Homeಮುಖಪುಟಬಡತನ, ಭ್ರಷ್ಟಾಚಾರದ ಮೇಲೆ‌ ಸರ್ಜಿಕಲ್ ಸ್ಟ್ರೈಕ್ ಮಾಡಿ: ಬಿಜೆಪಿ ವಿರುದ್ಧ ಆಕ್ರೋಶ

ಬಡತನ, ಭ್ರಷ್ಟಾಚಾರದ ಮೇಲೆ‌ ಸರ್ಜಿಕಲ್ ಸ್ಟ್ರೈಕ್ ಮಾಡಿ: ಬಿಜೆಪಿ ವಿರುದ್ಧ ಆಕ್ರೋಶ

’ನಮಗೆ ಬಡತನ, ಭ್ರಷ್ಟಾಚಾರ ಮತ್ತು ಮಹಿಳೆಯರ ಮೇಲಿನ ಅಪರಾಧಗಳ ವಿರುದ್ಧ ಸರ್ಜಿಕಲ್ ಸ್ಟ್ರೈಕ್‌ಗಳು ಬೇಕು, ಹೈದರಾಬಾದಿಗಳ ವಿರುದ್ಧವಲ್ಲ'

- Advertisement -
- Advertisement -

ಹೈದರಾಬಾದ್ ಪಾಲಿಕೆ ಚುನಾವಣಾ ಕಣ ರಂಗೇರುತ್ತಿದ್ದು, ಬಿಜೆಪಿ ನಾಯಕರು ಇದನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಸತತ ಚುನಾವಣಾ ಪ್ರಚಾರ ನಡೆಸುತ್ತಿರುವ ನಾಯಕರು ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿದ್ದಾರೆ. ತೆಲಂಗಾಣ ಬಿಜೆಪಿ ಮುಖ್ಯಸ್ಥ ಮತ್ತು ಸಂಸದ ಬಂಡಿ ಸಂಜಯ್ ಕುಮಾರ್‌ ಹೈದರಾಬಾದ್‌ನಲ್ಲಿ ’ಸರ್ಜಿಕಲ್ ಸ್ಟ್ರೈಕ್’ ಬೆದರಿಕೆ ಹಾಕಿದ್ದಾರೆ.

ಹೈದರಾಬಾದ್‌ನ ಓಲ್ಡ್ ಸಿಟಿ ಪ್ರದೇಶದಲ್ಲಿ ಒಳನುಸುಳುವವರ ಮೇಲೆ ’ಸರ್ಜಿಕಲ್ ಸ್ಟ್ರೈಕ್’ ಮಾಡುವುದಾಗಿ ತೆಲಂಗಾಣ ಬಿಜೆಪಿ ಮುಖ್ಯಸ್ಥ ಬಂಡಿ ಸಂಜಯ್ ಬೆದರಿಕೆ ಹಾಕಿದ್ದಾರೆ.  ನಗರದಲ್ಲಿ ವಾಸಿಸುವ ಅಕ್ರಮ ಬಾಂಗ್ಲಾದೇಶಿಗರು, ಪಾಕಿಸ್ತಾನಿಗಳರು ಮತ್ತು ರೋಹಿಂಗ್ಯಾಗಳನ್ನು ಒಳನುಸುಳುಕೋರರು ಎಂದು  ಉಲ್ಲೇಖಿಸಲಾಗಿದೆ.

“ಅಕ್ರಮ ಒಳನುಸುಳುಕೋರರ ಮತಗಳನ್ನು ಬಳಸಿಕೊಂಡು ನೀವು ಚುನಾವಣೆಯಲ್ಲಿ ಗೆಲ್ಲಲು ಬಯಸುತ್ತೀರಿ. ಅದು ದೇಶದ ಹಿತಾಸಕ್ತಿಗೆ ವಿರುದ್ಧವಾಗಿದೆ. ಹೈದರಾಬಾದ್‌ನ ಮೇಯರ್‌ ಚುನಾವಣೆಯಲ್ಲಿ ಆಯ್ಕೆಯಾದ ನಂತರ ಅವರೆಲ್ಲರನ್ನೂ ಹೊರಹಾಕುತ್ತೇವೆ” ಎಂದು ಚುನಾವಣಾ ಪ್ರಚಾರದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: BJP ಎಂದೂ ಸಂವಿಧಾನವನ್ನು ನಂಬುವುದಿಲ್ಲ: ತೇಜಸ್ವಿ ಸೂರ್ಯ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

2016ರಲ್ಲಿ ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಾದ್ಯಂತದ ಭಯೋತ್ಪಾದಕ ನೆಲೆಗಳ ಮೇಲೆ ಭಾರತೀಯ ಸೇನೆ ನಡೆಸಿದ ದಾಳಿಗೆ “ಸರ್ಜಿಕಲ್ ಸ್ಟ್ರೈಕ್” ಎಂಬ ಹೆಸರು ನೀಡಲಾಗಿದೆ. ಈ ಪದವನ್ನು ಹೈದರಾಬಾದ್ ಜನರಿಗೆ ಅನ್ವಯಿಸಿ ಮಾತನಾಡಿರುವ ಸಂಸದ ಬಂಡಿ ಸಂಜಯ್ ಕುಮಾರ್ ಮಾತಿಗೆ ರಾಜ್ಯದ ಆಡಳಿತಾರೂಢ ತೆಲಂಗಾಣ ರಾಷ್ಟ್ರ ಸಮಿತಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

’ಕೇವಲ ಮತಗಳ ಸಲುವಾಗಿ, ಬಿಜೆಪಿ ಹೈದರಾಬಾದಿಗರ ಜೀವವನ್ನು ತೆಗೆಯುವ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಮಾತನಾಡುತ್ತಿದೆ. “ಹೈದರಾಬಾದ್ ಪಾಕಿಸ್ತಾನದಲ್ಲಿದೆಯೇ? ನೀವು ಪ್ರಜ್ಞಾಪೂರ್ವಕ ಸ್ಥಿತಿಯಲ್ಲಿದ್ದೀರಾ? ಚುನಾವಣೇ ಗೆಲ್ಲುವ ಸಲುವಾಗಿ ಹೈದರಾಬಾದ್‌ನಲ್ಲಿ ಬೆಂಕಿ ಹಚ್ಚಲು ಬಯಸುತ್ತೀರಾ..? ಎಂದು ಪುರಸಭೆ ಆಡಳಿತ ಮತ್ತು ನಗರಾಭಿವೃದ್ಧಿ ಸಚಿವ ಕೆ.ಟಿ.ರಾಮರಾವ್ ಆಕ್ರೋಶ ಹೊರಹಾಕಿದ್ದಾರೆ.

’ನಮಗೆ ಬಡತನ, ಭ್ರಷ್ಟಾಚಾರ ಮತ್ತು ಮಹಿಳೆಯರ ಮೇಲಿನ ಅಪರಾಧಗಳ ವಿರುದ್ಧ ಸರ್ಜಿಕಲ್ ಸ್ಟ್ರೈಕ್‌ಗಳು ಬೇಕು, ಹೈದರಾಬಾದಿಗಳ ವಿರುದ್ಧವಲ್ಲ’ ಎಂದು ಸಚಿವ ಕೆ.ಟಿ.ರಾಮರಾವ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುವಾಗ ತಿರುಗೇಟು ನೀಡಿದ್ದಾರೆ. ಹೇಳಿದ್ದಾರೆ.

ಬಿಜೆಪಿ ನಾಯಕನ ಹೇಳಿಕೆಯನ್ನು ಅಪಹಾಸ್ಯ ಮಾಡಿದ ಎಐಎಂಐಎಂ ನಾಯಕ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ, “ಲಡಾಖ್‌ನ ಗಾಲ್ವಾನ್ ಕಣಿವೆಯಲ್ಲಿ ಚೀನಿಯರ ವಿರುದ್ಧ ಏಕೆ ಯಾವುದೇ ಸರ್ಜಿಕಲ್ ಸ್ಟ್ರೈಕ್‌ಗಳು ನಡೆಸಿಲ್ಲ” ಎಂದು ಪ್ರಶ್ನಿಸಿದ್ದಾರೆ. “ನೀವು ಯಾರ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡುತ್ತೀರಿ? ಚೀನಾದ ಪಡೆ ಪಿಎಲ್‌ಎ ಲಡಾಖ್‌ನಲ್ಲಿ 970 ಚದರ ಕಿ.ಮೀ ಆಕ್ರಮಿಸಿಕೊಂಡಿದೆ. ಆದರೂ ಅವರು ಚೀನಾದ ಹೆಸರನ್ನು ಸಹ ತೆಗೆದುಕೊಳ್ಳುವುದಿಲ್ಲ” ಎಂದು ಓವೈಸಿ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ:  ಗೃಹ ಸಚಿವ ಅಮಿತ್ ಶಾ ಏನು ಮಾಡುತ್ತಿದ್ದಾರೆ? ನಿದ್ದೆ ಮಾಡುತ್ತಿದ್ದಾರೆಯೆ?: ಓವೈಸಿ

“ಹೈದರಾಬಾದ್‌ನಲ್ಲಿ ಎಷ್ಟು ಪಾಕಿಸ್ತಾನಿಗಳು ಅಥವಾ ರೋಹಿಂಗ್ಯಾಗಳು ಇದ್ದಾರೆ ಎಂದು ನಮಗೆ ತಿಳಿಸಿ. ಇನ್ನೊಂದು ವಿಷಯ ನೆನಪಿಡಿ, ಹೈದರಾಬಾದ್‌ನಲ್ಲಿರುವವರು ಹಿಂದೂ, ಮುಸ್ಲಿಂ, ದಲಿತ, ಸಿಖ್, ಕ್ರಿಶ್ಚಿಯನ್ ಎಲ್ಲಾ ಧರ್ಮದವರು, ಎಲ್ಲರೂ ಭಾರತೀಯರು. ನಾವು ಪಾಕಿಸ್ತಾನಿಯರನ್ನು ಇಲ್ಲಿಗೆ ಬಿಡುವುದಿಲ್ಲ” ಎಂದು ಓವೈಸಿ ಹೇಳಿದ್ದಾರೆ.

ಜಿನ್ನಾ

ರಾಜ್ಯದ ಅಭಿವೃದ್ಧಿ ಅಥವಾ ಸ್ಥಳೀಯ ಸಮಸ್ಯೆಗಳ ಬಗ್ಗೆ ಮಾತನಾಡಲು ಬಿಜೆಪಿ ಬಯಸುವುದಿಲ್ಲ, “ಬಿಜೆಪಿಯವರು ಬಿರುಕುಗಳನ್ನು ಸೃಷ್ಟಿಸಲು ಮಾತ್ರ ಬಯಸುತ್ತಾರೆ” ಎಂದು ಓವೈಸಿ ಆರೋಪಿಸಿದ್ದಾರೆ. ಓವೈಸಿಯವರನ್ನು ಸಂಸದ ತೇಜಸ್ವಿ ಸೂರ್ಯ, ಜಿನ್ನಾ ಅವತಾರ ಎಂದು ಕರೆದಿದ್ದರು.

ವಿಶ್ವ ಪ್ರಸಿದ್ಧ ಸಾಫ್ಟ್‌ವೇರ್ ಕೇಂದ್ರವಾದ ಹೈದರಾಬಾದ್ ಅನ್ನು ಭಾಗ್ಯನಗರವನ್ನಾಗಿ ಮಾಡಲು ಬಿಜೆಪಿ ಬಯಸಿದೆ. ಹೈದರಾಬಾದ್ ನಮ್ಮ ಗುರುತು, ನಮ್ಮ ಸಂಸ್ಕೃತಿ. ಅವರು ಎಲ್ಲವನ್ನೂ ಬದಲಾಯಿಸಲು ಬಯಸುತ್ತಾರೆ. ಆದರೆ ಹಾಗೆ ಮಾಡಲು ನಾವು ಬಿಡುವುದಿಲ್ಲ” ಎಂದು ಓವೈಸಿ ಹೇಳಿದ್ದಾರೆ.


ಇದನ್ನೂ ಓದಿ: ‌ಓವೈಸಿಯನ್ನು ’ಜಿನ್ನಾ ಅವತಾರ’ ಎಂದು ವಿವಾದವೆಬ್ಬಿಸಿದ ಸಂಸದ ತೇಜಸ್ವಿ ಸೂರ್ಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...