Homeಅಂಕಣಗಳುನರ್ವಸ್ ಬಿಜೆಪಿಯ ಮುಂದೆ ಆತ್ಮವಿಶ್ವಾಸವಿಲ್ಲದ ಕಾಂಗ್ರೆಸ್

ನರ್ವಸ್ ಬಿಜೆಪಿಯ ಮುಂದೆ ಆತ್ಮವಿಶ್ವಾಸವಿಲ್ಲದ ಕಾಂಗ್ರೆಸ್

- Advertisement -
- Advertisement -

ದಕ್ಷಿಣ ಭಾರತವನ್ನು ಬಿಟ್ಟರೆ, ದೇಶದಲ್ಲಿ ಎಲ್ಲಿಯಾದರೂ ಮೋದಿ ವಿರೋಧಿ ಭಾವನೆ ಜನರಲ್ಲಿ ಬೆಳೆಯುತ್ತಿದ್ದರೆ ಅದು ಗುಜರಾತ್‍ನಲ್ಲಿ ಮಾತ್ರ ಎಂದು ಭಾವಿಸಲು ಕಾರಣಗಳಿವೆ. ಅಲ್ಲಿನ ಜನರು ಖುದ್ದು ಮೋದಿಯ ಆಡಳಿತವನ್ನೇ ನೋಡಿದ್ದಾರೆ. ಹಾಗಾಗಿ ಆಡಳಿತ ವಿರೋಧಿ ಅಲೆ ಕೇಂದ್ರ ಸರ್ಕಾರದ ವಿರುದ್ಧ ಬಲಿಯಲು ಮಿಕ್ಕ ಭಾಗಗಳಲ್ಲಿ ಸಮಯ ಬೇಕಾಗಬಹುದಾದರೂ, ಗುಜರಾತ್‍ನಲ್ಲಿ ಹಾಗಿಲ್ಲ. ಇದರ ಸೂಚನೆಯು ಕಳೆದ ವಿಧಾನಸಭಾ ಚುನಾವಣೆಯಲ್ಲೇ ಸಿಕ್ಕಿತ್ತು. ಈಗ ಲೋಕಸಭಾ ಚುನಾವಣೆಯಲ್ಲಂತೂ ಬಿಜೆಪಿ ಹೆದರಿ ಕೊಂಡಿರುವುದು ಸ್ಪಷ್ಟವಾಗಿದೆ.
ಗುಜರಾತಿ ನಲ್ಲಿ ಎಲ್ಲಿ ನೋಡಿದರೂ ಭಾರತೀಯ ಜನತಾ ಪಾರ್ಟಿಯ ಬಿಲ್‍ಬೋರ್ಡ್ ಗಳೇ ಕಾಣುತ್ತಿವೆ. ಅದರೊಂದಿಗೆ ರಾಜ್ಯದಲ್ಲಿ ಟಿವಿ ಮತ್ತು ಸಾಮಾಜಿಕ ಜಾಲತಾಣ ಗಳಲ್ಲೂ ಬಿಜೆಪಿಯೇ ಕಾಣಿಸಿಕೊಳ್ಳುತ್ತಿದೆ. ಗುಜರಾತಿನ ಮುಖ್ಯ ಚುನಾವಣಾಧಿಕಾರಿಯ ಪ್ರಕಾರ, ಟಿವಿಯಲ್ಲಿ, ರೇಡಿಯೋದಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ 88% ರಷ್ಟು ರಾಜಕೀಯ ಜಾಹೀರಾತುಗಳು ಬಿಜೆಪಿಯದ್ದೇ ಆಗಿವೆ.
ಮುಖ್ಯ ಚುನಾವಣಾಧಿಕಾರಿಯ ಮೀಡಿಯಾ ಸರ್ಟಿಫಿಕೇಷನ್ ಆ್ಯಂಡ್ ಮಾನಿಟರಿಂಗ್ ಕಮಿಟಿಯು ಯಾವುದೇ ಡಿಜಿಟಲ್ ಮಾಧ್ಯಮದಲ್ಲಿ ಬರುವ ರಾಜಕೀಯ ವಿಷಯಗಳಿಗೆ ಅನುಮತಿ ನೀಡುವ ಅಧಿಕಾರ ಹೊಂದಿದೆ. 22 ಏಪ್ರಿಲ್‍ವರೆಗೆ ಅವರ ಹತ್ತಿರ ಬಂದ 200 ಅರ್ಜಿಗಳಲ್ಲಿ 173 ಬಿಜೆಪಿಯಿಂದ ಬಂದಿದ್ದರೆ 27 ಕಾಂಗ್ರೆಸ್ಸಿನಿಂದ ಬಂದಿದ್ದವು. ಅದರಲ್ಲಿ ಬಿಜೆಪಿಯ 112 ಮತ್ತು ಕಾಂಗ್ರೆಸ್ಸಿನ 15 ವಿಷಯಗಳಿಗೆ ಅನುಮತಿ ನೀಡಲಾಯಿತು.
ಪ್ರಧಾನಮಂತ್ರಿಯವರ ರಾಜ್ಯದಲ್ಲಿಯೇ ಈ ಪ್ರಮಾಣದ ಜಾಹೀರಾತುಗಳನ್ನು ನೋಡಿ, ಬಿಜೆಪಿ ಈ ಚುನಾವಣೆಗಳಲ್ಲಿ ಯಾಕೋ ತುಂಬಾ ನರ್ವಸ್ ಆಗಿದೆ ಎನ್ನುವ ಆಲೋಚನೆ ತೇಲಿಬರುತ್ತಿದೆ.
ಗುಜರಾತಿನ ಕಾಂಗ್ರೆಸ್ ವಕ್ತಾರ ಮನೀಷ್ ದೋಷಿ ಹೇಳಿದ್ದೇನೆಂದರೆ, “ಬಿಜೆಪಿ ಎನ್ನುವ ಪಕ್ಷ ಒಂದು ಪ್ರಚಾರದ ಪಕ್ಷ, ಪ್ರಧಾನಿ ಮೋದಿಯವರು ಪ್ರಚಾರ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಳೆದ 5 ವರ್ಷಗಳಲ್ಲಿ ಮೋದಿ ಸರಕಾರ ಏನಾದರೂ ಕೆಲಸ ಮಾಡಿದ್ದಲ್ಲಿ, ಜಾಹಿರಾತುಗಳಿಗಾಗಿ ಇಷ್ಟೊಂದು ಹಣ ಪೋಲು ಮಾಡುತ್ತಿರಲಿಲ್ಲ”.
“ಕಾಂಗ್ರೆಸ್ ನಕಾರಾತ್ಮಕ ಪ್ರಚಾರ ಮಾಡುತ್ತಿದೆ, ಆ ಕಾರಣದಿಂದಾಗಿಯೇ ಅಧಿಕೃತ ಅನುಮತಿ ಸಿಗುವುದಿಲ್ಲ. ಅವರು ನೆಗೆಟಿವ್ ಪ್ರಚಾರದ ಮೇಲೆಯೇ ಗಮನಹರಿಸುತ್ತಿರುವುದರಿಂದ ಅವರ ಜಾಹಿರಾತುಗಳ ಸಂಖ್ಯೆ ಕಡಿಮೆ. ನಾವು ಸಕಾರಾತ್ಮಕ ಪ್ರಚಾರ ಮಾಡುತ್ತೇವೆ” ಇದು ಗುಜರಾತಿನ ಬಿಜೆಪಿ ವಕ್ತಾರ ಭರತ್ ಪಾಂಡ್ಯಾ ಹೇಳಿದ್ದು.
ಎಲ್ಲೆಲ್ಲೂ ಮೋದಿ
ಗುಜರಾತಿನಾದ್ಯಂತ ಎಲ್ಲಾ ಭಿತ್ತಿಪತ್ರಗಳು ಮತ್ತು ಇತರೆ ಪ್ರಚಾರ ಸಾಮಗ್ರಿಗಳಲ್ಲಿ ಕಂಡುಬರುವುದು ಮೋದಿಯ ಚಿತ್ರ ಮಾತ್ರ. ಅವರ ಚಿತ್ರದೊಂದಿಗೆ, ‘ಈ ಸಲವೂ ಮೋದಿ ಸರಕಾರ’ ಎನ್ನುವ ಸಂದೇಶವಿರುತ್ತದೆ. ಮುಖ್ಯಮಂತ್ರಿ ವಿಜಯ್ ರೂಪಾನಿಯವರ ಸರಕಾರದ ವಿರುದ್ಧ ಹುಟ್ಟಿಕೊಂಡಿರುವ ವ್ಯಾಪಾರಿಗಳ ಮತ್ತು ರೈತರ ಸಿಟ್ಟನ್ನು ಶಮನಗೊಳಿಸುವುದಕ್ಕಾಗಿಯೇ ಬಿಜೆಪಿಯ ತಂತ್ರಗಾರಿಕೆ ರೂಪಿಸಲಾಗುತ್ತಿದೆ ಎಂದು ಸ್ಪಷ್ಟವಾಗಿ ಕಂಡುಬರುತ್ತಿದೆ.
2017ರ ವಿಧಾನಸಭೆ ಚುನಾವಣೆಗಳ ನೆನಪು ಇನ್ನು ಹಸಿಯಾಗಿಯೇ ಇದೆ. ಆಗ ಕಾಂಗ್ರೆಸ್ ಬಲವಾದ ಪೈಪೋಟಿಯನ್ನು ನೀಡಿತ್ತು. ಮೋದಿ ಅಲೆಯ ಹೊರತಾಗಿಯೂ ಬಿಜೆಪಿಯ ಸಂಖ್ಯೆ 100ಕ್ಕಿಂತ ಕೆಳಗಿಳಿಯಿತು ಮತ್ತು ಕಾಂಗ್ರೆಸ್ ಪಡೆದ ಸೀಟುಗಳು ಕಳೆದ ಎರಡು ದಶಕಗಳಲ್ಲಿಯೇ ಅತ್ಯಂತ ಹೆಚ್ಚು.
ರಾಜ್ಯದಲ್ಲಿ 26 ಸೀಟುಗಳಲ್ಲಿ 20 ಆದರೂ ಗೆಲ್ಲಲು ಬಿಜೆಪಿ ಮತ್ತೆ ಮೋದಿ ಬ್ರ್ಯಾಂಡ್ ಮೇಲೆಯೇ ನೆಚ್ಚಿಕೊಂಡಿದೆ. ನೆನಪಿಡಿ, 2014ರಲ್ಲಿ ಬಿಜೆಪಿ ಎಲ್ಲ 26 ಸೀಟುಗಳನ್ನು ಗೆದ್ದುಕೊಂಡಿತ್ತು. ಇಂದು, ಎಪ್ರಿಲ್ 23ರಂದು ಗುಜರಾತಿನ ಎಲ್ಲ ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ವಿಧಾನಸಭಾ ಚುನಾವಣೆಯ ಫಲಿತಾಂಶವನ್ನು ಲೋಕಸಭಾ ಕ್ಷೇತ್ರಗಳಿಗೆ ಅನ್ವಯಿಸಿ ನೋಡುವುದಾದರೆ, ಕಾಂಗ್ರೆಸ್ ಐದಾರು ಸೀಟುಗಳಲ್ಲಿ ಗೆಲ್ಲಬೇಕು.
ಅದನ್ನು ದಾಟಿ ಅಲ್ಲಿನ ರೈತರ, ಗೋಪಾಲಕರ, ಪಾಟೀದಾರರ ಹಾಗೂ ಸಣ್ಣ ವ್ಯಾಪಾರಸ್ಥರ ಅಸಮಾಧಾನವು ಬಿಜೆಪಿ ವಿರುದ್ಧದ ಮತಗಳಾಗಿ ಧ್ರುವೀಕರಣಗೊಳ್ಳುತ್ತದಾ ಎಂಬುದು ಬಿಜೆಪಿಯ ದೌರ್ಬಲ್ಯದ ಮೇಲಷ್ಟೇ ಅವಲಂಬಿಸಿಲ್ಲ. ಅದು ಕಾಂಗ್ರೆಸ್ಸಿನ ಸಾಮಥ್ರ್ಯದ ಮೇಲೆ ನಿಂತಿದೆ. ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೈಕಮಾಂಡ್‍ನ ನೇರ ಪಾಲ್ಗೊಳ್ಳುವಿಕೆಯಿಂದ ಚುರುಕಾಗಿದ್ದ ಸ್ಥಳೀಯ ಕಾಂಗ್ರೆಸ್ ದೇಶವ್ಯಾಪಿ ಚುನಾವಣೆ ನಡೆಯುತ್ತಿರುವಾಗ ಅಷ್ಟೇ ಸಮರ್ಥವಾಗಿಲ್ಲ. ಹೀಗಾಗಿ ಮೋದಿ ವಿರುದ್ಧದ ಭಾವನೆ ಬೆಳೆಯುತ್ತಿರುವ ರಾಜ್ಯವಾದ ಗುಜರಾತ್‍ನಲ್ಲಿ ಅದರ ಸಂಪೂರ್ಣ ಲಾಭವನ್ನು ಪಡೆದುಕೊಳ್ಳಲು ಕಾಂಗ್ರೆಸ್ ಶಕ್ತವಾಗಿಲ್ಲ.
ಒಂದೇ ಸುತ್ತಿನ ಚುನಾವಣೆ ನಡೆಯುತ್ತಿರುವ ಅಲ್ಲಿ ಜನರೇ ಮನಸ್ಸು ಮಾಡಿ ಕಾಂಗ್ರೆಸ್‍ಗೆ ಮತ ಹಾಕಿದಲ್ಲಿ, 2009ರ ಸಾಧನೆಯನ್ನು (15 ಬಿಜೆಪಿ-11 ಕಾಂಗ್ರೆಸ್) ಅದು ಮಾಡಬಹುದು.
ಅಮುಲ್ ನಾಡಿನಲ್ಲಿ ಗೋಪಾಲಕರ ಸಿಟ್ಟು
ಭಾರತದ ಮೊಟ್ಟಮೊದಲ ಬೃಹತ್ ಸಹಕಾರೀ ಹಾಲು ಉದ್ದಿಮೆಯ ಯಶಸ್ವಿ ಪ್ರಯೋಗ ಗುಜರಾತಿನದ್ದೇ. ಅಮುಲ್‍ನಿಂದ ಆರಂಭವಾದದ್ದು ಇತರ ರಾಜ್ಯಗಳಿಗೂ ಹಬ್ಬಿತು. ಆದರೆ ರಾಜ್ಯದ ಮೂಲೆಮೂಲೆಗಳಿಗೂ ಹಬ್ಬಿರುವ ಅಮುಲ್‍ನ ಕಾರ್ಯಕ್ಷೇತ್ರವು ಹಾಲಿನ ಉತ್ಪಾದಕತೆಯನ್ನು ಹೆಚ್ಚಿಸಿದೆ. ಇದು ಕೇವಲ ಗುಜರಾತಿನ ಸಮಸ್ಯೆಯಲ್ಲ. ಕೃಷಿ ಬಿಕ್ಕಟ್ಟಿನ ಕಾರಣಕ್ಕೆ ಹೈನುಗಾರಿಕೆಗೆ ಹೆಚ್ಚೆಚ್ಚು ರೈತರು ಮುಂದಾಗುತ್ತಿರುವುದು ಇಡೀ ದೇಶದಲ್ಲಿದೆ. ಹಾಗಾಗಿ ಮಾರುಕಟ್ಟೆಯನ್ನು ಇನ್ನೂ ಹೆಚ್ಚು ವಿಸ್ತರಿಸಿಕೊಳ್ಳುವುದು ಸುಲಭವಿಲ್ಲ.
ಜೊತೆಗೆ ಗುಜರಾತಿನಲ್ಲಿ ಹಾಲಿನ ದರವನ್ನು ಹೆಚ್ಚಿಸುವುದೂ ಕಷ್ಟ. ಏಕೆಂದರೆ ಪ್ರತೀ ಮನೆಯಲ್ಲೂ ಹಾಲಿನ ಬಳಕೆ ವಿಪರೀತ. ಇಂತಹ ಸಮಸ್ಯೆ ಇರುವಾಗ ಗುಜರಾತಿನಲ್ಲಿ ಬರ ತೀವ್ರವಾಗಿದೆ. ಹುಲ್ಲಿಗೆ ಸಬ್ಸಿಡಿ ನೀಡಿದ್ದೇವೆ ಎಂದು ಬಿಜೆಪಿ ಸರ್ಕಾರವು ಹೇಳಿಕೊಳ್ಳುತ್ತಿದೆಯಾದರೂ ಬರ ಹೆಚ್ಚಾಗಿ, ಹುಲ್ಲು ಸಿಗುತ್ತಿಲ್ಲ. ಇನ್ನೂ ಹೆಚ್ಚು ಹಸುಗಳನ್ನು ಸಾಕಲು ಸಾಲ ಸೌಲಭ್ಯ ಕಲ್ಪಿಸಿದ್ದೇವೆ ಎಂದು ಹೇಳುತ್ತಿರುವ ಬಿಜೆಪಿ ನಾಯಕರಿಗೆ ಸಮಸ್ಯೆಯ ಮೂಲವೇ ಅರ್ಥವಾದಂತಿಲ್ಲ.
ಅದೇ ಸಂದರ್ಭದಲ್ಲಿ ಕಾಂಗ್ರೆಸ್‍ನ ಪ್ರಣಾಳಿಕೆಯಲ್ಲಿ ಪ್ರತ್ಯೇಕ ರೈತ ಬಜೆಟ್ ಮತ್ತು ಹಾಲಿಗೆ ಪ್ರೋತ್ಸಾಹಧನ ನೀಡುವ ಭರವಸೆಯಿದೆ. ಈಗಾಗಲೇ ಕರ್ನಾಟಕದಲ್ಲಿ ಆ ವ್ಯವಸ್ಥೆ ಇದೆ. ಇದು ಗುಜರಾತ್‍ನ ಹಾಲು ಉತ್ಪಾದಕರಿಗೂ ಗೊತ್ತಿರುವ ವಿಚಾರವಾಗಿದೆ. ಗೋಪಾಲಕ ಸಮುದಾಯವಾದ ಮಾಲ್ಧಾರಿಗಳು ನರೇಂದ್ರ ಮೋದಿಯ ಸ್ವಂತ ಜಿಲ್ಲೆ ಮೆಹ್ಸಾನಾದಲ್ಲೂ ಸಾಕಷ್ಟಿದ್ದಾರೆ. ಈ ಸರ್ಕಾರವು ತಮಗೇನೂ ಮಾಡುತ್ತಿಲ್ಲ ಎಂಬ ಭಾವನೆ ದಟ್ಟವಾಗಿದ್ದು, ಇದನ್ನು ಬಳಸಿಕೊಳ್ಳಲು ಕಾಂಗ್ರೆಸ್ ಮುಂದಾಗಿದೆ.

ಆಧಾರ: ಪ್ರಿಂಟ್ ಮತ್ತು ಗುಜರಾತಿನ
ವಿವಿಧ ಜನಪರ ಚಿಂತಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...