Homeಕರ್ನಾಟಕಬೆಂಗಳೂರಿನಲ್ಲಿ ಯುಎಸ್‌ ಕಾನ್ಸುಲೇಟ್ ಕಚೇರಿ ಕಾರ್ಯಾರಂಭ : ಬಿಜೆಪಿ-ಕಾಂಗ್ರೆಸ್‌ ನಡುವೆ ಕ್ರೆಡಿಟ್ ಕಿತ್ತಾಟ

ಬೆಂಗಳೂರಿನಲ್ಲಿ ಯುಎಸ್‌ ಕಾನ್ಸುಲೇಟ್ ಕಚೇರಿ ಕಾರ್ಯಾರಂಭ : ಬಿಜೆಪಿ-ಕಾಂಗ್ರೆಸ್‌ ನಡುವೆ ಕ್ರೆಡಿಟ್ ಕಿತ್ತಾಟ

- Advertisement -
- Advertisement -

ಅಮೆರಿಕದ ಕಾನ್ಸುಲೇಟ್ ಕಚೇರಿಯ ಶಾಖೆಯು ಇಂದಿನಿಂದ (ಜನವರಿ 17, 2025 ಶುಕ್ರವಾರ) ಬೆಂಗಳೂರಿನಲ್ಲಿ ಕಾರ್ಯಾರಂಭ ಮಾಡಲಿದೆ.

ಭಾರತದ ವಿದೇಶಾಂಗ ಸಚಿವ ಎಸ್‌. ಜೈಶಂಕರ್ ಮತ್ತು ಭಾರತದಲ್ಲಿನ ಅಮೆರಿಕ ರಾಯಭಾರಿ ಎರಿಕ್ ಗ್ಯಾರ್‌ಸೆಟ್‌ ಅವರು ನೂತನ ಕಚೇರಿಗೆ ಚಾಲನೆ ನೀಡಲಿದ್ದಾರೆ.

ನಗರದ ವಿಠ್ಠಲ್ ಮಲ್ಯ ರಸ್ತೆಯ ಜೆಡಬ್ಲ್ಯು ಮ್ಯಾರಿಯೇಟ್ ಹೋಟೆಲ್‌ನಲ್ಲಿ ಅಮೆರಿಕದ ವಿದೇಶಾಂಗ ವಾಣಿಜ್ಯ ವ್ಯವಹಾರಗಳ ಸೇವಾ ಕಚೇರಿ ಇದ್ದು, ಅದಕ್ಕೆ ಹೊಂದಿಕೊಂಡಂತೆಯೇ ನೂತನ ಕಾನ್ಸುಲೇಟ್ ಆರಂಭಿಸಲಾಗುತ್ತಿದೆ.

ಇದು ತಾತ್ಕಾಲಿಕ ಕಚೇರಿಯಾಗಿದ್ದು, ಮುಂದಿನ ದಿನಗಳಲ್ಲಿ ಹೊಸ ಕಚೇರಿಗೆ ಕಾನ್ಸುಲೇಟ್ ಸ್ಥಳಾಂತರಗೊಳ್ಳಲಿದೆ ಎಂದು ವರದಿಯಾಗಿದೆ.

ಬಹು ನಿರೀಕ್ಷಿತ ಕಾನ್ಸುಲೇಟ್ ಕಚೇರಿ ಆರಂಭಗೊಳ್ಳುತ್ತಿದ್ದಂತೆ ಅದರ ಕ್ರೆಡಿಟ್ ಪಡೆಯಲುಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಕಿತ್ತಾಟ ಶುರುವಾಗಿದೆ.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಕಾನ್ಸುಲೇಟ್ ಕಚೇರಿ ಆರಂಭದ ಸಂಪೂರ್ಣ ಕ್ರೆಡಿಟ್ ಕೇಂದ್ರ ಸರ್ಕಾರಕ್ಕೆ ಕೊಟ್ಟರೆ, ಕರ್ನಾಟಕ ಸರ್ಕಾರದ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ನಾವು ಮಾಡಿದ್ದು ಎನ್ನುತ್ತಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿರುವ ಸಂಸದ ತೇಜಸ್ವಿ ಸೂರ್ಯ, ಕಾನ್ಸುಲೇಟ್ ಕಚೇರಿ ತೆರೆಯುವ ಕನಸು ನನಸಾಗಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರನ್ನು ಶ್ಲಾಘಿಸಿದ್ದಾರೆ.

ತಮ್ಮ ಪೋಸ್ಟ್‌ನಲ್ಲಿ, ಸೂರ್ಯ ಅವರು 2019 ರಿಂದ ಕಾನ್ಸುಲೇಟ್ ಪರವಾಗಿ ವಕಾಲತ್ತು ವಹಿಸುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಮಾರ್ಚ್ 2023ರಲ್ಲಿ ಬೆಂಗಳೂರು ಭೇಟಿಯ ಸಮಯದಲ್ಲಿ ಸಚಿವ ಜೈಶಂಕರ್ ಅವರಿಗೆ ಬರೆದ ಪತ್ರ ಮತ್ತು ಚರ್ಚೆಗಳನ್ನು ಉಲ್ಲೇಖಿಸಿದ್ದಾರೆ.

ಸಚಿವ ಜೈಶಂಕರ್ ಅವರನ್ನು ಅವರ ಕಚೇರಿಯಲ್ಲಿ ಭೇಟಿಯಾಗಿ ‘ಮೈಸೂರು ಪಾಕ್’ ಕೊಟ್ಟು ಧನ್ಯವಾದ ಸಲ್ಲಿಸಿದ್ದಾರೆ. “ಪ್ರಧಾನ ಮಂತ್ರಿಗಳು ಮತ್ತು ನಿಮ್ಮಿಂದ ಇದು ಸಾಕಾರಾವಾಯಿತು” ಎಂದಿದ್ದಾರೆ.

ತೇಜಸ್ವಿ ಸೂರ್ಯ ಅವರಿಗೆ ತಿರುಗೇಟು ಕೊಟ್ಟಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು ” ಬಿಜೆಪಿ ಅನಗತ್ಯ ಕ್ರೆಡಿಟ್ ಪಡೆದು ಸಾರ್ವಜನಿಕರನ್ನು ದಾರಿ ತಪ್ಪಿಸುತ್ತಿದೆ. ಹೂಡಿಕೆ ಮತ್ತು ವ್ಯಾಪಾರಕ್ಕೆ ಜಾಗತಿಕ ಕೇಂದ್ರವಾಗಿರುವ ಬೆಂಗಳೂರಿನ ಸ್ಥಾನಮಾನವು ರಾಜಕೀಯ ಪ್ರಭಾವವನ್ನು ಲೆಕ್ಕಿಸದೆ ಸ್ವಾಭಾವಿಕವಾಗಿಯೇ ಅಮೆರಿಕದ ದೂತಾವಾಸಕ್ಕೆ ಸೂಕ್ತ ಸ್ಥಳವಾಗಿದೆ ಎಂದು ಬರೆದುಕೊಂಡಿದ್ದಾರೆ.

ಮುಂದುವರಿದು, “ಗುಜರಾತ್‌ನಲ್ಲಿ ಕಾನ್ಸುಲೇಟ್ ಕಚೇರಿ ಸ್ಥಾಪಿಸಲು ಆದ್ಯತೆ ನೀಡಬೇಕು ಎಂಬ ಸುಪ್ರೀಂ ನಾಯಕನ ಒತ್ತಡವು ಬೆಂಗಳೂರಿನಲ್ಲಿ ಕಾನ್ಸುಲೇಟ್ ಕಚೇರಿ ತೆರೆಯಲು ಹೇಗೆ ವಿಳಂಬವಾಯಿತು ಎಂಬುದರ ಕುರಿತು ಬಿಜೆಪಿ ಸಂಸದರು ಮತ್ತು ಸಚಿವ ಜೈಶಂಕರ್ ಅವರು ಪ್ರಾಮಾಣಿಕವಾಗಿ ಮಾತನಾಡಬೇಕು” ಎಂದು ಪ್ರಿಯಾಂಕ್ ಖರ್ಗೆ ಅವರು ಪ್ರಧಾನಿ ಮೋದಿಯವ ಹೆಸರನ್ನು ಉಲ್ಲೇಖಿಸದೆ ಟಾಂಗ್ ಕೊಟ್ಟಿದ್ದಾರೆ.

“ಕಾನ್ಸುಲೇಟ್ ಸ್ಥಾಪಿಸುವ ನಿರ್ಧಾರವು ಆರ್ಥಿಕ ಆದ್ಯತೆಗಳ ಆಧಾರದ ಮೇಲೆ ಸರ್ಕಾರಗಳ ನಡುವಿನ ಪರಸ್ಪರ ಒಪ್ಪಂದವಾಗಿದೆಯೇ ಹೊರತು, ಬಿಜೆಪಿ ಸಂಸದರು ಅಥವಾ ವಿದೇಶಾಂಗ ಸಚಿವರ ಆಶಯಗಳು ಅಥವಾ ವೈಯಕ್ತಿಕ ಆದ್ಯತೆಗಳ ಮೇಲೆ ಅಲ್ಲ” ಎಂದು ಪ್ರಿಯಾಂಕ್ ಖರ್ಗೆ ಒತ್ತಿ ಹೇಳಿದ್ದಾರೆ.

ಭಾರತದಲ್ಲಿನ ಅಮೆರಿಕದ ರಾಯಭಾರಿ ಎರಿಕ್ ಗ್ಯಾರ್‌ಸೆಟ್ ಅವರು ಡಿಸೆಂಬರ್ 2024ರಲ್ಲಿ ನವದೆಹಲಿಯಲ್ಲಿ ಯುಎಸ್-ಇಂಡಿಯಾ ಬಿಸಿನೆಸ್ ಕೌನ್ಸಿಲ್ (ಯುಎಸ್ಐಬಿಸಿ) ಆಯೋಜಿಸಿದ್ದ ಅಧಿವೇಶನದಲ್ಲಿ 2025ರಲ್ಲಿ ಬೆಂಗಳೂರಿನಲ್ಲಿ ಕಾನ್ಸುಲೇಟ್ ಕಚೇರಿ ತೆರೆಯಲಾಗುವುದು ಎಂದು ಘೋಷಿಸಿದ್ದರು.

ಆ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ್ದ ಪ್ರಿಯಾಂಕ್ ಖರ್ಗೆ ಅವರು “ಭರವಸೆ ನೀಡಿದಂತೆ ನಡೆದುಕೊಳ್ಳಲಾಗಿದೆ. ಕಳೆದ ಕೆಲವು ವರ್ಷಗಳಿಂದ ನಾನು ಅಮೆರಿಕದ ಪ್ರತಿನಿಧಿಗಳೊಂದಿಗೆ ಚರ್ಚೆಗಳಲ್ಲಿ ತೊಡಗಿಸಿಕೊಂಡಿದ್ದೇನೆ. ಬೆಂಗಳೂರಿನಲ್ಲಿ ಕಾನ್ಸುಲೇಟ್ ಕಚೇರಿ ತೆರೆಯುವ ಅಗತ್ಯವನ್ನು ಒತ್ತಿ ಹೇಳುತ್ತಿದ್ದೇನೆ. ಈ ಪ್ರಯತ್ನಗಳು ಫಲಪ್ರದವಾಗುವುದನ್ನು ನೋಡಲು ಸಂತೋಷವಾಗುತ್ತಿದೆ” ಎಂದು ಹೇಳಿದ್ದರು.

ಕಾನ್ಸುಲೇಟ್ ಉದ್ಘಾಟನೆ ಮಹತ್ವದ್ದಾಗಿದ್ದರೂ, ಆರಂಭದಲ್ಲಿ ಇದು ಅಮೆರಿಕದ ನಾಗರಿಕರು ಮತ್ತು ವ್ಯವಹಾರಗಳಿಗೆ ಮಾತ್ರ ಸೇವೆ ಸಲ್ಲಿಸಲಿದೆ. ವೀಸಾ ಸಂಸ್ಕರಣಾ ಸೇವೆಗಳು ಆರಂಭವಾಗಲು ಹೆಚ್ಚುವರಿ ಸಮಯ ತೆಗೆದುಕೊಳ್ಳುತ್ತದೆ ಎಂದು ಖರ್ಗೆ ತಿಳಿಸಿದ್ದಾರೆ. ಬಿಜೆಪಿ ನಾಯಕರು ಅದರ ಸಿದ್ಧತೆ ಮತ್ತು ವ್ಯಾಪ್ತಿಯ ಬಗ್ಗೆ ಜನರ ದಾರಿ ತಪ್ಪಿಸುವುದನ್ನು ನಿಲ್ಲಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

ಜನರು ಯುಎಸ್‌ ವೀಸಾ ಮತ್ತು ಇತರ ಸೇವೆಗಳನ್ನು ಪಡೆಯುವ ಸಲುವಾಗು ಮುಂಬೈ, ಹೈದರಾಬಾದ್ ಮತ್ತು ಚೆನ್ನೈಗೆ ಹೋಗುವುದನ್ನು ತಪ್ಪಿಸುವ ಸಲುವಾಗಿ ಬೆಂಗಳೂರಿನಲ್ಲಿ ಯುಎಸ್‌ ಕಾನ್ಸುಲೇಟ್ ಕಚೇರಿ ತೆರೆಯಲಾಗುತ್ತಿದೆ.

ಕಿಯೋನಿಕ್ಸ್ ಅವ್ಯವಸ್ಥೆಗೆ ಬಿಜೆಪಿ ಕಾರಣ – ಸಚಿವ ಪ್ರಿಯಾಂಕ್ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...