Homeಮುಖಪುಟಬಿಜೆಪಿ ಸಂಸದೀಯ ಮಂಡಳಿ: ಬಿ.ಎಸ್.ಯಡಿಯೂರಪ್ಪ ಒಳಗೆ, ನಿತಿನ್ ಗಡ್ಕರಿ ಔಟ್; ಆದಿತ್ಯನಾಥ್‌ಗೆ ಸ್ಥಾನವಿಲ್ಲ!

ಬಿಜೆಪಿ ಸಂಸದೀಯ ಮಂಡಳಿ: ಬಿ.ಎಸ್.ಯಡಿಯೂರಪ್ಪ ಒಳಗೆ, ನಿತಿನ್ ಗಡ್ಕರಿ ಔಟ್; ಆದಿತ್ಯನಾಥ್‌ಗೆ ಸ್ಥಾನವಿಲ್ಲ!

- Advertisement -
- Advertisement -

ಬಿಜೆಪಿಯ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ‘ಸಂಸದೀಯ ಮಂಡಳಿ’ಯಿಂದ ಒಕ್ಕೂಟ ಸರ್ಕಾರದ ಸಚಿವ ನಿತಿನ್ ಗಡ್ಕರಿ ಮತ್ತು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಚೌಹಾಣ್ ಅವರನ್ನು ಪಕ್ಷವೂ ಬುಧವಾರ ಕೈಬಿಟ್ಟಿದೆ. ಕರ್ನಾಟಕದಲ್ಲಿ ಮುಖ್ಯಮಂತ್ರಿ ಸ್ಥಾನದಿಂದ ಕಿತ್ತೊಗೆಯಲ್ಪಟ್ಟ ಬಿಎಸ್‌ ಯಡಿಯೂರಪ್ಪ ಅವರನ್ನು ಮಂಡಳಿಗೆ ಹೊಸದಾಗಿ ಸೇರಿಸಿಕೊಳ್ಳಲಾಗಿದೆ. ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡ ದೇವೇಂದ್ರ ಫಡ್ನವಿಸ್ ಅವರನ್ನು ಚುನಾವಣಾ ಸಮಿತಿಯಲ್ಲಿ ಸೇರಿಸಲಾಗಿದೆ

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಸಂಸದೀಯ ಮಂಡಳಿಗೆ ಮಾತ್ರವಲ್ಲದೆ, ಬಿಜೆಪಿ ಕೇಂದ್ರ ಚುನಾವಣಾ ಸಮಿತಿಗೆ ಕೂಡಾ ಸೇರ್ಪಡೆ ಮಾಡಲಾಗಿದೆ. ಸಂಸದೀಯ ಮಂಡಳಿಯು ಬಿಜೆಪಿಯ ಉನ್ನತ ಸಂಸ್ಥೆಯಾಗಿದ್ದು, ಮುಖ್ಯಮಂತ್ರಿಗಳು, ರಾಜ್ಯಗಳ ಮುಖ್ಯಸ್ಥರು ಮತ್ತು ಇತರ ಪ್ರಮುಖ ಪಾತ್ರಗಳನ್ನು ಬಗ್ಗೆ ನಿರ್ಧರಿಸುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಉತ್ತರ ಪ್ರದೇಶದಲ್ಲಿ ಬಿಜೆಪಿಯನ್ನು ಅಭೂತಪೂರ್ವವಾಗಿ ಎರಡನೇ ಅವಧಿಗೆ ಅಧಿಕಾರ ಹಿಡಿಯುವಂತೆ ಮಾಡಿದ ಸಿಎಂ ಆದಿತ್ಯನಾಥ್ ಅವರನ್ನು ಕೂಡಾ ಸಂಸದೀಯ ಮಂಡಳಿಗೆ ಸೇರ್ಪಡೆ ಮಾಡಲಾಗುತ್ತದೆ ಎಂದು ಹೇಳಲಾಗಿತ್ತಾದರೂ ಅವರನ್ನು ಇದರಿಂದ ಹೊರಗಿಟ್ಟಿದ್ದು ರಾಜಕೀಯ ವಲಯದಲ್ಲಿ ಆಶ್ಚರ್ಯಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಮಧ್ಯಪ್ರದೇಶ: 4 ವರ್ಷಗಳಲ್ಲಿ sc/st ದೌರ್ಜನ್ಯ ತಡೆ ಕಾಯ್ದೆಯಡಿ 33,000 ಕ್ಕೂ ಹೆಚ್ಚು ಪ್ರಕರಣ ದಾಖಲು

ಬಿ.ಎಸ್.ಯಡಿಯೂರಪ್ಪ, ಸರ್ಬಾನಂದ ಸೋನೋವಾಲ್, ಕೆ.ಲಕ್ಷ್ಮಣ್, ಇಕ್ಬಾಲ್ ಸಿಂಗ್ ಲಾಲ್‌ಪುರ, ಸುಧಾ ಯಾದವ್ ಮತ್ತು ಸತ್ಯನಾರಾಯಣ್ ಜತಿಯಾ ಸೇರಿದಂತೆ ಒಟ್ಟು ಆರು ಹೊಸ ಮುಖಗಳನ್ನು ಮಂಡಳಿಗೆ ಹೆಸರಿಸಲಾಗಿದೆ.

ಪಕ್ಷದ ಪ್ರಮುಖ ಸಮಿತಿಯಿಂದ ನಿತಿನ್ ಗಡ್ಕರಿ ಅವರನ್ನು ಕೈಬಿಟ್ಟಿರುವುದು ಭಾರಿ ಊಹಾಪೋಹಕ್ಕೆ ಕಾರಣವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರದಲ್ಲಿ ಹಿರಿಯ ಸಚಿವರಾಗಿರುವ ಗಡ್ಕರಿ ಅವರು ಬಿಜೆಪಿಯ ಮಾಜಿ ಅಧ್ಯಕ್ಷರೂ ಆಗಿದ್ದಾರೆ.

ಬಿಜೆಪಿಯು ಈ ವರೆಗೆ ಮಾಜಿ ಅಧ್ಯಕ್ಷರನ್ನು ಸಂಸದೀಯ ಮಂಡಳಿಯಲ್ಲಿ ಉಳಿಸಿಕೊಳ್ಳುವ ಸಾಂಪ್ರದಾಯವನ್ನು ಅನುಸರಿಸುತ್ತಾ ಬಂದಿದೆ. ಪಕ್ಷದ ಸೈದ್ಧಾಂತಿಕ ಮಾರ್ಗದರ್ಶಕ ಸಂಘಟನೆಯಾದ ಆರ್‌ಎಸ್‌ಎಸ್‌ನೊಂದಿಗೆ ಅವರ ಆಳವಾದ ಸಂಪರ್ಕದಿಂದಾಗಿ ತಮ್ಮ ಸ್ವಂತ ಸರ್ಕಾರದ ಮೇಲೆ ಆಗಾಗ್ಗೆ ಗುರಿ ಮಾಡಿಕೊಂಡಿದ್ದರು.

ಇದನ್ನೂ ಓದಿ: ಶಿಕಾರಿಪುರ ಕ್ಷೇತ್ರದಿಂದ ವಿಜಯೇಂದ್ರ ಸ್ಪರ್ಧೆ: ದೊಡ್ಡ ಅಂತರದಲ್ಲಿ ಗೆಲ್ಲಿಸಲು ಯಡಿಯೂರಪ್ಪ ಮನವಿ

ಬಿಜೆಪಿಯ ಮಾಜಿ ಅಧ್ಯಕ್ಷರೂ ಆಗಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸಂಸದೀಯ ಮಂಡಳಿಗೆ ಮರು ಪ್ರವೇಶ ಪಡೆದಿದ್ದಾರೆ. ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರನ್ನೂ ಸಂಸದೀಯ ಮಂಡಳಿಯಿಂದ ಕೈಬಿಡಲಾಗಿದ್ದು, 20 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದ ವ್ಯಕ್ತಿಗೆ ಭಾರಿ ಹಿನ್ನಡೆ ಅನುಭವಿಸಿದ್ದಾರೆ.

ಕಳೆದ ವರ್ಷ ಒಳಜಗಳ ಮತ್ತು ಭ್ರಷ್ಟಾಚಾರದ ಆರೋಪದ ಮೇಲೆ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು. ಪಕ್ಷದ ಅಲಿಖಿತ ನಿಯಮದ ಪ್ರಕಾರ 75 ವಯಸ್ಸಿನ ನಂತರ ಅಧಿಕಾರಕ್ಕೆ ಏರುವಂತಿಲ್ಲ, ಆದರೂ ಅವರು ತಮ್ಮ 77 ನೇ ವಯಸ್ಸಿನವರೆಗೂ ಮುಖ್ಯಮಂತ್ರಿಯಾಗಿದ್ದರು.

ಪ್ರಭಾವಿ ಲಿಂಗಾಯತ ರಾಜಕಾರಣಿಯಾಗಿರುವ ಯಡಿಯೂರಪ್ಪ ಅವರು ವರ್ಷಗಳಿಂದ ಅತೃಪ್ತರಾಗಿದ್ದು, ಮುಂದಿನ ವರ್ಷ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಅವರ ಸಹಕಾರವನ್ನು ಖಚಿತಪಡಿಸಿಕೊಳ್ಳಲು ಪಕ್ಷವು ಅವರನ್ನು ಸಮಾಧಾನಪಡಿಸಲು ಬಯಸಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ. ರಾಜ್ಯದಲ್ಲಿ ಲಿಂಗಾಯತ ಸಮುದಾಯವೂ ಬಿಜೆಪಿಯ ಪ್ರಬಲ ಓಟ್‌ ಬ್ಯಾಂಕ್ ಆಗಿದ್ದು, ರಾಜ್ಯದಾದ್ಯಂತ 18% ರಷ್ಟು ಮತಗಳನ್ನು ಹೊಂದಿದೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಶಿಕಾರಿಪುರ: ಯಡಿಯೂರಪ್ಪ ಸಂಸ್ಥಾನದಲ್ಲಿ ಬಿಜೆಪಿಯೇ ಕಾಣೆ!!

ಅಸ್ಸಾಂನಲ್ಲಿ ಬಿಜೆಪಿ ಪುನರಾಯ್ಕೆಯಾದ ನಂತರ ಹಿಮಂತ ಬಿಸ್ವಾ ಶರ್ಮಾಗೆ ದಾರಿ ಮಾಡಿಕೊಡಲು ಒಪ್ಪಿದ ಅಸ್ಸಾಂನ ಮಾಜಿ ಮುಖ್ಯಮಂತ್ರಿ ಸರ್ಬಾನಂದ ಸೋನೋವಾಲ್ ಅವರನ್ನು ಸಂಸದೀಯ ಮಂಡಳಿ ಮತ್ತು ಕೇಂದ್ರ ಚುನಾವಣಾ ಸಮಿತಿಗೆ ಹೆಸರಿಸಲಾಗಿದೆ. ಪ್ರಧಾನಿ ಮೋದಿ, ಅಮಿತ್ ಶಾ, ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಮಾತ್ರ ಈ ಸಮಿತಿಯಲ್ಲಿ ಸ್ಥಿರವಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....