Homeಕರ್ನಾಟಕಬೆಂಗಳೂರಿನಲ್ಲಿ ಯುಎಸ್‌ ಕಾನ್ಸುಲೇಟ್ ಕಚೇರಿ ಕಾರ್ಯಾರಂಭ : ಬಿಜೆಪಿ-ಕಾಂಗ್ರೆಸ್‌ ನಡುವೆ ಕ್ರೆಡಿಟ್ ಕಿತ್ತಾಟ

ಬೆಂಗಳೂರಿನಲ್ಲಿ ಯುಎಸ್‌ ಕಾನ್ಸುಲೇಟ್ ಕಚೇರಿ ಕಾರ್ಯಾರಂಭ : ಬಿಜೆಪಿ-ಕಾಂಗ್ರೆಸ್‌ ನಡುವೆ ಕ್ರೆಡಿಟ್ ಕಿತ್ತಾಟ

- Advertisement -
- Advertisement -

ಅಮೆರಿಕದ ಕಾನ್ಸುಲೇಟ್ ಕಚೇರಿಯ ಶಾಖೆಯು ಇಂದಿನಿಂದ (ಜನವರಿ 17, 2025 ಶುಕ್ರವಾರ) ಬೆಂಗಳೂರಿನಲ್ಲಿ ಕಾರ್ಯಾರಂಭ ಮಾಡಲಿದೆ.

ಭಾರತದ ವಿದೇಶಾಂಗ ಸಚಿವ ಎಸ್‌. ಜೈಶಂಕರ್ ಮತ್ತು ಭಾರತದಲ್ಲಿನ ಅಮೆರಿಕ ರಾಯಭಾರಿ ಎರಿಕ್ ಗ್ಯಾರ್‌ಸೆಟ್‌ ಅವರು ನೂತನ ಕಚೇರಿಗೆ ಚಾಲನೆ ನೀಡಲಿದ್ದಾರೆ.

ನಗರದ ವಿಠ್ಠಲ್ ಮಲ್ಯ ರಸ್ತೆಯ ಜೆಡಬ್ಲ್ಯು ಮ್ಯಾರಿಯೇಟ್ ಹೋಟೆಲ್‌ನಲ್ಲಿ ಅಮೆರಿಕದ ವಿದೇಶಾಂಗ ವಾಣಿಜ್ಯ ವ್ಯವಹಾರಗಳ ಸೇವಾ ಕಚೇರಿ ಇದ್ದು, ಅದಕ್ಕೆ ಹೊಂದಿಕೊಂಡಂತೆಯೇ ನೂತನ ಕಾನ್ಸುಲೇಟ್ ಆರಂಭಿಸಲಾಗುತ್ತಿದೆ.

ಇದು ತಾತ್ಕಾಲಿಕ ಕಚೇರಿಯಾಗಿದ್ದು, ಮುಂದಿನ ದಿನಗಳಲ್ಲಿ ಹೊಸ ಕಚೇರಿಗೆ ಕಾನ್ಸುಲೇಟ್ ಸ್ಥಳಾಂತರಗೊಳ್ಳಲಿದೆ ಎಂದು ವರದಿಯಾಗಿದೆ.

ಬಹು ನಿರೀಕ್ಷಿತ ಕಾನ್ಸುಲೇಟ್ ಕಚೇರಿ ಆರಂಭಗೊಳ್ಳುತ್ತಿದ್ದಂತೆ ಅದರ ಕ್ರೆಡಿಟ್ ಪಡೆಯಲುಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಕಿತ್ತಾಟ ಶುರುವಾಗಿದೆ.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಕಾನ್ಸುಲೇಟ್ ಕಚೇರಿ ಆರಂಭದ ಸಂಪೂರ್ಣ ಕ್ರೆಡಿಟ್ ಕೇಂದ್ರ ಸರ್ಕಾರಕ್ಕೆ ಕೊಟ್ಟರೆ, ಕರ್ನಾಟಕ ಸರ್ಕಾರದ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ನಾವು ಮಾಡಿದ್ದು ಎನ್ನುತ್ತಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿರುವ ಸಂಸದ ತೇಜಸ್ವಿ ಸೂರ್ಯ, ಕಾನ್ಸುಲೇಟ್ ಕಚೇರಿ ತೆರೆಯುವ ಕನಸು ನನಸಾಗಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರನ್ನು ಶ್ಲಾಘಿಸಿದ್ದಾರೆ.

ತಮ್ಮ ಪೋಸ್ಟ್‌ನಲ್ಲಿ, ಸೂರ್ಯ ಅವರು 2019 ರಿಂದ ಕಾನ್ಸುಲೇಟ್ ಪರವಾಗಿ ವಕಾಲತ್ತು ವಹಿಸುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಮಾರ್ಚ್ 2023ರಲ್ಲಿ ಬೆಂಗಳೂರು ಭೇಟಿಯ ಸಮಯದಲ್ಲಿ ಸಚಿವ ಜೈಶಂಕರ್ ಅವರಿಗೆ ಬರೆದ ಪತ್ರ ಮತ್ತು ಚರ್ಚೆಗಳನ್ನು ಉಲ್ಲೇಖಿಸಿದ್ದಾರೆ.

ಸಚಿವ ಜೈಶಂಕರ್ ಅವರನ್ನು ಅವರ ಕಚೇರಿಯಲ್ಲಿ ಭೇಟಿಯಾಗಿ ‘ಮೈಸೂರು ಪಾಕ್’ ಕೊಟ್ಟು ಧನ್ಯವಾದ ಸಲ್ಲಿಸಿದ್ದಾರೆ. “ಪ್ರಧಾನ ಮಂತ್ರಿಗಳು ಮತ್ತು ನಿಮ್ಮಿಂದ ಇದು ಸಾಕಾರಾವಾಯಿತು” ಎಂದಿದ್ದಾರೆ.

ತೇಜಸ್ವಿ ಸೂರ್ಯ ಅವರಿಗೆ ತಿರುಗೇಟು ಕೊಟ್ಟಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು ” ಬಿಜೆಪಿ ಅನಗತ್ಯ ಕ್ರೆಡಿಟ್ ಪಡೆದು ಸಾರ್ವಜನಿಕರನ್ನು ದಾರಿ ತಪ್ಪಿಸುತ್ತಿದೆ. ಹೂಡಿಕೆ ಮತ್ತು ವ್ಯಾಪಾರಕ್ಕೆ ಜಾಗತಿಕ ಕೇಂದ್ರವಾಗಿರುವ ಬೆಂಗಳೂರಿನ ಸ್ಥಾನಮಾನವು ರಾಜಕೀಯ ಪ್ರಭಾವವನ್ನು ಲೆಕ್ಕಿಸದೆ ಸ್ವಾಭಾವಿಕವಾಗಿಯೇ ಅಮೆರಿಕದ ದೂತಾವಾಸಕ್ಕೆ ಸೂಕ್ತ ಸ್ಥಳವಾಗಿದೆ ಎಂದು ಬರೆದುಕೊಂಡಿದ್ದಾರೆ.

ಮುಂದುವರಿದು, “ಗುಜರಾತ್‌ನಲ್ಲಿ ಕಾನ್ಸುಲೇಟ್ ಕಚೇರಿ ಸ್ಥಾಪಿಸಲು ಆದ್ಯತೆ ನೀಡಬೇಕು ಎಂಬ ಸುಪ್ರೀಂ ನಾಯಕನ ಒತ್ತಡವು ಬೆಂಗಳೂರಿನಲ್ಲಿ ಕಾನ್ಸುಲೇಟ್ ಕಚೇರಿ ತೆರೆಯಲು ಹೇಗೆ ವಿಳಂಬವಾಯಿತು ಎಂಬುದರ ಕುರಿತು ಬಿಜೆಪಿ ಸಂಸದರು ಮತ್ತು ಸಚಿವ ಜೈಶಂಕರ್ ಅವರು ಪ್ರಾಮಾಣಿಕವಾಗಿ ಮಾತನಾಡಬೇಕು” ಎಂದು ಪ್ರಿಯಾಂಕ್ ಖರ್ಗೆ ಅವರು ಪ್ರಧಾನಿ ಮೋದಿಯವ ಹೆಸರನ್ನು ಉಲ್ಲೇಖಿಸದೆ ಟಾಂಗ್ ಕೊಟ್ಟಿದ್ದಾರೆ.

“ಕಾನ್ಸುಲೇಟ್ ಸ್ಥಾಪಿಸುವ ನಿರ್ಧಾರವು ಆರ್ಥಿಕ ಆದ್ಯತೆಗಳ ಆಧಾರದ ಮೇಲೆ ಸರ್ಕಾರಗಳ ನಡುವಿನ ಪರಸ್ಪರ ಒಪ್ಪಂದವಾಗಿದೆಯೇ ಹೊರತು, ಬಿಜೆಪಿ ಸಂಸದರು ಅಥವಾ ವಿದೇಶಾಂಗ ಸಚಿವರ ಆಶಯಗಳು ಅಥವಾ ವೈಯಕ್ತಿಕ ಆದ್ಯತೆಗಳ ಮೇಲೆ ಅಲ್ಲ” ಎಂದು ಪ್ರಿಯಾಂಕ್ ಖರ್ಗೆ ಒತ್ತಿ ಹೇಳಿದ್ದಾರೆ.

ಭಾರತದಲ್ಲಿನ ಅಮೆರಿಕದ ರಾಯಭಾರಿ ಎರಿಕ್ ಗ್ಯಾರ್‌ಸೆಟ್ ಅವರು ಡಿಸೆಂಬರ್ 2024ರಲ್ಲಿ ನವದೆಹಲಿಯಲ್ಲಿ ಯುಎಸ್-ಇಂಡಿಯಾ ಬಿಸಿನೆಸ್ ಕೌನ್ಸಿಲ್ (ಯುಎಸ್ಐಬಿಸಿ) ಆಯೋಜಿಸಿದ್ದ ಅಧಿವೇಶನದಲ್ಲಿ 2025ರಲ್ಲಿ ಬೆಂಗಳೂರಿನಲ್ಲಿ ಕಾನ್ಸುಲೇಟ್ ಕಚೇರಿ ತೆರೆಯಲಾಗುವುದು ಎಂದು ಘೋಷಿಸಿದ್ದರು.

ಆ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ್ದ ಪ್ರಿಯಾಂಕ್ ಖರ್ಗೆ ಅವರು “ಭರವಸೆ ನೀಡಿದಂತೆ ನಡೆದುಕೊಳ್ಳಲಾಗಿದೆ. ಕಳೆದ ಕೆಲವು ವರ್ಷಗಳಿಂದ ನಾನು ಅಮೆರಿಕದ ಪ್ರತಿನಿಧಿಗಳೊಂದಿಗೆ ಚರ್ಚೆಗಳಲ್ಲಿ ತೊಡಗಿಸಿಕೊಂಡಿದ್ದೇನೆ. ಬೆಂಗಳೂರಿನಲ್ಲಿ ಕಾನ್ಸುಲೇಟ್ ಕಚೇರಿ ತೆರೆಯುವ ಅಗತ್ಯವನ್ನು ಒತ್ತಿ ಹೇಳುತ್ತಿದ್ದೇನೆ. ಈ ಪ್ರಯತ್ನಗಳು ಫಲಪ್ರದವಾಗುವುದನ್ನು ನೋಡಲು ಸಂತೋಷವಾಗುತ್ತಿದೆ” ಎಂದು ಹೇಳಿದ್ದರು.

ಕಾನ್ಸುಲೇಟ್ ಉದ್ಘಾಟನೆ ಮಹತ್ವದ್ದಾಗಿದ್ದರೂ, ಆರಂಭದಲ್ಲಿ ಇದು ಅಮೆರಿಕದ ನಾಗರಿಕರು ಮತ್ತು ವ್ಯವಹಾರಗಳಿಗೆ ಮಾತ್ರ ಸೇವೆ ಸಲ್ಲಿಸಲಿದೆ. ವೀಸಾ ಸಂಸ್ಕರಣಾ ಸೇವೆಗಳು ಆರಂಭವಾಗಲು ಹೆಚ್ಚುವರಿ ಸಮಯ ತೆಗೆದುಕೊಳ್ಳುತ್ತದೆ ಎಂದು ಖರ್ಗೆ ತಿಳಿಸಿದ್ದಾರೆ. ಬಿಜೆಪಿ ನಾಯಕರು ಅದರ ಸಿದ್ಧತೆ ಮತ್ತು ವ್ಯಾಪ್ತಿಯ ಬಗ್ಗೆ ಜನರ ದಾರಿ ತಪ್ಪಿಸುವುದನ್ನು ನಿಲ್ಲಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

ಜನರು ಯುಎಸ್‌ ವೀಸಾ ಮತ್ತು ಇತರ ಸೇವೆಗಳನ್ನು ಪಡೆಯುವ ಸಲುವಾಗು ಮುಂಬೈ, ಹೈದರಾಬಾದ್ ಮತ್ತು ಚೆನ್ನೈಗೆ ಹೋಗುವುದನ್ನು ತಪ್ಪಿಸುವ ಸಲುವಾಗಿ ಬೆಂಗಳೂರಿನಲ್ಲಿ ಯುಎಸ್‌ ಕಾನ್ಸುಲೇಟ್ ಕಚೇರಿ ತೆರೆಯಲಾಗುತ್ತಿದೆ.

ಕಿಯೋನಿಕ್ಸ್ ಅವ್ಯವಸ್ಥೆಗೆ ಬಿಜೆಪಿ ಕಾರಣ – ಸಚಿವ ಪ್ರಿಯಾಂಕ್ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...