Homeಅಂಕಣಗಳುನರ್ವಸ್ ಬಿಜೆಪಿಯ ಮುಂದೆ ಆತ್ಮವಿಶ್ವಾಸವಿಲ್ಲದ ಕಾಂಗ್ರೆಸ್

ನರ್ವಸ್ ಬಿಜೆಪಿಯ ಮುಂದೆ ಆತ್ಮವಿಶ್ವಾಸವಿಲ್ಲದ ಕಾಂಗ್ರೆಸ್

- Advertisement -
- Advertisement -

ದಕ್ಷಿಣ ಭಾರತವನ್ನು ಬಿಟ್ಟರೆ, ದೇಶದಲ್ಲಿ ಎಲ್ಲಿಯಾದರೂ ಮೋದಿ ವಿರೋಧಿ ಭಾವನೆ ಜನರಲ್ಲಿ ಬೆಳೆಯುತ್ತಿದ್ದರೆ ಅದು ಗುಜರಾತ್‍ನಲ್ಲಿ ಮಾತ್ರ ಎಂದು ಭಾವಿಸಲು ಕಾರಣಗಳಿವೆ. ಅಲ್ಲಿನ ಜನರು ಖುದ್ದು ಮೋದಿಯ ಆಡಳಿತವನ್ನೇ ನೋಡಿದ್ದಾರೆ. ಹಾಗಾಗಿ ಆಡಳಿತ ವಿರೋಧಿ ಅಲೆ ಕೇಂದ್ರ ಸರ್ಕಾರದ ವಿರುದ್ಧ ಬಲಿಯಲು ಮಿಕ್ಕ ಭಾಗಗಳಲ್ಲಿ ಸಮಯ ಬೇಕಾಗಬಹುದಾದರೂ, ಗುಜರಾತ್‍ನಲ್ಲಿ ಹಾಗಿಲ್ಲ. ಇದರ ಸೂಚನೆಯು ಕಳೆದ ವಿಧಾನಸಭಾ ಚುನಾವಣೆಯಲ್ಲೇ ಸಿಕ್ಕಿತ್ತು. ಈಗ ಲೋಕಸಭಾ ಚುನಾವಣೆಯಲ್ಲಂತೂ ಬಿಜೆಪಿ ಹೆದರಿ ಕೊಂಡಿರುವುದು ಸ್ಪಷ್ಟವಾಗಿದೆ.
ಗುಜರಾತಿ ನಲ್ಲಿ ಎಲ್ಲಿ ನೋಡಿದರೂ ಭಾರತೀಯ ಜನತಾ ಪಾರ್ಟಿಯ ಬಿಲ್‍ಬೋರ್ಡ್ ಗಳೇ ಕಾಣುತ್ತಿವೆ. ಅದರೊಂದಿಗೆ ರಾಜ್ಯದಲ್ಲಿ ಟಿವಿ ಮತ್ತು ಸಾಮಾಜಿಕ ಜಾಲತಾಣ ಗಳಲ್ಲೂ ಬಿಜೆಪಿಯೇ ಕಾಣಿಸಿಕೊಳ್ಳುತ್ತಿದೆ. ಗುಜರಾತಿನ ಮುಖ್ಯ ಚುನಾವಣಾಧಿಕಾರಿಯ ಪ್ರಕಾರ, ಟಿವಿಯಲ್ಲಿ, ರೇಡಿಯೋದಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ 88% ರಷ್ಟು ರಾಜಕೀಯ ಜಾಹೀರಾತುಗಳು ಬಿಜೆಪಿಯದ್ದೇ ಆಗಿವೆ.
ಮುಖ್ಯ ಚುನಾವಣಾಧಿಕಾರಿಯ ಮೀಡಿಯಾ ಸರ್ಟಿಫಿಕೇಷನ್ ಆ್ಯಂಡ್ ಮಾನಿಟರಿಂಗ್ ಕಮಿಟಿಯು ಯಾವುದೇ ಡಿಜಿಟಲ್ ಮಾಧ್ಯಮದಲ್ಲಿ ಬರುವ ರಾಜಕೀಯ ವಿಷಯಗಳಿಗೆ ಅನುಮತಿ ನೀಡುವ ಅಧಿಕಾರ ಹೊಂದಿದೆ. 22 ಏಪ್ರಿಲ್‍ವರೆಗೆ ಅವರ ಹತ್ತಿರ ಬಂದ 200 ಅರ್ಜಿಗಳಲ್ಲಿ 173 ಬಿಜೆಪಿಯಿಂದ ಬಂದಿದ್ದರೆ 27 ಕಾಂಗ್ರೆಸ್ಸಿನಿಂದ ಬಂದಿದ್ದವು. ಅದರಲ್ಲಿ ಬಿಜೆಪಿಯ 112 ಮತ್ತು ಕಾಂಗ್ರೆಸ್ಸಿನ 15 ವಿಷಯಗಳಿಗೆ ಅನುಮತಿ ನೀಡಲಾಯಿತು.
ಪ್ರಧಾನಮಂತ್ರಿಯವರ ರಾಜ್ಯದಲ್ಲಿಯೇ ಈ ಪ್ರಮಾಣದ ಜಾಹೀರಾತುಗಳನ್ನು ನೋಡಿ, ಬಿಜೆಪಿ ಈ ಚುನಾವಣೆಗಳಲ್ಲಿ ಯಾಕೋ ತುಂಬಾ ನರ್ವಸ್ ಆಗಿದೆ ಎನ್ನುವ ಆಲೋಚನೆ ತೇಲಿಬರುತ್ತಿದೆ.
ಗುಜರಾತಿನ ಕಾಂಗ್ರೆಸ್ ವಕ್ತಾರ ಮನೀಷ್ ದೋಷಿ ಹೇಳಿದ್ದೇನೆಂದರೆ, “ಬಿಜೆಪಿ ಎನ್ನುವ ಪಕ್ಷ ಒಂದು ಪ್ರಚಾರದ ಪಕ್ಷ, ಪ್ರಧಾನಿ ಮೋದಿಯವರು ಪ್ರಚಾರ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಳೆದ 5 ವರ್ಷಗಳಲ್ಲಿ ಮೋದಿ ಸರಕಾರ ಏನಾದರೂ ಕೆಲಸ ಮಾಡಿದ್ದಲ್ಲಿ, ಜಾಹಿರಾತುಗಳಿಗಾಗಿ ಇಷ್ಟೊಂದು ಹಣ ಪೋಲು ಮಾಡುತ್ತಿರಲಿಲ್ಲ”.
“ಕಾಂಗ್ರೆಸ್ ನಕಾರಾತ್ಮಕ ಪ್ರಚಾರ ಮಾಡುತ್ತಿದೆ, ಆ ಕಾರಣದಿಂದಾಗಿಯೇ ಅಧಿಕೃತ ಅನುಮತಿ ಸಿಗುವುದಿಲ್ಲ. ಅವರು ನೆಗೆಟಿವ್ ಪ್ರಚಾರದ ಮೇಲೆಯೇ ಗಮನಹರಿಸುತ್ತಿರುವುದರಿಂದ ಅವರ ಜಾಹಿರಾತುಗಳ ಸಂಖ್ಯೆ ಕಡಿಮೆ. ನಾವು ಸಕಾರಾತ್ಮಕ ಪ್ರಚಾರ ಮಾಡುತ್ತೇವೆ” ಇದು ಗುಜರಾತಿನ ಬಿಜೆಪಿ ವಕ್ತಾರ ಭರತ್ ಪಾಂಡ್ಯಾ ಹೇಳಿದ್ದು.
ಎಲ್ಲೆಲ್ಲೂ ಮೋದಿ
ಗುಜರಾತಿನಾದ್ಯಂತ ಎಲ್ಲಾ ಭಿತ್ತಿಪತ್ರಗಳು ಮತ್ತು ಇತರೆ ಪ್ರಚಾರ ಸಾಮಗ್ರಿಗಳಲ್ಲಿ ಕಂಡುಬರುವುದು ಮೋದಿಯ ಚಿತ್ರ ಮಾತ್ರ. ಅವರ ಚಿತ್ರದೊಂದಿಗೆ, ‘ಈ ಸಲವೂ ಮೋದಿ ಸರಕಾರ’ ಎನ್ನುವ ಸಂದೇಶವಿರುತ್ತದೆ. ಮುಖ್ಯಮಂತ್ರಿ ವಿಜಯ್ ರೂಪಾನಿಯವರ ಸರಕಾರದ ವಿರುದ್ಧ ಹುಟ್ಟಿಕೊಂಡಿರುವ ವ್ಯಾಪಾರಿಗಳ ಮತ್ತು ರೈತರ ಸಿಟ್ಟನ್ನು ಶಮನಗೊಳಿಸುವುದಕ್ಕಾಗಿಯೇ ಬಿಜೆಪಿಯ ತಂತ್ರಗಾರಿಕೆ ರೂಪಿಸಲಾಗುತ್ತಿದೆ ಎಂದು ಸ್ಪಷ್ಟವಾಗಿ ಕಂಡುಬರುತ್ತಿದೆ.
2017ರ ವಿಧಾನಸಭೆ ಚುನಾವಣೆಗಳ ನೆನಪು ಇನ್ನು ಹಸಿಯಾಗಿಯೇ ಇದೆ. ಆಗ ಕಾಂಗ್ರೆಸ್ ಬಲವಾದ ಪೈಪೋಟಿಯನ್ನು ನೀಡಿತ್ತು. ಮೋದಿ ಅಲೆಯ ಹೊರತಾಗಿಯೂ ಬಿಜೆಪಿಯ ಸಂಖ್ಯೆ 100ಕ್ಕಿಂತ ಕೆಳಗಿಳಿಯಿತು ಮತ್ತು ಕಾಂಗ್ರೆಸ್ ಪಡೆದ ಸೀಟುಗಳು ಕಳೆದ ಎರಡು ದಶಕಗಳಲ್ಲಿಯೇ ಅತ್ಯಂತ ಹೆಚ್ಚು.
ರಾಜ್ಯದಲ್ಲಿ 26 ಸೀಟುಗಳಲ್ಲಿ 20 ಆದರೂ ಗೆಲ್ಲಲು ಬಿಜೆಪಿ ಮತ್ತೆ ಮೋದಿ ಬ್ರ್ಯಾಂಡ್ ಮೇಲೆಯೇ ನೆಚ್ಚಿಕೊಂಡಿದೆ. ನೆನಪಿಡಿ, 2014ರಲ್ಲಿ ಬಿಜೆಪಿ ಎಲ್ಲ 26 ಸೀಟುಗಳನ್ನು ಗೆದ್ದುಕೊಂಡಿತ್ತು. ಇಂದು, ಎಪ್ರಿಲ್ 23ರಂದು ಗುಜರಾತಿನ ಎಲ್ಲ ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ವಿಧಾನಸಭಾ ಚುನಾವಣೆಯ ಫಲಿತಾಂಶವನ್ನು ಲೋಕಸಭಾ ಕ್ಷೇತ್ರಗಳಿಗೆ ಅನ್ವಯಿಸಿ ನೋಡುವುದಾದರೆ, ಕಾಂಗ್ರೆಸ್ ಐದಾರು ಸೀಟುಗಳಲ್ಲಿ ಗೆಲ್ಲಬೇಕು.
ಅದನ್ನು ದಾಟಿ ಅಲ್ಲಿನ ರೈತರ, ಗೋಪಾಲಕರ, ಪಾಟೀದಾರರ ಹಾಗೂ ಸಣ್ಣ ವ್ಯಾಪಾರಸ್ಥರ ಅಸಮಾಧಾನವು ಬಿಜೆಪಿ ವಿರುದ್ಧದ ಮತಗಳಾಗಿ ಧ್ರುವೀಕರಣಗೊಳ್ಳುತ್ತದಾ ಎಂಬುದು ಬಿಜೆಪಿಯ ದೌರ್ಬಲ್ಯದ ಮೇಲಷ್ಟೇ ಅವಲಂಬಿಸಿಲ್ಲ. ಅದು ಕಾಂಗ್ರೆಸ್ಸಿನ ಸಾಮಥ್ರ್ಯದ ಮೇಲೆ ನಿಂತಿದೆ. ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೈಕಮಾಂಡ್‍ನ ನೇರ ಪಾಲ್ಗೊಳ್ಳುವಿಕೆಯಿಂದ ಚುರುಕಾಗಿದ್ದ ಸ್ಥಳೀಯ ಕಾಂಗ್ರೆಸ್ ದೇಶವ್ಯಾಪಿ ಚುನಾವಣೆ ನಡೆಯುತ್ತಿರುವಾಗ ಅಷ್ಟೇ ಸಮರ್ಥವಾಗಿಲ್ಲ. ಹೀಗಾಗಿ ಮೋದಿ ವಿರುದ್ಧದ ಭಾವನೆ ಬೆಳೆಯುತ್ತಿರುವ ರಾಜ್ಯವಾದ ಗುಜರಾತ್‍ನಲ್ಲಿ ಅದರ ಸಂಪೂರ್ಣ ಲಾಭವನ್ನು ಪಡೆದುಕೊಳ್ಳಲು ಕಾಂಗ್ರೆಸ್ ಶಕ್ತವಾಗಿಲ್ಲ.
ಒಂದೇ ಸುತ್ತಿನ ಚುನಾವಣೆ ನಡೆಯುತ್ತಿರುವ ಅಲ್ಲಿ ಜನರೇ ಮನಸ್ಸು ಮಾಡಿ ಕಾಂಗ್ರೆಸ್‍ಗೆ ಮತ ಹಾಕಿದಲ್ಲಿ, 2009ರ ಸಾಧನೆಯನ್ನು (15 ಬಿಜೆಪಿ-11 ಕಾಂಗ್ರೆಸ್) ಅದು ಮಾಡಬಹುದು.
ಅಮುಲ್ ನಾಡಿನಲ್ಲಿ ಗೋಪಾಲಕರ ಸಿಟ್ಟು
ಭಾರತದ ಮೊಟ್ಟಮೊದಲ ಬೃಹತ್ ಸಹಕಾರೀ ಹಾಲು ಉದ್ದಿಮೆಯ ಯಶಸ್ವಿ ಪ್ರಯೋಗ ಗುಜರಾತಿನದ್ದೇ. ಅಮುಲ್‍ನಿಂದ ಆರಂಭವಾದದ್ದು ಇತರ ರಾಜ್ಯಗಳಿಗೂ ಹಬ್ಬಿತು. ಆದರೆ ರಾಜ್ಯದ ಮೂಲೆಮೂಲೆಗಳಿಗೂ ಹಬ್ಬಿರುವ ಅಮುಲ್‍ನ ಕಾರ್ಯಕ್ಷೇತ್ರವು ಹಾಲಿನ ಉತ್ಪಾದಕತೆಯನ್ನು ಹೆಚ್ಚಿಸಿದೆ. ಇದು ಕೇವಲ ಗುಜರಾತಿನ ಸಮಸ್ಯೆಯಲ್ಲ. ಕೃಷಿ ಬಿಕ್ಕಟ್ಟಿನ ಕಾರಣಕ್ಕೆ ಹೈನುಗಾರಿಕೆಗೆ ಹೆಚ್ಚೆಚ್ಚು ರೈತರು ಮುಂದಾಗುತ್ತಿರುವುದು ಇಡೀ ದೇಶದಲ್ಲಿದೆ. ಹಾಗಾಗಿ ಮಾರುಕಟ್ಟೆಯನ್ನು ಇನ್ನೂ ಹೆಚ್ಚು ವಿಸ್ತರಿಸಿಕೊಳ್ಳುವುದು ಸುಲಭವಿಲ್ಲ.
ಜೊತೆಗೆ ಗುಜರಾತಿನಲ್ಲಿ ಹಾಲಿನ ದರವನ್ನು ಹೆಚ್ಚಿಸುವುದೂ ಕಷ್ಟ. ಏಕೆಂದರೆ ಪ್ರತೀ ಮನೆಯಲ್ಲೂ ಹಾಲಿನ ಬಳಕೆ ವಿಪರೀತ. ಇಂತಹ ಸಮಸ್ಯೆ ಇರುವಾಗ ಗುಜರಾತಿನಲ್ಲಿ ಬರ ತೀವ್ರವಾಗಿದೆ. ಹುಲ್ಲಿಗೆ ಸಬ್ಸಿಡಿ ನೀಡಿದ್ದೇವೆ ಎಂದು ಬಿಜೆಪಿ ಸರ್ಕಾರವು ಹೇಳಿಕೊಳ್ಳುತ್ತಿದೆಯಾದರೂ ಬರ ಹೆಚ್ಚಾಗಿ, ಹುಲ್ಲು ಸಿಗುತ್ತಿಲ್ಲ. ಇನ್ನೂ ಹೆಚ್ಚು ಹಸುಗಳನ್ನು ಸಾಕಲು ಸಾಲ ಸೌಲಭ್ಯ ಕಲ್ಪಿಸಿದ್ದೇವೆ ಎಂದು ಹೇಳುತ್ತಿರುವ ಬಿಜೆಪಿ ನಾಯಕರಿಗೆ ಸಮಸ್ಯೆಯ ಮೂಲವೇ ಅರ್ಥವಾದಂತಿಲ್ಲ.
ಅದೇ ಸಂದರ್ಭದಲ್ಲಿ ಕಾಂಗ್ರೆಸ್‍ನ ಪ್ರಣಾಳಿಕೆಯಲ್ಲಿ ಪ್ರತ್ಯೇಕ ರೈತ ಬಜೆಟ್ ಮತ್ತು ಹಾಲಿಗೆ ಪ್ರೋತ್ಸಾಹಧನ ನೀಡುವ ಭರವಸೆಯಿದೆ. ಈಗಾಗಲೇ ಕರ್ನಾಟಕದಲ್ಲಿ ಆ ವ್ಯವಸ್ಥೆ ಇದೆ. ಇದು ಗುಜರಾತ್‍ನ ಹಾಲು ಉತ್ಪಾದಕರಿಗೂ ಗೊತ್ತಿರುವ ವಿಚಾರವಾಗಿದೆ. ಗೋಪಾಲಕ ಸಮುದಾಯವಾದ ಮಾಲ್ಧಾರಿಗಳು ನರೇಂದ್ರ ಮೋದಿಯ ಸ್ವಂತ ಜಿಲ್ಲೆ ಮೆಹ್ಸಾನಾದಲ್ಲೂ ಸಾಕಷ್ಟಿದ್ದಾರೆ. ಈ ಸರ್ಕಾರವು ತಮಗೇನೂ ಮಾಡುತ್ತಿಲ್ಲ ಎಂಬ ಭಾವನೆ ದಟ್ಟವಾಗಿದ್ದು, ಇದನ್ನು ಬಳಸಿಕೊಳ್ಳಲು ಕಾಂಗ್ರೆಸ್ ಮುಂದಾಗಿದೆ.

ಆಧಾರ: ಪ್ರಿಂಟ್ ಮತ್ತು ಗುಜರಾತಿನ
ವಿವಿಧ ಜನಪರ ಚಿಂತಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪರಿಶಿಷ್ಟ ಜಾತಿ ಪಟ್ಟಿಗೆ ಜಮ್ಮು-ಕಾಶ್ಮೀರದ ವಾಲ್ಮೀಕಿ ಸಮುದಾಯ: ಒಕ್ಕೂಟ ಸರ್ಕಾರ

ಜಮ್ಮು ಮತ್ತು ಕಾಶ್ಮೀರದ ವಾಲ್ಮೀಕಿ ಸಮುದಾಯವನ್ನು ಈಗ ಅಧಿಕೃತವಾಗಿ ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸಲಾಗಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಬುಧವಾರ ಸಂಸತ್ತಿಗೆ ತಿಳಿಸಿದೆ. ಇತ್ತೀಚಿನ ವರ್ಷಗಳಲ್ಲಿ ಪ್ರಕ್ರಿಯೆಗೊಳಿಸಲಾದ...

ತಿರುಪತಿ ದೇಣಿಗೆ ಕಳ್ಳತನ ಪ್ರಕರಣ: ಕಾನೂನು ಕ್ರಮ ತೆಗೆದುಕೊಳ್ಳವಂತೆ ‘ಸಿಐಡಿ-ಎಸಿಬಿ’ಗೆ ಹೈಕೋರ್ಟ್ ನಿರ್ದೇಶನ

ತಿರುಮಲ ತಿರುಪತಿ ದೇವಸ್ಥಾನದ ಪರಕಮಣಿ (ದೇಣಿಗೆ ಪೆಟ್ಟಿಗೆ) ಕಳ್ಳತನ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಆಂಧ್ರಪ್ರದೇಶ ಹೈಕೋರ್ಟ್ ರಾಜ್ಯದ ಅಪರಾಧ ತನಿಖಾ ಇಲಾಖೆ (ಸಿಐಡಿ) ಮತ್ತು ಭ್ರಷ್ಟಾಚಾರ ನಿಗ್ರಹ ದಳ...

ದಲಿತರ ಮನೆಯಲ್ಲಿ ಊಟ ಮಾಡಿದ ಆರ್‌ಎಸ್‌ಎಸ್‌ ಕಾರ್ಯಕರ್ತನ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಗ್ರಾಮೀಣ ಭಾರತದ ಕೆಲವು ಭಾಗಗಳಲ್ಲಿ ಜಾತಿ ಪೂರ್ವಾಗ್ರಹಗಳು ಎಷ್ಟು ಆಳವಾಗಿ ಉಳಿದಿವೆ ಎಂಬುದನ್ನು ನೆನಪಿಸುವ ರೀತಿಯಲ್ಲಿ, ಮಧ್ಯಪ್ರದೇಶದ ರೈಸೇನ್ ಜಿಲ್ಲೆಯ ಹಳ್ಳಿಯೊಂದರಿಂದ ಸಾಮಾಜಿಕ ಬಹಿಷ್ಕಾರ ಮತ್ತು ಅಸ್ಪೃಶ್ಯತೆಯ ಪ್ರಕರಣ ಬೆಳಕಿಗೆ ಬಂದಿದೆ. ಆರ್‌ಎಸ್‌ಎಸ್...

ಅಸ್ಸಾಮಿ ಗಾಯಕನ ಬಂಧನ ಬಗ್ಗೆ ಟೈಮ್ಸ್ ನೌ ನವಭಾರತ್‌ ಪೂರ್ವಾಗ್ರಹ ಪೀಡಿತ ವರದಿ : ವಾರದೊಳಗೆ ತೆಗೆದು ಹಾಕಲು ಎನ್‌ಬಿಡಿಎಸ್‌ಎ ಆದೇಶ

ಸೆಪ್ಟೆಂಬರ್ 2024ರಲ್ಲಿ ಅಸ್ಸಾಮಿ ಗಾಯಕ ಅಲ್ತಾಫ್ ಹುಸೇನ್ ಬಂಧನದ ಬಗ್ಗೆ ಪ್ರಸಾರವಾದ ಕಾರ್ಯಕ್ರಮದ ಭಾಗಗಳನ್ನು ತೆಗೆದುಹಾಕುವಂತೆ ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರವು (ಎನ್‌ಬಿಡಿಎಸ್‌ಎ) ಟೈಮ್ಸ್ ನೌ ನವಭಾರತ್‌ಗೆ ನಿರ್ದೇಶನ ನೀಡಿದೆ. ಡಿಸೆಂಬರ್...

ಸಾವರ್ಕರ್ ಪ್ರಶಸ್ತಿ ಬಗ್ಗೆ ನನಗೆ ಗೊತ್ತೂ ಇಲ್ಲ, ಸ್ವೀಕರಿಸುವುದೂ ಇಲ್ಲ : ಶಶಿ ತರೂರ್

ಹಿಂದುತ್ವವಾದಿ ವಿ.ಡಿ ಸಾವರ್ಕರ್ ಹೆಸರಿನಲ್ಲಿ ಪ್ರಶಸ್ತಿ ಘೋಷಣೆಯಾದ ಬಗ್ಗೆ ನನಗೆ ಗೊತ್ತೂ ಇಲ್ಲ, ಅಂತಹ ಪ್ರಶಸ್ತಿ ಸ್ವೀಕರಿಸುವುದೂ ಇಲ್ಲ ಎಂದು ಕಾಂಗ್ರೆಸ್ ನಾಯಕ ಹಾಗೂ ತಿರುವನಂತಪುರಂ ಸಂಸದ ಶಶಿ ತರೂರ್ ಬುಧವಾರ (ಡಿಸೆಂಬರ್...

ಮಧ್ಯಪ್ರದೇಶ| ಯುವಕನನ್ನು ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸಿಲುಕಿಸಿದ ಪೊಲೀಸರು

18 ವರ್ಷದ ಯುವಕನನ್ನು ಬಸ್ಸಿನಿಂದ ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸುಳ್ಳು ಆರೋಪ ಹೊರಿಸಿದ ಆರೋಪದ ಮೇಲೆ ಮಧ್ಯಪ್ರದೇಶದ ಆರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ತನಿಖೆಯ ಸಮಗ್ರತೆ ಮತ್ತು ಕಾನೂನುಬದ್ಧತೆಯನ್ನು ಪ್ರಶ್ನಿಸಿದ ಇಂದೋರ್...

ಮುಟ್ಟಿನ ರಜೆ ನೀತಿ ಬಲವಾಗಿ ಸಮರ್ಥಿಸಿಕೊಂಡ ಸರ್ಕಾರ : ಅಧಿಸೂಚನೆ ತಡೆ ತೆರವುಗೊಳಿಸಿದ ಹೈಕೋರ್ಟ್

ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಮುಟ್ಟಿನ ರಜೆ ನೀಡುವ ಸಂಬಂಧ ಹೊರಡಿಸಿದ್ದ ತನ್ನ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಬಲವಾಗಿ ಸಮರ್ಥಿಸಿಕೊಂಡಿದೆ. ಸರ್ಕಾರದ ವಾದ ಆಲಿಸಿದ ಹೈಕೋರ್ಟ್, ಅಧಿಸೂಚನೆಗೆ...

ದೆಹಲಿ ಗಲಭೆ ಪ್ರಕರಣ : ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಮತ್ತಿತರರ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್, ಮೊಹಮ್ಮದ್ ಸಲೀಮ್ ಖಾನ್ ಮತ್ತು ಶಾದಾಬ್ ಅಹ್ಮದ್ ಸಲ್ಲಿಸಿದ್ದ ಅರ್ಜಿಗಳ...

ಪಕ್ಷಪಾತ ಆರೋಪದಿಂದ ದೀಪಸ್ತಂಭದವರೆಗೆ..ಕಟಕಟೆಯಲ್ಲಿರುವ ನ್ಯಾಯಮೂರ್ತಿ ಸ್ವಾಮಿನಾಥನ್ ಯಾರು?

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠದ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರ ಪದಚ್ಯುತಿ ಕೋರಿ ಮಂಗಳವಾರ (ಡಿಸೆಂಬರ್ 9) ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರಿಗೆ ನೋಟಿಸ್ ಸಲ್ಲಿಸಲಾಗಿದೆ. ತಮಿಳುನಾಡಿನ ಡಿಎಂಕೆ ಸೇರಿದಂತೆ ವಿವಿಧ...

ಗುಜರಾತ್‌| 6 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಗಂಭೀರವಾಗಿ ಹಲ್ಲೆ ನಡೆಸಿದವನ ಬಂಧನ

ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ನಂತರ ಆಕೆಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ನಡೆದಿದೆ. ಈ ಪ್ರಕರಣ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, 35 ವರ್ಷದ...