Homeಮುಖಪುಟಬಡತನ, ಭ್ರಷ್ಟಾಚಾರದ ಮೇಲೆ‌ ಸರ್ಜಿಕಲ್ ಸ್ಟ್ರೈಕ್ ಮಾಡಿ: ಬಿಜೆಪಿ ವಿರುದ್ಧ ಆಕ್ರೋಶ

ಬಡತನ, ಭ್ರಷ್ಟಾಚಾರದ ಮೇಲೆ‌ ಸರ್ಜಿಕಲ್ ಸ್ಟ್ರೈಕ್ ಮಾಡಿ: ಬಿಜೆಪಿ ವಿರುದ್ಧ ಆಕ್ರೋಶ

’ನಮಗೆ ಬಡತನ, ಭ್ರಷ್ಟಾಚಾರ ಮತ್ತು ಮಹಿಳೆಯರ ಮೇಲಿನ ಅಪರಾಧಗಳ ವಿರುದ್ಧ ಸರ್ಜಿಕಲ್ ಸ್ಟ್ರೈಕ್‌ಗಳು ಬೇಕು, ಹೈದರಾಬಾದಿಗಳ ವಿರುದ್ಧವಲ್ಲ'

- Advertisement -
- Advertisement -

ಹೈದರಾಬಾದ್ ಪಾಲಿಕೆ ಚುನಾವಣಾ ಕಣ ರಂಗೇರುತ್ತಿದ್ದು, ಬಿಜೆಪಿ ನಾಯಕರು ಇದನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಸತತ ಚುನಾವಣಾ ಪ್ರಚಾರ ನಡೆಸುತ್ತಿರುವ ನಾಯಕರು ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿದ್ದಾರೆ. ತೆಲಂಗಾಣ ಬಿಜೆಪಿ ಮುಖ್ಯಸ್ಥ ಮತ್ತು ಸಂಸದ ಬಂಡಿ ಸಂಜಯ್ ಕುಮಾರ್‌ ಹೈದರಾಬಾದ್‌ನಲ್ಲಿ ’ಸರ್ಜಿಕಲ್ ಸ್ಟ್ರೈಕ್’ ಬೆದರಿಕೆ ಹಾಕಿದ್ದಾರೆ.

ಹೈದರಾಬಾದ್‌ನ ಓಲ್ಡ್ ಸಿಟಿ ಪ್ರದೇಶದಲ್ಲಿ ಒಳನುಸುಳುವವರ ಮೇಲೆ ’ಸರ್ಜಿಕಲ್ ಸ್ಟ್ರೈಕ್’ ಮಾಡುವುದಾಗಿ ತೆಲಂಗಾಣ ಬಿಜೆಪಿ ಮುಖ್ಯಸ್ಥ ಬಂಡಿ ಸಂಜಯ್ ಬೆದರಿಕೆ ಹಾಕಿದ್ದಾರೆ.  ನಗರದಲ್ಲಿ ವಾಸಿಸುವ ಅಕ್ರಮ ಬಾಂಗ್ಲಾದೇಶಿಗರು, ಪಾಕಿಸ್ತಾನಿಗಳರು ಮತ್ತು ರೋಹಿಂಗ್ಯಾಗಳನ್ನು ಒಳನುಸುಳುಕೋರರು ಎಂದು  ಉಲ್ಲೇಖಿಸಲಾಗಿದೆ.

“ಅಕ್ರಮ ಒಳನುಸುಳುಕೋರರ ಮತಗಳನ್ನು ಬಳಸಿಕೊಂಡು ನೀವು ಚುನಾವಣೆಯಲ್ಲಿ ಗೆಲ್ಲಲು ಬಯಸುತ್ತೀರಿ. ಅದು ದೇಶದ ಹಿತಾಸಕ್ತಿಗೆ ವಿರುದ್ಧವಾಗಿದೆ. ಹೈದರಾಬಾದ್‌ನ ಮೇಯರ್‌ ಚುನಾವಣೆಯಲ್ಲಿ ಆಯ್ಕೆಯಾದ ನಂತರ ಅವರೆಲ್ಲರನ್ನೂ ಹೊರಹಾಕುತ್ತೇವೆ” ಎಂದು ಚುನಾವಣಾ ಪ್ರಚಾರದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: BJP ಎಂದೂ ಸಂವಿಧಾನವನ್ನು ನಂಬುವುದಿಲ್ಲ: ತೇಜಸ್ವಿ ಸೂರ್ಯ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

2016ರಲ್ಲಿ ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಾದ್ಯಂತದ ಭಯೋತ್ಪಾದಕ ನೆಲೆಗಳ ಮೇಲೆ ಭಾರತೀಯ ಸೇನೆ ನಡೆಸಿದ ದಾಳಿಗೆ “ಸರ್ಜಿಕಲ್ ಸ್ಟ್ರೈಕ್” ಎಂಬ ಹೆಸರು ನೀಡಲಾಗಿದೆ. ಈ ಪದವನ್ನು ಹೈದರಾಬಾದ್ ಜನರಿಗೆ ಅನ್ವಯಿಸಿ ಮಾತನಾಡಿರುವ ಸಂಸದ ಬಂಡಿ ಸಂಜಯ್ ಕುಮಾರ್ ಮಾತಿಗೆ ರಾಜ್ಯದ ಆಡಳಿತಾರೂಢ ತೆಲಂಗಾಣ ರಾಷ್ಟ್ರ ಸಮಿತಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

’ಕೇವಲ ಮತಗಳ ಸಲುವಾಗಿ, ಬಿಜೆಪಿ ಹೈದರಾಬಾದಿಗರ ಜೀವವನ್ನು ತೆಗೆಯುವ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಮಾತನಾಡುತ್ತಿದೆ. “ಹೈದರಾಬಾದ್ ಪಾಕಿಸ್ತಾನದಲ್ಲಿದೆಯೇ? ನೀವು ಪ್ರಜ್ಞಾಪೂರ್ವಕ ಸ್ಥಿತಿಯಲ್ಲಿದ್ದೀರಾ? ಚುನಾವಣೇ ಗೆಲ್ಲುವ ಸಲುವಾಗಿ ಹೈದರಾಬಾದ್‌ನಲ್ಲಿ ಬೆಂಕಿ ಹಚ್ಚಲು ಬಯಸುತ್ತೀರಾ..? ಎಂದು ಪುರಸಭೆ ಆಡಳಿತ ಮತ್ತು ನಗರಾಭಿವೃದ್ಧಿ ಸಚಿವ ಕೆ.ಟಿ.ರಾಮರಾವ್ ಆಕ್ರೋಶ ಹೊರಹಾಕಿದ್ದಾರೆ.

’ನಮಗೆ ಬಡತನ, ಭ್ರಷ್ಟಾಚಾರ ಮತ್ತು ಮಹಿಳೆಯರ ಮೇಲಿನ ಅಪರಾಧಗಳ ವಿರುದ್ಧ ಸರ್ಜಿಕಲ್ ಸ್ಟ್ರೈಕ್‌ಗಳು ಬೇಕು, ಹೈದರಾಬಾದಿಗಳ ವಿರುದ್ಧವಲ್ಲ’ ಎಂದು ಸಚಿವ ಕೆ.ಟಿ.ರಾಮರಾವ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುವಾಗ ತಿರುಗೇಟು ನೀಡಿದ್ದಾರೆ. ಹೇಳಿದ್ದಾರೆ.

ಬಿಜೆಪಿ ನಾಯಕನ ಹೇಳಿಕೆಯನ್ನು ಅಪಹಾಸ್ಯ ಮಾಡಿದ ಎಐಎಂಐಎಂ ನಾಯಕ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ, “ಲಡಾಖ್‌ನ ಗಾಲ್ವಾನ್ ಕಣಿವೆಯಲ್ಲಿ ಚೀನಿಯರ ವಿರುದ್ಧ ಏಕೆ ಯಾವುದೇ ಸರ್ಜಿಕಲ್ ಸ್ಟ್ರೈಕ್‌ಗಳು ನಡೆಸಿಲ್ಲ” ಎಂದು ಪ್ರಶ್ನಿಸಿದ್ದಾರೆ. “ನೀವು ಯಾರ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡುತ್ತೀರಿ? ಚೀನಾದ ಪಡೆ ಪಿಎಲ್‌ಎ ಲಡಾಖ್‌ನಲ್ಲಿ 970 ಚದರ ಕಿ.ಮೀ ಆಕ್ರಮಿಸಿಕೊಂಡಿದೆ. ಆದರೂ ಅವರು ಚೀನಾದ ಹೆಸರನ್ನು ಸಹ ತೆಗೆದುಕೊಳ್ಳುವುದಿಲ್ಲ” ಎಂದು ಓವೈಸಿ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ:  ಗೃಹ ಸಚಿವ ಅಮಿತ್ ಶಾ ಏನು ಮಾಡುತ್ತಿದ್ದಾರೆ? ನಿದ್ದೆ ಮಾಡುತ್ತಿದ್ದಾರೆಯೆ?: ಓವೈಸಿ

“ಹೈದರಾಬಾದ್‌ನಲ್ಲಿ ಎಷ್ಟು ಪಾಕಿಸ್ತಾನಿಗಳು ಅಥವಾ ರೋಹಿಂಗ್ಯಾಗಳು ಇದ್ದಾರೆ ಎಂದು ನಮಗೆ ತಿಳಿಸಿ. ಇನ್ನೊಂದು ವಿಷಯ ನೆನಪಿಡಿ, ಹೈದರಾಬಾದ್‌ನಲ್ಲಿರುವವರು ಹಿಂದೂ, ಮುಸ್ಲಿಂ, ದಲಿತ, ಸಿಖ್, ಕ್ರಿಶ್ಚಿಯನ್ ಎಲ್ಲಾ ಧರ್ಮದವರು, ಎಲ್ಲರೂ ಭಾರತೀಯರು. ನಾವು ಪಾಕಿಸ್ತಾನಿಯರನ್ನು ಇಲ್ಲಿಗೆ ಬಿಡುವುದಿಲ್ಲ” ಎಂದು ಓವೈಸಿ ಹೇಳಿದ್ದಾರೆ.

ಜಿನ್ನಾ

ರಾಜ್ಯದ ಅಭಿವೃದ್ಧಿ ಅಥವಾ ಸ್ಥಳೀಯ ಸಮಸ್ಯೆಗಳ ಬಗ್ಗೆ ಮಾತನಾಡಲು ಬಿಜೆಪಿ ಬಯಸುವುದಿಲ್ಲ, “ಬಿಜೆಪಿಯವರು ಬಿರುಕುಗಳನ್ನು ಸೃಷ್ಟಿಸಲು ಮಾತ್ರ ಬಯಸುತ್ತಾರೆ” ಎಂದು ಓವೈಸಿ ಆರೋಪಿಸಿದ್ದಾರೆ. ಓವೈಸಿಯವರನ್ನು ಸಂಸದ ತೇಜಸ್ವಿ ಸೂರ್ಯ, ಜಿನ್ನಾ ಅವತಾರ ಎಂದು ಕರೆದಿದ್ದರು.

ವಿಶ್ವ ಪ್ರಸಿದ್ಧ ಸಾಫ್ಟ್‌ವೇರ್ ಕೇಂದ್ರವಾದ ಹೈದರಾಬಾದ್ ಅನ್ನು ಭಾಗ್ಯನಗರವನ್ನಾಗಿ ಮಾಡಲು ಬಿಜೆಪಿ ಬಯಸಿದೆ. ಹೈದರಾಬಾದ್ ನಮ್ಮ ಗುರುತು, ನಮ್ಮ ಸಂಸ್ಕೃತಿ. ಅವರು ಎಲ್ಲವನ್ನೂ ಬದಲಾಯಿಸಲು ಬಯಸುತ್ತಾರೆ. ಆದರೆ ಹಾಗೆ ಮಾಡಲು ನಾವು ಬಿಡುವುದಿಲ್ಲ” ಎಂದು ಓವೈಸಿ ಹೇಳಿದ್ದಾರೆ.


ಇದನ್ನೂ ಓದಿ: ‌ಓವೈಸಿಯನ್ನು ’ಜಿನ್ನಾ ಅವತಾರ’ ಎಂದು ವಿವಾದವೆಬ್ಬಿಸಿದ ಸಂಸದ ತೇಜಸ್ವಿ ಸೂರ್ಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...