Homeಮುಖಪುಟಬಡತನ, ಭ್ರಷ್ಟಾಚಾರದ ಮೇಲೆ‌ ಸರ್ಜಿಕಲ್ ಸ್ಟ್ರೈಕ್ ಮಾಡಿ: ಬಿಜೆಪಿ ವಿರುದ್ಧ ಆಕ್ರೋಶ

ಬಡತನ, ಭ್ರಷ್ಟಾಚಾರದ ಮೇಲೆ‌ ಸರ್ಜಿಕಲ್ ಸ್ಟ್ರೈಕ್ ಮಾಡಿ: ಬಿಜೆಪಿ ವಿರುದ್ಧ ಆಕ್ರೋಶ

’ನಮಗೆ ಬಡತನ, ಭ್ರಷ್ಟಾಚಾರ ಮತ್ತು ಮಹಿಳೆಯರ ಮೇಲಿನ ಅಪರಾಧಗಳ ವಿರುದ್ಧ ಸರ್ಜಿಕಲ್ ಸ್ಟ್ರೈಕ್‌ಗಳು ಬೇಕು, ಹೈದರಾಬಾದಿಗಳ ವಿರುದ್ಧವಲ್ಲ'

- Advertisement -
- Advertisement -

ಹೈದರಾಬಾದ್ ಪಾಲಿಕೆ ಚುನಾವಣಾ ಕಣ ರಂಗೇರುತ್ತಿದ್ದು, ಬಿಜೆಪಿ ನಾಯಕರು ಇದನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಸತತ ಚುನಾವಣಾ ಪ್ರಚಾರ ನಡೆಸುತ್ತಿರುವ ನಾಯಕರು ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿದ್ದಾರೆ. ತೆಲಂಗಾಣ ಬಿಜೆಪಿ ಮುಖ್ಯಸ್ಥ ಮತ್ತು ಸಂಸದ ಬಂಡಿ ಸಂಜಯ್ ಕುಮಾರ್‌ ಹೈದರಾಬಾದ್‌ನಲ್ಲಿ ’ಸರ್ಜಿಕಲ್ ಸ್ಟ್ರೈಕ್’ ಬೆದರಿಕೆ ಹಾಕಿದ್ದಾರೆ.

ಹೈದರಾಬಾದ್‌ನ ಓಲ್ಡ್ ಸಿಟಿ ಪ್ರದೇಶದಲ್ಲಿ ಒಳನುಸುಳುವವರ ಮೇಲೆ ’ಸರ್ಜಿಕಲ್ ಸ್ಟ್ರೈಕ್’ ಮಾಡುವುದಾಗಿ ತೆಲಂಗಾಣ ಬಿಜೆಪಿ ಮುಖ್ಯಸ್ಥ ಬಂಡಿ ಸಂಜಯ್ ಬೆದರಿಕೆ ಹಾಕಿದ್ದಾರೆ.  ನಗರದಲ್ಲಿ ವಾಸಿಸುವ ಅಕ್ರಮ ಬಾಂಗ್ಲಾದೇಶಿಗರು, ಪಾಕಿಸ್ತಾನಿಗಳರು ಮತ್ತು ರೋಹಿಂಗ್ಯಾಗಳನ್ನು ಒಳನುಸುಳುಕೋರರು ಎಂದು  ಉಲ್ಲೇಖಿಸಲಾಗಿದೆ.

“ಅಕ್ರಮ ಒಳನುಸುಳುಕೋರರ ಮತಗಳನ್ನು ಬಳಸಿಕೊಂಡು ನೀವು ಚುನಾವಣೆಯಲ್ಲಿ ಗೆಲ್ಲಲು ಬಯಸುತ್ತೀರಿ. ಅದು ದೇಶದ ಹಿತಾಸಕ್ತಿಗೆ ವಿರುದ್ಧವಾಗಿದೆ. ಹೈದರಾಬಾದ್‌ನ ಮೇಯರ್‌ ಚುನಾವಣೆಯಲ್ಲಿ ಆಯ್ಕೆಯಾದ ನಂತರ ಅವರೆಲ್ಲರನ್ನೂ ಹೊರಹಾಕುತ್ತೇವೆ” ಎಂದು ಚುನಾವಣಾ ಪ್ರಚಾರದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: BJP ಎಂದೂ ಸಂವಿಧಾನವನ್ನು ನಂಬುವುದಿಲ್ಲ: ತೇಜಸ್ವಿ ಸೂರ್ಯ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

2016ರಲ್ಲಿ ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಾದ್ಯಂತದ ಭಯೋತ್ಪಾದಕ ನೆಲೆಗಳ ಮೇಲೆ ಭಾರತೀಯ ಸೇನೆ ನಡೆಸಿದ ದಾಳಿಗೆ “ಸರ್ಜಿಕಲ್ ಸ್ಟ್ರೈಕ್” ಎಂಬ ಹೆಸರು ನೀಡಲಾಗಿದೆ. ಈ ಪದವನ್ನು ಹೈದರಾಬಾದ್ ಜನರಿಗೆ ಅನ್ವಯಿಸಿ ಮಾತನಾಡಿರುವ ಸಂಸದ ಬಂಡಿ ಸಂಜಯ್ ಕುಮಾರ್ ಮಾತಿಗೆ ರಾಜ್ಯದ ಆಡಳಿತಾರೂಢ ತೆಲಂಗಾಣ ರಾಷ್ಟ್ರ ಸಮಿತಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

’ಕೇವಲ ಮತಗಳ ಸಲುವಾಗಿ, ಬಿಜೆಪಿ ಹೈದರಾಬಾದಿಗರ ಜೀವವನ್ನು ತೆಗೆಯುವ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಮಾತನಾಡುತ್ತಿದೆ. “ಹೈದರಾಬಾದ್ ಪಾಕಿಸ್ತಾನದಲ್ಲಿದೆಯೇ? ನೀವು ಪ್ರಜ್ಞಾಪೂರ್ವಕ ಸ್ಥಿತಿಯಲ್ಲಿದ್ದೀರಾ? ಚುನಾವಣೇ ಗೆಲ್ಲುವ ಸಲುವಾಗಿ ಹೈದರಾಬಾದ್‌ನಲ್ಲಿ ಬೆಂಕಿ ಹಚ್ಚಲು ಬಯಸುತ್ತೀರಾ..? ಎಂದು ಪುರಸಭೆ ಆಡಳಿತ ಮತ್ತು ನಗರಾಭಿವೃದ್ಧಿ ಸಚಿವ ಕೆ.ಟಿ.ರಾಮರಾವ್ ಆಕ್ರೋಶ ಹೊರಹಾಕಿದ್ದಾರೆ.

’ನಮಗೆ ಬಡತನ, ಭ್ರಷ್ಟಾಚಾರ ಮತ್ತು ಮಹಿಳೆಯರ ಮೇಲಿನ ಅಪರಾಧಗಳ ವಿರುದ್ಧ ಸರ್ಜಿಕಲ್ ಸ್ಟ್ರೈಕ್‌ಗಳು ಬೇಕು, ಹೈದರಾಬಾದಿಗಳ ವಿರುದ್ಧವಲ್ಲ’ ಎಂದು ಸಚಿವ ಕೆ.ಟಿ.ರಾಮರಾವ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುವಾಗ ತಿರುಗೇಟು ನೀಡಿದ್ದಾರೆ. ಹೇಳಿದ್ದಾರೆ.

ಬಿಜೆಪಿ ನಾಯಕನ ಹೇಳಿಕೆಯನ್ನು ಅಪಹಾಸ್ಯ ಮಾಡಿದ ಎಐಎಂಐಎಂ ನಾಯಕ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ, “ಲಡಾಖ್‌ನ ಗಾಲ್ವಾನ್ ಕಣಿವೆಯಲ್ಲಿ ಚೀನಿಯರ ವಿರುದ್ಧ ಏಕೆ ಯಾವುದೇ ಸರ್ಜಿಕಲ್ ಸ್ಟ್ರೈಕ್‌ಗಳು ನಡೆಸಿಲ್ಲ” ಎಂದು ಪ್ರಶ್ನಿಸಿದ್ದಾರೆ. “ನೀವು ಯಾರ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡುತ್ತೀರಿ? ಚೀನಾದ ಪಡೆ ಪಿಎಲ್‌ಎ ಲಡಾಖ್‌ನಲ್ಲಿ 970 ಚದರ ಕಿ.ಮೀ ಆಕ್ರಮಿಸಿಕೊಂಡಿದೆ. ಆದರೂ ಅವರು ಚೀನಾದ ಹೆಸರನ್ನು ಸಹ ತೆಗೆದುಕೊಳ್ಳುವುದಿಲ್ಲ” ಎಂದು ಓವೈಸಿ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ:  ಗೃಹ ಸಚಿವ ಅಮಿತ್ ಶಾ ಏನು ಮಾಡುತ್ತಿದ್ದಾರೆ? ನಿದ್ದೆ ಮಾಡುತ್ತಿದ್ದಾರೆಯೆ?: ಓವೈಸಿ

“ಹೈದರಾಬಾದ್‌ನಲ್ಲಿ ಎಷ್ಟು ಪಾಕಿಸ್ತಾನಿಗಳು ಅಥವಾ ರೋಹಿಂಗ್ಯಾಗಳು ಇದ್ದಾರೆ ಎಂದು ನಮಗೆ ತಿಳಿಸಿ. ಇನ್ನೊಂದು ವಿಷಯ ನೆನಪಿಡಿ, ಹೈದರಾಬಾದ್‌ನಲ್ಲಿರುವವರು ಹಿಂದೂ, ಮುಸ್ಲಿಂ, ದಲಿತ, ಸಿಖ್, ಕ್ರಿಶ್ಚಿಯನ್ ಎಲ್ಲಾ ಧರ್ಮದವರು, ಎಲ್ಲರೂ ಭಾರತೀಯರು. ನಾವು ಪಾಕಿಸ್ತಾನಿಯರನ್ನು ಇಲ್ಲಿಗೆ ಬಿಡುವುದಿಲ್ಲ” ಎಂದು ಓವೈಸಿ ಹೇಳಿದ್ದಾರೆ.

ಜಿನ್ನಾ

ರಾಜ್ಯದ ಅಭಿವೃದ್ಧಿ ಅಥವಾ ಸ್ಥಳೀಯ ಸಮಸ್ಯೆಗಳ ಬಗ್ಗೆ ಮಾತನಾಡಲು ಬಿಜೆಪಿ ಬಯಸುವುದಿಲ್ಲ, “ಬಿಜೆಪಿಯವರು ಬಿರುಕುಗಳನ್ನು ಸೃಷ್ಟಿಸಲು ಮಾತ್ರ ಬಯಸುತ್ತಾರೆ” ಎಂದು ಓವೈಸಿ ಆರೋಪಿಸಿದ್ದಾರೆ. ಓವೈಸಿಯವರನ್ನು ಸಂಸದ ತೇಜಸ್ವಿ ಸೂರ್ಯ, ಜಿನ್ನಾ ಅವತಾರ ಎಂದು ಕರೆದಿದ್ದರು.

ವಿಶ್ವ ಪ್ರಸಿದ್ಧ ಸಾಫ್ಟ್‌ವೇರ್ ಕೇಂದ್ರವಾದ ಹೈದರಾಬಾದ್ ಅನ್ನು ಭಾಗ್ಯನಗರವನ್ನಾಗಿ ಮಾಡಲು ಬಿಜೆಪಿ ಬಯಸಿದೆ. ಹೈದರಾಬಾದ್ ನಮ್ಮ ಗುರುತು, ನಮ್ಮ ಸಂಸ್ಕೃತಿ. ಅವರು ಎಲ್ಲವನ್ನೂ ಬದಲಾಯಿಸಲು ಬಯಸುತ್ತಾರೆ. ಆದರೆ ಹಾಗೆ ಮಾಡಲು ನಾವು ಬಿಡುವುದಿಲ್ಲ” ಎಂದು ಓವೈಸಿ ಹೇಳಿದ್ದಾರೆ.


ಇದನ್ನೂ ಓದಿ: ‌ಓವೈಸಿಯನ್ನು ’ಜಿನ್ನಾ ಅವತಾರ’ ಎಂದು ವಿವಾದವೆಬ್ಬಿಸಿದ ಸಂಸದ ತೇಜಸ್ವಿ ಸೂರ್ಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...