Homeಕರ್ನಾಟಕಬೆಂಗಳೂರಿನಲ್ಲಿ ಯುಎಸ್‌ ಕಾನ್ಸುಲೇಟ್ ಕಚೇರಿ ಕಾರ್ಯಾರಂಭ : ಬಿಜೆಪಿ-ಕಾಂಗ್ರೆಸ್‌ ನಡುವೆ ಕ್ರೆಡಿಟ್ ಕಿತ್ತಾಟ

ಬೆಂಗಳೂರಿನಲ್ಲಿ ಯುಎಸ್‌ ಕಾನ್ಸುಲೇಟ್ ಕಚೇರಿ ಕಾರ್ಯಾರಂಭ : ಬಿಜೆಪಿ-ಕಾಂಗ್ರೆಸ್‌ ನಡುವೆ ಕ್ರೆಡಿಟ್ ಕಿತ್ತಾಟ

- Advertisement -
- Advertisement -

ಅಮೆರಿಕದ ಕಾನ್ಸುಲೇಟ್ ಕಚೇರಿಯ ಶಾಖೆಯು ಇಂದಿನಿಂದ (ಜನವರಿ 17, 2025 ಶುಕ್ರವಾರ) ಬೆಂಗಳೂರಿನಲ್ಲಿ ಕಾರ್ಯಾರಂಭ ಮಾಡಲಿದೆ.

ಭಾರತದ ವಿದೇಶಾಂಗ ಸಚಿವ ಎಸ್‌. ಜೈಶಂಕರ್ ಮತ್ತು ಭಾರತದಲ್ಲಿನ ಅಮೆರಿಕ ರಾಯಭಾರಿ ಎರಿಕ್ ಗ್ಯಾರ್‌ಸೆಟ್‌ ಅವರು ನೂತನ ಕಚೇರಿಗೆ ಚಾಲನೆ ನೀಡಲಿದ್ದಾರೆ.

ನಗರದ ವಿಠ್ಠಲ್ ಮಲ್ಯ ರಸ್ತೆಯ ಜೆಡಬ್ಲ್ಯು ಮ್ಯಾರಿಯೇಟ್ ಹೋಟೆಲ್‌ನಲ್ಲಿ ಅಮೆರಿಕದ ವಿದೇಶಾಂಗ ವಾಣಿಜ್ಯ ವ್ಯವಹಾರಗಳ ಸೇವಾ ಕಚೇರಿ ಇದ್ದು, ಅದಕ್ಕೆ ಹೊಂದಿಕೊಂಡಂತೆಯೇ ನೂತನ ಕಾನ್ಸುಲೇಟ್ ಆರಂಭಿಸಲಾಗುತ್ತಿದೆ.

ಇದು ತಾತ್ಕಾಲಿಕ ಕಚೇರಿಯಾಗಿದ್ದು, ಮುಂದಿನ ದಿನಗಳಲ್ಲಿ ಹೊಸ ಕಚೇರಿಗೆ ಕಾನ್ಸುಲೇಟ್ ಸ್ಥಳಾಂತರಗೊಳ್ಳಲಿದೆ ಎಂದು ವರದಿಯಾಗಿದೆ.

ಬಹು ನಿರೀಕ್ಷಿತ ಕಾನ್ಸುಲೇಟ್ ಕಚೇರಿ ಆರಂಭಗೊಳ್ಳುತ್ತಿದ್ದಂತೆ ಅದರ ಕ್ರೆಡಿಟ್ ಪಡೆಯಲುಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಕಿತ್ತಾಟ ಶುರುವಾಗಿದೆ.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಕಾನ್ಸುಲೇಟ್ ಕಚೇರಿ ಆರಂಭದ ಸಂಪೂರ್ಣ ಕ್ರೆಡಿಟ್ ಕೇಂದ್ರ ಸರ್ಕಾರಕ್ಕೆ ಕೊಟ್ಟರೆ, ಕರ್ನಾಟಕ ಸರ್ಕಾರದ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ನಾವು ಮಾಡಿದ್ದು ಎನ್ನುತ್ತಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿರುವ ಸಂಸದ ತೇಜಸ್ವಿ ಸೂರ್ಯ, ಕಾನ್ಸುಲೇಟ್ ಕಚೇರಿ ತೆರೆಯುವ ಕನಸು ನನಸಾಗಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರನ್ನು ಶ್ಲಾಘಿಸಿದ್ದಾರೆ.

ತಮ್ಮ ಪೋಸ್ಟ್‌ನಲ್ಲಿ, ಸೂರ್ಯ ಅವರು 2019 ರಿಂದ ಕಾನ್ಸುಲೇಟ್ ಪರವಾಗಿ ವಕಾಲತ್ತು ವಹಿಸುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಮಾರ್ಚ್ 2023ರಲ್ಲಿ ಬೆಂಗಳೂರು ಭೇಟಿಯ ಸಮಯದಲ್ಲಿ ಸಚಿವ ಜೈಶಂಕರ್ ಅವರಿಗೆ ಬರೆದ ಪತ್ರ ಮತ್ತು ಚರ್ಚೆಗಳನ್ನು ಉಲ್ಲೇಖಿಸಿದ್ದಾರೆ.

ಸಚಿವ ಜೈಶಂಕರ್ ಅವರನ್ನು ಅವರ ಕಚೇರಿಯಲ್ಲಿ ಭೇಟಿಯಾಗಿ ‘ಮೈಸೂರು ಪಾಕ್’ ಕೊಟ್ಟು ಧನ್ಯವಾದ ಸಲ್ಲಿಸಿದ್ದಾರೆ. “ಪ್ರಧಾನ ಮಂತ್ರಿಗಳು ಮತ್ತು ನಿಮ್ಮಿಂದ ಇದು ಸಾಕಾರಾವಾಯಿತು” ಎಂದಿದ್ದಾರೆ.

ತೇಜಸ್ವಿ ಸೂರ್ಯ ಅವರಿಗೆ ತಿರುಗೇಟು ಕೊಟ್ಟಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು ” ಬಿಜೆಪಿ ಅನಗತ್ಯ ಕ್ರೆಡಿಟ್ ಪಡೆದು ಸಾರ್ವಜನಿಕರನ್ನು ದಾರಿ ತಪ್ಪಿಸುತ್ತಿದೆ. ಹೂಡಿಕೆ ಮತ್ತು ವ್ಯಾಪಾರಕ್ಕೆ ಜಾಗತಿಕ ಕೇಂದ್ರವಾಗಿರುವ ಬೆಂಗಳೂರಿನ ಸ್ಥಾನಮಾನವು ರಾಜಕೀಯ ಪ್ರಭಾವವನ್ನು ಲೆಕ್ಕಿಸದೆ ಸ್ವಾಭಾವಿಕವಾಗಿಯೇ ಅಮೆರಿಕದ ದೂತಾವಾಸಕ್ಕೆ ಸೂಕ್ತ ಸ್ಥಳವಾಗಿದೆ ಎಂದು ಬರೆದುಕೊಂಡಿದ್ದಾರೆ.

ಮುಂದುವರಿದು, “ಗುಜರಾತ್‌ನಲ್ಲಿ ಕಾನ್ಸುಲೇಟ್ ಕಚೇರಿ ಸ್ಥಾಪಿಸಲು ಆದ್ಯತೆ ನೀಡಬೇಕು ಎಂಬ ಸುಪ್ರೀಂ ನಾಯಕನ ಒತ್ತಡವು ಬೆಂಗಳೂರಿನಲ್ಲಿ ಕಾನ್ಸುಲೇಟ್ ಕಚೇರಿ ತೆರೆಯಲು ಹೇಗೆ ವಿಳಂಬವಾಯಿತು ಎಂಬುದರ ಕುರಿತು ಬಿಜೆಪಿ ಸಂಸದರು ಮತ್ತು ಸಚಿವ ಜೈಶಂಕರ್ ಅವರು ಪ್ರಾಮಾಣಿಕವಾಗಿ ಮಾತನಾಡಬೇಕು” ಎಂದು ಪ್ರಿಯಾಂಕ್ ಖರ್ಗೆ ಅವರು ಪ್ರಧಾನಿ ಮೋದಿಯವ ಹೆಸರನ್ನು ಉಲ್ಲೇಖಿಸದೆ ಟಾಂಗ್ ಕೊಟ್ಟಿದ್ದಾರೆ.

“ಕಾನ್ಸುಲೇಟ್ ಸ್ಥಾಪಿಸುವ ನಿರ್ಧಾರವು ಆರ್ಥಿಕ ಆದ್ಯತೆಗಳ ಆಧಾರದ ಮೇಲೆ ಸರ್ಕಾರಗಳ ನಡುವಿನ ಪರಸ್ಪರ ಒಪ್ಪಂದವಾಗಿದೆಯೇ ಹೊರತು, ಬಿಜೆಪಿ ಸಂಸದರು ಅಥವಾ ವಿದೇಶಾಂಗ ಸಚಿವರ ಆಶಯಗಳು ಅಥವಾ ವೈಯಕ್ತಿಕ ಆದ್ಯತೆಗಳ ಮೇಲೆ ಅಲ್ಲ” ಎಂದು ಪ್ರಿಯಾಂಕ್ ಖರ್ಗೆ ಒತ್ತಿ ಹೇಳಿದ್ದಾರೆ.

ಭಾರತದಲ್ಲಿನ ಅಮೆರಿಕದ ರಾಯಭಾರಿ ಎರಿಕ್ ಗ್ಯಾರ್‌ಸೆಟ್ ಅವರು ಡಿಸೆಂಬರ್ 2024ರಲ್ಲಿ ನವದೆಹಲಿಯಲ್ಲಿ ಯುಎಸ್-ಇಂಡಿಯಾ ಬಿಸಿನೆಸ್ ಕೌನ್ಸಿಲ್ (ಯುಎಸ್ಐಬಿಸಿ) ಆಯೋಜಿಸಿದ್ದ ಅಧಿವೇಶನದಲ್ಲಿ 2025ರಲ್ಲಿ ಬೆಂಗಳೂರಿನಲ್ಲಿ ಕಾನ್ಸುಲೇಟ್ ಕಚೇರಿ ತೆರೆಯಲಾಗುವುದು ಎಂದು ಘೋಷಿಸಿದ್ದರು.

ಆ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ್ದ ಪ್ರಿಯಾಂಕ್ ಖರ್ಗೆ ಅವರು “ಭರವಸೆ ನೀಡಿದಂತೆ ನಡೆದುಕೊಳ್ಳಲಾಗಿದೆ. ಕಳೆದ ಕೆಲವು ವರ್ಷಗಳಿಂದ ನಾನು ಅಮೆರಿಕದ ಪ್ರತಿನಿಧಿಗಳೊಂದಿಗೆ ಚರ್ಚೆಗಳಲ್ಲಿ ತೊಡಗಿಸಿಕೊಂಡಿದ್ದೇನೆ. ಬೆಂಗಳೂರಿನಲ್ಲಿ ಕಾನ್ಸುಲೇಟ್ ಕಚೇರಿ ತೆರೆಯುವ ಅಗತ್ಯವನ್ನು ಒತ್ತಿ ಹೇಳುತ್ತಿದ್ದೇನೆ. ಈ ಪ್ರಯತ್ನಗಳು ಫಲಪ್ರದವಾಗುವುದನ್ನು ನೋಡಲು ಸಂತೋಷವಾಗುತ್ತಿದೆ” ಎಂದು ಹೇಳಿದ್ದರು.

ಕಾನ್ಸುಲೇಟ್ ಉದ್ಘಾಟನೆ ಮಹತ್ವದ್ದಾಗಿದ್ದರೂ, ಆರಂಭದಲ್ಲಿ ಇದು ಅಮೆರಿಕದ ನಾಗರಿಕರು ಮತ್ತು ವ್ಯವಹಾರಗಳಿಗೆ ಮಾತ್ರ ಸೇವೆ ಸಲ್ಲಿಸಲಿದೆ. ವೀಸಾ ಸಂಸ್ಕರಣಾ ಸೇವೆಗಳು ಆರಂಭವಾಗಲು ಹೆಚ್ಚುವರಿ ಸಮಯ ತೆಗೆದುಕೊಳ್ಳುತ್ತದೆ ಎಂದು ಖರ್ಗೆ ತಿಳಿಸಿದ್ದಾರೆ. ಬಿಜೆಪಿ ನಾಯಕರು ಅದರ ಸಿದ್ಧತೆ ಮತ್ತು ವ್ಯಾಪ್ತಿಯ ಬಗ್ಗೆ ಜನರ ದಾರಿ ತಪ್ಪಿಸುವುದನ್ನು ನಿಲ್ಲಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

ಜನರು ಯುಎಸ್‌ ವೀಸಾ ಮತ್ತು ಇತರ ಸೇವೆಗಳನ್ನು ಪಡೆಯುವ ಸಲುವಾಗು ಮುಂಬೈ, ಹೈದರಾಬಾದ್ ಮತ್ತು ಚೆನ್ನೈಗೆ ಹೋಗುವುದನ್ನು ತಪ್ಪಿಸುವ ಸಲುವಾಗಿ ಬೆಂಗಳೂರಿನಲ್ಲಿ ಯುಎಸ್‌ ಕಾನ್ಸುಲೇಟ್ ಕಚೇರಿ ತೆರೆಯಲಾಗುತ್ತಿದೆ.

ಕಿಯೋನಿಕ್ಸ್ ಅವ್ಯವಸ್ಥೆಗೆ ಬಿಜೆಪಿ ಕಾರಣ – ಸಚಿವ ಪ್ರಿಯಾಂಕ್ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...