Homeಅಂಕಣಗಳುನರ್ವಸ್ ಬಿಜೆಪಿಯ ಮುಂದೆ ಆತ್ಮವಿಶ್ವಾಸವಿಲ್ಲದ ಕಾಂಗ್ರೆಸ್

ನರ್ವಸ್ ಬಿಜೆಪಿಯ ಮುಂದೆ ಆತ್ಮವಿಶ್ವಾಸವಿಲ್ಲದ ಕಾಂಗ್ರೆಸ್

- Advertisement -
- Advertisement -

ದಕ್ಷಿಣ ಭಾರತವನ್ನು ಬಿಟ್ಟರೆ, ದೇಶದಲ್ಲಿ ಎಲ್ಲಿಯಾದರೂ ಮೋದಿ ವಿರೋಧಿ ಭಾವನೆ ಜನರಲ್ಲಿ ಬೆಳೆಯುತ್ತಿದ್ದರೆ ಅದು ಗುಜರಾತ್‍ನಲ್ಲಿ ಮಾತ್ರ ಎಂದು ಭಾವಿಸಲು ಕಾರಣಗಳಿವೆ. ಅಲ್ಲಿನ ಜನರು ಖುದ್ದು ಮೋದಿಯ ಆಡಳಿತವನ್ನೇ ನೋಡಿದ್ದಾರೆ. ಹಾಗಾಗಿ ಆಡಳಿತ ವಿರೋಧಿ ಅಲೆ ಕೇಂದ್ರ ಸರ್ಕಾರದ ವಿರುದ್ಧ ಬಲಿಯಲು ಮಿಕ್ಕ ಭಾಗಗಳಲ್ಲಿ ಸಮಯ ಬೇಕಾಗಬಹುದಾದರೂ, ಗುಜರಾತ್‍ನಲ್ಲಿ ಹಾಗಿಲ್ಲ. ಇದರ ಸೂಚನೆಯು ಕಳೆದ ವಿಧಾನಸಭಾ ಚುನಾವಣೆಯಲ್ಲೇ ಸಿಕ್ಕಿತ್ತು. ಈಗ ಲೋಕಸಭಾ ಚುನಾವಣೆಯಲ್ಲಂತೂ ಬಿಜೆಪಿ ಹೆದರಿ ಕೊಂಡಿರುವುದು ಸ್ಪಷ್ಟವಾಗಿದೆ.
ಗುಜರಾತಿ ನಲ್ಲಿ ಎಲ್ಲಿ ನೋಡಿದರೂ ಭಾರತೀಯ ಜನತಾ ಪಾರ್ಟಿಯ ಬಿಲ್‍ಬೋರ್ಡ್ ಗಳೇ ಕಾಣುತ್ತಿವೆ. ಅದರೊಂದಿಗೆ ರಾಜ್ಯದಲ್ಲಿ ಟಿವಿ ಮತ್ತು ಸಾಮಾಜಿಕ ಜಾಲತಾಣ ಗಳಲ್ಲೂ ಬಿಜೆಪಿಯೇ ಕಾಣಿಸಿಕೊಳ್ಳುತ್ತಿದೆ. ಗುಜರಾತಿನ ಮುಖ್ಯ ಚುನಾವಣಾಧಿಕಾರಿಯ ಪ್ರಕಾರ, ಟಿವಿಯಲ್ಲಿ, ರೇಡಿಯೋದಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ 88% ರಷ್ಟು ರಾಜಕೀಯ ಜಾಹೀರಾತುಗಳು ಬಿಜೆಪಿಯದ್ದೇ ಆಗಿವೆ.
ಮುಖ್ಯ ಚುನಾವಣಾಧಿಕಾರಿಯ ಮೀಡಿಯಾ ಸರ್ಟಿಫಿಕೇಷನ್ ಆ್ಯಂಡ್ ಮಾನಿಟರಿಂಗ್ ಕಮಿಟಿಯು ಯಾವುದೇ ಡಿಜಿಟಲ್ ಮಾಧ್ಯಮದಲ್ಲಿ ಬರುವ ರಾಜಕೀಯ ವಿಷಯಗಳಿಗೆ ಅನುಮತಿ ನೀಡುವ ಅಧಿಕಾರ ಹೊಂದಿದೆ. 22 ಏಪ್ರಿಲ್‍ವರೆಗೆ ಅವರ ಹತ್ತಿರ ಬಂದ 200 ಅರ್ಜಿಗಳಲ್ಲಿ 173 ಬಿಜೆಪಿಯಿಂದ ಬಂದಿದ್ದರೆ 27 ಕಾಂಗ್ರೆಸ್ಸಿನಿಂದ ಬಂದಿದ್ದವು. ಅದರಲ್ಲಿ ಬಿಜೆಪಿಯ 112 ಮತ್ತು ಕಾಂಗ್ರೆಸ್ಸಿನ 15 ವಿಷಯಗಳಿಗೆ ಅನುಮತಿ ನೀಡಲಾಯಿತು.
ಪ್ರಧಾನಮಂತ್ರಿಯವರ ರಾಜ್ಯದಲ್ಲಿಯೇ ಈ ಪ್ರಮಾಣದ ಜಾಹೀರಾತುಗಳನ್ನು ನೋಡಿ, ಬಿಜೆಪಿ ಈ ಚುನಾವಣೆಗಳಲ್ಲಿ ಯಾಕೋ ತುಂಬಾ ನರ್ವಸ್ ಆಗಿದೆ ಎನ್ನುವ ಆಲೋಚನೆ ತೇಲಿಬರುತ್ತಿದೆ.
ಗುಜರಾತಿನ ಕಾಂಗ್ರೆಸ್ ವಕ್ತಾರ ಮನೀಷ್ ದೋಷಿ ಹೇಳಿದ್ದೇನೆಂದರೆ, “ಬಿಜೆಪಿ ಎನ್ನುವ ಪಕ್ಷ ಒಂದು ಪ್ರಚಾರದ ಪಕ್ಷ, ಪ್ರಧಾನಿ ಮೋದಿಯವರು ಪ್ರಚಾರ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಳೆದ 5 ವರ್ಷಗಳಲ್ಲಿ ಮೋದಿ ಸರಕಾರ ಏನಾದರೂ ಕೆಲಸ ಮಾಡಿದ್ದಲ್ಲಿ, ಜಾಹಿರಾತುಗಳಿಗಾಗಿ ಇಷ್ಟೊಂದು ಹಣ ಪೋಲು ಮಾಡುತ್ತಿರಲಿಲ್ಲ”.
“ಕಾಂಗ್ರೆಸ್ ನಕಾರಾತ್ಮಕ ಪ್ರಚಾರ ಮಾಡುತ್ತಿದೆ, ಆ ಕಾರಣದಿಂದಾಗಿಯೇ ಅಧಿಕೃತ ಅನುಮತಿ ಸಿಗುವುದಿಲ್ಲ. ಅವರು ನೆಗೆಟಿವ್ ಪ್ರಚಾರದ ಮೇಲೆಯೇ ಗಮನಹರಿಸುತ್ತಿರುವುದರಿಂದ ಅವರ ಜಾಹಿರಾತುಗಳ ಸಂಖ್ಯೆ ಕಡಿಮೆ. ನಾವು ಸಕಾರಾತ್ಮಕ ಪ್ರಚಾರ ಮಾಡುತ್ತೇವೆ” ಇದು ಗುಜರಾತಿನ ಬಿಜೆಪಿ ವಕ್ತಾರ ಭರತ್ ಪಾಂಡ್ಯಾ ಹೇಳಿದ್ದು.
ಎಲ್ಲೆಲ್ಲೂ ಮೋದಿ
ಗುಜರಾತಿನಾದ್ಯಂತ ಎಲ್ಲಾ ಭಿತ್ತಿಪತ್ರಗಳು ಮತ್ತು ಇತರೆ ಪ್ರಚಾರ ಸಾಮಗ್ರಿಗಳಲ್ಲಿ ಕಂಡುಬರುವುದು ಮೋದಿಯ ಚಿತ್ರ ಮಾತ್ರ. ಅವರ ಚಿತ್ರದೊಂದಿಗೆ, ‘ಈ ಸಲವೂ ಮೋದಿ ಸರಕಾರ’ ಎನ್ನುವ ಸಂದೇಶವಿರುತ್ತದೆ. ಮುಖ್ಯಮಂತ್ರಿ ವಿಜಯ್ ರೂಪಾನಿಯವರ ಸರಕಾರದ ವಿರುದ್ಧ ಹುಟ್ಟಿಕೊಂಡಿರುವ ವ್ಯಾಪಾರಿಗಳ ಮತ್ತು ರೈತರ ಸಿಟ್ಟನ್ನು ಶಮನಗೊಳಿಸುವುದಕ್ಕಾಗಿಯೇ ಬಿಜೆಪಿಯ ತಂತ್ರಗಾರಿಕೆ ರೂಪಿಸಲಾಗುತ್ತಿದೆ ಎಂದು ಸ್ಪಷ್ಟವಾಗಿ ಕಂಡುಬರುತ್ತಿದೆ.
2017ರ ವಿಧಾನಸಭೆ ಚುನಾವಣೆಗಳ ನೆನಪು ಇನ್ನು ಹಸಿಯಾಗಿಯೇ ಇದೆ. ಆಗ ಕಾಂಗ್ರೆಸ್ ಬಲವಾದ ಪೈಪೋಟಿಯನ್ನು ನೀಡಿತ್ತು. ಮೋದಿ ಅಲೆಯ ಹೊರತಾಗಿಯೂ ಬಿಜೆಪಿಯ ಸಂಖ್ಯೆ 100ಕ್ಕಿಂತ ಕೆಳಗಿಳಿಯಿತು ಮತ್ತು ಕಾಂಗ್ರೆಸ್ ಪಡೆದ ಸೀಟುಗಳು ಕಳೆದ ಎರಡು ದಶಕಗಳಲ್ಲಿಯೇ ಅತ್ಯಂತ ಹೆಚ್ಚು.
ರಾಜ್ಯದಲ್ಲಿ 26 ಸೀಟುಗಳಲ್ಲಿ 20 ಆದರೂ ಗೆಲ್ಲಲು ಬಿಜೆಪಿ ಮತ್ತೆ ಮೋದಿ ಬ್ರ್ಯಾಂಡ್ ಮೇಲೆಯೇ ನೆಚ್ಚಿಕೊಂಡಿದೆ. ನೆನಪಿಡಿ, 2014ರಲ್ಲಿ ಬಿಜೆಪಿ ಎಲ್ಲ 26 ಸೀಟುಗಳನ್ನು ಗೆದ್ದುಕೊಂಡಿತ್ತು. ಇಂದು, ಎಪ್ರಿಲ್ 23ರಂದು ಗುಜರಾತಿನ ಎಲ್ಲ ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ವಿಧಾನಸಭಾ ಚುನಾವಣೆಯ ಫಲಿತಾಂಶವನ್ನು ಲೋಕಸಭಾ ಕ್ಷೇತ್ರಗಳಿಗೆ ಅನ್ವಯಿಸಿ ನೋಡುವುದಾದರೆ, ಕಾಂಗ್ರೆಸ್ ಐದಾರು ಸೀಟುಗಳಲ್ಲಿ ಗೆಲ್ಲಬೇಕು.
ಅದನ್ನು ದಾಟಿ ಅಲ್ಲಿನ ರೈತರ, ಗೋಪಾಲಕರ, ಪಾಟೀದಾರರ ಹಾಗೂ ಸಣ್ಣ ವ್ಯಾಪಾರಸ್ಥರ ಅಸಮಾಧಾನವು ಬಿಜೆಪಿ ವಿರುದ್ಧದ ಮತಗಳಾಗಿ ಧ್ರುವೀಕರಣಗೊಳ್ಳುತ್ತದಾ ಎಂಬುದು ಬಿಜೆಪಿಯ ದೌರ್ಬಲ್ಯದ ಮೇಲಷ್ಟೇ ಅವಲಂಬಿಸಿಲ್ಲ. ಅದು ಕಾಂಗ್ರೆಸ್ಸಿನ ಸಾಮಥ್ರ್ಯದ ಮೇಲೆ ನಿಂತಿದೆ. ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೈಕಮಾಂಡ್‍ನ ನೇರ ಪಾಲ್ಗೊಳ್ಳುವಿಕೆಯಿಂದ ಚುರುಕಾಗಿದ್ದ ಸ್ಥಳೀಯ ಕಾಂಗ್ರೆಸ್ ದೇಶವ್ಯಾಪಿ ಚುನಾವಣೆ ನಡೆಯುತ್ತಿರುವಾಗ ಅಷ್ಟೇ ಸಮರ್ಥವಾಗಿಲ್ಲ. ಹೀಗಾಗಿ ಮೋದಿ ವಿರುದ್ಧದ ಭಾವನೆ ಬೆಳೆಯುತ್ತಿರುವ ರಾಜ್ಯವಾದ ಗುಜರಾತ್‍ನಲ್ಲಿ ಅದರ ಸಂಪೂರ್ಣ ಲಾಭವನ್ನು ಪಡೆದುಕೊಳ್ಳಲು ಕಾಂಗ್ರೆಸ್ ಶಕ್ತವಾಗಿಲ್ಲ.
ಒಂದೇ ಸುತ್ತಿನ ಚುನಾವಣೆ ನಡೆಯುತ್ತಿರುವ ಅಲ್ಲಿ ಜನರೇ ಮನಸ್ಸು ಮಾಡಿ ಕಾಂಗ್ರೆಸ್‍ಗೆ ಮತ ಹಾಕಿದಲ್ಲಿ, 2009ರ ಸಾಧನೆಯನ್ನು (15 ಬಿಜೆಪಿ-11 ಕಾಂಗ್ರೆಸ್) ಅದು ಮಾಡಬಹುದು.
ಅಮುಲ್ ನಾಡಿನಲ್ಲಿ ಗೋಪಾಲಕರ ಸಿಟ್ಟು
ಭಾರತದ ಮೊಟ್ಟಮೊದಲ ಬೃಹತ್ ಸಹಕಾರೀ ಹಾಲು ಉದ್ದಿಮೆಯ ಯಶಸ್ವಿ ಪ್ರಯೋಗ ಗುಜರಾತಿನದ್ದೇ. ಅಮುಲ್‍ನಿಂದ ಆರಂಭವಾದದ್ದು ಇತರ ರಾಜ್ಯಗಳಿಗೂ ಹಬ್ಬಿತು. ಆದರೆ ರಾಜ್ಯದ ಮೂಲೆಮೂಲೆಗಳಿಗೂ ಹಬ್ಬಿರುವ ಅಮುಲ್‍ನ ಕಾರ್ಯಕ್ಷೇತ್ರವು ಹಾಲಿನ ಉತ್ಪಾದಕತೆಯನ್ನು ಹೆಚ್ಚಿಸಿದೆ. ಇದು ಕೇವಲ ಗುಜರಾತಿನ ಸಮಸ್ಯೆಯಲ್ಲ. ಕೃಷಿ ಬಿಕ್ಕಟ್ಟಿನ ಕಾರಣಕ್ಕೆ ಹೈನುಗಾರಿಕೆಗೆ ಹೆಚ್ಚೆಚ್ಚು ರೈತರು ಮುಂದಾಗುತ್ತಿರುವುದು ಇಡೀ ದೇಶದಲ್ಲಿದೆ. ಹಾಗಾಗಿ ಮಾರುಕಟ್ಟೆಯನ್ನು ಇನ್ನೂ ಹೆಚ್ಚು ವಿಸ್ತರಿಸಿಕೊಳ್ಳುವುದು ಸುಲಭವಿಲ್ಲ.
ಜೊತೆಗೆ ಗುಜರಾತಿನಲ್ಲಿ ಹಾಲಿನ ದರವನ್ನು ಹೆಚ್ಚಿಸುವುದೂ ಕಷ್ಟ. ಏಕೆಂದರೆ ಪ್ರತೀ ಮನೆಯಲ್ಲೂ ಹಾಲಿನ ಬಳಕೆ ವಿಪರೀತ. ಇಂತಹ ಸಮಸ್ಯೆ ಇರುವಾಗ ಗುಜರಾತಿನಲ್ಲಿ ಬರ ತೀವ್ರವಾಗಿದೆ. ಹುಲ್ಲಿಗೆ ಸಬ್ಸಿಡಿ ನೀಡಿದ್ದೇವೆ ಎಂದು ಬಿಜೆಪಿ ಸರ್ಕಾರವು ಹೇಳಿಕೊಳ್ಳುತ್ತಿದೆಯಾದರೂ ಬರ ಹೆಚ್ಚಾಗಿ, ಹುಲ್ಲು ಸಿಗುತ್ತಿಲ್ಲ. ಇನ್ನೂ ಹೆಚ್ಚು ಹಸುಗಳನ್ನು ಸಾಕಲು ಸಾಲ ಸೌಲಭ್ಯ ಕಲ್ಪಿಸಿದ್ದೇವೆ ಎಂದು ಹೇಳುತ್ತಿರುವ ಬಿಜೆಪಿ ನಾಯಕರಿಗೆ ಸಮಸ್ಯೆಯ ಮೂಲವೇ ಅರ್ಥವಾದಂತಿಲ್ಲ.
ಅದೇ ಸಂದರ್ಭದಲ್ಲಿ ಕಾಂಗ್ರೆಸ್‍ನ ಪ್ರಣಾಳಿಕೆಯಲ್ಲಿ ಪ್ರತ್ಯೇಕ ರೈತ ಬಜೆಟ್ ಮತ್ತು ಹಾಲಿಗೆ ಪ್ರೋತ್ಸಾಹಧನ ನೀಡುವ ಭರವಸೆಯಿದೆ. ಈಗಾಗಲೇ ಕರ್ನಾಟಕದಲ್ಲಿ ಆ ವ್ಯವಸ್ಥೆ ಇದೆ. ಇದು ಗುಜರಾತ್‍ನ ಹಾಲು ಉತ್ಪಾದಕರಿಗೂ ಗೊತ್ತಿರುವ ವಿಚಾರವಾಗಿದೆ. ಗೋಪಾಲಕ ಸಮುದಾಯವಾದ ಮಾಲ್ಧಾರಿಗಳು ನರೇಂದ್ರ ಮೋದಿಯ ಸ್ವಂತ ಜಿಲ್ಲೆ ಮೆಹ್ಸಾನಾದಲ್ಲೂ ಸಾಕಷ್ಟಿದ್ದಾರೆ. ಈ ಸರ್ಕಾರವು ತಮಗೇನೂ ಮಾಡುತ್ತಿಲ್ಲ ಎಂಬ ಭಾವನೆ ದಟ್ಟವಾಗಿದ್ದು, ಇದನ್ನು ಬಳಸಿಕೊಳ್ಳಲು ಕಾಂಗ್ರೆಸ್ ಮುಂದಾಗಿದೆ.

ಆಧಾರ: ಪ್ರಿಂಟ್ ಮತ್ತು ಗುಜರಾತಿನ
ವಿವಿಧ ಜನಪರ ಚಿಂತಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...