Homeಮುಖಪುಟಬಿಜೆಪಿ ಸಂಸದೀಯ ಮಂಡಳಿ: ಬಿ.ಎಸ್.ಯಡಿಯೂರಪ್ಪ ಒಳಗೆ, ನಿತಿನ್ ಗಡ್ಕರಿ ಔಟ್; ಆದಿತ್ಯನಾಥ್‌ಗೆ ಸ್ಥಾನವಿಲ್ಲ!

ಬಿಜೆಪಿ ಸಂಸದೀಯ ಮಂಡಳಿ: ಬಿ.ಎಸ್.ಯಡಿಯೂರಪ್ಪ ಒಳಗೆ, ನಿತಿನ್ ಗಡ್ಕರಿ ಔಟ್; ಆದಿತ್ಯನಾಥ್‌ಗೆ ಸ್ಥಾನವಿಲ್ಲ!

- Advertisement -
- Advertisement -

ಬಿಜೆಪಿಯ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ‘ಸಂಸದೀಯ ಮಂಡಳಿ’ಯಿಂದ ಒಕ್ಕೂಟ ಸರ್ಕಾರದ ಸಚಿವ ನಿತಿನ್ ಗಡ್ಕರಿ ಮತ್ತು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಚೌಹಾಣ್ ಅವರನ್ನು ಪಕ್ಷವೂ ಬುಧವಾರ ಕೈಬಿಟ್ಟಿದೆ. ಕರ್ನಾಟಕದಲ್ಲಿ ಮುಖ್ಯಮಂತ್ರಿ ಸ್ಥಾನದಿಂದ ಕಿತ್ತೊಗೆಯಲ್ಪಟ್ಟ ಬಿಎಸ್‌ ಯಡಿಯೂರಪ್ಪ ಅವರನ್ನು ಮಂಡಳಿಗೆ ಹೊಸದಾಗಿ ಸೇರಿಸಿಕೊಳ್ಳಲಾಗಿದೆ. ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡ ದೇವೇಂದ್ರ ಫಡ್ನವಿಸ್ ಅವರನ್ನು ಚುನಾವಣಾ ಸಮಿತಿಯಲ್ಲಿ ಸೇರಿಸಲಾಗಿದೆ

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಸಂಸದೀಯ ಮಂಡಳಿಗೆ ಮಾತ್ರವಲ್ಲದೆ, ಬಿಜೆಪಿ ಕೇಂದ್ರ ಚುನಾವಣಾ ಸಮಿತಿಗೆ ಕೂಡಾ ಸೇರ್ಪಡೆ ಮಾಡಲಾಗಿದೆ. ಸಂಸದೀಯ ಮಂಡಳಿಯು ಬಿಜೆಪಿಯ ಉನ್ನತ ಸಂಸ್ಥೆಯಾಗಿದ್ದು, ಮುಖ್ಯಮಂತ್ರಿಗಳು, ರಾಜ್ಯಗಳ ಮುಖ್ಯಸ್ಥರು ಮತ್ತು ಇತರ ಪ್ರಮುಖ ಪಾತ್ರಗಳನ್ನು ಬಗ್ಗೆ ನಿರ್ಧರಿಸುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಉತ್ತರ ಪ್ರದೇಶದಲ್ಲಿ ಬಿಜೆಪಿಯನ್ನು ಅಭೂತಪೂರ್ವವಾಗಿ ಎರಡನೇ ಅವಧಿಗೆ ಅಧಿಕಾರ ಹಿಡಿಯುವಂತೆ ಮಾಡಿದ ಸಿಎಂ ಆದಿತ್ಯನಾಥ್ ಅವರನ್ನು ಕೂಡಾ ಸಂಸದೀಯ ಮಂಡಳಿಗೆ ಸೇರ್ಪಡೆ ಮಾಡಲಾಗುತ್ತದೆ ಎಂದು ಹೇಳಲಾಗಿತ್ತಾದರೂ ಅವರನ್ನು ಇದರಿಂದ ಹೊರಗಿಟ್ಟಿದ್ದು ರಾಜಕೀಯ ವಲಯದಲ್ಲಿ ಆಶ್ಚರ್ಯಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಮಧ್ಯಪ್ರದೇಶ: 4 ವರ್ಷಗಳಲ್ಲಿ sc/st ದೌರ್ಜನ್ಯ ತಡೆ ಕಾಯ್ದೆಯಡಿ 33,000 ಕ್ಕೂ ಹೆಚ್ಚು ಪ್ರಕರಣ ದಾಖಲು

ಬಿ.ಎಸ್.ಯಡಿಯೂರಪ್ಪ, ಸರ್ಬಾನಂದ ಸೋನೋವಾಲ್, ಕೆ.ಲಕ್ಷ್ಮಣ್, ಇಕ್ಬಾಲ್ ಸಿಂಗ್ ಲಾಲ್‌ಪುರ, ಸುಧಾ ಯಾದವ್ ಮತ್ತು ಸತ್ಯನಾರಾಯಣ್ ಜತಿಯಾ ಸೇರಿದಂತೆ ಒಟ್ಟು ಆರು ಹೊಸ ಮುಖಗಳನ್ನು ಮಂಡಳಿಗೆ ಹೆಸರಿಸಲಾಗಿದೆ.

ಪಕ್ಷದ ಪ್ರಮುಖ ಸಮಿತಿಯಿಂದ ನಿತಿನ್ ಗಡ್ಕರಿ ಅವರನ್ನು ಕೈಬಿಟ್ಟಿರುವುದು ಭಾರಿ ಊಹಾಪೋಹಕ್ಕೆ ಕಾರಣವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರದಲ್ಲಿ ಹಿರಿಯ ಸಚಿವರಾಗಿರುವ ಗಡ್ಕರಿ ಅವರು ಬಿಜೆಪಿಯ ಮಾಜಿ ಅಧ್ಯಕ್ಷರೂ ಆಗಿದ್ದಾರೆ.

ಬಿಜೆಪಿಯು ಈ ವರೆಗೆ ಮಾಜಿ ಅಧ್ಯಕ್ಷರನ್ನು ಸಂಸದೀಯ ಮಂಡಳಿಯಲ್ಲಿ ಉಳಿಸಿಕೊಳ್ಳುವ ಸಾಂಪ್ರದಾಯವನ್ನು ಅನುಸರಿಸುತ್ತಾ ಬಂದಿದೆ. ಪಕ್ಷದ ಸೈದ್ಧಾಂತಿಕ ಮಾರ್ಗದರ್ಶಕ ಸಂಘಟನೆಯಾದ ಆರ್‌ಎಸ್‌ಎಸ್‌ನೊಂದಿಗೆ ಅವರ ಆಳವಾದ ಸಂಪರ್ಕದಿಂದಾಗಿ ತಮ್ಮ ಸ್ವಂತ ಸರ್ಕಾರದ ಮೇಲೆ ಆಗಾಗ್ಗೆ ಗುರಿ ಮಾಡಿಕೊಂಡಿದ್ದರು.

ಇದನ್ನೂ ಓದಿ: ಶಿಕಾರಿಪುರ ಕ್ಷೇತ್ರದಿಂದ ವಿಜಯೇಂದ್ರ ಸ್ಪರ್ಧೆ: ದೊಡ್ಡ ಅಂತರದಲ್ಲಿ ಗೆಲ್ಲಿಸಲು ಯಡಿಯೂರಪ್ಪ ಮನವಿ

ಬಿಜೆಪಿಯ ಮಾಜಿ ಅಧ್ಯಕ್ಷರೂ ಆಗಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸಂಸದೀಯ ಮಂಡಳಿಗೆ ಮರು ಪ್ರವೇಶ ಪಡೆದಿದ್ದಾರೆ. ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರನ್ನೂ ಸಂಸದೀಯ ಮಂಡಳಿಯಿಂದ ಕೈಬಿಡಲಾಗಿದ್ದು, 20 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದ ವ್ಯಕ್ತಿಗೆ ಭಾರಿ ಹಿನ್ನಡೆ ಅನುಭವಿಸಿದ್ದಾರೆ.

ಕಳೆದ ವರ್ಷ ಒಳಜಗಳ ಮತ್ತು ಭ್ರಷ್ಟಾಚಾರದ ಆರೋಪದ ಮೇಲೆ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು. ಪಕ್ಷದ ಅಲಿಖಿತ ನಿಯಮದ ಪ್ರಕಾರ 75 ವಯಸ್ಸಿನ ನಂತರ ಅಧಿಕಾರಕ್ಕೆ ಏರುವಂತಿಲ್ಲ, ಆದರೂ ಅವರು ತಮ್ಮ 77 ನೇ ವಯಸ್ಸಿನವರೆಗೂ ಮುಖ್ಯಮಂತ್ರಿಯಾಗಿದ್ದರು.

ಪ್ರಭಾವಿ ಲಿಂಗಾಯತ ರಾಜಕಾರಣಿಯಾಗಿರುವ ಯಡಿಯೂರಪ್ಪ ಅವರು ವರ್ಷಗಳಿಂದ ಅತೃಪ್ತರಾಗಿದ್ದು, ಮುಂದಿನ ವರ್ಷ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಅವರ ಸಹಕಾರವನ್ನು ಖಚಿತಪಡಿಸಿಕೊಳ್ಳಲು ಪಕ್ಷವು ಅವರನ್ನು ಸಮಾಧಾನಪಡಿಸಲು ಬಯಸಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ. ರಾಜ್ಯದಲ್ಲಿ ಲಿಂಗಾಯತ ಸಮುದಾಯವೂ ಬಿಜೆಪಿಯ ಪ್ರಬಲ ಓಟ್‌ ಬ್ಯಾಂಕ್ ಆಗಿದ್ದು, ರಾಜ್ಯದಾದ್ಯಂತ 18% ರಷ್ಟು ಮತಗಳನ್ನು ಹೊಂದಿದೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಶಿಕಾರಿಪುರ: ಯಡಿಯೂರಪ್ಪ ಸಂಸ್ಥಾನದಲ್ಲಿ ಬಿಜೆಪಿಯೇ ಕಾಣೆ!!

ಅಸ್ಸಾಂನಲ್ಲಿ ಬಿಜೆಪಿ ಪುನರಾಯ್ಕೆಯಾದ ನಂತರ ಹಿಮಂತ ಬಿಸ್ವಾ ಶರ್ಮಾಗೆ ದಾರಿ ಮಾಡಿಕೊಡಲು ಒಪ್ಪಿದ ಅಸ್ಸಾಂನ ಮಾಜಿ ಮುಖ್ಯಮಂತ್ರಿ ಸರ್ಬಾನಂದ ಸೋನೋವಾಲ್ ಅವರನ್ನು ಸಂಸದೀಯ ಮಂಡಳಿ ಮತ್ತು ಕೇಂದ್ರ ಚುನಾವಣಾ ಸಮಿತಿಗೆ ಹೆಸರಿಸಲಾಗಿದೆ. ಪ್ರಧಾನಿ ಮೋದಿ, ಅಮಿತ್ ಶಾ, ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಮಾತ್ರ ಈ ಸಮಿತಿಯಲ್ಲಿ ಸ್ಥಿರವಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...