Homeಮುಖಪುಟಬಡತನ, ಭ್ರಷ್ಟಾಚಾರದ ಮೇಲೆ‌ ಸರ್ಜಿಕಲ್ ಸ್ಟ್ರೈಕ್ ಮಾಡಿ: ಬಿಜೆಪಿ ವಿರುದ್ಧ ಆಕ್ರೋಶ

ಬಡತನ, ಭ್ರಷ್ಟಾಚಾರದ ಮೇಲೆ‌ ಸರ್ಜಿಕಲ್ ಸ್ಟ್ರೈಕ್ ಮಾಡಿ: ಬಿಜೆಪಿ ವಿರುದ್ಧ ಆಕ್ರೋಶ

’ನಮಗೆ ಬಡತನ, ಭ್ರಷ್ಟಾಚಾರ ಮತ್ತು ಮಹಿಳೆಯರ ಮೇಲಿನ ಅಪರಾಧಗಳ ವಿರುದ್ಧ ಸರ್ಜಿಕಲ್ ಸ್ಟ್ರೈಕ್‌ಗಳು ಬೇಕು, ಹೈದರಾಬಾದಿಗಳ ವಿರುದ್ಧವಲ್ಲ'

- Advertisement -
- Advertisement -

ಹೈದರಾಬಾದ್ ಪಾಲಿಕೆ ಚುನಾವಣಾ ಕಣ ರಂಗೇರುತ್ತಿದ್ದು, ಬಿಜೆಪಿ ನಾಯಕರು ಇದನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಸತತ ಚುನಾವಣಾ ಪ್ರಚಾರ ನಡೆಸುತ್ತಿರುವ ನಾಯಕರು ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿದ್ದಾರೆ. ತೆಲಂಗಾಣ ಬಿಜೆಪಿ ಮುಖ್ಯಸ್ಥ ಮತ್ತು ಸಂಸದ ಬಂಡಿ ಸಂಜಯ್ ಕುಮಾರ್‌ ಹೈದರಾಬಾದ್‌ನಲ್ಲಿ ’ಸರ್ಜಿಕಲ್ ಸ್ಟ್ರೈಕ್’ ಬೆದರಿಕೆ ಹಾಕಿದ್ದಾರೆ.

ಹೈದರಾಬಾದ್‌ನ ಓಲ್ಡ್ ಸಿಟಿ ಪ್ರದೇಶದಲ್ಲಿ ಒಳನುಸುಳುವವರ ಮೇಲೆ ’ಸರ್ಜಿಕಲ್ ಸ್ಟ್ರೈಕ್’ ಮಾಡುವುದಾಗಿ ತೆಲಂಗಾಣ ಬಿಜೆಪಿ ಮುಖ್ಯಸ್ಥ ಬಂಡಿ ಸಂಜಯ್ ಬೆದರಿಕೆ ಹಾಕಿದ್ದಾರೆ.  ನಗರದಲ್ಲಿ ವಾಸಿಸುವ ಅಕ್ರಮ ಬಾಂಗ್ಲಾದೇಶಿಗರು, ಪಾಕಿಸ್ತಾನಿಗಳರು ಮತ್ತು ರೋಹಿಂಗ್ಯಾಗಳನ್ನು ಒಳನುಸುಳುಕೋರರು ಎಂದು  ಉಲ್ಲೇಖಿಸಲಾಗಿದೆ.

“ಅಕ್ರಮ ಒಳನುಸುಳುಕೋರರ ಮತಗಳನ್ನು ಬಳಸಿಕೊಂಡು ನೀವು ಚುನಾವಣೆಯಲ್ಲಿ ಗೆಲ್ಲಲು ಬಯಸುತ್ತೀರಿ. ಅದು ದೇಶದ ಹಿತಾಸಕ್ತಿಗೆ ವಿರುದ್ಧವಾಗಿದೆ. ಹೈದರಾಬಾದ್‌ನ ಮೇಯರ್‌ ಚುನಾವಣೆಯಲ್ಲಿ ಆಯ್ಕೆಯಾದ ನಂತರ ಅವರೆಲ್ಲರನ್ನೂ ಹೊರಹಾಕುತ್ತೇವೆ” ಎಂದು ಚುನಾವಣಾ ಪ್ರಚಾರದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: BJP ಎಂದೂ ಸಂವಿಧಾನವನ್ನು ನಂಬುವುದಿಲ್ಲ: ತೇಜಸ್ವಿ ಸೂರ್ಯ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

2016ರಲ್ಲಿ ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಾದ್ಯಂತದ ಭಯೋತ್ಪಾದಕ ನೆಲೆಗಳ ಮೇಲೆ ಭಾರತೀಯ ಸೇನೆ ನಡೆಸಿದ ದಾಳಿಗೆ “ಸರ್ಜಿಕಲ್ ಸ್ಟ್ರೈಕ್” ಎಂಬ ಹೆಸರು ನೀಡಲಾಗಿದೆ. ಈ ಪದವನ್ನು ಹೈದರಾಬಾದ್ ಜನರಿಗೆ ಅನ್ವಯಿಸಿ ಮಾತನಾಡಿರುವ ಸಂಸದ ಬಂಡಿ ಸಂಜಯ್ ಕುಮಾರ್ ಮಾತಿಗೆ ರಾಜ್ಯದ ಆಡಳಿತಾರೂಢ ತೆಲಂಗಾಣ ರಾಷ್ಟ್ರ ಸಮಿತಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

’ಕೇವಲ ಮತಗಳ ಸಲುವಾಗಿ, ಬಿಜೆಪಿ ಹೈದರಾಬಾದಿಗರ ಜೀವವನ್ನು ತೆಗೆಯುವ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಮಾತನಾಡುತ್ತಿದೆ. “ಹೈದರಾಬಾದ್ ಪಾಕಿಸ್ತಾನದಲ್ಲಿದೆಯೇ? ನೀವು ಪ್ರಜ್ಞಾಪೂರ್ವಕ ಸ್ಥಿತಿಯಲ್ಲಿದ್ದೀರಾ? ಚುನಾವಣೇ ಗೆಲ್ಲುವ ಸಲುವಾಗಿ ಹೈದರಾಬಾದ್‌ನಲ್ಲಿ ಬೆಂಕಿ ಹಚ್ಚಲು ಬಯಸುತ್ತೀರಾ..? ಎಂದು ಪುರಸಭೆ ಆಡಳಿತ ಮತ್ತು ನಗರಾಭಿವೃದ್ಧಿ ಸಚಿವ ಕೆ.ಟಿ.ರಾಮರಾವ್ ಆಕ್ರೋಶ ಹೊರಹಾಕಿದ್ದಾರೆ.

’ನಮಗೆ ಬಡತನ, ಭ್ರಷ್ಟಾಚಾರ ಮತ್ತು ಮಹಿಳೆಯರ ಮೇಲಿನ ಅಪರಾಧಗಳ ವಿರುದ್ಧ ಸರ್ಜಿಕಲ್ ಸ್ಟ್ರೈಕ್‌ಗಳು ಬೇಕು, ಹೈದರಾಬಾದಿಗಳ ವಿರುದ್ಧವಲ್ಲ’ ಎಂದು ಸಚಿವ ಕೆ.ಟಿ.ರಾಮರಾವ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುವಾಗ ತಿರುಗೇಟು ನೀಡಿದ್ದಾರೆ. ಹೇಳಿದ್ದಾರೆ.

ಬಿಜೆಪಿ ನಾಯಕನ ಹೇಳಿಕೆಯನ್ನು ಅಪಹಾಸ್ಯ ಮಾಡಿದ ಎಐಎಂಐಎಂ ನಾಯಕ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ, “ಲಡಾಖ್‌ನ ಗಾಲ್ವಾನ್ ಕಣಿವೆಯಲ್ಲಿ ಚೀನಿಯರ ವಿರುದ್ಧ ಏಕೆ ಯಾವುದೇ ಸರ್ಜಿಕಲ್ ಸ್ಟ್ರೈಕ್‌ಗಳು ನಡೆಸಿಲ್ಲ” ಎಂದು ಪ್ರಶ್ನಿಸಿದ್ದಾರೆ. “ನೀವು ಯಾರ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡುತ್ತೀರಿ? ಚೀನಾದ ಪಡೆ ಪಿಎಲ್‌ಎ ಲಡಾಖ್‌ನಲ್ಲಿ 970 ಚದರ ಕಿ.ಮೀ ಆಕ್ರಮಿಸಿಕೊಂಡಿದೆ. ಆದರೂ ಅವರು ಚೀನಾದ ಹೆಸರನ್ನು ಸಹ ತೆಗೆದುಕೊಳ್ಳುವುದಿಲ್ಲ” ಎಂದು ಓವೈಸಿ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ:  ಗೃಹ ಸಚಿವ ಅಮಿತ್ ಶಾ ಏನು ಮಾಡುತ್ತಿದ್ದಾರೆ? ನಿದ್ದೆ ಮಾಡುತ್ತಿದ್ದಾರೆಯೆ?: ಓವೈಸಿ

“ಹೈದರಾಬಾದ್‌ನಲ್ಲಿ ಎಷ್ಟು ಪಾಕಿಸ್ತಾನಿಗಳು ಅಥವಾ ರೋಹಿಂಗ್ಯಾಗಳು ಇದ್ದಾರೆ ಎಂದು ನಮಗೆ ತಿಳಿಸಿ. ಇನ್ನೊಂದು ವಿಷಯ ನೆನಪಿಡಿ, ಹೈದರಾಬಾದ್‌ನಲ್ಲಿರುವವರು ಹಿಂದೂ, ಮುಸ್ಲಿಂ, ದಲಿತ, ಸಿಖ್, ಕ್ರಿಶ್ಚಿಯನ್ ಎಲ್ಲಾ ಧರ್ಮದವರು, ಎಲ್ಲರೂ ಭಾರತೀಯರು. ನಾವು ಪಾಕಿಸ್ತಾನಿಯರನ್ನು ಇಲ್ಲಿಗೆ ಬಿಡುವುದಿಲ್ಲ” ಎಂದು ಓವೈಸಿ ಹೇಳಿದ್ದಾರೆ.

ಜಿನ್ನಾ

ರಾಜ್ಯದ ಅಭಿವೃದ್ಧಿ ಅಥವಾ ಸ್ಥಳೀಯ ಸಮಸ್ಯೆಗಳ ಬಗ್ಗೆ ಮಾತನಾಡಲು ಬಿಜೆಪಿ ಬಯಸುವುದಿಲ್ಲ, “ಬಿಜೆಪಿಯವರು ಬಿರುಕುಗಳನ್ನು ಸೃಷ್ಟಿಸಲು ಮಾತ್ರ ಬಯಸುತ್ತಾರೆ” ಎಂದು ಓವೈಸಿ ಆರೋಪಿಸಿದ್ದಾರೆ. ಓವೈಸಿಯವರನ್ನು ಸಂಸದ ತೇಜಸ್ವಿ ಸೂರ್ಯ, ಜಿನ್ನಾ ಅವತಾರ ಎಂದು ಕರೆದಿದ್ದರು.

ವಿಶ್ವ ಪ್ರಸಿದ್ಧ ಸಾಫ್ಟ್‌ವೇರ್ ಕೇಂದ್ರವಾದ ಹೈದರಾಬಾದ್ ಅನ್ನು ಭಾಗ್ಯನಗರವನ್ನಾಗಿ ಮಾಡಲು ಬಿಜೆಪಿ ಬಯಸಿದೆ. ಹೈದರಾಬಾದ್ ನಮ್ಮ ಗುರುತು, ನಮ್ಮ ಸಂಸ್ಕೃತಿ. ಅವರು ಎಲ್ಲವನ್ನೂ ಬದಲಾಯಿಸಲು ಬಯಸುತ್ತಾರೆ. ಆದರೆ ಹಾಗೆ ಮಾಡಲು ನಾವು ಬಿಡುವುದಿಲ್ಲ” ಎಂದು ಓವೈಸಿ ಹೇಳಿದ್ದಾರೆ.


ಇದನ್ನೂ ಓದಿ: ‌ಓವೈಸಿಯನ್ನು ’ಜಿನ್ನಾ ಅವತಾರ’ ಎಂದು ವಿವಾದವೆಬ್ಬಿಸಿದ ಸಂಸದ ತೇಜಸ್ವಿ ಸೂರ್ಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...