಲಾ ಮುಖ್ಯಸ್ಥರು ಅನುಮತಿ ಕೊಡುತ್ತಾರಾ? ತಾಲ್ಲೂಕಿನ ಶಿಕ್ಷಣಾಧಿಕಾರಿಗಳು ಮಲಗಿದ್ದಾರೆಯೇ? ಚೇ.. ನಾಚಿಕೆ ಆಗುತ್ತಿದೆ ಎಂಬಂತಹ ವಾಟ್ಸಾಪ್ ಸಂದೇಶವೊಂದು ವೈರಲ್ ಆಗಿದೆ. ಜೊತೆಗೆ ಕಾರ್ಯಕ್ರಮದ ಫೋಟೊಗಳು ಹರಿದಾಡುತ್ತಿವೆ.

ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಹಿರೆಮಸಳಿ ಗ್ರಾಮದಲ್ಲಿ ಸರ್ಕಾರಿ ಪ್ರೌಢಶಾಲೆಯಲ್ಲಿ ಬಿಜೆಪಿ ಮುಖಂಡರು ತಮ್ಮ ಪಕ್ಷದ ಬ್ಯಾನರ್ ಹಾಕಿ ಮೋದಿ ಜನ್ಮದಿನಾಚರಣೆ ಕಾರ್ಯಕ್ರಮ ಮಾಡಿದ್ದಾರೆ. ಭಾಷಣಗಳನ್ನು ಸಹ ಮಾಡಿದ್ದಲ್ಲದೇ, ಮೋದಿಯವರ ಬಗ್ಗೆ ವಿದ್ಯಾರ್ಥಿಗಳಿಂದಲೂ ಮಾತಾಡಿದ್ದಾರೆ. ಈ ಕುರಿತು ಅದೇ ಊರಿನ ಬಹಳಷ್ಟು ಜನರು ಕಾರ್ಯಕ್ರಮದ ಬಗ್ಗೆ ಅಪಸ್ವರ ಎತ್ತಿದ್ದಾರೆ.

ನರೇಂದ್ರ ಮೋದಿಯವರು ನಮ್ಮ ದೇಶದ ಪ್ರಧಾನಿಗಳು. ಅವರಿಗೆ ನಾವು ಗೌರವಿಸುವ, ಶುಭ ಹಾರೈಸುವ ಹಕ್ಕು ಎಲ್ಲರಿಗೂ ಇದೆ. ಆದರೆ ಅದು ಖಾಸಗಿಯಾಗಿರಬೇಕೆ ಹೊರತು ಸಾರ್ವಜನಿಕವಾಗಿರಬಾರದು. ಅದರಲ್ಲೂ ಶಾಲಾ ಕಾಲೇಜುಗಳು ಪಕ್ಷರಾಜಕೀಯ ಮುಕ್ತ ಕಲಿಕೆಯ ತಾಣಗಳು. ಅಲ್ಲಿ ಒಂದು ಪಕ್ಷದ ಪರವಾಗಿ ಕಾರ್ಯಕ್ರಮ ಮಾಡುವುದು ಯಾವುದೇ ಕಾರಣಕ್ಕೂ ಸರಿಯಲ್ಲ. ಇಂತಹ ಕನಿಷ್ಠ ಸಾಮಾನ್ಯ ಜ್ಞಾನವೂ ಬಿಜೆಪಿಗಿಲ್ಲವೇ? ಅಥವಾ ಗೊತ್ತಿದ್ದೂ ಸಹ ಕೇಂದ್ರ ಮತ್ತು ರಾಜ್ಯ ಎರಡೂ ಕಡೆ ನಮ್ಮ ಸರಕಾರವೇ ಇದೆ ಎಂಬ ಅಹಂಕಾರದಿಂದ ಹೀಗೆ ಮಾಡಿದ್ದಾರೆಯೇ ಎಂಬ ಪ್ರಶ್ನೆಗಳು ಎದ್ದಿವೆ.

ಇದೊಂದು ಕೆಟ್ಟ ಮಾದರಿಯಾಗಿದ್ದು, ತೀರಾ ರಾಜಕೀಯ ಲಾಭಕ್ಕಾಗಿ ನಡೆಸಿದ ಕುತಂತ್ರದಂತೆ ಕಾಣುತ್ತಿದೆ. ಬೆಳೆಯುವ ಮಕ್ಕಳ ಮನಸ್ಸಿನಲ್ಲಿ ಯಾವುದೇ ಪಕ್ಷದ ಸಿದ್ಧಾಂತವನ್ನು ತುರುಕುವುದು ಅಕ್ಷಮ್ಯ ಅಪರಾಧ.. ಮಕ್ಕಳು ಸ್ವಂತಂತ್ರವಾಗಿ ಅಭ್ಯಸಿಸಿ ತಮ್ಮ ಅಭಿಪ್ರಾಯಗಳನ್ನು ರೂಪಿಸಿಕೊಳ್ಳುವಂತೆ ಶಿಕ್ಷಣವಿರಬೇಕು. ಚಿಕ್ಕ ವಯಸ್ಸಿನಲ್ಲಿಯೇ ಅವರ ಮೇಲೆ ಬಲವಂತವಾಗಿ ಪಕ್ಷ ರಾಜಕೀಯವನ್ನು ಹೇರುವುದು ಮಕ್ಕಳ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ವಿಜಯಪುರದಲ್ಲಿ ನಡೆದಿರುವ ಈ ಕಾನೂನು ಬಾಹಿರ ಕಾರ್ಯಕ್ರಮದ ಕುರಿತು ಕೂಡಲೇ ಶಿಕ್ಷಣ ಇಲಾಖೆ ಸಮರ್ಪಕ ತನಿಖೆ ನಡೆಸಿ ಕ್ರಮ ಜರುಗಿಸಬೇಕು. ಮುಂದೆ ಇಂತಹ ಘಟನೆಗಳು ಜರುಗದಂತೆ ಎಚ್ಚರ ವಹಿಸಬೇಕೆಂದು ವಿಜಯಪುರದ ವಕೀಲರು ಮತ್ತು ಯುವಜನ ಹೋರಾಟಗಾರರಾದ ಶ್ರೀನಾಥ್ ಪೂಜಾರಿಯವರು ಒತ್ತಾಯಿಸಿದ್ದಾರೆ.

RSS ಗಾಗಿ ಅರ್ಧವಾರ್ಷಿಕ ಪರೀಕ್ಷೆಯನ್ನು ಮುಂಚಿತವಾಗಿ ನಡೆಸುತ್ತಿರುವ ಉಡುಪಿ ಜಿಲ್ಲಾಡಳಿತ

ಉಡುಪಿಯಲ್ಲಿ ಅರ್ಧವಾರ್ಷಿಕ ಪರೀಕ್ಷೆ ಬಹಳಷ್ಟು ಮುಂಚಿತವಾಗಿ ನಡೆಯಲಿದೆ. ಏಕೆ ಗೊತ್ತೆ? RSS ನವರು ಅಕ್ಟೋಬರ್ 9 ರಿಂದ 16 ರವರೆಗೆ ನಡೆಸುವ ITC ತರಬೇತಿಯಲ್ಲಿ ಮಕ್ಕಳನ್ನು ಭಾಗವಹಿಸಲು ಅನುವು ಮಾಡಿ ಕೊಡುವ ಸಲುವಾಗಿ ಪರೀಕ್ಷಾ ದಿನಾಂಕದಲ್ಲಿ ಬದಲಾವಣೆ ಮಾಡಲಾಗಿದೆಯಂತೆ. ಉಸ್ತುವಾರಿ ಸಚಿವರ ಸಭೆಯಲ್ಲಿ RSS ಮುಖಂಡರು ಶಿಕ್ಷಣ ಇಲಾಖೆಯ ಉಪನಿರ್ದೇಶಕರನ್ನು ಕರೆಸಿ ಆದೇಶ ನೀಡಲಾಗಿದೆಯಂತೆ.. ಹೀಗೊಂದು ಸುದ್ದಿ ಉಡುಪಿಯಿಂದ ಹೊರಬಿದ್ದಿದೆ.

“ಶಿಕ್ಷಣದ ಉದ್ದೇಶ ಮಾನವೀಯವಾದ, ಸಮಾನವಾದ, ಪ್ರಜಾತಾಂತ್ರಿಕವಾದ, ಬಹುವೈವಿಧ್ಯತೆಯನ್ನು ಗೌರವಿಸುವ ಸಮಾಜ ನಿರ್ಮಾಣ ಮಾಡುವುದಾಗಿದೆ”. ಆದರೆ ಇಂದು ಬಿಜೆಪಿ ಸೇರಿದಂತೆ ಕೆಲವು ಪಕ್ಷಗಳು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಶಾಲಾ ಕಾಲೇಜುಗಳಿಗೆ ಮನಬಂದಂತೆ ನುಗ್ಗಿ ತಮ್ಮ ಅಜೆಂಡಾಗಳನ್ನು ಮಕ್ಕಳ ಮನಸ್ಸಲ್ಲಿ ತುರುಕುತ್ತಿರುವುದು ಅಪಾಯಕಾರಿ ನಡೆಯಾಗಿದೆ. ಇದರ ವಿರುದ್ಧ ಪ್ರಜಾತಂತ್ರವನ್ನು ಉಳಿಸುವ ಎಲ್ಲಾ ಸಂಘಟನೆಗಳು ಒಗ್ಗೂಡಿ ಹೋರಾಡಬೇಕಾದ ಅನಿವಾರ್ಯತೆಯಿದೆ ಎಂದು ಕೆವಿಎಸ್ ಸಂಚಾಲಕ ಸರೋವರ್ ಬೆಂಕಿಕೆರೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. This is good from childhood patriotism will come. Nice idea. Only frustrated depressed lot can thing negative of this programme. Nothing wrong in conducting and involving future citizens into main stream of future India.?????✌?????

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...