Homeಮುಖಪುಟಬಿಜೆಪಿ ಹೇಳುವಂತೆ ಕಚ್ಚತೀವು ದ್ವೀಪ ಮರಳಿ ಪಡೆಯಲು ಸಾಧ್ಯವೇ?

ಬಿಜೆಪಿ ಹೇಳುವಂತೆ ಕಚ್ಚತೀವು ದ್ವೀಪ ಮರಳಿ ಪಡೆಯಲು ಸಾಧ್ಯವೇ?

- Advertisement -
- Advertisement -

ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ.ಅಣ್ಣಾಮಲೈ ಕಚ್ಚತೀವು ದ್ವೀಪವನ್ನು ಮರಳಿ ಪಡೆಯಲು ಭಾರತ ಶ್ರಮಿಸುತ್ತಿದೆ ಎಂಬ ಹೇಳಿಕೆಯನ್ನು ನೀಡಿದ್ದರು. ಇದರ ಬೆನ್ನಲ್ಲಿ ಶ್ರೀಲಂಕಾ ವಿದೇಶಾಂಗ ಸಚಿವಾಲಯವು ದ್ವೀಪವು ತನ್ನ ನಿಯಂತ್ರಣದಲ್ಲಿದೆ ಎಂದು ಸಮರ್ಥಿಸಿಕೊಂಡಿದೆ, ಆದರೆ ಬಿಜೆಪಿ ಹೇಳುವಂತೆ ಶ್ರೀಲಂಕಾದ ಭಾಗವಾಗಿರುವ ಕಚ್ಚತೀವು ದ್ವೀಪವನ್ನು ಭಾರತಕ್ಕೆ ಪಡೆಯಲು ಸಾಧ್ಯವಿಲ್ಲ ಎನ್ನುವುದು ವಾಸ್ತವವಾಗಿದೆ.

ತಮಿಳುನಾಡು ದಿವಂಗತ ಮುಖ್ಯಮಂತ್ರಿ ಕರುಣಾನಿಧಿ ಅವರ ಒಪ್ಪಿಗೆಯ ಮೇರೆಗೆ ಶ್ರೀಲಂಕಾಕ್ಕೆ ಕಚ್ಚತೀವು ನೀಡಲಾಗಿದೆ. ಈಗ ಬಿಜೆಪಿಯು ಕಚ್ಚತೀವು ವಾಪಸ್ ಪಡೆಯುವಂತೆ ಬಿಜೆಪಿ ವಿದೇಶಾಂಗ ಸಚಿವ ಜೈಶಂಕರ್‌ಗೆ ಪತ್ರ ನೀಡಿದೆ. ಅದನ್ನು ಭಾರತಕ್ಕೆ ವಾಪಸ್ ತರಬೇಕು, ಇದು ನಮ್ಮ ನಿಲುವು. ಕೇಂದ್ರ ಮೀನುಗಾರರ ರಕ್ಷಣೆಗಾಗಿ ಕಚ್ಚತೀವು ಮರಳಿ ತರಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ನಾವು ಮಾಡುತ್ತಿದ್ದೇವೆ ಎಂದು ಅಣ್ಣಾಮಲೈ ಹೇಳಿದ್ದಾರೆ.

ಶ್ರೀಲಂಕಾದ ಸಚಿವ ಜೀವನ್ ಥೋಂಡಮನ್ ಅವರು ಕಚ್ಚತೀವು ಬಗ್ಗೆ ಭಾರತ ಅಧಿಕೃತ ಸಂವಹನ ನಡೆಸಿರುವ ಬಗ್ಗೆ ನಿರಾಕರಿಸಿದ್ದಾರೆ, ಕಚ್ಚತೀವು ದ್ವೀಪವು ಶ್ರೀಲಂಕಾದ ಭಾಗವಾಗಿದೆ ಎಂದು ಪ್ರತಿಪಾದಿಸಿದ್ದಾರೆ. ಶ್ರೀಲಂಕಾಕ್ಕೆ ಸಂಬಂಧಿಸಿದಂತೆ ಕಚ್ಚತೀವು ದ್ವೀಪವು ಶ್ರೀಲಂಕಾದ ನಿಯಂತ್ರಣ ರೇಖೆಯೊಳಗೆ ಬರುತ್ತದೆ. ಇಲ್ಲಿಯವರೆಗೆ ಕಚ್ಚತೀವು ದ್ವೀಪದ ಅಧಿಕಾರವನ್ನು ಹಿಂದಿರುಗಿಸಲು ಭಾರತದಿಂದ ಅಧಿಕೃತ ಸಂವಹನ ನಡೆದಿಲ್ಲ. ಅಂತಹ ಸಂವಹನವಿದ್ದರೆ, ವಿದೇಶಾಂಗ ಸಚಿವಾಲಯ ಅದಕ್ಕೆ ಉತ್ತರ ನೀಡಲಿದೆ ಎಂದು ಜೀವನ್ ಥೋಂಡಮಾನ್ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದರು. ರಾಷ್ಟ್ರೀಯ ಗಡಿಗಳನ್ನು ಕಾಯ್ದುಕೊಳ್ಳುವ ಕುರಿತು ಜೀವನ್ ತೊಂಡಮಾನ್ ಅವರ ಹೇಳಿಕೆಗಳ ಬೆನ್ನಲ್ಲಿ ಶ್ರೀಲಂಕಾದ ಮತ್ತೋರ್ವ ಸಚಿವರು ಇಚ್ಛೆಯಂತೆ ಇದನ್ನು ಬದಲಾಯಿಸಲಾಗುವುದಿಲ್ಲ ಎಂದು ಪ್ರತಿಕ್ರಿಯೆಯನ್ನು ನೀಡಿದ್ದಾರೆ.

ಕಚ್ಚತೀವು ಶ್ರೀಲಂಕಾದ ನಿಯಂತ್ರಣ ರೇಖೆಯೊಳಗೆ ಔಪಚಾರಿಕವಾಗಿ ಗುರುತಿಸಲ್ಪಟ್ಟಿದೆ. ಗಡಿಯನ್ನು ನಿರ್ಧರಿಸಿದ ನಂತರ ಸರ್ಕಾರದ ಬದಲಾವಣೆಯ ಕಾರಣಕ್ಕಾಗಿ ಯಾರೂ ಕೂಡ ಭೂಭಾಗದ ಬದಲಾವಣೆಗೆ ಒತ್ತಾಯಿಸಲು ಸಾಧ್ಯವಿಲ್ಲ ಎಂದು ಹೇಳಿದ್ದರು.

ಅಣ್ಣಾಮಲೈ ಹೊರತುಪಡಿಸಿ, ಮತ್ತೊಬ್ಬ ಬಿಜೆಪಿ ನಾಯಕ ಕೂಡ ಕಚ್ಚತೀವು ದ್ವೀಪದಲ್ಲಿ ಬಿಜೆಪಿ ನಾಯಕತ್ವ ಪ್ರಮುಖ ಘೋಷಣೆ ಮಾಡಲಿದೆ ಎಂದು ಹೇಳಿದ್ದರು.

ಲೋಕಸಭೆ ಚುನಾವಣೆಯ ಪೂರ್ವದಲ್ಲಿ ಉಲ್ಭಣಗೊಂಡ ಈ ವಿವಾದವು ನೆರೆಯ ರಾಷ್ಟ್ರದೊಂದಿಗೆ ಭಾರತದ ಸಂಬಂಧವನ್ನು “ಹಾನಿ”ಗೊಳಿಸುವುದೇ ಎಂಬ ಪ್ರಶ್ನೆ? ಉದ್ಭವಿಸಿದೆ. ಇದಕ್ಕೆ ಮಾಜಿ ರಾಜತಾಂತ್ರಿಕ ಕೆಸಿ ಸಿಂಗ್ ಪ್ರತಿಕ್ರಿಯಿಸಿ ಜೈಶಂಕರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಜೈಶಂಕರ್‌ ಅವರ ಹೇಳಿಕೆ ಭಾರತವು ದೇಶೀಯ ರಾಜಕೀಯದಲ್ಲಿ ಕಚ್ಚತೀವು ವಿಚಾರವನ್ನು ಮುನ್ನೆಲೆಗೆ ತರವುದರಿಂದ ಶ್ರೀಲಂಕಾದೊಂದಿಗಿನ ಭಾರತದ ರಾಜತಾಂತ್ರಿಕ ಸಂಬಂಧವನ್ನು ಹದಗೆಡಿಸುತ್ತದೆ. ಜೈಶಂಕರ್‌ ಅವರಂತಹ ಅನುಭವಿ ರಾಜಕಾರಣಿ ಈ ರಿತಿ ಪ್ರತಿಕ್ರಿಯಿಸುವುದು ಅವರ ಇಮೇಜ್‌ನ್ನು ಹಾನಿಗೊಳಿಸುತ್ತದೆ. ಇದು ಶ್ರೀಲಂಕಾವನ್ನು ಮಾಲ್ಡೀವ್ಸ್‌ನಂತೆ ಚೀನಾದ ತೆಕ್ಕೆಗೆ ತಳ್ಳಬಹುದು, ಆದರೆ ದಕ್ಷಿಣದಲ್ಲಿ ಬಿಜೆಪಿಗೆ ಸ್ವಲ್ಪ ಲಾಭವನ್ನು ನೀಡುತ್ತದೆ ಎಂದು ಹೇಳಿದ್ದಾರೆ.

ಭಾರತದ ರಾಮೇಶ್ವರಂ ಮತ್ತು ಶ್ರೀಲಂಕಾ ನಡುವಿನ ಪಾಕ್ ಜಲಸಂಧಿಯಲ್ಲಿ 285 ಎಕರೆ ವಿಸ್ತಾರವಾದ ಕಚ್ಚತೀವು ದ್ವೀಪವು ಭಾರತದ ಕರಾವಳಿಯಿಂದ ಸುಮಾರು 33 ಕಿಲೋಮೀಟರ್ ದೂರದಲ್ಲಿದೆ. ಕಚ್ಚತೀವು ಬ್ರಿಟಿಷರ ಕಾಲದಿಂದಲೂ ಭಾರತ ಮತ್ತು ಶ್ರೀಲಂಕಾ ನಡುವೆ ವಿವಾದಿತ ಪ್ರದೇಶವಾಗಿತ್ತು. ಪ್ರಧಾನ ಮಂತ್ರಿ ಇಂದಿರಾ ಗಾಂಧಿ ನೇತೃತ್ವದ ಕಾಂಗ್ರೆಸ್ ಸರ್ಕಾರವು 1974ರ “ಇಂಡೋ-ಶ್ರೀಲಂಕಾದ ಕಡಲ ಒಪ್ಪಂದ”(“Indo-Sri Lankan Maritime Agreement) ಅಡಿಯಲ್ಲಿ ದ್ವೀಪ ರಾಷ್ಟ್ರಕ್ಕೆ ಬಿಟ್ಟುಕೊಡಲು ಒಪ್ಪಿಕೊಂಡಿತು. ಕಚ್ಚತೀವು ಶ್ರೀಲಂಕಾದ ಭಾಗವಾಗಿದೆ.

ಈ ಬಗ್ಗೆ ಅಲಾಡಿ ಗುರುಸ್ವಾಮಿ ಅವರು 2015ರ ಜನವರಿಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಮಾಹಿತಿ ಹಕ್ಕು ಕಾಯ್ದೆ ಅಡಿ ಅರ್ಜಿ ಸಲ್ಲಿಸಿದ್ದರು. ಸಚಿವೆ ಸುಷ್ಮಾ ಸ್ವರಾಜ್‌ ನೇತೃತ್ವದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಆ ಅರ್ಜಿಗೆ ಅದೇ ಜನವರಿ 27ರಂದು ಉತ್ತರ ನೀಡಿತ್ತು. ಉತ್ತರದಲ್ಲಿ, ‘1974 ಮತ್ತು 1976ರ ಒಪ್ಪಂದಗಳ ಪ್ರಕಾರ ಕಚ್ಚತೀವು ದ್ವೀಪವು ಶ್ರೀಲಂಕಾದ ವ್ಯಾಪ್ತಿಯಲ್ಲಿ ಬರುತ್ತದೆ. ಅಲ್ಲಿಯವರೆಗೆ ಆ ದ್ವೀಪವು ಯಾರ ವ್ಯಾಪ್ತಿಗೆ ಸೇರುತ್ತದೆ ಎಂಬುದನ್ನು ಗುರುತಿಸಿರಲೇ ಇಲ್ಲ. ಹೀಗಾಗಿ ಎರಡೂ ದೇಶಗಳ ಮಧ್ಯೆ ಜಲಗಡಿಯನ್ನು ಗುರುತಿಸುವ ಅವಧಿಯಲ್ಲಿ ಭಾರತವು ಕಚ್ಚತೀವು ದ್ವೀಪವನ್ನು ಶ್ರೀಲಂಕಾಕ್ಕೆ ಬಿಟ್ಟುಕೊಡುವ ಅಥವಾ ಸ್ವಾಧೀನಪಡಿಸಿಕೊಳ್ಳುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಸಚಿವಾಲಯವು ವಿವರಿಸಿತ್ತು. ಜತೆಗೆ ಒಪ್ಪಂದಗಳಿಗೆ ಸಂಬಂಧಿಸಿದ ದಾಖಲೆಗಳನ್ನೂ ಉತ್ತರದೊಂದಿಗೆ ನೀಡಿತ್ತು. ಮೋದಿ ಅವರ ಸರ್ಕಾರದ್ದೇ ಸಚಿವಾಲಯವು ಅಧಿಕೃತವಾಗಿ ನೀಡಿದ್ದ ದಾಖಲೆಗಳ ಪ್ರಕಾರ ಕಚ್ಚತೀವು ದ್ವೀಪವು ಎಂದಿಗೂ ಭಾರತಕ್ಕೆ ಸೇರಿರಲೇ ಇಲ್ಲ ಎನ್ನುವುದು ಬಯಲಾಗುತ್ತದೆ. ಆದ್ದರಿಂದ ಬಿಜೆಪಿಗರು ಈಗ ಹೇಳುವಂತೆ ಕಚ್ಚತೀವು ದ್ವೀಪವನ್ನು ಭಾರತಕ್ಕೆ ಸೇರಿಸುವುದು ಸುಲಭವಲ್ಲ ಎಂದು ಹೇಳಲಾಗಿದೆ.

ಇದನ್ನು ಓದಿ: ದೆಹಲಿ ಅಬಕಾರಿ ನೀತಿ ಪ್ರಕರಣ: ಎಎಪಿ ನಾಯಕ ಸಂಜಯ್ ಸಿಂಗ್ ಜಾಮೀನು ನೀಡಿದ ಸುಪ್ರೀಂಕೋರ್ಟ್‌

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...